Monday | June 1, 2026 |

ತೆರಿಗೆಯೇತರ ವರಮಾನದಲ್ಲಿ ಭಾರೀ ಇಳಿಕೆ; ಅನ್ಯ ರಾಜ್ಯಗಳಿಗಿಂತ ಕರ್ನಾಟಕದಲ್ಲೆ ಅತ್ಯಂತ ಕಡಿಮೆ

ಬೆಂಗಳೂರು; ಮೈತ್ರಿ ಸರ್ಕಾರವನ್ನು ಪತನಗೊಳಿಸಿ ಅಭಿವೃದ್ಧಿ ಹರಿಕಾರರಂತೆ ಭಾರೀ ಪ್ರಚಾರಗಿಟ್ಟಿಸಿಕೊಂಡು ಸರ್ಕಾರ ರಚಿಸಿದ್ದ ಯಡಿಯೂರಪ್ಪ ಅವರ ಒಂದು ವರ್ಷದ ಅವಧಿಯಲ್ಲಿ ಆಡಳಿತ ಇಲಾಖೆಗಳಲ್ಲಿ ಅದಕ್ಷತೆ ಮತ್ತು ಅಧಿಕಾರಿಗಳ ಮೈಗಳ್ಳತನವು ಮತ್ತೊಮ್ಮೆ ಬಹಿರಂಗವಾಗಿದೆ. ಹೀಗಾಗಿಯೇ ತೆರಿಗೆಯೇತರ ಆದಾಯದ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸತತವಾಗಿ ತುಂಬಾ ಕಡಿಮೆಯಾಗುತ್ತಿದೆ.

ಆಡಳಿತ ಇಲಾಖೆಗಳಲ್ಲಿ ಮೇಲ್ವಿಚಾರಣೆಯೇ ಇರಲಿಲ್ಲ ಎಂಬ ಸಂಗತಿಯನ್ನು 2020-21ನೇ ಸಾಲಿನ ಕರ್ನಾಟಕ ಆರ್ಥಿಕ ಸಮೀಕ್ಷೆಯು ಹೊರಗೆಡವಿದೆ. ರಾಜಸ್ವ ಸ್ವೀಕೃತಿಯಲ್ಲಿ ತೆರಿಗೆಯೇತರ ರಾಜಸ್ವದ ಪಾಲು ಹಿಂದಿನ ಹಲವಾರು ವರ್ಷಗಳಿಂದಲೂ ಇಳಿಮುಖಗೊಂಡಿದೆ. ಪ್ರಮುಖವಾಗಿ ವೆಚ್ಚ ವಸೂಲಾತಿ ದರದಲ್ಲಿನ ಇಳಿಕೆ ಮತ್ತು ಕ್ಷೀಣತೆ ಸಾರ್ವಜನಿಕ ಉದ್ದಿಮೆಗಳ ಕಳಪೆ ಕಾರ್ಯನಿರ್ವಹಣೆ ಹಾಗೂ ಲಾಭಕರವಲ್ಲದ, ದುಬಾರಿ ಸಹಾಯಧನ ಮತ್ತು ಆಡಳಿತ ಇಲಾಖೆಗಳಿಂದ ಕಾಲಕಾಲಕ್ಕೆ ಕ್ರಮಬದ್ಧವಾಗಿ ನಡೆಸಬೇಕಾಗಿದ್ದ ಮೇಲ್ವಿಚಾರಣೆಯ ಕೊರತೆ ಮತ್ತು ಬಳಕೆ ಶುಲ್ಕಗಳನ್ನು ಪರಿಷ್ಕರಿಸಿರುವುದು ತೆರಿಗೆಯೇತರ ರಾಜಸ್ವವು ನಿಶ್ಚಲಗೊಳ್ಳಲು ಕಾರಣಗಳಲ್ಲಿ ಒಂದಾಗಿದೆ.

ತೆರಿಗೆಯೇತರ ರಾಜಸ್ವವು ಸಾಮಾಜಿಕ, ಆರ್ಥಿಕ ಮತ್ತು ಸಾಮಾನ್ಯ ಸೇವೆಗಳು, ಬಡ್ಡಿ ಮತ್ತು ಡಿವಿಡೆಂಡ್‌ಗಳ ಜಮೆಗಳನ್ನು ಒಳಗೊಂಡಿರುತ್ತದೆ. ಈ ಮೂರು ಸೇವೆಗಳ ರಾಜಸ್ವವು 2019-20ರಲ್ಲಿ 7,508 ಕೋಟಿ ರು.ಗಳಾಗಿದ್ದರೆ 2020-21ರಲ್ಲಿ 7,767.24 ಕೋಟಿ ರು.ಗಳಾಗಿತ್ತು. ತೆರಿಗೆಯೇತರ ರಾಜಸ್ವದಲ್ಲಿ ಆಗುತ್ತಿರುವ ಇಳಿಕೆಯು ರಾಜ್ಯವು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲೊಂದಾಗಿದೆ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆಯು ವಿವರಿಸಿದೆ.

ನಿರ್ದಿಷ್ಟ ಮಟ್ಟದಲ್ಲಿ ಬಳಕೆದಾರರ ಶುಲ್ಕವನ್ನು ಸಂಗ್ರಹಿಸುವಂತಹ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಒಟ್ಟು ಜಮೆಗೆ ತೆರಿಗೆಯೇತರ ಆದಾಯದ ಪ್ರಮಾಣ ವರ್ಷದಿಂದ ವರ್ಷಕ್ಕೆ ತುಂಬಾ ಕಡಿಮೆಯಾಗುತ್ತಿದೆ ಎಂದು ಆತಂಕವನ್ನೂ ಹೊರಗೆಡವಿದೆ. ಅಲ್ಲದೆ ರಾಜ್ಯದ ತೆರಿಗೆಯೇತರ ವರಮಾನವನ್ನು ರಾಜ್ಯಾದಾಯದ ಪ್ರಮಾಣಕ್ಕೆ ಹೋಲಿಸಿದಾಗ ದೇಶದಲ್ಲಿಯೆ ಇದು ಅತ್ಯಂತ ಕಡಿಮೆಯಾಗಿದೆ ಎಂಬ ಅಂಶವು ಕರ್ನಾಟಕ ಆರ್ಥಿಕ ಸಮೀಕ್ಷೆಯಿಂದ ತಿಳಿದು ಬಂದಿದೆ.

ತೆರಿಗೆಯೇತರ ರಾಜಸ್ವವು ಕಳೆದ 5-6 ವರ್ಷಗಳಿಂದಲೂ ಶೇ.1ರತ್ತಲೇ ಸುಳಿದಾಡುತ್ತಿದೆ. ವೆಚ್ಚಗಳ ಸಂಗ್ರಹಣೆಯಲ್ಲಿ ಕಡಿಮೆಯಾಗಿರುವುದೇ ಇದಕ್ಕೆ ಕಾರಣ. ಅನೇಕ ಇಲಾಖೆಗಳಲ್ಲಿ ಬಳಕೆದಾರರ ಶುಲ್ಕ, ದಂಡ ಹಾಗೂ ಇತರೆ ತೆರಿಗೆಯೇತರ ಜಮೆಗಳ ಪರಿಷ್ಕರಣೆಯನ್ನು ಅನೇಕ ವರ್ಷಗಳಿಂದ ಕೈಗೆತ್ತಿಕೊಂಡಿರುವುದಿಲ್ಲ ಎಂದು ಸಮೀಕ್ಷೆ ವಿವರಿಸಿದೆ.

Hot this week

5 ವರ್ಷಕ್ಕಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು ಒಂದೇ ಸ್ಥಳದಲ್ಲಿ 17,842 ಅಧಿಕಾರಿ, ನೌಕರರು ಠಿಕಾಣಿ; ವರ್ಗಾವಣೆ ಮಾಡಿಲ್ಲವೇಕೆ?

ಬೆಂಗಳೂರು; ವಿಧಾನಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಕರ್ನಾಟಕ ಸರ್ಕಾರದ...

39,437 ಕೋಟಿ ರು ಸಾರ್ವಜನಿಕ ವೆಚ್ಚ; ಸಮಗ್ರ ಘನ ತ್ಯಾಜ್ಯ ನಿರ್ವಹಣೆ ಯೋಜನೆಯಲ್ಲಿ ಅಕ್ರಮ ಆರೋಪ, ಸಿಬಿಐ ತನಿಖೆಗೆ ಕೇಂದ್ರ ಸಚಿವೆ ಪತ್ರ

ಬೆಂಗಳೂರು; 39,437 ಕೋಟಿ ಸಾರ್ವಜನಿಕ ವೆಚ್ಚವನ್ನು ಒಳಗೊಂಡಿರುವ ಸಮಗ್ರ ಘನ ತ್ಯಾಜ್ಯ...

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ; ಆರೋಪಿತರಿಗೆ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಕ, ಲೋಕಾ ದಾಳಿಯನ್ನೇ ಅಣಕಿಸಿದ ಸರ್ಕಾರ

ಬೆಂಗಳೂರು;  ಆದಾಯಕ್ಕೂ  ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ...
Please Scan to make Your Contribution

Topics

5 ವರ್ಷಕ್ಕಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು ಒಂದೇ ಸ್ಥಳದಲ್ಲಿ 17,842 ಅಧಿಕಾರಿ, ನೌಕರರು ಠಿಕಾಣಿ; ವರ್ಗಾವಣೆ ಮಾಡಿಲ್ಲವೇಕೆ?

ಬೆಂಗಳೂರು; ವಿಧಾನಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಕರ್ನಾಟಕ ಸರ್ಕಾರದ...

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ; ಆರೋಪಿತರಿಗೆ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಕ, ಲೋಕಾ ದಾಳಿಯನ್ನೇ ಅಣಕಿಸಿದ ಸರ್ಕಾರ

ಬೆಂಗಳೂರು;  ಆದಾಯಕ್ಕೂ  ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ...

ಸಾರ್ವತ್ರಿಕ ರಜಾ ದಿನದ ವೇತನಕ್ಕೂ ಕತ್ತರಿ!; ಶಕ್ತಿ ಸೌಧದಲ್ಲೇ ಡೇಟಾ ಎಂಟ್ರಿ ಆಪರೇಟರ್‍‌ಗಳಿಗೆ ಶೋಷಣೆ, ದೌರ್ಜನ್ಯ ಆರೋಪ

ಬೆಂಗಳೂರು;  ಮುಖ್ಯಮಂತ್ರಿ ಸಚಿವಾಲಯವೂ ಸೇರಿದಂತೆ ಸಚಿವಾಲಯದ ಇತರೆ  ಕಚೇರಿಗಳಲ್ಲಿ ಹೊರಗುತ್ತಿಗೆಯಡಿಯಲ್ಲಿ  ಕಾರ್ಯನಿರ್ವಹಿಸುತ್ತಿರುವ...

Related Articles

Popular Categories

error: Content is protected !!