Wednesday | July 22, 2026 |

ಸೋಲಾರ್‌ ಹಗರಣದ ಮತ್ತೊಂದು ಮುಖ;ಗುಣಮಟ್ಟ ಪರಿಶೀಲಿಸದೆಯೇ 618 ಕೋಟಿ ಪಾವತಿ

ಬೆಂಗಳೂರು; ಉಗ್ರಾಣ ನಿಗಮಗಳ ಮೇಲ್ಛಾವಣಿಗಳ ಮೇಲೆ ಸೋಲಾರ್‌ ಅಳವಡಿಸುವ ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಗುತ್ತಿಗೆದಾರರಿಗೆ 618 ಕೋಟಿ ಕೋಟಿ ಪಾವತಿಸಿರುವುದು ಇದೀಗ ಬಹಿರಂಗವಾಗಿದೆ.

ಈ ಯೋಜನೆಯ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರು ಸಲ್ಲಿಸಿದ್ದ 34 ಬಿಲ್‌ಗಳ ಪೈಕಿ 24 ಬಿಲ್‌ಗಳಿಗೆ ಶೇ. 80ರಷ್ಟು ಹಣ ಪಾವತಿಸಿಲಾಗಿದೆ. ಕಾಮಗಾರಿಗಳ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಪಾವತಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಂಬಂಧ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಗಳು ಲಭ್ಯವಾಗಿವೆ.

24 ಬಿಲ್‌ಗಳಿಗೆ ಹಣ ಪಾವತಿಸಿರುವುದಷ್ಟೇ ಅಲ್ಲ, ಉಳಿದ ಶೇ.20ರಷ್ಟು ಮೊತ್ತದಲ್ಲಿನ ಎಲ್ಲಾ ಬಿಲ್‌ಗಳಿಗೂ ಶೇ.80ರಷ್ಟು ಪಾವತಿಯನ್ನು ಸಹ ಮಾಡಲಾಗಿದೆ. ಇಲ್ಲಿಯೂ ಸಹ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಪಾವತಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.
ಹಣ ಪಾವತಿಸಿದ ನಂತರ ಪರಿಮಾಣ ಮತ್ತು ಗುಣಮಟ್ಟವನ್ನು ಪಿಎಂಸಿಗಳಿಂದ ವರದಿ ಪಡೆದು 25ರಿಂದ 28ರವರೆಗಿನ 4 ಬಿಲ್‌ಗಳ ಮೊತ್ತದಲ್ಲಿ 21.15 ಕೋಟಿ ರು. ಪಾವತಿಸಲಾಗಿದೆ.

ಅದೇ ರೀತಿ ಒಟ್ಟಾರೆ 28 ಬಿಲ್‌ಗಳಿಗೆ ಸಂಬಂಧಿಸಿದಂತೆ ಒಟ್ಟು 612.18 ಕೋಟಿ ರು. ಗುತ್ತಿಗೆದಾರರಿಗೆ ಪಾವತಿಸಲಾಗಿದೆ. ಹಣ ಪಾವತಿಸುವ ಮೊದಲು ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಇಷ್ಟೊಂದು ದೊಡ್ಡ ಮೊತ್ತವನ್ನು ಗುತ್ತಿಗೆದಾರರಿಗೆ ಪಾವತಿಸಿರುವುದೇ ಅಕ್ರಮ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಇನ್ನು, ಹೆಚ್ಚುವರಿ/ಬದಲಾಯಿಸಿರುವ ಕಾಮಗಾರಿಗಳನ್ನು ಪೂರೈಸಿರುವ ಗುತ್ತಿಗೆದಾರರು ಹಣ ಪಾವತಿ ಸಂಬಂಧ ಕೌಂಟರ್ ಕ್ಲೈಮ್‌ಗಳನ್ನು ಮಧ್ಯಸ್ಥಿಕೆದಾರರಿಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಸ್ಥಿಕೆದಾರರ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ನಿಗಮಕ್ಕೆ ಬಂದೊದಗಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಹಾಗೆಯೇ 600ರಿಂದ 800 ಕೋಟಿ ರು.ವರೆಗಿನ ಕಾಮಗಾರಿಗಳು ನಡೆಯುವ ಉಗ್ರಾಣ ನಿಗಮದಲ್ಲಿ ಪಿಡಬ್ಲ್ಯೂಡಿಯಿಂದ ನಿಯೋಜನೆ ಮೇರೆಗೆ ಒಬ್ಬ ಕಾರ್ಯನಿರ್ವಾಹಕ ಇಂಜಿನಿಯರ್‌, ನಿಗಮದ ಸಹಾಯಕ ಕಾರ್ಯಪಾಲಕ ಇಂಜಿಯರ್‌, ಮತ್ತು 5 ಸಹಾಯಕ ಇಂಜಿನಿಯರ್‌ಗಳಷ್ಟೇ ಇದ್ದಾರೆ. ಹೀಗಾಗಿ ಕಾಮಗಾರಿಗಳ ನಿರ್ವಹಣೆ ಕಷ್ಟಸಾಧ್ಯ ಎಂದು ತಾಂತ್ರಿಕ ಸಮಿತಿ ಸರ್ಕಾರಕ್ಕೆ ತಿಳಿಸಿದೆ.

ಬಹುತೇಕ ಕಾಮಗಾರಿಗಳು ವಿವಿಧ ಹಂತದಲ್ಲಿ ಇನ್ನೂ ಬಾಕಿ ಇದೆ. ಉಳಿದ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದಿದ್ದರೆ ಕಾಮಗಾರಿಗಳಿಗೆ ಈಗಾಗಲೇ ವಿನಿಯೋಗಿಸಿದ ಮೊತ್ತ ನಿರರ್ಥಕವಾಗಲಿದೆ. ಅಲ್ಲದೆ ಉಗ್ರಾಣಗಳ ನಿರ್ಮಾಣ ಉದ್ದೇಶವೇ ಈಡೇರದು. ಈ ಎಲ್ಲಾ ಹಿನ್ನೆಲೆಯಲ್ಲಿ ಹೆಚ್ಚುವರಿ ಮೊತ್ತ ಒದಗಿಸಬೇಕು ಎಂದು ಸಮರ್ಥನೆ ಮಾಡಿಕೊಂಡಿರುವ ನಿಗಮವು ಪರಿಷ್ಕೃತ ಅಂದಾಜಿಗೆ ಸರ್ಕಾರದ ಮಂಜೂರಾತಿ ಪಡೆಯುವುದು ಸೂಕ್ತ ಎಂದು ಸಮಿತಿ ಅಭಿಪ್ರಾಯಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

Hot this week

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...
Please Scan to make Your Contribution

Topics

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!