Friday | April 3, 2026 |

ಜಗಜ್ಯೋತಿ ಬಸವಣ್ಣ ಹೆಸರು ನಾಮಕರಣ; ಬಿಬಿಎಂಪಿ ಕೌನ್ಸಿಲ್‌ ನಿರ್ಣಯ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್‌ವೊಂದರ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಹೆಸರನ್ನು ನಾಮಕರಣ ಮಾಡಲು ಬಿಬಿಎಂಪಿ ಕೈಗೊಂಡಿದ್ದ ನಿರ್ಣಯವನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದುಗೊಳಿಸಿದೆ.

ಬೆಂಗಳೂರು ಮಹಾನಗರಪಾಲಿಕೆಯ ಜೋಗುಪಾಳ್ಯ ವ್ಯಾಪ್ತಿಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು ಪಾಲಿಕೆಯಲ್ಲಿ 2020ರ ಜೂನ್‌ 30ರಂದು ನಡೆದಿದ್ದ ಸಾಮಾನ್ಯ ಸಭೆಯು ನಿರ್ಣಯ ಕೈಗೊಂಡಿತ್ತು. ಆದರೆ ಈ ನಿರ್ಣಯವನ್ನು ಏಕಪಕ್ಷೀಯವಾಗಿ ತೀರ್ಮಾನಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯು ನಿರ್ಣಯವನ್ನು ರದ್ದುಪಡಿಸಿ 2021ರ ಮಾರ್ಚ್‌ 4ರಂದು ಆದೇಶ ಹೊರಡಿಸಿದೆ. ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಅಲ್ಲದೆ ಬಿಬಿಎಂಪಿಯು ಕೈಗೊಂಡಿದ್ದ ನಿರ್ಣಯವು ಕರ್ನಾಟಕ ಮುನ್ಸಿಪಲ್‌ ಕಾರ್ಪೋರೇಷನ್‌ (ಸಾರ್ವಜನಿಕ ಸ್ಥಳಕ್ಕೆ ನಾಮಕರಣ ಮಾಡುವುದು) 2008ರ ನಿಯಮ 7ಕ್ಕೆ ವಿರುದ್ಧವಾಗಿತ್ತು ಎಂಬ ಅಂಶ ಆದೇಶದಿಂದ ತಿಳಿದು ಬಂದಿದೆ.

ಜೋಗುಪಾಳ್ಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು ಕರ್ನಾಟಕ ಮುನಿಸಿಪಲ್‌ ಕಾರ್ಪೋರೇಷನ್‌ ಅಧಿನಿಯಮ 1976 293ನೇ ಪ್ರಕರಣದ 1ನೇ ಉಪಪ್ರಕರಣದಡಿಯಲ್ಲಿ ಪಾಲಿಕೆಯ ಕೌನ್ಸಿಲ್‌ ಸಭೆಯ (ವಿಷಯ ಸಂಖ್ಯೆ; 14(102)/2020-21)ಲ್ಲಿ ನಿರ್ಣಯ ಕೈಗೊಂಡಿತ್ತು.

‘1998ರ ಅಕ್ಟೋಬರ್‌ 27ರಂದು ಬಿಬಿಎಂಪಿ ವ್ಯಾಪ್ತಿಯ ಹನುಮಂತ ನಗರದ ಹಳೇ ವಾರ್ಡ್ ಸಂಖ್ಯೆ 52ರ ವ್ಯಾಪ್ತಿಯಲ್ಲಿನ ಶ್ರೀನಗರದ 4ನೇ ಮುಖ್ಯರಸ್ತೆಗೆ ಬಸವಣ್ಣ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಹೀಗಾಗಿ ಜೋಗುಪಾಳ್ಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು 2020ರ ಜೂನ್‌ 30ರಂದು ಕೈಗೊಂಡಿದ್ದ ನಿರ್ಣಯವು ನಿಯಮಗಳಿಗೆ ವಿರುದ್ಧವಾಗಿತ್ತು. ಹೀಗಾಗಿ ಕೆಎಂಸಿ ಕಾಯ್ದೆ 1976ರ ಕಲಂ 98ರ ಮೇರೆಗೆ ನಿರ್ಣಯವನ್ನು ರದ್ದುಗೊಳಿಸಲು ಸರ್ಕಾರವನ್ನು ಆಯುಕ್ತರು ಕೋರಿದ್ದರು.

Hot this week

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ; ವರ್ಷವಾದರೂ ಇಲಾಖೆಗಳಿಂದ ಬಾರದ ಮಾಹಿತಿ, ಅಧಿಸೂಚನೆಗೂ ಕಿಮ್ಮತ್ತಿಲ್ಲ, ನೆನಪೋಲೆಯ ಕಾಲಹರಣ

ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು...

Topics

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174...

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

Related Articles

Popular Categories

error: Content is protected !!