Monday | August 31, 2026 |

ಜಗಜ್ಯೋತಿ ಬಸವಣ್ಣ ಹೆಸರು ನಾಮಕರಣ; ಬಿಬಿಎಂಪಿ ಕೌನ್ಸಿಲ್‌ ನಿರ್ಣಯ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್‌ವೊಂದರ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಹೆಸರನ್ನು ನಾಮಕರಣ ಮಾಡಲು ಬಿಬಿಎಂಪಿ ಕೈಗೊಂಡಿದ್ದ ನಿರ್ಣಯವನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದುಗೊಳಿಸಿದೆ.

ಬೆಂಗಳೂರು ಮಹಾನಗರಪಾಲಿಕೆಯ ಜೋಗುಪಾಳ್ಯ ವ್ಯಾಪ್ತಿಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು ಪಾಲಿಕೆಯಲ್ಲಿ 2020ರ ಜೂನ್‌ 30ರಂದು ನಡೆದಿದ್ದ ಸಾಮಾನ್ಯ ಸಭೆಯು ನಿರ್ಣಯ ಕೈಗೊಂಡಿತ್ತು. ಆದರೆ ಈ ನಿರ್ಣಯವನ್ನು ಏಕಪಕ್ಷೀಯವಾಗಿ ತೀರ್ಮಾನಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯು ನಿರ್ಣಯವನ್ನು ರದ್ದುಪಡಿಸಿ 2021ರ ಮಾರ್ಚ್‌ 4ರಂದು ಆದೇಶ ಹೊರಡಿಸಿದೆ. ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಅಲ್ಲದೆ ಬಿಬಿಎಂಪಿಯು ಕೈಗೊಂಡಿದ್ದ ನಿರ್ಣಯವು ಕರ್ನಾಟಕ ಮುನ್ಸಿಪಲ್‌ ಕಾರ್ಪೋರೇಷನ್‌ (ಸಾರ್ವಜನಿಕ ಸ್ಥಳಕ್ಕೆ ನಾಮಕರಣ ಮಾಡುವುದು) 2008ರ ನಿಯಮ 7ಕ್ಕೆ ವಿರುದ್ಧವಾಗಿತ್ತು ಎಂಬ ಅಂಶ ಆದೇಶದಿಂದ ತಿಳಿದು ಬಂದಿದೆ.

ಜೋಗುಪಾಳ್ಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು ಕರ್ನಾಟಕ ಮುನಿಸಿಪಲ್‌ ಕಾರ್ಪೋರೇಷನ್‌ ಅಧಿನಿಯಮ 1976 293ನೇ ಪ್ರಕರಣದ 1ನೇ ಉಪಪ್ರಕರಣದಡಿಯಲ್ಲಿ ಪಾಲಿಕೆಯ ಕೌನ್ಸಿಲ್‌ ಸಭೆಯ (ವಿಷಯ ಸಂಖ್ಯೆ; 14(102)/2020-21)ಲ್ಲಿ ನಿರ್ಣಯ ಕೈಗೊಂಡಿತ್ತು.

‘1998ರ ಅಕ್ಟೋಬರ್‌ 27ರಂದು ಬಿಬಿಎಂಪಿ ವ್ಯಾಪ್ತಿಯ ಹನುಮಂತ ನಗರದ ಹಳೇ ವಾರ್ಡ್ ಸಂಖ್ಯೆ 52ರ ವ್ಯಾಪ್ತಿಯಲ್ಲಿನ ಶ್ರೀನಗರದ 4ನೇ ಮುಖ್ಯರಸ್ತೆಗೆ ಬಸವಣ್ಣ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಹೀಗಾಗಿ ಜೋಗುಪಾಳ್ಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು 2020ರ ಜೂನ್‌ 30ರಂದು ಕೈಗೊಂಡಿದ್ದ ನಿರ್ಣಯವು ನಿಯಮಗಳಿಗೆ ವಿರುದ್ಧವಾಗಿತ್ತು. ಹೀಗಾಗಿ ಕೆಎಂಸಿ ಕಾಯ್ದೆ 1976ರ ಕಲಂ 98ರ ಮೇರೆಗೆ ನಿರ್ಣಯವನ್ನು ರದ್ದುಗೊಳಿಸಲು ಸರ್ಕಾರವನ್ನು ಆಯುಕ್ತರು ಕೋರಿದ್ದರು.

Hot this week

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...
Please Scan to make Your Contribution

Topics

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

Related Articles

Popular Categories

error: Content is protected !!