Wednesday | July 22, 2026 |

ಜಗಜ್ಯೋತಿ ಬಸವಣ್ಣ ಹೆಸರು ನಾಮಕರಣ; ಬಿಬಿಎಂಪಿ ಕೌನ್ಸಿಲ್‌ ನಿರ್ಣಯ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್‌ವೊಂದರ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಹೆಸರನ್ನು ನಾಮಕರಣ ಮಾಡಲು ಬಿಬಿಎಂಪಿ ಕೈಗೊಂಡಿದ್ದ ನಿರ್ಣಯವನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದುಗೊಳಿಸಿದೆ.

ಬೆಂಗಳೂರು ಮಹಾನಗರಪಾಲಿಕೆಯ ಜೋಗುಪಾಳ್ಯ ವ್ಯಾಪ್ತಿಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು ಪಾಲಿಕೆಯಲ್ಲಿ 2020ರ ಜೂನ್‌ 30ರಂದು ನಡೆದಿದ್ದ ಸಾಮಾನ್ಯ ಸಭೆಯು ನಿರ್ಣಯ ಕೈಗೊಂಡಿತ್ತು. ಆದರೆ ಈ ನಿರ್ಣಯವನ್ನು ಏಕಪಕ್ಷೀಯವಾಗಿ ತೀರ್ಮಾನಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯು ನಿರ್ಣಯವನ್ನು ರದ್ದುಪಡಿಸಿ 2021ರ ಮಾರ್ಚ್‌ 4ರಂದು ಆದೇಶ ಹೊರಡಿಸಿದೆ. ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಅಲ್ಲದೆ ಬಿಬಿಎಂಪಿಯು ಕೈಗೊಂಡಿದ್ದ ನಿರ್ಣಯವು ಕರ್ನಾಟಕ ಮುನ್ಸಿಪಲ್‌ ಕಾರ್ಪೋರೇಷನ್‌ (ಸಾರ್ವಜನಿಕ ಸ್ಥಳಕ್ಕೆ ನಾಮಕರಣ ಮಾಡುವುದು) 2008ರ ನಿಯಮ 7ಕ್ಕೆ ವಿರುದ್ಧವಾಗಿತ್ತು ಎಂಬ ಅಂಶ ಆದೇಶದಿಂದ ತಿಳಿದು ಬಂದಿದೆ.

ಜೋಗುಪಾಳ್ಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು ಕರ್ನಾಟಕ ಮುನಿಸಿಪಲ್‌ ಕಾರ್ಪೋರೇಷನ್‌ ಅಧಿನಿಯಮ 1976 293ನೇ ಪ್ರಕರಣದ 1ನೇ ಉಪಪ್ರಕರಣದಡಿಯಲ್ಲಿ ಪಾಲಿಕೆಯ ಕೌನ್ಸಿಲ್‌ ಸಭೆಯ (ವಿಷಯ ಸಂಖ್ಯೆ; 14(102)/2020-21)ಲ್ಲಿ ನಿರ್ಣಯ ಕೈಗೊಂಡಿತ್ತು.

‘1998ರ ಅಕ್ಟೋಬರ್‌ 27ರಂದು ಬಿಬಿಎಂಪಿ ವ್ಯಾಪ್ತಿಯ ಹನುಮಂತ ನಗರದ ಹಳೇ ವಾರ್ಡ್ ಸಂಖ್ಯೆ 52ರ ವ್ಯಾಪ್ತಿಯಲ್ಲಿನ ಶ್ರೀನಗರದ 4ನೇ ಮುಖ್ಯರಸ್ತೆಗೆ ಬಸವಣ್ಣ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಹೀಗಾಗಿ ಜೋಗುಪಾಳ್ಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು 2020ರ ಜೂನ್‌ 30ರಂದು ಕೈಗೊಂಡಿದ್ದ ನಿರ್ಣಯವು ನಿಯಮಗಳಿಗೆ ವಿರುದ್ಧವಾಗಿತ್ತು. ಹೀಗಾಗಿ ಕೆಎಂಸಿ ಕಾಯ್ದೆ 1976ರ ಕಲಂ 98ರ ಮೇರೆಗೆ ನಿರ್ಣಯವನ್ನು ರದ್ದುಗೊಳಿಸಲು ಸರ್ಕಾರವನ್ನು ಆಯುಕ್ತರು ಕೋರಿದ್ದರು.

Hot this week

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...
Please Scan to make Your Contribution

Topics

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!