Sunday | May 10, 2026 |

ಕೊಡಗಿನಲ್ಲಿ ಮೂವರನ್ನು ಬಲಿ ಪಡೆದಿದ್ದು ಗಂಡು ಹುಲಿ; ಜೆನೆಟಿಕ್‌ ಮ್ಯಾಪಿಂಗ್‌ ಸುಳಿವು

ಬೆಂಗಳೂರು: ಕೊಡಗಿನ ಶ್ರೀಮಂಗಲ ವಲಯದ ಕುಮಟೂರು, ಶೆಟ್ಟಿಗೇರಿ, ಬೆಳ್ಳೂರು ಗ್ರಾಮದಲ್ಲಿ ಮೂವರನ್ನು ಹತ್ಯೆ ಮಾಡಿದ್ದು ಗಂಡು ಹುಲಿ ಎಂಬ ಮಹತ್ವದ ಸುಳಿವು ಅರಣ್ಯಾಧಿಕಾರಿಗಳಿಗೆ ಲಭ್ಯವಾಗಿದೆ.

ಕೊಡಗಿನ ಶ್ರೀಮಂಗಲ ವ್ಯಾಪ್ತಿಯಲ್ಲಿ ಹಿಡಿದಿರುವ ಹುಲಿಯ ರಕ್ತದ ಮಾದರಿ ಹಾಗೂ ಹತ್ಯೆಗೀಡಾಗಿರುವವರ ದೇಹದ ಮೇಲೆ ದೊರೆತಿರುವ ಹುಲಿಯ ಕೂದಲನ್ನು ಹೈದರಾಬಾದ್‌ನ ಸೆಂಟರ್‌ ಫಾರ್‌ ಸೆಲ್ಯುಲರ್‌ ಅಂಡ್‌ ಮಾಲಕ್ಯುಲರ್‌ ಬಯಾಲಜಿ (Centre for Cellular & Molecular Biology) ಸಂಸ್ಥೆಗೆ ಕಳಿಸಿ ಜೆನೆಟಿಕ್‌ ಮ್ಯಾಪಿಂಗ್‌ ಮಾಡಿಸಲಾಗಿತ್ತು.

ಸಾಯಿಸಲ್ಪಟ್ಟಿದ್ದ ಜನರ ಮೇಲೆ ದೊರೆತಿರುವ ಹುಲಿಯ ಕೂದಲು ಗಂಡು ಹುಲಿಯದ್ದಾಗಿದೆ ಎಂದು ಗೊತ್ತಾಗಿದೆ. ಅರಣ್ಯಾಧಿಕಾರಿಗಳು ಈ ಕುರಿತು ಸರ್ಕಾರಕ್ಕೆ ವರದಿಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮನುಷ್ಯರ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಗಂಡು ಹುಲಿ ಎಂದು ಪತ್ತೆ ಹಚ್ಚಲಾಗಿದೆ. ಅದೇ ಭಾಗದಲ್ಲಿ ಜಾನುವಾರುಗಳನ್ನು ಹತ್ಯೆ ಮಾಡುತ್ತಿರುವ ಸ್ಥಳದಲ್ಲಿ ಕ್ಯಾಮರಾ ಟ್ರ್ಯಾಪ್‌ ಅಳವಡಿಸಲಾಗಿದೆ. ಅದರಲ್ಲಿ ಗಂಡು ಹುಲಿಯ ಇರುವಿಕೆ ಕಂಡು ಬಂದಿದೆ. ಅದನ್ನು ಹಿಡಿಯಲು ತಂಡಗಳು ಕಾರ್ಯಾಚರಣೆಯಲ್ಲಿ ಮುಂದುವರೆದಿವೆ ಎಂಬ ಮಾಹಿತಿಯನ್ನು ಹಿರಿಯ ಅರಣ್ಯಾಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಹಂಚಿಕೊಂಡಿದ್ದಾರೆ.

ಕಳೆದ ಮೂರು ವಾರದಲ್ಲಿ ನಡೆದಿರುವ ಹುಲಿ ದಾಳಿಗೆ ಮೂವರು ಬಲಿಯಾಗಿದ್ದರು. ನರಭಕ್ಷಕ ಹುಲಿ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆ ವೇಳೆಯಲ್ಲಿ ಹೆಣ್ಣು ಹುಲಿಯೊಂದು ಸಿಕ್ಕಿಬಿದ್ದಿದೆ ಎಂದು ಗೊತ್ತಾಗಿದೆ.

2019-20ರಲ್ಲಿ ಕೊಡಗು ವೃತ್ತದಲ್ಲಿ ಹುಲಿ ದಾಳಿ ನಡೆದಿಲ್ಲ. 2020-21ರಲ್ಲಿ ಶ್ರೀಮಂಗಲ ವಲಯ, ಪೊನ್ನಂಪೇಟೆಯಲ್ಲಿ ಕುಮಟರೂ ಗ್ರಾಮದ ಎರವರ ಅಯ್ಯಪ್ಪ, ಬೊಳ್ಳಕ್ಕ, ರಂಗಸ್ವಾಮಿ ಎಂಬುವರ ಮೇಲೆ ಹುಲಿ ದಾಳಿ ನಡೆಸಿದೆ.

ಕೊಡಗಿನ ಪೊನ್ನಂಪೇಟೆ ಸುತ್ತಮುತ್ತ ಗ್ರಾಮಗಳು ನರಭಕ್ಷಕ ಹುಲಿಯ ಭೀತಿಯಲ್ಲಿವೆ. ಶ್ರೀಮಂಗಲ, ಮಂಚಳ್ಳಿ, ತೆರಾಲು, ತಾವಳಗೇರಿ, ಕುಮಟೂರು, ಬಾಡಗಕೇರಿ, ಬೆಳ್ಳೂರು, ನಿಟ್ಟೂರು, ಹುದಿಕೇರಿ ಮತ್ತಿತರ ಗ್ರಾಮಗಳ ಕಾಫಿ ಎಸ್ಟೇಟ್‌ ಸುತ್ತಮುತ್ತ ಹುಲಿ ದಾಳಿ ಭೀತಿ ಆವರಿಸಿದೆ.

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!