Friday | April 10, 2026 |

ಸಿಎಂ ಕಚೇರಿಯಲ್ಲಿ ಅನಧಿಕೃತ ಕೆಲಸ; ಅಧಿಕಾರಿ ಪರ ನಿಂತರೇ ಸ್ಪೀಕರ್‌, ಕಾರ್ಯದರ್ಶಿ?

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಸಿ ಹೊಸೂರ್‌ ಅವರ ಕಚೇರಿಯಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಅನಧಿಕೃತವಾಗಿ ಕಾರ್ಯನಿರ್ವಹಿಸಿದ್ದ ಗಂಭೀರ ಪ್ರಕರಣ ಸಂಬಂಧ ದೂರು ಸಲ್ಲಿಕೆಯಾಗಿ ಹಲವು ದಿನಗಳು ಕಳೆದರೂ ವಿಧಾನಸಭೆ ಸಭಾಧ್ಯಕ್ಷರು, ಸಚಿವಾಲಯದ ಕಾರ್ಯದರ್ಶಿ ಅವರು ಇದುವರೆಗೂ ಕ್ರಮಕೈಗೊಂಡಿಲ್ಲ.

ಸಿಎಂ ಕಾರ್ಯದರ್ಶಿ ಕಚೇರಿಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸಿರುವ ಬಗ್ಗೆ ದಾಖಲೆಗಳು ಮತ್ತು ಈ ಸಂಬಂಧ ಲಿಖಿತ ದೂರು ಸಲ್ಲಿಕೆಯಾಗಿದ್ದರೂ ಸ್ಪೀಕರ್‌ ಮತ್ತು ಸಚಿವಾಲಯದ ಕಾರ್ಯದರ್ಶಿ ಅವರು ಅಧೀನ ಕಾರ್ಯದರ್ಶಿ ಪ್ರಶಾಂತ್‌ಕುಮಾರ್‌ ಅವರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಭೀಮನಗೌಡ ಪರಗೊಂಡ ಅವರು ಸಮೇತ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನೋಂದಾಯಿತ ಅಂಚೆ ಮೂಲಕ ದೂರು ಸಲ್ಲಿಸಿದ್ದರು. ಭೀಮನಗೌಡ ಪರಗೊಂಡ ಅವರು ಖುದ್ದು ನೀಡಿದ್ದ ದೂರನ್ನು ಸಭಾಧ್ಯಕ್ಷರ ಕಚೇರಿ ಮತ್ತು ಕಾರ್ಯದರ್ಶಿ ಕಚೇರಿ ಸಿಬ್ಬಂದಿ ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ದೂರುದಾರ ಪರಗೊಂಡ ಅವರು ನೋಂದಾಯಿತ ಅಂಚೆ ಮೂಲಕ ದೂರು ದಾಖಲಿಸಿದ್ದರು.

ದೂರಿನ ಮೇಲೆ ಕೈಗೊಂಡ ಕ್ರಮದ ಕುರಿತು ‘ದಿ ಫೈಲ್‌’ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರನ್ನ ದೂರವಾಣಿ ಮೂಲಕ ಸಂಪರ್ಕಿಸಲಾಯಿತಾದರೂ ‘ದೂರು ಬಂದಿದೆ,’ ಎಂದಷ್ಟೇ ಪ್ರತಿಕ್ರಿಯಿಸಿ ಕೈಗೊಂಡ ಕ್ರಮದ ಕುರಿತು ಯಾವುದೇ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದರು.

ದೂರಿನಲ್ಲೇನಿದೆ?

ಕರ್ನಾಟಕ ವಿಧಾನಸಭೆ ಸಚಿವಾಲಯದ ಶಾಖಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ ಪಿ ಪ್ರಶಾಂತಕುಮಾರ್‌ ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುವ ಮೂಲಕ ಐಪಿಸಿ 120(ಬಿ), 166, 170,177, 182, 199, 202, 203, 406, 408, 409, 468, 477 ಸಹ ಕಲಂ 34 ಅಡಿಯಲ್ಲಿ ಗಂಭೀರವಾದ ಅಪರಾಧ ಎಸಗಿದ್ದಾರೆ. ಆರೋಪಿತರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಶಿಕ್ಷೆಗೆ ಒಳಪಡಿಸಬೇಕು. ಕರ್ನಾಟಕ ವಿಧಾನಸಭೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧೀನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಬೇಕಾಯ್ದೆ ಶೀರ ರೀತಿಯಿಂದ ಅಧಿಕಾರ ಚಲಾಯಿಸಿ ಕಾರ್ಯಾಲಯ ದುರ್ಬಳಕೆ ಮಾಡಿಕೊಂಡಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಶಿಕ್ಷೆಗೆ ಒಳಪಡಿಸಬೇಕು,’ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಕರ್ನಾಟಕ ವಿಧಾನಸಭೆ ಸಚಿವಾಲಯದ ಶಾಖಾಧಿಕಾರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂ ಪಿ ಪ್ರಶಾಂತ್‌ಕುಮಾರ್‌ ಅವರಿಗೆ 2020ರ ಮೇ 29ರಂದು ಅಧೀನ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ದೊರೆತಿತ್ತು. ಇದಾದ ನಂತರ ಎಂ ಪಿ ಪ್ರಶಾಂತ್‌ಕುಮಾರ್‌ ವಿಧಾನಸಭೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧೀನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೇ ಪ್ರಶಾಂತ್‌ಕುಮಾರ್‌ ಅವರು ಅನ್ಯ ಕರ್ತವ್ಯ ಮತ್ತು ನಿಯೋಜನೆ ಮೇಲೆ ತೆರಳಿರುವುದಿಲ್ಲಎಂದು ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಬಿ ಎಂ ಶಂಭು ಅವರು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದ್ದರು.

ಅಂಚೆ ಮೂಲಕ ದೂರು ಸಲ್ಲಿಸಿದ್ದೇನೆ.ಅಧಿಕಾರಿ ವಿರುದ್ಧ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರೂ ಇಲ್ಲಿಯವರೆಗೂ ಕ್ರಮ ಕೈಗೊಳ್ಳದ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಮತ್ತು ಸಭಾಧ್ಯಕ್ಷರ ನಡೆ ನೋಡಿದರೆ ಕಾನೂನು ಮುರಿಯುವವರನ್ನು ರಕ್ಷಿಸುವ ಉದ್ದೇಶ ಇದ್ದಂತೆ ಕಾಣುತ್ತಿದೆ. ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿಯೂ ದೂರು ದಾಖಲಿಸುತ್ತೇನೆ.

ಭೀಮನಗೌಡ ಪರಗೊಂಡ, ದೂರುದಾರ ವಕೀಲ

ಪ್ರಶಾಂತ್‌ಕುಮಾರ್‌ ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿ ಗಿರೀಶ್‌ ಎಸ್‌ ಹೊಸೂರ್‌ ಅವರ ಕಚೇರಿಗೆ ಅನ್ಯ ಕರ್ತವ್ಯ/ ನಿಯೋಜನೆ ಮೇಲೆ ತೆರಳದಿದ್ದರೂ ಅದೇ ಕಚೇರಿಯಲ್ಲಿ ಕಾರ್ಯನಿರ್ವಹಿಸಿರುವುದು ಮತ್ತು ಅವರ ಆಪ್ತ ಕಾರ್ಯದರ್ಶಿ ಎಂದು ಸಹಿ ಮಾಡಿ ಟಿಪ್ಪಣಿಗಳನ್ನು ಹೊರಡಿಸಿರುವುದು ಹಲವು ಸಂಶಯಗಳಿಗೆ ದಾರಿಮಾಡಿಕೊಟ್ಟಿತ್ತು.

ಮುಖ್ಯಮಂತ್ರಿ ಕಾರ್ಯದರ್ಶಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಹಾಜರಾತಿ ದೃಢೀಕರಣ, ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಗೆ ಸರ್ಕಾರಿ ವಸತಿಗೃಹಗಳಲ್ಲಿ ಕೊಠಡಿ ಕಾಯ್ದಿರಿಸುವುದು ಮತ್ತು ಅನ್ಯ ಕರ್ತವ್ಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಇತರೆ ನೌಕರರಿಗೆ ಹಾಜರಾತಿ ಪ್ರಮಾಣ ಪತ್ರಕ್ಕೆ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿಯೇ ಸಹಿ ಮಾಡಿ ದೃಢೀಕರಿಸಿದ್ದಾರೆ. ಅಲ್ಲದೆ ಪ್ರಶಾಂತ್‌ಕುಮಾರ್‌ ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕಚೇರಿಯ ರವಾನೆ ಪುಸ್ತಕದಲ್ಲಿ ಒಎಸ್‌ಡಿ ಎಂದೇ ಸಹಿ ಮಾಡಿರುವುದು ದಾಖಲೆಯಿಂದ ತಿಳಿದು ಬಂದಿತ್ತು.

Hot this week

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

ಬಿಆರ್‍‌ಜಿಎಫ್‌ ಅನುದಾನದಲ್ಲಿ ಅಕ್ರಮ; ಲೋಕಾ ಶಿಫಾರಸ್ಸು ತಿರಸ್ಕೃತ, ಹಿರಿಯ ಐಎಎಸ್ ಅಧಿಕಾರಿ ವಿರುದ್ಧದ ಪ್ರಕರಣ ಮುಕ್ತಾಯ!

ಬೆಂಗಳೂರು; ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ನೀಡಿದ್ದ ಅನುದಾನ ಮತ್ತು...

Related Articles

Popular Categories

error: Content is protected !!