Wednesday | March 18, 2026 |

ತನಿಖೆ ವಿಳಂಬ; ಅವಧಿ ಮೀರಿದ ಅಮಾನತು ಪ್ರಕರಣಗಳಲ್ಲಿ ಗೃಹ ಇಲಾಖೆ ಮೇಲುಗೈ

Support THE-FILE

spot_img

ಬೆಂಗಳೂರು; ಕರ್ತವ್ಯಲೋಪ, ಭ್ರಷ್ಟಾಚಾರ, ಇಲಾಖೆ ವಿಚಾರಣೆ ಮತ್ತಿತರ ಕಾರಣಕ್ಕೆ ಅಮಾನತುಗೊಳಿಸಿರುವ ಅಧಿಕಾರಿ, ನೌಕರರನ್ನು 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಸಚಿವಾಲಯದಲ್ಲಿರುವ 8 ಇಲಾಖೆಗಳು ಉಲ್ಲಂಘಿಸಿವೆ.

2021ರ ಜನವರಿ 15ರಿಂದ 2021ರ ಫೆ.15ರವರೆಗೆ 8 ಇಲಾಖೆಗಳಲ್ಲಿ 74 ಅಮಾನತು ಪ್ರಕರಣಗಳು 6 ತಿಂಗಳು ಅವಧಿ ಮೀರಿವೆ. ಈ ಪೈಕಿ ಒಳಾಡಳಿತ ಇಲಾಖೆಯಲ್ಲಿಯೇ 61 ಪ್ರಕರಣಗಳು 6 ತಿಂಗಳು ಮೀರಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಇನ್ನುಳಿದಂತೆ ತೋಟಗಾರಿಕೆ ಮತ್ತು ನಗರಾಭಿವೃದ್ಧಿ ಇಲಾಖೆಯಲ್ಲಿ ತಲಾ 2, ಸಮಾಜ ಕಲ್ಯಾಣ, ಆಹಾರ, ನಾಗರಿಕ ಸರಬರಾಜು, ಲೋಕೋಪಯೋಗಿ, ಪಶು ಸಂಗೋಪನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ತಲಾ 1 ಪ್ರಕರಣಗಳು 6 ತಿಂಗಳು ಅವಧಿ ಮೀರಿವೆ.
ಭ್ರಷ್ಟಾಚಾರ ಸೇರಿದಂತೆ ಇನ್ನಿತರೆ ಆರೋಪಗಳ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹ ದಳದ ತನಿಖಾಧಿಕಾರಿಗಳು ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸುತ್ತಿಲ್ಲ. ಹೀಗಾಗಿ ಇಲಾಖೆ ಅಮಾನತು ಪ್ರಕರಣಗಳಲ್ಲಿ ಯಾವುದೇ ತೀರ್ಮಾನ ಹೊರಬೀಳದ ಕಾರಣ 6 ತಿಂಗಳು ಅವಧಿ ಮೀರುತ್ತಿವೆ ಎನ್ನಲಾಗಿದೆ.

ಯಾವುದೇ ಆರೋಪದಡಿ ಸರ್ಕಾರಿ ನೌಕರ ಅಮಾನತಿಗೆ ಒಳಗಾದರೆ ಸಂಬಂಧಿಸಿದ ಆರೋಪ ಕುರಿತ ಇಲಾಖೆ ವಿಚಾರಣೆ ಆರು ತಿಂಗಳಲ್ಲಿ ಪೂರ್ಣಗೊಳ್ಳಬೇಕು. ಅಮಾನತು ಅವಧಿ ಆರು ತಿಂಗಳ ಮೇಲೆ ಮುಂದುವರೆಸುವಂತಿಲ್ಲ, ಯಾವುದೇ ಆದೇಶ ನೀಡದಿದ್ದ ಪಕ್ಷದಲ್ಲಿ ಅಮಾನತು ತಾನಾಗಿ ರದ್ದಾಗಲಿದೆ ಎಂದು ಆದೇಶ ಹೊರಡಿಸಿತ್ತು.

ಶಿಸ್ತು ಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರಿ ನೌಕರರನ್ನು ಅಮಾನತಿನಲ್ಲಿ ಇಡುವುದರಿಂದ ಸರ್ಕಾರಕ್ಕೆ ಅನಗತ್ಯ ಆರ್ಥಿಕ ಹೊರೆ ತಪ್ಪಿಸುವ ಸಲುವಾಗಿ ಆದೇಶ ಹೊರಡಿಸಲಾಗಿತ್ತು. ಯಾವುದೇ ಒಂದು ಆರೋಪ ಸಂಬಂಧ ಶಿಸ್ತು ಕ್ರಮಕ್ಕೆ ಆದೇಶ ಹೊರಡಿಸಿ ಐದು ವರ್ಷ ಆದರೂ ವಿಚಾರಣೆ ಮುಗಿಯುತ್ತಿರಲಿಲ್ಲ. ಹೀಗಾಗಿ ಕರ್ನಾಟಕ ನಾಗರಿಕ ಸೇವಾ ನಿಯಮ 1957 ನಿಯಮ10 ಕ್ಕೆ ಕೆಲವು ತಿದ್ದುಪಡಿ ತರಲಾಗಿತ್ತು.

ಅಮಾನತು ಅವಧಿ ಮುಂದುವರೆಸಬೇಕಿದ್ದಲ್ಲಿ ಸಕ್ಷಮ ಪ್ರಾಧಿಕಾರ ಆರು ತಿಂಗಳ ಒಳಗೆ ಅದೇಶಿಸದಿದ್ಧಲ್ಲಿ ಭಾವಿತ ಆದೇಶ ಎಂದು ಪರಿಗಣಿಸಿ ಆರು ತಿಂಗಳ ಮುಗಿದ ಮರು ದಿನವೇ ಅಮಾನತು ಆದೇಶ ರದ್ದಾಗುತ್ತದೆ. ಈ ರೀತಿ ಅಮಾನತು ಆದೇಶ ರದ್ದಾದ ಬಳಿಕ ಸರ್ಕಾರಿ ನೌಕರ ನೇಮಕಾತಿ ಪ್ರಾಧಿಕಾರದಿಂದ ಸ್ಥಳ ನಿಯುಕ್ತಿ ಆದೇಶವನ್ನು ಕೋರಬೇಕು. ಸ್ಥಳ ನಿಯುಕ್ತಿ ಕೋರದೇ ಹೋದರೆ, ಅಮಾನತು ಅವಧಿ ಹೊರತು ಪಡಿಸಿ ಉಳಿದ ಅವಧಿಯನ್ನು ಗೈರು ಹಾಜರಿ ಎಂದು ಪರಿಗಣಿಸಲಾಗುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿತ್ತು.

ಭ್ರಷ್ಟಾಚಾರ, ಲೋಕಾಯುಕ್ತ ಸಂಸ್ಥೆ ದಾಖಲಿಸುವ ಪ್ರಕರಣದಲ್ಲಿ ಅಮಾನತು ಆದರೂ, ಸಂಬಂಧಪಟ್ಟ ತನಿಖಾ ಸಂಸ್ಥೆ ಆರು ತಿಂಗಳ ಒಳಗೆ ಸರ್ಕಾರಿ ನೌಕರನ ಅಮಾನತು ಅವಧಿ ಮುಂದುವರೆಸುವ ಬಗ್ಗೆ ಕೋರಿಕೆ ಸಲ್ಲಿಸಬೇಕು. ಸಲ್ಲಿಸಿದರೆ ಮಾತ್ರ ಅಮಾನತು ಅವಧಿ ವಿಸ್ತರಿಸಲಾಗುತ್ತದೆ. ಸಲ್ಲಿಸದಿದ್ದ ಪಕ್ಷದಲ್ಲಿ ಆರು ತಿಂಗಳ ನಂತರ ಸ್ವಯಂ ಚಾಲಿತವಾಗಿ ಅಮಾನತು ರದ್ದಾಗುತ್ತದೆ. ಸಂದರ್ಭ ಅನುಸಾರ ಆರು ತಿಂಗಳ ಒಳಗೆ ಇಲಾಖೆ ವಿಚಾರಣೆ ಆರಂಭಿಸಿದ್ದಲ್ಲಿ, ದೋಷಾರೋಪಣೆ ಸಲ್ಲಿಸಿದ್ದಲ್ಲಿ ಅಂತಹ ಸಂದರ್ಭದಲ್ಲಿ ಆರು ತಿಂಗಳ ಒಳಗೆ ಸರ್ಕಾರಿ ನೌಕರನನ್ನು ಸೇವೆಗೆ ಪುನರ್ ಅವಕಾಶ ಕೊಡಲು ಸಕ್ಷಮ ಪ್ರಾಧಿಕಾರ ನಿರ್ಧರಿಸುತ್ತದೆ.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!