Wednesday | May 13, 2026 |

ಸಚಿವರ ಸಿ ಡಿ ಪ್ರಸಾರಕ್ಕೆ ತಡೆಯಾಜ್ಞೆ; ಅಪರಾಧದ ಸುಳಿವು ತಿಳಿಯದಿರುವ ಸಾಧ್ಯತೆಗಳೇ ಹೆಚ್ಚು!

ಬೆಂಗಳೂರು: ಡಾ ಕೆ ಸುಧಾಕರ್‌ ಸೇರಿದಂತೆ ಒಟ್ಟು 6 ಸಚಿವರ ವಿರುದ್ಧ ಸುಳ್ಳು ಮತ್ತು ಆಧಾರರಹಿತ ಸುದ್ದಿ ಪ್ರಕಟಿಸಬಾರದು ಎಂದು ನಿರ್ಬಂಧ ವಿಧಿಸಿರುವ 20ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಬಿ.ಎಸ್. ವಿಜಯಕುಮಾರ್ ಅವರು ಈ ಸಂಬಂಧ ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ಸ್ವತಂತ್ರಕುಮಾರ್‌ ವರ್ಸಸ್‌ ಇಂಡಿಯನ್ ಎಕ್ಸ್‌ಪ್ರೆಸ್‌ ಮತ್ತು ಇತರರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ನೀಡಿರುವ ಆದೇಶವನ್ನು ಉಲ್ಲೇಖಿಸಿರುವ ಬಿ.ಎಸ್. ವಿಜಯಕುಮಾರ್ ಅವರು ದಾವೆದಾರರು ಕರ್ನಾಟಕ ಸರ್ಕಾರದಲ್ಲಿ ಉನ್ನತ ಹುದ್ದೆಗಳಲಿದ್ದು ಪರಿಶೀಲಿಸದಿರುವ ಸುದ್ದಿಗಳನ್ನು ಪ್ರಸಾರ ಅಥವಾ ಪ್ರಕಟಣೆಗೊಂಡರೆ ಅವರ ಗೌರವಕ್ಕೆ ಮತ್ತು ಅವರ ಕುಟುಂಬ ಪರಿವಾರಕ್ಕೆ ಚ್ಯುತಿ ತರಲಿದೆ ಎಂದು ಆದೇಶದಲ್ಲಿ ಅಭಿಪ್ರಾಯಿಸಿರುವುದು ತಿಳಿದು ಬಂದಿದೆ.

ಸ್ಕ್ರೀನ್‌ ಶಾಟ್‌ಗಳ ಪ್ರತಿಗಳ ಪ್ರಕಾರ ಈ ಸುದ್ದಿ ವಿಷಯಗಳು ಸ್ಪಷ್ಟವಾಗಿ ಪರಿಶೀಲಿಸದೆಯೇ ಇರುವ ವಿಷಯಗಳಿಂದ ಕೂಡಿದ ಹಾಗೂ ಸೆನ್ಸೇಷನ್‌ ಮಾಡುವ ಉದ್ದೇಶ ಅಡಗಿದೆ ಎಂದು ಪ್ರಸ್ತಾಪಿಸಿರುವುದು ಆದೇಶದಿಂದ ಗೊತ್ತಾಗಿದೆ.

‘ಸಹಜವಾಗಿ ನಾಗರಿಕರಿಗೆ ಅವರ ನಾಯಕರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳುವ ಹಕ್ಕಿದೆ. ಅದರಂತೆ ಮಾಧ್ಯಮಕ್ಕೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕೂ ಇದೆ. ಮತ್ತು ಜನಪ್ರತಿನಿಧಿಗಳ ನಡವಳಿಕೆಗಳನ್ನು ನಾಗರಿಕರಿಗೆ ತಿಳಿಸುವುದು ಮಾಧ್ಯಮದ ಕರ್ತವ್ಯವೂ ಆಗಿದೆ,’ ಎಂದೂ ಆದೇಶದಲ್ಲಿ ಹೇಳಿದ್ದಾರೆ.

ಮೇಲ್ನೋಟಕ್ಕೆ ಯಾವುದೇ ಸಿ ಡಿ ಗಳು ಪ್ರಕಟಣೆಯಾಗದಿದ್ದರೂ ಸಹ 19ಕ್ಕಿಂತ ಹೆಚ್ಚು ಸಿಡಿಗಳು ಇರುವುದೆಂದು ಸೆನ್ಸೆಷೇನಲ್‌ ಮಾಡಲಾಗುತ್ತಿದೆ. ಈ ಸಿ ಡಿ ಗಳು ಪ್ರಭಾವಿ ವ್ಯಕ್ತಿಗಳು ಹಾಗೂ ಕೆಲವು ಮಂತ್ರಿಗಳಿಗೂ ಸಹ ಸಂಬಂಧಿಸಿದೆ ಎಂದು ಉಲ್ಲೇಖಗೊಂಡಿವೆ. ಅವುಗಳು ಯಾವುದೇ ಸಮಯದಲ್ಲಿ ಪ್ರಕಟಣೆಗೊಳ್ಳಬಹುದು. ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದೆ. ಇದೇ ನಿಟ್ಟಿನಲ್ಲಿ ದಾವೆದಾರರಿಗೂ ಪರಿಶೀಲಿಸದ ಸುದ್ದಿಯಿಂದ ತಮ್ಮ ಚಾರಿತ್ರ್ಯ ವಧೆ ಆಗದಂತೆ ನೋಡಿಕೊಳ್ಳುವುದು ಅವರ ಹಕ್ಕಾಗಿದೆ ಎಂದು ಆದೇಶದಲ್ಲಿ ವಿವರಿಸಿದ್ದಾರೆ.

ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ ಈ ತರಹದ ಪ್ರಕರಣಗಳಲ್ಲಿ ಅಡಗಿರುವ ಅಪರಾಧದ ಸುಳಿವು ಸಹ ಜನಸಾಮಾನ್ಯರಿಗೆ ತಿಳಿಯದೇ ಇರುವ ಸಾಧ್ಯತೆಗಳೇ ಸಾಕಷ್ಟಿವೆ.

ಆದರ್ಶ ಐಯ್ಯರ್‌, ಜನಾಧಿಕಾರ ಸಂಘರ್ಷ ಪರಿಷತ್‌

ಸ್ವತಂತ್ರಕುಮಾರ್‌ ವರ್ಸಸ್‌ ಇಂಡಿಯನ್ ಎಕ್ಸ್‌ಪ್ರೆಸ್‌ ಮತ್ತು ಇತರರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ 201ರ ಜನವರಿ 16ರಂದು ನೀಡಿರುವ ಇಂತಹ ಪರಿಸ್ಥಿತಿಗಳಲ್ಲಿ ಮಾಧ್ಯಮದವರ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿಗಿಂತಲೂ ಹೆಚ್ಚಾಗಿ ಮಾಧ್ಯಮದವರು ನಾಗರಿಕರಿಗೆ ಸಾರ್ವಜನಿಕ ವಿಷಯಗಳ ಬಗ್ಗೆ ತಿಳಿಸುವುದು ಒಂದು ಪ್ರಮುಖ ಕರ್ತವ್ಯ ಎಂದೂ ಹೇಳಿದ್ದಾರೆ.

ನ್ಯಾಯಾಲಯದ ಅಭಿಪ್ರಾಯದಂತೆ ‘ಮಾಧ್ಯಮಗಳು ಒಂದು ಹೆಜ್ಜೆ ಮುಂದೆ ಹೋಗಿ ಸುದ್ದಿ ವಿಷಯಗಳನ್ನು ಮತ್ತು ಅದರ ಮೂಲವನ್ನು ಪರಿಶೀಲಿಸಿ ಕಾನೂನು ಒಪ್ಪಿಕೊಳ್ಳುವಂತಹ ಪ್ರಕ್ರಿಯೆ ಆಧರಿತ ಮೂಲವನ್ನು ಪರಿಶೀಲಿಸಿ ಮತ್ತು ಸುದ್ದಿ ವಿಷಯಗಳ ಜವಾಬ್ದಾರಿಯನ್ನು ಹೊರಲು ತಯಾರಿರಬೇಕು. ತದನಂತರ ಅದನ್ನು ಮುದ್ರಣ ಮತ್ತು ಪ್ರಸಾರ ಮಾಡಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತು ಸಾರ್ವಜನಿಕ ವಿಷಯಗಳ ಬಗ್ಗೆ ತಿಳಿದುಕೊಳ್ಳುವ ಪ್ರವೃತ್ತಿಯನ್ನು ಬೆಳೆಸಬೇಕು. ಆದರೆ ಈ ಹಂತದಲ್ಲಿ ನನ್ನ ಮುಂದೆ ಪ್ರಸ್ತುತ ಪಡಿಸಿರುವ ಸ್ಕ್ರೀನ್‌ ಶಾಟ್‌ಗಳ ಪ್ರತಿಗಳ ಪ್ರಕಾರ ಈ ಸುದ್ದಿ ವಿಷಯಗಳು ಸ್ಪಷ್ಟವಾಗಿ ಪರಿಶೀಲಿಸದೆಯೇ ಇರುವ ವಿಷಯಗಳಿಂದ ಕೂಡಿದ ಹಾಗೂ ಸೆನ್ಸೇಷನ್‌ ಮಾಡುವ ಉದ್ದೇಶ ಅಡಗಿದೆ.,’ ಎಂದು ಅಭಿಪ್ರಾಯಿಸಿದ್ದಾರೆ.

 

ತಮ್ಮ ವಿರುದ್ಧ ಸುಳ್ಳು ಮತ್ತು ದಾಖಲೆ ರಹಿತ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಹೆಚ್.ಟಿ. ಸೋಮಶೇಖರ್,‌ ಕೆ.ಸುಧಾಕರ್, ನಾರಾಯಣಗೌಡ ಮತ್ತು ಭೈರತಿ ಬಸವರಾಜ್ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!