Wednesday | July 22, 2026 |

ಸಹಭಾಗಿ ಪತ್ರಿಕೋದ್ಯಮ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಆರ್ಥಿಕ ಸಹಾಯ ಧನ ಬಿಡುಗಡೆ ಮಾಡಲು ಈವರೆವಿಗೂ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ಒಂದು ವಾರದ ಹಿಂದೆಯೇ ಹೊರಗೆಡವಿದ್ದ ‘ದಿ ಫೈಲ್‌’ ವರದಿಯನ್ನು ಪ್ರಜಾವಾಣಿ ಪತ್ರಿಕೆಯೂ ವಿಸ್ತರಿಸಿದೆ.

ಕೋವಿಡ್‌ನಿಂದ ಉದ್ಭವಿಸಿರುವ ಆರ್ಥಿಕ ಸಂಕಷ್ಟದಲ್ಲೂ ಮಠ ಮಾನ್ಯಗಳಿಗೆ 80 ಕೋಟಿ ಅನುದಾನ ಬಿಡುಗಡೆ ಮಾಡಿದ್ದ ಸರ್ಕಾರವು ಪಿಎಂ ಕಿಸಾನ್‌ ಸಮ್ಮಾನ್‌ ಕರ್ನಾಟಕ ಯೋಜನೆಯ ಹೆಚ್ಚುವರಿ ಅನುದಾನವನ್ನು ನೀಡದೇ ಇದ್ದದ್ದನ್ನು ದಾಖಲೆ ಸಮೇತ ವರದಿ ಪ್ರಕಟಿಸಿತ್ತು.

ಕಿಸಾನ್‌ ಯೋಜನೆ 2ನೇ ಕಂತಿನ ಬಿಡಿಗಾಸು ಕೊಡದ ಸರ್ಕಾರ; ಮಠಗಳಿಗಿರುವ ನೆರವು ರೈತರಿಗೇಕಿಲ್ಲ?

‘ದಿ ಫೈಲ್‌’ ವರದಿ ಪ್ರಕಟಿಸಿದ ಒಂದು ವಾರದ ನಂತರ ರೈತರ ಕೈಸೇರದ ಎರಡನೇ ಕಂತು ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಪ್ರಕಟಿಸಿರುವ ಪ್ರಜಾವಾಣಿಯು ಈ ನಿಟ್ಟಿನಲ್ಲಿ ಸಹಭಾಗಿ ಪತ್ರಿಕೋದ್ಯಮವನ್ನು ಮುಂದುವರೆಸಿದೆ.

ಸರ್ಕಾರದ ಆಡಳಿತ ವೈಫಲ್ಯ, ಯೋಜನೆಗಳ ಅನುಷ್ಠಾನದಲ್ಲಿನ ಹಿನ್ನಡೆ, ಅಕ್ರಮ, ಅವ್ಯವಹಾರ, ಭ್ರಷ್ಟಾಚಾರ, ಆಡಳಿತದಲ್ಲಿನ ಲೋಪದೋಷಗಳ ಕುರಿತು ಬೇರೊಂದು ಮಾಧ್ಯಮದಲ್ಲಿ ವರದಿ ಪ್ರಕಟವಾದಾಗ ಮುಖ್ಯ ವಾಹಿನಿಯಲ್ಲಿರುವ ಮಾಧ್ಯಮಗಳು ಅ ವರದಿಗಳನ್ನು ಇನ್ನಷ್ಟು ವಿಸ್ತರಿಸುವ ಮೂಲಕ ಸರ್ಕಾರದ ಕಣ್ಣು ತೆರೆಸುವುದು ಪತ್ರಿಕೋದ್ಯಮದಲ್ಲಿ ಉತ್ತಮ ಬೆಳವಣಿಗೆಯೇ ಸರಿ.

ದಿ ಫೈಲ್‌ ಪ್ರಕಟಿಸಿದ್ದ ವರದಿಯಲ್ಲೇನಿತ್ತು?

ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿರುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಗೆ ರಾಜ್ಯ ಸರ್ಕಾರವು ಅನುದಾನವನ್ನು ಹಂಚಿಕೊಳ್ಳುತ್ತಿದೆ. ಆದರೆ 2020-21ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ನೀಡುವ 4,000 ರು. ಹೆಚ್ಚುವರಿ ಆರ್ಥಿಕ ಸಹಾಯಧನದ ಎರಡನೇ ಕಂತಿನ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಈ ಕುರಿತು ಕೃಷಿ ಆಯುಕ್ತರು 2021ರ ಮಾರ್ಚ್‌ 16ರಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಬರೆದಿದ್ದ ಪತ್ರವನ್ನಾಧರಿಸಿ ವರದಿ ಮಾರ್ಚ್‌ 25ರಂದು ವರದಿ ಪ್ರಕಟಿಸಿತ್ತು.

4,000 ರು.ಗಳ ಹೆಚ್ಚುವರಿ ಆರ್ಥಿಕ ನೆರವನ್ನು 2 ಕಂತುಗಳಲ್ಲಿ ಪಿ ಎಂ ಕಿಸಾನ್‌ ಕರ್ನಾಟಕ ಯೋಜನೆಯಡಿ ನೀಡುತ್ತಿದೆ. ಇದಕ್ಕಾಗಿ ರಾಜ್ಯವಲಯದ ಲೆಕ್ಕ ಶೀರ್ಷಿಕೆ (2401-00-800-1-05-100) ಅಡಿ ಒಟ್ಟು 2,100 ಕೋಟಿ ರು. ನಿಗದಿಪಡಿಸಿತ್ತು. ಈ ಪೈಕಿ 2020-21ನೇ ಸಾಲಿನಲ್ಲಿ ಎರಡನೇ ಕಂತಿಗೆ 51,66,395 ರೈತರಿಗೆ 1,033.28 ಕೋಟಿ ಹಾಗೂ ಮೊದಲನೇ ಕಂತಿನ ಬಾಕಿ ಬಾಕಿ 56,665 ರೈತರಿಗೆ 11.33 ಕೋಟಿ ರು. ಸೇರಿ ಒಟ್ಟಾರೆ 2020-21ನೇ ಸಾಲಿಗೆ 1,044.61 ಕೋಟಿ ರು. ಅನುದಾನ ಒದಗಿಸಬೇಕಿತ್ತು.

‘2020-21ನೇ ಸಾಲಿನಲ್ಲಿ ಎರಡನೇ ಕಂತಿನ ಆರ್ಥಿಕ ಸಹಾಯಧನವನ್ನು ಪಾವತಿಸಲು ಅನುದಾನ ಇಲ್ಲಿಯವರೆಗೆ ಬಿಡುಗಡೆ ಮಾಡಿಲ್ಲ, ‘ ಎಂದು ಕೃಷಿ ಆಯುಕ್ತರು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅನುದಾನ ಹೆಚ್ಚುವರಿ ಆರ್ಥಿಕ ಸಹಾಯಧನ ಬಿಡುಗಡೆಯಾಗದ ಕಾರಣ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಸಾವಿರಾರು ಸಂಖ್ಯೆಯ ರೈತರು ಸಂಕಷ್ಟದಲ್ಲಿದ್ದರೂ ಕೃಷಿ ಸಚಿವ ಬಿ ಸಿ ಪಾಟೀಲ್‌ ರೈತರ ಸಂಕಷ್ಟವನ್ನು ಆಲಿಸಿರಲಿಲ್ಲ ಎಂದು ‘ದಿ ಫೈಲ್‌’ ವರದಿಯಲ್ಲಿ ವಿವರಿಸಿತ್ತು.

ಇದೇ ಲೆಕ್ಕ ಶೀರ್ಷಿಕೆಯಲ್ಲಿ ಕಳೆದ ಸಾಲಿನಲ್ಲಿ 59346.00 ಲಕ್ಷ ರುಗ.ಳನ್ನು ಪ್ರಸಕ್ತ ಸಾಲಿನಲ್ಲಿ ಬಳಸಿಕೊಂಡಿದ್ದ ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಒದಗಿಸಿರುವ ಅನುದಾನವನ್ನು ಉಳಿಕೆ ಮಾಡಲು ಮುಂದಾಗಿತ್ತು. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಈವರೆವಿಗೆ 60,85,996 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ಮತ್ತು 3,77,990 ಸ್ವಯಂ/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ವಿವರಗಳನ್ನು ಪರಿಶೀಲಿಸಿದ ನಂತರ ಕೇಂದ್ರ ಸರ್ಕಾರಕ್ಕೆ ಒಟ್ಟು 57,09,537 ರೈತರ ವಿವರಗಳನ್ನು ಕಳಿಸಿರುವುದು ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರು 2021ರ ಮಾರ್ಚ್‌ 17ರಂದು ನಡೆದಿದ್ದ ವಿಧಾನಸಭೆ ಅಧಿವೇಶನದಲ್ಲಿ ಡಾ ಅಜಯ್‌ ಧರ್ಮಸಿಂಗ್‌ ಅವರಿಗೆ ಲಿಖಿತ ಉತ್ತರದಿಂದ ತಿಳಿದು ಬಂದಿದೆ.

ಅಲ್ಲದೆ ಯೋಜನೆ ಜಾರಿಯಾದ ದಿನದಿಂದ ಈವರೆವಿಗೆ 53,96,762 ರೈತರಿಗೆ ಹಣ ಸಂದಾಯವಾಗಿದೆ. ವಿವಿಧ ಕಾರಣಗಳಿಂದಾಗಿ 20,584 ಫಲಾನುಭವಿ ರೈತರಿಗೆ ಯೋಜನೆಯ ಅರ್ಥಿಕ ನೆರವು ಲಭಿಸಿಲ್ಲ. 2018-19ರಲ್ಲಿ 1106062, 2019-20ರಲ್ಲಿ 4304980, 2020-21ರಲ್ಲಿ 296964 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. 2018-19ರಲ್ಲಿ 19,872, 2019-20ರಲ್ಲಿ 50,10,591, 2020-21ರಲ್ಲಿ 53,96,762 ರೈತರು ಆರ್ಥಿಕ ನೆರವು ಪಡೆದಿರುವುದನ್ನು ವರದಿಯಲ್ಲಿ ವಿವರಿಸಲಾಗಿತ್ತು.

Hot this week

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...
Please Scan to make Your Contribution

Topics

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!