Sunday | June 21, 2026 |

ಕೊಡಗಿನಲ್ಲಿ ಮೂವರನ್ನು ಬಲಿ ಪಡೆದಿದ್ದು ಗಂಡು ಹುಲಿ; ಜೆನೆಟಿಕ್‌ ಮ್ಯಾಪಿಂಗ್‌ ಸುಳಿವು

ಬೆಂಗಳೂರು: ಕೊಡಗಿನ ಶ್ರೀಮಂಗಲ ವಲಯದ ಕುಮಟೂರು, ಶೆಟ್ಟಿಗೇರಿ, ಬೆಳ್ಳೂರು ಗ್ರಾಮದಲ್ಲಿ ಮೂವರನ್ನು ಹತ್ಯೆ ಮಾಡಿದ್ದು ಗಂಡು ಹುಲಿ ಎಂಬ ಮಹತ್ವದ ಸುಳಿವು ಅರಣ್ಯಾಧಿಕಾರಿಗಳಿಗೆ ಲಭ್ಯವಾಗಿದೆ.

ಕೊಡಗಿನ ಶ್ರೀಮಂಗಲ ವ್ಯಾಪ್ತಿಯಲ್ಲಿ ಹಿಡಿದಿರುವ ಹುಲಿಯ ರಕ್ತದ ಮಾದರಿ ಹಾಗೂ ಹತ್ಯೆಗೀಡಾಗಿರುವವರ ದೇಹದ ಮೇಲೆ ದೊರೆತಿರುವ ಹುಲಿಯ ಕೂದಲನ್ನು ಹೈದರಾಬಾದ್‌ನ ಸೆಂಟರ್‌ ಫಾರ್‌ ಸೆಲ್ಯುಲರ್‌ ಅಂಡ್‌ ಮಾಲಕ್ಯುಲರ್‌ ಬಯಾಲಜಿ (Centre for Cellular & Molecular Biology) ಸಂಸ್ಥೆಗೆ ಕಳಿಸಿ ಜೆನೆಟಿಕ್‌ ಮ್ಯಾಪಿಂಗ್‌ ಮಾಡಿಸಲಾಗಿತ್ತು.

ಸಾಯಿಸಲ್ಪಟ್ಟಿದ್ದ ಜನರ ಮೇಲೆ ದೊರೆತಿರುವ ಹುಲಿಯ ಕೂದಲು ಗಂಡು ಹುಲಿಯದ್ದಾಗಿದೆ ಎಂದು ಗೊತ್ತಾಗಿದೆ. ಅರಣ್ಯಾಧಿಕಾರಿಗಳು ಈ ಕುರಿತು ಸರ್ಕಾರಕ್ಕೆ ವರದಿಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮನುಷ್ಯರ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಗಂಡು ಹುಲಿ ಎಂದು ಪತ್ತೆ ಹಚ್ಚಲಾಗಿದೆ. ಅದೇ ಭಾಗದಲ್ಲಿ ಜಾನುವಾರುಗಳನ್ನು ಹತ್ಯೆ ಮಾಡುತ್ತಿರುವ ಸ್ಥಳದಲ್ಲಿ ಕ್ಯಾಮರಾ ಟ್ರ್ಯಾಪ್‌ ಅಳವಡಿಸಲಾಗಿದೆ. ಅದರಲ್ಲಿ ಗಂಡು ಹುಲಿಯ ಇರುವಿಕೆ ಕಂಡು ಬಂದಿದೆ. ಅದನ್ನು ಹಿಡಿಯಲು ತಂಡಗಳು ಕಾರ್ಯಾಚರಣೆಯಲ್ಲಿ ಮುಂದುವರೆದಿವೆ ಎಂಬ ಮಾಹಿತಿಯನ್ನು ಹಿರಿಯ ಅರಣ್ಯಾಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಹಂಚಿಕೊಂಡಿದ್ದಾರೆ.

ಕಳೆದ ಮೂರು ವಾರದಲ್ಲಿ ನಡೆದಿರುವ ಹುಲಿ ದಾಳಿಗೆ ಮೂವರು ಬಲಿಯಾಗಿದ್ದರು. ನರಭಕ್ಷಕ ಹುಲಿ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆ ವೇಳೆಯಲ್ಲಿ ಹೆಣ್ಣು ಹುಲಿಯೊಂದು ಸಿಕ್ಕಿಬಿದ್ದಿದೆ ಎಂದು ಗೊತ್ತಾಗಿದೆ.

2019-20ರಲ್ಲಿ ಕೊಡಗು ವೃತ್ತದಲ್ಲಿ ಹುಲಿ ದಾಳಿ ನಡೆದಿಲ್ಲ. 2020-21ರಲ್ಲಿ ಶ್ರೀಮಂಗಲ ವಲಯ, ಪೊನ್ನಂಪೇಟೆಯಲ್ಲಿ ಕುಮಟರೂ ಗ್ರಾಮದ ಎರವರ ಅಯ್ಯಪ್ಪ, ಬೊಳ್ಳಕ್ಕ, ರಂಗಸ್ವಾಮಿ ಎಂಬುವರ ಮೇಲೆ ಹುಲಿ ದಾಳಿ ನಡೆಸಿದೆ.

ಕೊಡಗಿನ ಪೊನ್ನಂಪೇಟೆ ಸುತ್ತಮುತ್ತ ಗ್ರಾಮಗಳು ನರಭಕ್ಷಕ ಹುಲಿಯ ಭೀತಿಯಲ್ಲಿವೆ. ಶ್ರೀಮಂಗಲ, ಮಂಚಳ್ಳಿ, ತೆರಾಲು, ತಾವಳಗೇರಿ, ಕುಮಟೂರು, ಬಾಡಗಕೇರಿ, ಬೆಳ್ಳೂರು, ನಿಟ್ಟೂರು, ಹುದಿಕೇರಿ ಮತ್ತಿತರ ಗ್ರಾಮಗಳ ಕಾಫಿ ಎಸ್ಟೇಟ್‌ ಸುತ್ತಮುತ್ತ ಹುಲಿ ದಾಳಿ ಭೀತಿ ಆವರಿಸಿದೆ.

Hot this week

ರಸ್ತೆ ಕಾಮಗಾರಿಯಲ್ಲಿ ಲೋಪ, ಗುತ್ತಿಗೆದಾರನಿಗೆ ಅಕ್ರಮ ಲಾಭ, ಪಾಲಿಕೆಗೆ ನಷ್ಟ; ತಪಾಸಣೆ ನಡೆದ ದಿನದಂದೇ ಎಇ ಅಮಾನತು

ಬೆಂಗಳೂರು; ಆರ್ಟಿಲಿಯಲ್ ಮತ್ತು ಸಬ್‌ ಆರ್ಟೀಲಿಯಲ್ ರಸ್ತೆಗಳಲ್ಲಿ   ಕೈಗೊಂಡಿರುವ ಆಸ್ಪಾಲ್ಟಿಂಗ್‌ನಲ್ಲಿ ಕಳಪೆ...

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ...

ಡಿಸಿಎಂ ಕಚೇರಿಯಲ್ಲಿಯೇ ಧೂಳಿಡಿದಿದ್ದ ಕಡತಗಳು; ಸಚಿವ ಸಂಪುಟ ವಿಸರ್ಜನೆ ಬೆನ್ನಲ್ಲೇ 80 ಕಡತಗಳು ಇಲಾಖೆಗೆ ವಾಪಸ್‌

ಬೆಂಗಳೂರು; ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಕೋರಿದ್ದ ಮಾಹಿತಿಯ ಕಡತ,...
Please Scan to make Your Contribution

Topics

ರಸ್ತೆ ಕಾಮಗಾರಿಯಲ್ಲಿ ಲೋಪ, ಗುತ್ತಿಗೆದಾರನಿಗೆ ಅಕ್ರಮ ಲಾಭ, ಪಾಲಿಕೆಗೆ ನಷ್ಟ; ತಪಾಸಣೆ ನಡೆದ ದಿನದಂದೇ ಎಇ ಅಮಾನತು

ಬೆಂಗಳೂರು; ಆರ್ಟಿಲಿಯಲ್ ಮತ್ತು ಸಬ್‌ ಆರ್ಟೀಲಿಯಲ್ ರಸ್ತೆಗಳಲ್ಲಿ   ಕೈಗೊಂಡಿರುವ ಆಸ್ಪಾಲ್ಟಿಂಗ್‌ನಲ್ಲಿ ಕಳಪೆ...

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ...

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

Related Articles

Popular Categories

error: Content is protected !!