Saturday | September 5, 2026 |

ಸೋಲಾರ್‌ ಹಗರಣದ ಮತ್ತೊಂದು ಮುಖ;ಗುಣಮಟ್ಟ ಪರಿಶೀಲಿಸದೆಯೇ 618 ಕೋಟಿ ಪಾವತಿ

ಬೆಂಗಳೂರು; ಉಗ್ರಾಣ ನಿಗಮಗಳ ಮೇಲ್ಛಾವಣಿಗಳ ಮೇಲೆ ಸೋಲಾರ್‌ ಅಳವಡಿಸುವ ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಗುತ್ತಿಗೆದಾರರಿಗೆ 618 ಕೋಟಿ ಕೋಟಿ ಪಾವತಿಸಿರುವುದು ಇದೀಗ ಬಹಿರಂಗವಾಗಿದೆ.

ಈ ಯೋಜನೆಯ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರು ಸಲ್ಲಿಸಿದ್ದ 34 ಬಿಲ್‌ಗಳ ಪೈಕಿ 24 ಬಿಲ್‌ಗಳಿಗೆ ಶೇ. 80ರಷ್ಟು ಹಣ ಪಾವತಿಸಿಲಾಗಿದೆ. ಕಾಮಗಾರಿಗಳ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಪಾವತಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಂಬಂಧ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಗಳು ಲಭ್ಯವಾಗಿವೆ.

24 ಬಿಲ್‌ಗಳಿಗೆ ಹಣ ಪಾವತಿಸಿರುವುದಷ್ಟೇ ಅಲ್ಲ, ಉಳಿದ ಶೇ.20ರಷ್ಟು ಮೊತ್ತದಲ್ಲಿನ ಎಲ್ಲಾ ಬಿಲ್‌ಗಳಿಗೂ ಶೇ.80ರಷ್ಟು ಪಾವತಿಯನ್ನು ಸಹ ಮಾಡಲಾಗಿದೆ. ಇಲ್ಲಿಯೂ ಸಹ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಪಾವತಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.
ಹಣ ಪಾವತಿಸಿದ ನಂತರ ಪರಿಮಾಣ ಮತ್ತು ಗುಣಮಟ್ಟವನ್ನು ಪಿಎಂಸಿಗಳಿಂದ ವರದಿ ಪಡೆದು 25ರಿಂದ 28ರವರೆಗಿನ 4 ಬಿಲ್‌ಗಳ ಮೊತ್ತದಲ್ಲಿ 21.15 ಕೋಟಿ ರು. ಪಾವತಿಸಲಾಗಿದೆ.

ಅದೇ ರೀತಿ ಒಟ್ಟಾರೆ 28 ಬಿಲ್‌ಗಳಿಗೆ ಸಂಬಂಧಿಸಿದಂತೆ ಒಟ್ಟು 612.18 ಕೋಟಿ ರು. ಗುತ್ತಿಗೆದಾರರಿಗೆ ಪಾವತಿಸಲಾಗಿದೆ. ಹಣ ಪಾವತಿಸುವ ಮೊದಲು ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಇಷ್ಟೊಂದು ದೊಡ್ಡ ಮೊತ್ತವನ್ನು ಗುತ್ತಿಗೆದಾರರಿಗೆ ಪಾವತಿಸಿರುವುದೇ ಅಕ್ರಮ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಇನ್ನು, ಹೆಚ್ಚುವರಿ/ಬದಲಾಯಿಸಿರುವ ಕಾಮಗಾರಿಗಳನ್ನು ಪೂರೈಸಿರುವ ಗುತ್ತಿಗೆದಾರರು ಹಣ ಪಾವತಿ ಸಂಬಂಧ ಕೌಂಟರ್ ಕ್ಲೈಮ್‌ಗಳನ್ನು ಮಧ್ಯಸ್ಥಿಕೆದಾರರಿಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಸ್ಥಿಕೆದಾರರ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ನಿಗಮಕ್ಕೆ ಬಂದೊದಗಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಹಾಗೆಯೇ 600ರಿಂದ 800 ಕೋಟಿ ರು.ವರೆಗಿನ ಕಾಮಗಾರಿಗಳು ನಡೆಯುವ ಉಗ್ರಾಣ ನಿಗಮದಲ್ಲಿ ಪಿಡಬ್ಲ್ಯೂಡಿಯಿಂದ ನಿಯೋಜನೆ ಮೇರೆಗೆ ಒಬ್ಬ ಕಾರ್ಯನಿರ್ವಾಹಕ ಇಂಜಿನಿಯರ್‌, ನಿಗಮದ ಸಹಾಯಕ ಕಾರ್ಯಪಾಲಕ ಇಂಜಿಯರ್‌, ಮತ್ತು 5 ಸಹಾಯಕ ಇಂಜಿನಿಯರ್‌ಗಳಷ್ಟೇ ಇದ್ದಾರೆ. ಹೀಗಾಗಿ ಕಾಮಗಾರಿಗಳ ನಿರ್ವಹಣೆ ಕಷ್ಟಸಾಧ್ಯ ಎಂದು ತಾಂತ್ರಿಕ ಸಮಿತಿ ಸರ್ಕಾರಕ್ಕೆ ತಿಳಿಸಿದೆ.

ಬಹುತೇಕ ಕಾಮಗಾರಿಗಳು ವಿವಿಧ ಹಂತದಲ್ಲಿ ಇನ್ನೂ ಬಾಕಿ ಇದೆ. ಉಳಿದ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದಿದ್ದರೆ ಕಾಮಗಾರಿಗಳಿಗೆ ಈಗಾಗಲೇ ವಿನಿಯೋಗಿಸಿದ ಮೊತ್ತ ನಿರರ್ಥಕವಾಗಲಿದೆ. ಅಲ್ಲದೆ ಉಗ್ರಾಣಗಳ ನಿರ್ಮಾಣ ಉದ್ದೇಶವೇ ಈಡೇರದು. ಈ ಎಲ್ಲಾ ಹಿನ್ನೆಲೆಯಲ್ಲಿ ಹೆಚ್ಚುವರಿ ಮೊತ್ತ ಒದಗಿಸಬೇಕು ಎಂದು ಸಮರ್ಥನೆ ಮಾಡಿಕೊಂಡಿರುವ ನಿಗಮವು ಪರಿಷ್ಕೃತ ಅಂದಾಜಿಗೆ ಸರ್ಕಾರದ ಮಂಜೂರಾತಿ ಪಡೆಯುವುದು ಸೂಕ್ತ ಎಂದು ಸಮಿತಿ ಅಭಿಪ್ರಾಯಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

Hot this week

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!