Tuesday | March 10, 2026 |

ಕೋಟ್ಯಂತರ ರು. ಶುಲ್ಕ ಖೋತಾ; ನಿಶ್ಯಕ್ತ ಎಪಿಎಂಸಿಗಳ ಹೆಗಲಿಗೆ ಹೊಸ ಯೋಜನೆ ಅನುಷ್ಠಾನ ಹೊಣೆ

Support THE-FILE

spot_img

ಬೆಂಗಳೂರು; ಕೃಷಿಗೆ ಸಂಬಂಧಿಸಿದಂತೆ 2021-22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಕೆಲ ಯೋಜನೆಗಳನ್ನು ಸಹಕಾರ ಇಲಾಖೆ ವ್ಯಾಪ್ತಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಂಪನ್ಮೂಲದಿಂದಲೇ ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ಮುಂದಾಗಿರುವುದು ಇದೀಗ ಬಹಿರಂಗವಾಗಿದೆ.

ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿಯಿಂದಾಗಿ ಮಾರುಕಟ್ಟೆ ಶುಲ್ಕ ಮತ್ತು ಬಳಕೆದಾರರ ಶುಲ್ಕದಲ್ಲಿ ದೊಡ್ಡಮಟ್ಟದಲ್ಲಿ ಖೋತಾ ಆಗಲಿದೆ ಎಂದು ಅಧಿಕಾರಿಗಳು ವಾಸ್ತವತೆಯನ್ನು ತೆರೆದಿಟ್ಟಿದ್ದರೂ ಆರ್ಥಿಕ ಸಂಕಷ್ಟದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಬಿಜೆಪಿ ಸರ್ಕಾರವು ಸಂಪನ್ಮೂಲವನ್ನು ಹೇಗೆ ಕ್ರೋಢೀಕರಣ ಮಾಡಲಿದೆ ಎಂಬ ಪ್ರಶ್ನೆಯೂ ಎದುರಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಅನಧಿಕೃತ ಟಿಪ್ಪಣಿ ಬರೆದಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.
ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಬೈಯಪ್ಪನಹಳ್ಳಿಯಲ್ಲಿ 8 ಎಕರೆ ವಿಸ್ತೀರ್ಣದ ಜಮೀನಿನಲ್ಲಿ 50 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತ ಹೂವಿನ ಮಾರುಕಟ್ಟೆ ಮತ್ತು ಸಿಂಗೇನ ಅಗ್ರಹಾರ ಹಣ್ಣು ಮಾರುಕಟ್ಟೆಗೆ ಹೊಂದಿಕೊಂಡಿರುವ ಗುಳಿಮಂಗಲ ಗ್ರಾಮದ 42 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆಧುನಿಕ ಗುಣವಿಶ್ಲೇಷಣಾ ಘಟಕವನ್ನು 4 ಕೋಟಿ ರು.ವೆಚ್ಚದಲ್ಲಿ ಸ್ಥಾಪಿಸುವ ಯೋಜನೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಂಪನ್ಮೂಲದಿಂದ ಜಾರಿಗೊಳಿಸಲು ಮುಂದಾಗಿರುವುದು ಅನಧಿಕೃತ ಟಿಪ್ಪಣಿಯಿಂದ ತಿಳಿದು ಬಂದಿದೆ.

ಎಪಿಎಂಸಿಗಳ ಆರ್ಥಿಕ ಪರಿಸ್ಥಿತಿ ಏನಾಗಿದೆ?

ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯಿದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಬಿಜೆಪಿ ಸರ್ಕಾರ ನಿರ್ಧರಿಸುವ ಮುನ್ನವೇ ಸಂಗ್ರಹವಾಗಿರುವ ಮಾರುಕಟ್ಟೆ ಶುಲ್ಕ ಮತ್ತು ಬಳಕೆದಾರರ ಶುಲ್ಕವೂ ಖೋತಾ ಆಗಲಿದೆ ಎಂದು ಅಧಿಕಾರಿಗಳು ಲೆಕ್ಕಾಚಾರ ಮಾಡಿದ್ದರು. ಅವರ ಪ್ರಕಾರ ‘ಕಾಯ್ದೆಯ ಕಲಂ 8 ರಡಿ ರಾಜ್ಯದ ಮಾರುಕಟ್ಟೆ ಸಮಿತಿಗಳು ಎಪಿಎಂಸಿ ಪ್ರಾಂಗಣಕ್ಕೆ ತಮ್ಮ ನಿಯಂತ್ರಣವನ್ನು ಮಿತಿಗೊಳಿಸಿದಲ್ಲಿ ಈಗಾಗಲೇ ಸಂಗ್ರಹಿಸಿರುವ 618 ಕೋಟಿ ರು. ಖೋತಾ ಆಗಬಹುದು,’ ಎಂದು ಅಧಿಕಾರಿಗಳು ಅಂದಾಜಿಸಿದ್ದರು.

ಈ ಕುರಿತು ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ 2020ರ ಜೂನ್‌ 25ರಂದು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದರು. ‘2019-20ನೇ ಸಾಲಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಂದ 618 ಕೋಟಿ ರು. ಮೊತ್ತದ ಮಾರುಕಟ್ಟೆ ಶುಲ್ಕ ಮತ್ತು ಬಳಕೆದಾರರ ಶುಲ್ಕವನ್ನು ಸಂಗ್ರಹಿಸಲಾಗಿದ್ದು, ಕಾಯ್ದೆಯ ಕಲಂ 8 ರಡಿ ರಾಜ್ಯದ ಮಾರುಕಟ್ಟೆ ಸಮಿತಿಗಳು ಎಪಿಎಂಪಿ ಪ್ರಾಂಗಣಕ್ಕೆ ತಮ್ಮ ನಿಯಂತ್ರಣವನ್ನು ಮಿತಿಗೊಳಿಸಿದಲ್ಲಿ ಮಾರುಕಟ್ಟೆ ಶುಲ್ಕ ಮತ್ತು ಬಳಕೆದಾರರ ಶುಲ್ಕದ ಸಂಗ್ರಹಣೆಯಲ್ಲಿ ಖೋತಾ ಉಂಟಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ,’ ಎಂದು ಪತ್ರದಲ್ಲಿ ವಿವರಿಸಿದ್ದರು.

ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದ ವಿಧೇಯಕವು ಎಪಿಎಂಸಿಗಳ ಸಂಪನ್ಮೂಲದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಾಂಭಿಸಿದೆ. ಇದರ ನಡುವೆಯೇ ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಸಂಪನ್ಮೂಲ ಖೋತಾ ಆಗಲಿದೆ ಎಂದು ಗೊತ್ತಿದ್ದರೂ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ಎಪಿಎಂಸಿ ಸಂಪನ್ಮೂಲದಿಂದಲೇ ಜಾರಿಗೊಳಿಸಬೇಕು ಎಂದು ಆರ್ಥಿಕ ಇಲಾಖೆ ವ್ಯಕ್ತಪಡಿಸಿರುವ ಅಭಿಪ್ರಾಯವು ಆಡಳಿತ ಇಲಾಖೆಗೆ ತಲೆನೋವಾಗಿ ಪರಿಣಿಮಿಸಿದೆ.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!