Sunday | March 22, 2026 |

ಒಕ್ಕಲಿಗರ ಸಂಘ; ಚುನಾವಣಾಧಿಕಾರಿ ನೇಮಿಸಿ ಬೈಲಾ ತಿದ್ದುಪಡಿ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

Support THE-FILE

spot_img

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ಮಾಡಿದ್ದ ಬೆನ್ನಲ್ಲೇ ಐಎಎಸ್‌ ಅಧಿಕಾರಿ ಪಿ ಎನ್‌ ರವೀಂದ್ರ ಅವರನ್ನು ಚುನಾವಣಾಧಿಕಾರಿಯನ್ನಾಗಿ ನೇಮಿಸಿ ರಾಜ್ಯಪತ್ರವನ್ನು ಹೊರಡಿಸಿದೆ.

ಸಂಘದ ಆಡಳಿತಾಧಿಕಾರಿ ಅವಧಿಯಲ್ಲಿ ಬೈಲಾ ತಿದ್ದುಪಡಿ ಮಾಡಲು ಸರ್ಕಾರವು ನಿರಾಕರಿಸಿದ್ದರ ಬೆನ್ನಲ್ಲೇ ಸಂಘದ ಚುನಾವಣೆಯು ಯಾವಾಗ ನಡೆಯಲಿದೆ ಎಂಬ ಬಗ್ಗೆ ಎದ್ದಿದ್ದ ಗೊಂದಲಕ್ಕೆ  ಸರ್ಕಾರವು ಇದೀಗ ತೆರೆ ಎಳೆದಿದೆ.

ಸಂಘಕ್ಕೆ ಚುನಾವಣೆ ನಡೆಸುವ ಸಂಬಂಧ ನ್ಯಾಯಾಲಯವು ನೀಡಿರುವ ಸೂಚನೆ ಕುರಿತು ಸರ್ಕಾರದಿಂದ ಮಾಹಿತಿ ಪಡೆಯಲು ಸಹಕಾರ ಇಲಾಖೆಯು ಸಂಘದ ಆಡಳಿತಾಧಿಕಾರಿಗೆ ಕಳೆದ ಕೆಲ ದಿನದ ಹಿಂದೆ ಪತ್ರ ಬರೆದಿದ್ದ ಬೆನ್ನಲ್ಲೇ ಹೈಕೋರ್ಟ್‌ನ ಆದೇಶ ಮಹತ್ವ ಪಡೆದುಕೊಂಡಿತ್ತು.

ಅಲ್ಲದೆ ಸಂಘದ ಬೈಲಾ ತಿದ್ದುಪಡಿ ಮಾಡಿದ ನಂತರ ಚುನಾವಣೆ ನಡೆಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರ ಮನವಿಯನ್ನು ಬಿಜೆಪಿ ಸರ್ಕಾರ ಪುರಸ್ಕರಿಸಿರಲಿಲ್ಲ. 3 ತಿಂಗಳ ಒಳಗೆ ಚುನಾವಣೆ ನಡೆಸಲು ಹೈಕೋರ್ಟ್‌ ನೀಡಿರುವ ಆದೇಶವನ್ನು ಬಿಜೆಪಿ ಸರ್ಕಾರ ಪಾಲಿಸುವ ಮೂಲಕ ಬೈಲಾ ತಿದ್ದುಪಡಿ ನಿರೀಕ್ಷೆಯಲ್ಲಿದ್ದವರ ಆಸೆಗೆ ತಣ್ಣೀರೆರಚಿದೆ.

‘ಸಂಘದ ಸದಸ್ಯತ್ವವು ವ್ಯಾಪಕವಾಗಿರುವುದರಿಂದ ಹಾಗೂ ರಾಜ್ಯ ಒಕ್ಕಲಿಗರ ಸಂಘವು ಪ್ರತಿಷ್ಠಿತ ಸಂಘವಾಗಿದ್ದು ಮತ್ತು ಇದರ ಸದಸ್ಯತ್ವವು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಸುಸೂತ್ರವಾಗಿ ಕಾರ್ಯಕಾರಿ ಸಮಿತಿಗೆ ಚುನಾವಣೆ ಜರುಗಿಸಲು ಚುನಾವಣಾಧಿಕಾರಿಯನ್ನಾಗಿ ಹಿರಿಯ ಅಧಿಕಾರಿಯನ್ನಾಗಿ ನೇಮಿಸಬೇಕು,’ ಎಂದು ಸಹಕಾರ ಸಂಘಗಳ ಉಪ ನಿಬಂಧಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಕಳೆದ ಎರಡೂವರೆ ವರ್ಷದಿಂದ ಆಡಳಿತಾಧಿಕಾರಿಯೇ ಸಂಘದ ಕಾರ್ಯ ನಿರ್ವಹಣೆಗಳನ್ನು ನಿಭಾಯಿಸಿಕೊಂಡು ಬರುತ್ತಿದ್ದಾರೆ ಎಂದು ಹೈಕೋರ್ಟ್‌ ಅಭಿಪ್ರಾಯಿಸಿತ್ತು. ಅಲ್ಲದೆ ಆರು ತಿಂಗಳಿಗೊಮ್ಮೆ ಆಡಳಿತಾಧಿಕಾರಿಯ ಅಧಿಕಾರ ವಿಸ್ತರಿಸಲಾಗುತ್ತಿದೆ. ಸತತವಾಗಿ ಆಡಳಿತಾಧಿಕಾರಿಯ ಅಧಿಕಾರ ವಿಸ್ತರಿಸಲಾಗದು. ಆದ್ದರಿಂದ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂದು ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರ ಏಕ ಸದಸ್ಯ ನ್ಯಾಯಪೀಠ ಸರ್ಕಾರಕ್ಕೆ ಆದೇಶಿಸಿದ್ದನ್ನು ಸ್ಮರಿಸಬಹುದು.

ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಸಂಘದ ಆಜೀವ ಸದಸ್ಯ ಕೃಷ್ಣೇಗೌಡ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿದಾರ ಪರ ವಕೀಲ ಧರ್ಮಪಾಲ ಗೌಡ ವಾದ ಮಂಡಿಸಿದ್ದರು.

ಅಲ್ಲದೆ ಸಂಘದ ಆಡಳಿತ ಮಂಡಳಿಯು ನಡೆಸಿರುವ ಅಕ್ರಮಗಳು, ದುರುಪಯೋಗ ಮತ್ತು ಅಸಮರ್ಪಕ ಕಾರ್ಯಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಸಂಘದ ಆಡಳಿತಾಧಿಕಾರಿಗೆ ಸೂಚಿಸಿತ್ತು. ಈ ಬಗ್ಗೆ ‘ದಿ ಫೈಲ್‌’ ಸರಣಿ ವರದಿಗಳನ್ನು ಪ್ರಕಟಿಸಿದ್ದನ್ನು ಸ್ಮರಿಸಬಹುದು.

ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ ಮಾಡಿ ಆ ನಂತರ ಸಂಘದ ಚುನಾವಣೆ ನಡೆಸಬೇಕು ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ, ಸಚಿವ ಗೋಪಾಲಯ್ಯ, ವಿಧಾನಪರಿಷತ್‌ ಸದಸ್ಯ ಅ ದೇವೇಗೌಡ ಅವರು ಸಹಕಾರಿ ಇಲಾಖೆಗೆ ಪತ್ರ ಬರೆದಿದ್ದರು.
ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಇನ್ನಿತರೆ ಪದಾಧಿಕಾರಿಗಳನ್ನು ನೇರವಾಗಿ ಸಂಘದ ಎಲ್ಲಾ ಸದಸ್ಯರುಗಳಿಂದ ನಿರ್ದೇಶಕರ ಚುನಾವಣೆಯಲ್ಲಿಯೇ ಆಯ್ಕೆ ಮಾಡುವ ಸಂಬಂಧ ಉದ್ಧೇಶಿತ ಬೈಲಾ ತಿದ್ದುಪಡಿಗೆ ಒಪ್ಪದಿರಲು ಸಹಕಾರ ಇಲಾಖೆ ನಿಲುವು ತಾಳಿದೆ. ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಸೇರಿದಂತೆ ಹಲವರು ಬರೆದಿದ್ದ ಪತ್ರಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಮಾನ್ಯತೆ ನೀಡಿರಲಿಲ್ಲ.

ಸಂಘದಲ್ಲಿ ಒಟ್ಟು 5,20,721 ಮಂದಿ ಸದಸ್ಯರು ನೋಂದಣಿಯಾಗಿದ್ದಾರೆ. ಸಂಘದ ಬೈಲಾ 7(3)ರ ಪ್ರಕಾರ 11 ಜಿಲ್ಲಾ ಕ್ಷೇತ್ರಗಳಿಂದ 35 ಕಾರ್ಯಕಾರಿ ಸಮಿತಿ ಸದಸ್ಯರಿದ್ದಾರೆ. ಪದಾಧಿಕಾರಿಗಳ ನೇರ ಚುನಾವಣೆಗೆ ಬೈಲಾ ತಿದ್ದುಪಡಿ ಮಾಡಲು ಅಧ್ಯಕ್ಷರು, ಉಪಾಧ್ಯಕ್ಷರು, ಸಹಾಯಕ ಕಾರ್ಯದರ್ಶಿ, ಖಜಾಂಚಿ ಸೇರಿ ಒಟ್ಟು 5 ಸ್ಥಾನಗಳಿಗೆ ಯಾವ ಜಿಲ್ಲೆಯ ನಿರ್ದೇಶಕರ ಸಂಖ್ಯೆಯಲ್ಲಿ ಕಡಿಮೆ ಮಾಡಬೇಕು ಎಂಬ ಬಗ್ಗೆಯೂ ತೀರ್ಮಾನವಾಗಿಲ್ಲ ಎಂಬ ಸಂಗತಿ ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಪದಾಧಿಕಾರಿಗಳ ನೇರ ಆಯ್ಕೆ ಮಾಡಲು 11 ಜಿಲ್ಲಾ ಕ್ಷೇತ್ರಗಳ ವ್ಯಾಪ್ತಿಯ ಪ್ರತಿ ಮತಗಟ್ಟೆಯಲ್ಲಿಯೂ 6 ಪೆಟ್ಟಿಗೆಗಳನ್ನು ಇಡಬೇಕಿದೆ. ಇದರ ನಿರ್ವಹಣೆ ಮತ್ತು ಖರ್ಚು ವೆಚ್ಚಗಳು ಗಣನೀಯವಾಗಿ ಹೆಚ್ಚುತ್ತದೆ. ಈ ರೀತಿಯ ಬೈಲಾ ತಿದ್ದುಪಡಿಯನ್ನು ಸಂಘದ ಆಡಳಿತಾಧಿಕಾರಿ ಅವಧಿಯಲ್ಲಿ ಆಡಳಿತಾಧಿಕಾರಿ ಮಾಡಲು ಕಾನೂನಿನಲ್ಲಿ ಅವಕಾಶ ಇದೆಯೇ ಎಂಬ ಬಗ್ಗೆ ಸರ್ಕಾರವನ್ನು ಕೋರಲು ಇಲಾಖೆ ಮುಂದಾಗಿದೆ ಎಂಬುದು ಗೊತ್ತಾಗಿದೆ.

‘ಸಂಘದ ಸದಸ್ಯರ ಪೈಕಿ ಶೇ.60ಕ್ಕಿಂತಲೂ ಹೆಚ್ಚಿನ ಸದಸ್ಯರು ಗ್ರಾಮೀಣ ಭಾಗದವರಾಗಿದ್ದು ಅವರೆಲ್ಲರೂ ಮೊಬೈಲ್‌ ಸಂಖ್ಯೆಯನ್ನು ಹೊಂದಿರುವುದಿಲ್ಲ. ವರ್ಚುವಲ್‌ ಸರ್ವ ಸದಸ್ಯರ ಸಭೆಗೆ ಭಾಗವಹಿಸಲು ಅಗತ್ಯವಿರುವ ಸ್ಮಾರ್ಟ್‌ ಫೋನ್‌ ಹೊಂದಿರುವ ಸಾಧ್ಯತೆ ಕಡಿಮೆ ಇದೆ. ಇವರುಗಳು ವರ್ಚುವಲ್‌ ಸರ್ವ ಸದಸ್ಯರ ಸಭೆಯಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ದೊಡ್ಡಮಟ್ಟದ ಸದಸ್ಯರನ್ನೊಳಗೊಂಡ ಸಂಘದ ಸದಸ್ಯರನ್ನು ಕರೆದು ಬೈಲಾ ತಿದ್ದುಪಡಿ ಅಂಶಗಳನ್ನೊಳಗೊಂಡ ದೊಡ್ಡಮಟ್ಟದ ತೀರ್ಮಾನದ ಬಗ್ಗೆ ಸದಸ್ಯರ ಅಭಿಪ್ರಾಯವನ್ನು ಏಕಕಾಲದಲ್ಲಿ ಸಂಗ್ರಹಿಸುವುದು ಕಷ್ಟಕರ. ಹೀಗಾಗಿ ಸಂಘದ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಕ ಮಾಡಬೇಕು,’ ಎಂದು ಹಲವರು ಕೋರಿದ್ದರು.

ಮಹತ್ವವಾದ ಬೈಲಾ ತಿದ್ದುಪಡಿಯನ್ನು ಆಡಳಿತಾಧಿಕಾರಿಯವರ ಅವಧಿಯಲ್ಲಿ ಸಂಘಗಳ ಕಾಯ್ದೆ ಅಡಿಯಲ್ಲಿ ಮಾಡುವುದು ಸೂಕ್ತವೇ ಎಂಬ ಬಗ್ಗೆ ಸರ್ಕಾರದ ನಿರ್ದೇಶನ ಕೋರಿದ್ದ ಇಲಾಖೆ, ಅಂತಿಮವಾಗಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿಯಲ್ಲಿ ಸಂಘಗಳ ಬೈಲಾ ತಿದ್ದುಪಡಿ ಮಾಡುವ ಅವಕಾಶವಿಲ್ಲ ಎಂದು ನಿಲುವು ತಾಳಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!