Thursday | March 19, 2026 |

ರಮೇಶ್‌ ಜಾರಕಿಹೊಳಿಯ ಜಲ ಸಂಪನ್ಮೂಲ ಇಲಾಖೆಯಲ್ಲಿ ಹರಿದಿಲ್ಲ ಸಾಧನೆ ಹೊಳೆ

Support THE-FILE

spot_img

ಬೆಂಗಳೂರು: ಸರ್ಕಾರಿ ನೌಕರಿ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಆರೋಪಕ್ಕೆ ಗುರಿಯಾಗಿ ರಾಜೀನಾಮೆ ಸಲ್ಲಿಸಿರುವ ರಮೇಶ್‌ ಜಾರಕಿಹೊಳಿ ಅವರು ಸಚಿವರಾಗಿದ್ದ ಜಲ ಸಂಪನ್ಮೂಲ ಇಲಾಖೆಯು ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿನ ಪ್ರಗತಿ ಶೇ.51ರ ಗಡಿಯನ್ನೇ ದಾಟಿಲ್ಲ.

2020-21ನೇ ಸಾಲಿನ ಜನವರಿ ಅಂತ್ಯಕ್ಕೆ ಜಲ ಸಂಪನ್ಮೂಲ ಇಲಾಖೆಯು ಉಳಿದ ಇಲಾಖೆಗಳಿಗಿಂತ ಸಾಧನೆಯಲ್ಲಿ ಹಿಂದೆ ಬಿದ್ದಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಫೆಬ್ರುವರಿಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆಯ ಸಾಧನೆಯನ್ನೂ ಒರೆಗೆ ಹಚ್ಚಲಾಗಿದೆ. ಇಲಾಖೆಗಳ ಸಾಧನೆ ಪ್ರಗತಿಯ ಅಂಕಿ ಅಂಶಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

2020-21ನೇ ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಉಪಯೋಜನೆಯಡಿ ಜಲ ಸಂಪನ್ಮೂಲ ಇಲಾಖೆಗೆ ಒಟ್ಟು ಒದಗಿಸಿದ್ದ ಅನುದಾನ 2296.14 ಕೋಟಿ ರು.ನಲ್ಲಿ ಡಿಸೆಂಬರ್‌ ಮತ್ತು ಜನವರಿ ಅಂತ್ಯಕ್ಕೆ 876.77 ಕೋಟಿ ರು.ಮಾತ್ರ ಖರ್ಚಾಗಿದೆ. ಒಟ್ಟು ಅನುದಾನಕ್ಕೆ ಶೇ.38.18ರಷ್ಟು ಮತ್ತು ಲಭ್ಯವಿರುವ ಅನುದಾನ (ಬಿಡುಗಡೆ ಮತ್ತು ಪ್ರಾಥಮಿಕ ಶಿಲ್ಕು)ಕ್ಕೆ ಶೇ.51.97ರಷ್ಟು ಮಾತ್ರ ವೆಚ್ಚವಾಗಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಅದೇ ರೀತಿ ಗಿರಿಜನ ಉಪ ಯೋಜನೆಯಡಿ 2020-21ನೇ ಸಾಲಿನಲ್ಲಿ ಜಲ ಸಂಪನ್ಮೂಲ ಇಲಾಖೆಗೆ ಒಟ್ಟು 1,464.99 ಕೋಟಿ ರು. ಅನುದಾನ ಒದಗಿಸಲಾಗಿತ್ತು. ಈ ಪೈಕಿ ಡಿಸೆಂಬರ್‌ ಮತ್ತು ಜನವರಿ ಅಂತ್ಯಕ್ಕೆ 512.37 ಕೋಟಿ ರು.ಮಾತ್ರ ವೆಚ್ಚವಾಗಿದೆ. ಒಟ್ಟು ಅನುದಾನಕ್ಕೆ ಶೇ.34.97 ಮತ್ತು ಲಭ್ಯವಿರುವ ಅನುದಾನ (ಬಿಡುಗಡೆ ಮತ್ತು ಪ್ರಾಥಮಿಕ ಶಿಲ್ಕು)ಕ್ಕೆ ಶೇ. 46.47ರಷ್ಟು ವೆಚ್ಚವಾಗಿದೆ.

ಹಾಗೆಯೆ ಕೇಂದ್ರ ಪುರಸ್ಕೃತ ಯೋಜನೆಯಲ್ಲಿಯೂ ಜಲ ಸಂಪನ್ಮೂಲ ಇಲಾಖೆ ಸಾಧನೆಯಲ್ಲಿ ಹಿಂದೆ ಬಿದ್ದಿದೆ. ಕೇಂದ್ರ ಪುರಸ್ಕೃತ ಯೋಜನೆ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರವು ಜನವರಿ 2021ರ ಅಂತ್ಯಕ್ಕೆ ಒಟ್ಟು 431.35 ಕೋಟಿ ರು.ಅನುದಾನ ಒದಗಿಸಿದೆ. ಇದರಲ್ಲಿ 201.05 ಕೋಟಿ ರು. ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರ ತನ್ನ ಪಾಲಿನಲ್ಲಿ ಶೇ.44.56ರಷ್ಟು ಮಾತ್ರ ಬಿಡುಗಡೆ ಮಾಡಿದೆ. ಡಿಸೆಂಬರ್‌ನಲ್ಲಿ 183.82 ಕೋಟಿ ರು. ವೆಚ್ಚಮಾಡಿದ್ದರೆ ಜನವರಿ ಅಂತ್ಯದವರೆಗೆ ನಯಾಪೈಸೆಯನ್ನೂ ಖರ್ಚು ಮಾಡಿಲ್ಲ. ಒಟ್ಟು ಅನುದಾನಕ್ಕೆ ಶೇ.46.62ರಷ್ಟು ಮಾತ್ರ ಸಾಧನೆ ತೋರಿರುವುದು ಗೊತ್ತಾಗಿದೆ.

ಇನ್ನು, ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ(ಇಆರ್‌ಎಂ)ಗೆ ಕೇಂದ್ರ ಸರ್ಕಾರವು 218.97 ಕೋಟಿ ಮತ್ತು ರಾಜ್ಯ ಸರ್ಕಾರವು 70.80 ಕೋಟಿ ರು. ಅನುದಾನ ನಿಗದಿಪಡಿಸಿತ್ತು. ಈ ಪೈಕಿ ಕೇಂದ್ರ ಸರ್ಕಾರ ಒಟ್ಟು ಅನುದಾನದ ಪೈಕಿ 109.48 ಕೋಟಿ ರು.ಮಾತ್ರ ಬಿಡುಗಡೆ ಮಾಡಿ ಬಾಕಿ ಅನುದಾನವನ್ನು ಜನವರಿ 2021ರ ಅಂತ್ಯದವರೆಗೂ ಬಿಡುಗಡೆ ಮಾಡಿಲ್ಲ. ಡಿಸೆಂಬರ್‌ನಲ್ಲಿ 110.76 ಕೋಟಿ ರು.ಖರ್ಚು ಮಾಡಿರುವ ಇಲಾಖೆಯು ಜನವರಿಯಲ್ಲಿ ನಯಾ ಪೈಸೆಯನ್ನೂ ಖರ್ಚು ಮಾಡಿಲ್ಲ. ಒಟ್ಟು ಅನುದಾನಕ್ಕೆ ಶೇ.38.22ರಷ್ಟು ಮಾತ್ರ ಪ್ರಗತಿ ಸಾಧಿಸಿದೆ.

ಕಾರಂಜಾ ಯೋಜನೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ಒಟ್ಟು 11.22 ಕೋಟಿ ರು. ಅನುದಾನ ನಿಗದಿಪಡಿಸಿದೆ. ಈ ಪೈಕಿ ಬಿಡುಗಡೆಯಾಗಿದ್ದ ಒಟ್ಟು 8.02 ಕೋಟಿ ರು.ನಲ್ಲಿ ಡಿಸೆಂಬರ್‌ ಮತ್ತು ಜನವರಿ ಅಂತ್ಯಕ್ಕೆ 0.27 ಕೋಟಿ ರು.ಮಾತ್ರ ಖರ್ಚಾಗಿದೆ. ಒಟ್ಟು ಬಿಡುಗಡೆಗೆ ಶೇ.3.37ರಷ್ಟು ಮತ್ತು ಒಟ್ಟು ಅನುದಾನಕ್ಕೆ ಶೇ .2.41ರಷ್ಟು ಮಾತ್ರ ಸಾಧನೆ ತೋರಿದೆ.

ಉಳಿದೆಲ್ಲ ಇಲಾಖೆಗಳಿಗಿಂತಲೂ ಜಲ ಸಂಪನ್ಮೂಲ ಇಲಾಖೆಗೆ ಹೆಚ್ಚಿನ ಅನುದಾನ ಲಭ್ಯವಾಗುತ್ತದೆ. ಕಳೆದ ಹತ್ತಾರು ವರ್ಷಗಳಿಂದಲೂ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಹೀಗಾಗಿ ಕೃಷಿ ಚಟುವಟಿಕೆಗಳಿಗೂ ಅಡಚಣೆಯಾಗಿವೆ. ಆದರೆ ಜಲ ಸಂಪನ್ಮೂಲ ಸಚಿವರು ಮಾತ್ರ ಅನುದಾನ ಬಳಕೆ ಮಾಡಿಕೊಳ್ಳುವತ್ತ ಗಮನಹರಿಸಿಲ್ಲ ಮತ್ತು ಅಧಿಕಾರಿಗಳಿಗೆ ಚುರುಕನ್ನೂ ಮುಟ್ಟಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!