Thursday | March 26, 2026 |

ನೂರಾರು ಕೋಟಿ ಆದಾಯವಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಲೆಕ್ಕಪರಿಶೋಧನೆಯೇ ನಡೆದಿಲ್ಲ!

Support THE-FILE

spot_img

ಬೆಂಗಳೂರು; ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ 5 ವರ್ಷದಲ್ಲಿ ₹ 100 ಕೋಟಿಗೂ ಹೆಚ್ಚು ಹಣ‌ ಸಂಗ್ರವಾಗಿದ್ದರೂ ಲೆಕ್ಕ ಪರಿಶೋಧನೆ ನಡೆದಿಲ್ಲ” ಎಂದು ಆರೋಪಿಸಿ ವಕೀಲ ಶ್ರೀಹರಿ ಕುತ್ಸ ಅವರು ಮುಖ್ಯಮಂತ್ರಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ದೂರು ನೀಡಿದ್ದಾರೆ.

2020-21ನೇ ಆರ್ಥಿಕ ವರ್ಷದಲ್ಲಿ 68.94 ಕೋಟಿ ಆದಾಯ ಗಳಿಸಿರುವ ಬೆನ್ನಲ್ಲೇ ಕಳೆದ 5 ವರ್ಷದಲ್ಲಿ ಲೆಕ್ಕ ಪರಿಶೋಧನೆಯೇ ನಡೆದಿಲ್ಲ ಎಂದು ಸಲ್ಲಿಕೆಯಾಗಿರುವ ದೂರು ಮಹತ್ವ ಪಡೆದುಕೊಂಡಿದೆ.

“ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಮೂಲ ಹೊಂದಿರುವ ದೇವಸ್ಥಾನಗಳ ಪೈಕಿ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇಗುಲ ಅಗ್ರಸ್ಥಾನದಲ್ಲಿದೆ. ಆದರೆ, ಕಳೆದ 5 ವರ್ಷಗಳಿಂದ ದೇಗುಲದಲ್ಲಿ ಆದಾಯ ಮೂಲ ಹಾಗೂ ಖರ್ಚು ವೆಚ್ಚಗಳ ಲೆಕ್ಕ ಪರಿಶೋಧನೆಯೇ ನಡೆದಿಲ್ಲ” ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

“ಆಡಳಿತ ಮಂಡಳಿ ಎಲ್ಲಾ ನಿಯಮಗಳನ್ನ ಗಾಳಿಗೆ ತೂರಿ ಧಾರ್ಮಿಕೇತರ ಹಾಗೂ ನಿಷ್ಪ್ರಯೋಜಕ ಚಟುವಟಿಕೆಗಳಿಗೆ ₹ 60 ಕೋಟಿಗೂ ಹೆಚ್ಚು ಹಣ ಪೋಲು ಮಾಡಿದೆ. ಠೇವಣಿಗೆ ಸಂಬಂಧಿಸಿದಂತೆ ನೋಂದಣಿ ಪುಸ್ತಕ ಹಾಗೂ ಇನ್ನಿತರೆ ಅವಶ್ಯಕ ಮಾಹಿತಿಯ ದಾಖಲೆ ಪುಸ್ತಕ ನಿರ್ವಹಿಸಿಲ್ಲ” ಎಂದು ವಿವರಿಸಲಾಗಿದೆ.

“ದೇಗುಲಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿಗಳು ದೇಗುಲದ ಲೇವಾದೇವಿ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. ದೇಗುಲದ ನಿತ್ಯ ನಿರ್ವಹಣಾ ಚಟುವಟಿಕೆಗಳಲ್ಲಿ ಸಾಕಷ್ಟು ಕಾನೂನು ಬಾಹಿರ ಅಂಶಗಳು ವ್ಯಕ್ತವಾಗಿದ್ದು ಕೂಡಲೇ ಇದಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಬೇಕು” ಎಂದು ಶ್ರೀಹರಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

2019-20ನೇ ಸಾಲಿನಲ್ಲಿ 98.92 ಕೋಟಿ ರು. ಗಳಿಸಿತ್ತು. ಲಾಕ್‌ಡೌನ್‌ನಿಂದಾಗಿ ಕಳೆದ ವರ್ಷ ಸೆ.8ರವರೆಗೆ ದೇವಸ್ಥಾನವೂ ಬಂದ್‌ ಆಗಿತ್ತು. ಕಳೆದ ಸಾಲಿಗಿಂತ ಈ ಸಾಲಿನಲ್ಲಿ ಬಂದಿರುವ ಆದಾಯಕ್ಕೆ ಹೋಲಿಸಿದರೆ 29.97 ಕೋಟಿ ರು. ಕಡಿಮೆಯಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಈಚೆಗಷ್ಟೇ ಹೇಳಿಕೆ ಬಿಡುಗಡೆ ಮಾಡಿದ್ದನ್ನು ಸ್ಮರಿಸಬಹುದು.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!