Thursday | May 14, 2026 |

ವಿವಾದಕ್ಕೆ ದಾರಿಯಾದ ಕೆಪಿಎಸ್‌ಸಿ ಅಧ್ಯಕ್ಷರ ನೇಮಕ; ಸಂವಿಧಾನಕ್ಕೆ ವಿರುದ್ಧವಾಗಿ ನಡೆಯಿತೇ ಸರ್ಕಾರ?

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ)ಕ್ಕೆ ಶಿವಶಂಕರಪ್ಪ ಎಸ್ ಸಾಹುಕಾರ್ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.

ಆಯೋಗದ ಅಧ್ಯಕ್ಷ ಅಥವಾ ಸದಸ್ಯ ಭಾರತ ಸರ್ಕಾರದ ಅಧೀನದಲ್ಲಾಗಲಿ ಅಥವಾ ರಾಜ್ಯ ಸರ್ಕಾರದ ಅಧೀನದಲ್ಲಾಗಲಿ ಕನಿಷ್ಠ ಪಕ್ಷ 10 ವರ್ಷಗಳವರೆಗೆ ಪದಧಾರಣೆ ಮಾಡಿರಬೇಕು ಎಂದು ಸಂವಿಧಾನದ 316ನೇ ವಿಧಿಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಬಿಜೆಪಿ ಸರ್ಕಾರವು ಸಹಕಾರಿ ಯೂನಿಯನ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದವರನ್ನು  ಆಯೋಗಕ್ಕೆ ಅಧ್ಯಕ್ಷನನ್ನಾಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಆಯೋಗಕ್ಕೆ ಅಧ್ಯಕ್ಷರಾಗಿ ನೇಮಕವಾಗಿರುವ ಶಿವಶಂಕರಪ್ಪ ಎಸ್‌ ಸಾಹುಕಾರ್‌ ಅವರು 10 ವರ್ಷದ ಹಿಂದೆ ರಾಷ್ಟ್ರೀಯ ಸಹಕಾರ ಯೂನಿಯನ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಿದ್ದರು. ಇವರ ಗುತ್ತಿಗೆ ಅವಧಿಯನ್ನು ವಿಸ್ತರಿಸಬಾರದು ಎಂದು ಹೊರಡಿಸಿದ್ದ ಆದೇಶವು ಇದೀಗ ದಿಢೀರ್‌ ಎಂದು ಮುನ್ನೆಲೆಗೆ ಬಂದಿದೆ. ಶಿವಶಂಕರಪ್ಪ ಎಸ್‌ ಸಾಹುಕಾರ್‌ ಅವರ ಕಾರ್ಯಕ್ಷಮತೆ ಬಗ್ಗೆ ಸಹಕಾರ ಯೂನಿಯನ್‌ ನಕಾರಾತ್ಮಕ ವರದಿ ನೀಡಿತ್ತು. ಈ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸಂವಿಧಾನ ವಿರೋಧಿ ನಡೆಯೇ?

ಪ್ರತಿಯೊಂದು ಲೋಕಸೇವಾ ಆಯೋಗದ ಸದಸ್ಯರಲ್ಲಿ ಸಾಧ್ಯವಾಗಬಹುದಾದ ಮಟ್ಟಿಗೆ ಅರ್ಧದಷ್ಟು ಸದಸ್ಯರು, ಅವರು ಅನುಕ್ರಮವಾಗಿ ನೇಮಕಗೊಂಡ ದಿನಾಂಕಗಳಂದು ಭಾರತ ಸರ್ಕಾರದ ಅಧೀನದಲ್ಲಾಗಲಿ ಅಥವಾ ರಾಜ್ಯ ಸರ್ಕಾರದ ಅಧೀನದಲ್ಲಾಗಲಿ ಕನಿಷ್ಠ ಪಕ್ಷ 10 ವರ್ಷಗಳವರೆಗೆ ಪದಧಾರಣೆ ಮಾಡಿರಬೇಕು. ಮತ್ತು ಈ 10 ವರ್ಷಗಳ ಅವಧಿಯನ್ನು ಲೆಕ್ಕ ಹಾಕುವಲ್ಲಿ ಈ ಸಂವಿಧಾನವು ಪ್ರಾರಂಭವಾಗುವುದಕ್ಕೆ ಮುಂಚೆ ಭಾರತ ಸಾಮ್ರಾಟನ ಅಧೀನದಲ್ಲಿ ಅಥವಾ ಒಂದು ಭಾರತೀಯ ಸಂಸ್ಥಾನ ಸರ್ಕಾರದ ಅಧೀನದಲ್ಲಿ ಒಬ್ಬ ವ್ಯಕ್ತಿಯು ಪದಧಾರಣೆ ಮಾಡಿದ್ದ ವ್ಯಕ್ತಿಯನ್ನು ಸೇರಿಸಿಕೊಳ್ಳತಕ್ಕದ್ದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದವರನ್ನು ಅಧ್ಯಕ್ಷನನ್ನಾಗಿಸಿರುವುದು ಸಂವಿಧಾನಕ್ಕೆ ವಿರುದ್ಧವಾದ ನಡೆ ಎಂದೇ ಅರ್ಥೈಯಿಸಲಾಗುತ್ತಿದೆ.

ಎನ್‌ಸಿಯುಐನಲ್ಲಿ(ನ್ಯಾಷನಲ್‌ ಕೋ ಆಪರೇಟೀವ್‌ ಯೂನಿಯನ್‌ ಆಫ್‌ ಇಂಡಿಯಾ)ದ ಗುಲ್ಬರ್ಗಾ ಶಾಖೆಯ ಕಾರ್ಯಕ್ಷೇತ್ರದಲ್ಲಿ ಶಿವಶಂಕರಪ್ಪ ಎಸ್‌ ಸಾಹುಕಾರ್‌ ಅವರು ಎಫ್‌ಜಿಐ ಆಗಿ ಗುತ್ತಿಗೆ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆ ಅವಧಿಯಲ್ಲಿ ಅವರ ಕಾರ್ಯನಿರ್ವಹಣೆ ತೃಪ್ತಿಕರವಾಗಿರಲಿಲ್ಲ ಮತ್ತು ಸಮಯ ಪ್ರಜ್ಞೆ ಹೊಂದಿರಲಿಲ್ಲ. ಹೀಗಾಗಿ ಅವರ ಗುತ್ತಿಗೆ ಅವಧಿಯನ್ನು ವಿಸ್ತರಿಸಬಾರದು ಯೂನಿಯನ್‌ನ ಮುಖ್ಯ ಕಾರ್ಯನಿರ್ವಾಹಕ ಅನಿತಾ ಮಂಚಾಡ ಅವರು 2010ರ ಮಾರ್ಚ್‌ 18ರಂದು ಆದೇಶ ಹೊರಡಿಸಿದ್ದರು. ಮತ್ತು ಯಾವುದೇ ಪ್ರಭಾರ ಕಾರ್ಯಭಾರವನ್ನೂ ವಹಿಸಬಾರದು ಎಂದು ಸಲಹೆ ನೀಡಿದ್ದರು ಎಂಬುದು ಆದೇಶದಿಂದ ತಿಳಿದು ಬಂದಿದೆ.

ಲೋಕಸೇವಾ ಆಯೋಗವು ಕೆಎಎಸ್‌ ಹುದ್ದೆಯೂ ಸೇರಿದಂತೆ ಸರ್ಕಾರದ ಇತರೆ ಇಲಾಖೆಗಳಿಗೆ ಗ್ರೂಪ್‌ ಎ, ಬಿ ಮತ್ತು ಸಿ ಗುಂಪಿಗೆ ಅಧಿಕಾರಿ, ನೌಕರರನ್ನು ಆಯ್ಕೆ ಮಾಡುವ ಪ್ರಾಧಿಕಾರ. ಇಂತಹ ಹುದ್ದೆಗಳಿಗೆ ಆಯ್ಕೆ ಮಾಡುವ ಲೋಕಸೇವಾ ಆಯೋಗದ ಅಧ್ಯಕ್ಷ ಮತ್ತು ಸದಸ್ಯ ಸ್ಥಾನಕ್ಕೆ ಉನ್ನತ ಅರ್ಹತೆಯುಳ್ಳ ಮತ್ತು ಸರ್ಕಾರದ ಉನ್ನತ ಹುದ್ದೆಯಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿರುವವರನ್ನು ನೇಮಿಸಬೇಕಿತ್ತು.

ಆದರೆ ಬಿಜೆಪಿ ಸರ್ಕಾರವು ಸಹಕಾರಿ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದವರನ್ನು ಆಯೋಗದ ಅಧ್ಯಕ್ಷನ್ನಾಗಿಸಿ ನೇಮಿಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಹಿಂದಿನ ಸಂಸ್ಥೆಯಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡದ ಮತ್ತು ಸಮಯ ಪ್ರಜ್ಞೆ ಹೊಂದಿಲ್ಲ ಎಂದು ನಕಾರಾತ್ಮಕ ವರದಿ ನೀಡಿದ್ದ ಸಂಸ್ಥೆಯು ಹೊರಡಿಸಿದ್ದ ಆದೇಶ ಮತ್ತು ಅವರ ಸೇವಾ ಹಿನ್ನೆಲೆ ಪರಿಶೀಲಿಸದೆಯೇ ಆಯೋಗಕ್ಕೆ ಅಧ್ಯಕ್ಷನನ್ನಾಗಿ ನೇಮಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಕೇಳಿ ಬಂದಿವೆ. ವಿಶೇಷವೆಂದರೆ ಶಿವಶಂಕರಪ್ಪ ಸಾಹುಕಾರ್‌ ಅವರು ಕಳೆದ ಒಂದೂವರೆ ವರ್ಷದ ಮೊದಲು ಆಯೋಗಕ್ಕೆ ಸದಸ್ಯರಾಗಿ ನೇಮಕವಾಗಿದ್ದರು.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!