Saturday | July 18, 2026 |

ತನಿಖೆ ವಿಳಂಬ; ಅವಧಿ ಮೀರಿದ ಅಮಾನತು ಪ್ರಕರಣಗಳಲ್ಲಿ ಗೃಹ ಇಲಾಖೆ ಮೇಲುಗೈ

ಬೆಂಗಳೂರು; ಕರ್ತವ್ಯಲೋಪ, ಭ್ರಷ್ಟಾಚಾರ, ಇಲಾಖೆ ವಿಚಾರಣೆ ಮತ್ತಿತರ ಕಾರಣಕ್ಕೆ ಅಮಾನತುಗೊಳಿಸಿರುವ ಅಧಿಕಾರಿ, ನೌಕರರನ್ನು 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಸಚಿವಾಲಯದಲ್ಲಿರುವ 8 ಇಲಾಖೆಗಳು ಉಲ್ಲಂಘಿಸಿವೆ.

2021ರ ಜನವರಿ 15ರಿಂದ 2021ರ ಫೆ.15ರವರೆಗೆ 8 ಇಲಾಖೆಗಳಲ್ಲಿ 74 ಅಮಾನತು ಪ್ರಕರಣಗಳು 6 ತಿಂಗಳು ಅವಧಿ ಮೀರಿವೆ. ಈ ಪೈಕಿ ಒಳಾಡಳಿತ ಇಲಾಖೆಯಲ್ಲಿಯೇ 61 ಪ್ರಕರಣಗಳು 6 ತಿಂಗಳು ಮೀರಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಇನ್ನುಳಿದಂತೆ ತೋಟಗಾರಿಕೆ ಮತ್ತು ನಗರಾಭಿವೃದ್ಧಿ ಇಲಾಖೆಯಲ್ಲಿ ತಲಾ 2, ಸಮಾಜ ಕಲ್ಯಾಣ, ಆಹಾರ, ನಾಗರಿಕ ಸರಬರಾಜು, ಲೋಕೋಪಯೋಗಿ, ಪಶು ಸಂಗೋಪನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ತಲಾ 1 ಪ್ರಕರಣಗಳು 6 ತಿಂಗಳು ಅವಧಿ ಮೀರಿವೆ.
ಭ್ರಷ್ಟಾಚಾರ ಸೇರಿದಂತೆ ಇನ್ನಿತರೆ ಆರೋಪಗಳ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹ ದಳದ ತನಿಖಾಧಿಕಾರಿಗಳು ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸುತ್ತಿಲ್ಲ. ಹೀಗಾಗಿ ಇಲಾಖೆ ಅಮಾನತು ಪ್ರಕರಣಗಳಲ್ಲಿ ಯಾವುದೇ ತೀರ್ಮಾನ ಹೊರಬೀಳದ ಕಾರಣ 6 ತಿಂಗಳು ಅವಧಿ ಮೀರುತ್ತಿವೆ ಎನ್ನಲಾಗಿದೆ.

ಯಾವುದೇ ಆರೋಪದಡಿ ಸರ್ಕಾರಿ ನೌಕರ ಅಮಾನತಿಗೆ ಒಳಗಾದರೆ ಸಂಬಂಧಿಸಿದ ಆರೋಪ ಕುರಿತ ಇಲಾಖೆ ವಿಚಾರಣೆ ಆರು ತಿಂಗಳಲ್ಲಿ ಪೂರ್ಣಗೊಳ್ಳಬೇಕು. ಅಮಾನತು ಅವಧಿ ಆರು ತಿಂಗಳ ಮೇಲೆ ಮುಂದುವರೆಸುವಂತಿಲ್ಲ, ಯಾವುದೇ ಆದೇಶ ನೀಡದಿದ್ದ ಪಕ್ಷದಲ್ಲಿ ಅಮಾನತು ತಾನಾಗಿ ರದ್ದಾಗಲಿದೆ ಎಂದು ಆದೇಶ ಹೊರಡಿಸಿತ್ತು.

ಶಿಸ್ತು ಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರಿ ನೌಕರರನ್ನು ಅಮಾನತಿನಲ್ಲಿ ಇಡುವುದರಿಂದ ಸರ್ಕಾರಕ್ಕೆ ಅನಗತ್ಯ ಆರ್ಥಿಕ ಹೊರೆ ತಪ್ಪಿಸುವ ಸಲುವಾಗಿ ಆದೇಶ ಹೊರಡಿಸಲಾಗಿತ್ತು. ಯಾವುದೇ ಒಂದು ಆರೋಪ ಸಂಬಂಧ ಶಿಸ್ತು ಕ್ರಮಕ್ಕೆ ಆದೇಶ ಹೊರಡಿಸಿ ಐದು ವರ್ಷ ಆದರೂ ವಿಚಾರಣೆ ಮುಗಿಯುತ್ತಿರಲಿಲ್ಲ. ಹೀಗಾಗಿ ಕರ್ನಾಟಕ ನಾಗರಿಕ ಸೇವಾ ನಿಯಮ 1957 ನಿಯಮ10 ಕ್ಕೆ ಕೆಲವು ತಿದ್ದುಪಡಿ ತರಲಾಗಿತ್ತು.

ಅಮಾನತು ಅವಧಿ ಮುಂದುವರೆಸಬೇಕಿದ್ದಲ್ಲಿ ಸಕ್ಷಮ ಪ್ರಾಧಿಕಾರ ಆರು ತಿಂಗಳ ಒಳಗೆ ಅದೇಶಿಸದಿದ್ಧಲ್ಲಿ ಭಾವಿತ ಆದೇಶ ಎಂದು ಪರಿಗಣಿಸಿ ಆರು ತಿಂಗಳ ಮುಗಿದ ಮರು ದಿನವೇ ಅಮಾನತು ಆದೇಶ ರದ್ದಾಗುತ್ತದೆ. ಈ ರೀತಿ ಅಮಾನತು ಆದೇಶ ರದ್ದಾದ ಬಳಿಕ ಸರ್ಕಾರಿ ನೌಕರ ನೇಮಕಾತಿ ಪ್ರಾಧಿಕಾರದಿಂದ ಸ್ಥಳ ನಿಯುಕ್ತಿ ಆದೇಶವನ್ನು ಕೋರಬೇಕು. ಸ್ಥಳ ನಿಯುಕ್ತಿ ಕೋರದೇ ಹೋದರೆ, ಅಮಾನತು ಅವಧಿ ಹೊರತು ಪಡಿಸಿ ಉಳಿದ ಅವಧಿಯನ್ನು ಗೈರು ಹಾಜರಿ ಎಂದು ಪರಿಗಣಿಸಲಾಗುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿತ್ತು.

ಭ್ರಷ್ಟಾಚಾರ, ಲೋಕಾಯುಕ್ತ ಸಂಸ್ಥೆ ದಾಖಲಿಸುವ ಪ್ರಕರಣದಲ್ಲಿ ಅಮಾನತು ಆದರೂ, ಸಂಬಂಧಪಟ್ಟ ತನಿಖಾ ಸಂಸ್ಥೆ ಆರು ತಿಂಗಳ ಒಳಗೆ ಸರ್ಕಾರಿ ನೌಕರನ ಅಮಾನತು ಅವಧಿ ಮುಂದುವರೆಸುವ ಬಗ್ಗೆ ಕೋರಿಕೆ ಸಲ್ಲಿಸಬೇಕು. ಸಲ್ಲಿಸಿದರೆ ಮಾತ್ರ ಅಮಾನತು ಅವಧಿ ವಿಸ್ತರಿಸಲಾಗುತ್ತದೆ. ಸಲ್ಲಿಸದಿದ್ದ ಪಕ್ಷದಲ್ಲಿ ಆರು ತಿಂಗಳ ನಂತರ ಸ್ವಯಂ ಚಾಲಿತವಾಗಿ ಅಮಾನತು ರದ್ದಾಗುತ್ತದೆ. ಸಂದರ್ಭ ಅನುಸಾರ ಆರು ತಿಂಗಳ ಒಳಗೆ ಇಲಾಖೆ ವಿಚಾರಣೆ ಆರಂಭಿಸಿದ್ದಲ್ಲಿ, ದೋಷಾರೋಪಣೆ ಸಲ್ಲಿಸಿದ್ದಲ್ಲಿ ಅಂತಹ ಸಂದರ್ಭದಲ್ಲಿ ಆರು ತಿಂಗಳ ಒಳಗೆ ಸರ್ಕಾರಿ ನೌಕರನನ್ನು ಸೇವೆಗೆ ಪುನರ್ ಅವಕಾಶ ಕೊಡಲು ಸಕ್ಷಮ ಪ್ರಾಧಿಕಾರ ನಿರ್ಧರಿಸುತ್ತದೆ.

Hot this week

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...
Please Scan to make Your Contribution

Topics

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

Related Articles

Popular Categories

error: Content is protected !!