Sunday | May 3, 2026 |

ಕೋವಿಡ್‌; ಡಬ್ಲ್ಯೂಎಚ್‌ಒ ಎಚ್ಚರಿಕೆ ಮಧ್ಯೆಯೂ 1 ಕೋಟಿ ಮೌಲ್ಯದ ಐವರ್‌ಮೆಕ್ಟಿನ್‌ ಖರೀದಿ

ಬೆಂಗಳೂರು; ವಿಶ್ವ ಆರೋಗ್ಯ ಸಂಸ್ಥೆಯ ಎಚ್ಚರಿಕೆಯ ನಡುವೆಯೂ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಅಂದಾಜು 1 ಕೋಟಿ ರು. ಮೌಲ್ಯದ ಐವರ್ಮೆಕ್ಟಿನ್ ಔಷಧವನ್ನು ಖರೀದಿ ಮಾಡಿದೆ. ಈ ಔ‍ಷಧವು ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಪರಿಣಾಮಕಾರಿಯಾಗುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲದಿದ್ದರೂ ಮೂರು ಬಾರಿ ದರಪಟ್ಟಿ ಆಹ್ವಾನಿಸಿ ಈ ಔಷಧವನ್ನು ಖರೀದಿಸಿದೆ.

ಆರಂಭದಲ್ಲಿ ತಮಿಳುನಾಡು ಸರ್ಕಾರವು ಐವರ್ಮೆಕ್ಟಿನ್‌ ಔಷಧವನ್ನು ಖರೀದಿಸಲು ಮುಂದಾಗಿತ್ತಾದರೂ ವಿಶ್ವ ಆರೋಗ್ಯ ಸಂಸ್ಥೆಯ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ. ಕೋವಿಡ್‌ ಚಿಕಿತ್ಸೆಯಲ್ಲಿ ಬಳಸಬಾರದ ಔಷಧಗಳ ಪಟ್ಟಿಯಲ್ಲಿ ಐವರ್ಮೆಕ್ಟಿನ್‌ನನ್ನೂ ಸೇರಿಸಿದೆ. ಆದರೆ ಈ ಔಷಧವನ್ನು ಖರೀದಿ ಪ್ರಕ್ರಿಯೆಯನ್ನು ಮುಂದುವರೆಸಿರುವ ರಾಜ್ಯ ಬಿಜೆಪಿ ಸರ್ಕಾರವು ರೋಗಿಗಳ ಜೀವದ ಜತೆ ಚೆಲ್ಲಾಟ ನಡೆಸಿದೆ!

ಈ ಸಂಬಂಧ ವರುಣ ಕ್ಷೇತ್ರದ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ. ‘ಕೋವಿಡ್ ಚಿಕಿತ್ಸೆಯಲ್ಲಿ ಉಪಯೋಗಕಾರಿಯೆಂದು ವೈಜ್ಞಾನಿಕವಾಗಿ ಧೃಡಪಟ್ಟಿಲ್ಲದ ಔಷಧಿಗಳನ್ನು ನಮ್ಮ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಬಳಸಲಾಗುತ್ತಿದೆ. ಇದರಿಂದ ಅನಗತ್ಯ ಖರ್ಚಿನೊಂದಿಗೆ ರೋಗಿಗಳಿಗೆ ವ್ಯತಿರಿಕ್ತ ಪರಿಣಾಮಗಳೂ ಉಂಟಾಗುತ್ತದೆ. ಐವರ್ಮೆಕ್ಟಿನ್ ಮಾತ್ರೆ ಬಳಸದಂತೆ ವಿಶ್ವ ಆರೋಗ್ಯಸಂಸ್ಥೆಯೆ ಸೂಚಿಸಿದ್ದರೂ ನಮ್ಮಲ್ಲಿ ಇದನ್ನು ಬಳಸುತ್ತಿದ್ದಾರೆ. ಹಾಗಾಗಿ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿ, ಅದರ ಸಲಹೆಯಂತೆ ಕೋವಿಡ್ ಚಿಕಿತ್ಸೆಯಲ್ಲಿ ಸರಿಯಾದ ಔಷಧಿಗಳನ್ನು ಬಳಸಲು ಮಾರ್ಗಸೂಚಿಯೊಂದನ್ನು ರೂಪಿಸಬೇಕು,’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಪತ್ರ ಬರೆದ ನಂತರವೂ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು 2021ರ ಮೇ 15ರಂದು 50 ಲಕ್ಷ ಪ್ರಮಾಣದ ಐವರ್ಮೆಕ್ಟಿನ್‌ ಔಷಧ ಖರೀದಿಗೆ ದರಪಟ್ಟಿ ಆಹ್ವಾನಿಸಿದೆ. ಅಲ್ಲದೆ 2021ರ ಏಪ್ರಿಲ್‌ 20ರಂದು 10,000, ಏಪ್ರಿಲ್‌ 27ರಂದು 10,00,000, ಮೇ 10ರಂದು 25,00, 000 ಪ್ರಮಾಣದಲ್ಲಿ ಈ ಔಷಧವನ್ನು ಖರೀದಿಸಲು ದರಪಟ್ಟಿ ಆಹ್ವಾನಿಸಿರುವುದು ತಿಳಿದು ಬಂದಿದೆ.

20,00,000 ಟ್ಯಾಬ್ಲೆಟ್‌ಗಳ ಖರೀದಿ ಸಂಬಂಧ 2021ರ ಮೇ 11ರಂದು ದರಪಟ್ಟಿಯನ್ನು ತೆರೆದಿರುವ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು 1.43 ರು. ನಮೂದಿಸಿರುವ ಸೈನೋ ಫಾರ್ಮಾ ಪ್ರೈವೈಟ್‌ ಲಿಮಿಟೆಡ್‌ಗೆ ಸರಬರಾಜು ಆದೇಶ ನೀಡಿದೆ ಎಂದು ಗೊತ್ತಾಗಿದೆ.

ವಿಶೇಷವೆಂದರೆ ಇದೇ ಫ್ಯಾಬ್‌ ಫಾರ್ಮಾಸ್ಯುಟಿಕಲ್ಸ್‌ ಕಂಪನಿಯು 20,00,000 ಪ್ರಮಾಣದ ಟ್ಯಾಬ್ಲೆಟ್‌ಗಳ ಖರೀದಿ ಸಂಬಂಧ ಸಲ್ಲಿಸಿದ್ದ ದರಪಟ್ಟಿಯಲ್ಲಿ 2.13 ರು. ದರ ನಮೂದಿಸಿತ್ತು. 1.43 ರು. ದರ ನಮೂದಿಸಿದ್ದ ಸೈನೋ ಫಾರ್ಮಾ ಪ್ರೈವೈಟ್‌ ಲಿಮಿಟೆಡ್‌ಗೆ ಸರಬರಾಜು ಆದೇಶ ನೀಡಿರುವುದು ದಾಖಲೆಯಿಂದ ತಿಳಿದು ಬಂದಿದೆ. ಹಾಗೆಯೇ 10.00,000 ಪ್ರಮಾಣದ ಟ್ಯಾಬ್ಲೆಟ್‌ಗಳನ್ನು ತಲಾ 1.24 ರು.ದರದಲ್ಲಿ ಸರಬರಾಜು ಮಾಡಲು ಫ್ಯಾಬ್‌ ಫಾರ್ಮಾಸ್ಯುಟಿಕಲ್ಸ್‌ ಗೆ ಆದೇಶ ನೀಡಿದೆ ಎಂದು ಗೊತ್ತಾಗಿದೆ.

 

ಐವರ್ಮೆಕ್ಟಿನ್ ಔಷಧವು ಕೋವಿಡ್ ರೋಗಿಗಳ ಚಿಕಿತ್ಸೆಗೆ ಪರಿಣಾಮಕಾರಿಯಾಗುತ್ತದೆ ಎನ್ನುವುದಕ್ಕೆ ದಾಖಲೆಗಳಿಲ್ಲ. ಈ ಬಗ್ಗೆ ಪುರಾವೆ ಸಿಗುವವರೆಗೂ ಅದನ್ನು ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು.

 

ಇಂದಿನ ವಿಪತ್ತಿನ ಸಂದರ್ಭದಲ್ಲಿ ಸರ್ಕಾರ ವಿಜ್ಞಾನವನ್ನು ಮಾತ್ರ ನಂಬಬೇಕು. ತಜ್ಞ ವೈದ್ಯರು ಮತ್ತು ಪುರಾವೆಗಳ ಮೂಲಕ ಮಾತನಾಡುವ ವಿಜ್ಞಾನಿಗಳ ಅಭಿಪ್ರಾಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಊಹಾಪೋಹ, ಅಂತೆಕಂತೆಗಳ ಆಧಾರದ ಮೇಲೆ ವೈಜ್ಞಾನಿಕವಾಗಿ ಮತ್ತು ಪರಿಣಾಮಕಾರಿ ಎಂದು ದೃಢಪಡದ ಔಷಧಗಳನ್ನು ಯಾವುದೇ ಕಾರಣಕ್ಕೂ ಶಿಫಾರಸ್ಸು ಮಾಡಬಾರದು ಮತ್ತು ರೋಗಿಗಳಿಗೆ ಒದಗಿಸಬಾರದು. ಇಂತಹ ಸಂದರ್ಭದಲ್ಲಿ ಅಡ್ಡಪರಿಣಾಮಗಳು ಇರಲಾರದ ಮತ್ತು ಕಾಯಿಲೆಗೆ ಸೂಕ್ತವಾದ ಚಿಕಿತ್ಸೆ ನೀಡಬೇಕು. ವಿಶ್ವ ಆರೋಗ್ಯ ಸಂಸ್ಥೆಯ ಎಚ್ಚರಿಕೆಯ ನಡುವೆಯೂ ಈ ಔಷಧವನ್ನು ಕೊಳ್ಳಲೇಬೇಕು ಎಂದು ತೀರ್ಮಾನಿಸಿರುವುದು ಸಚಿವರು ಮತ್ತು ಅಧಿಕಾರಿಗಳು ಈ ಮೂಲಕ ಯಾವುದೋ ಅವ್ಯವಹಾರ ಮತ್ತು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದಾರೆ ಎನ್ನುವ ಸಂಶಯವನ್ನು ಹುಟ್ಟು ಹಾಕಿದೆ.

ರವಿಕೃಷ್ಣಾರೆಡ್ಡಿ, ರಾಜ್ಯಾಧ್ಯಕ್ಷರು

ಕರ್ನಾಟಕ ರಾಷ್ಟ್ರಸಮಿತಿ

ಕೋವಿಡ್ 19 ರೋಗಿಗಳ ಚಿಕಿತ್ಸೆಗೆ ಐವರ್ಮೆಕ್ಟಿನ್ ಬಳಸುವುದರ ಪರಿಣಾಮದ ಕುರಿತು ಪ್ರಸ್ತುತದ ದಾಖಲೆಗಳಿಂದ ನಿರ್ಧರಿಸಲಾಗದು. ಹೆಚ್ಚಿನ ದಾಖಲೆಗಳು ಲಭ್ಯವಾಗುವವರೆಗೂ ಈ ಔಷಧವನ್ನು ಕ್ಲಿನಿಕಲ್ ಪ್ರಯೋಗಗಳಲ್ಲಿ ಮಾತ್ರ ಬಳಸಬೇಕು ಎಂಬುದಾಗಿ ಡಬ್ಲ್ಯೂಎಚ್‌ಒ ಶಿಫಾರಸು ಮಾಡುತ್ತದೆ’ ಎಂದು ಕಳೆದ ಮಾರ್ಚ್‌ನಲ್ಲಿ ಹೇಳಿಕೆ ನೀಡಿತ್ತು. ತನ್ನ ಔಷಧವು ಕೋವಿಡ್ ಚಿಕಿತ್ಸೆಗೆ ಬಳಸುವುದನ್ನು ಲಭ್ಯವಿರುವ ದಾಖಲೆಗಳು ಪ್ರೋತ್ಸಾಹಿಸುವುದಿಲ್ಲ ಎಂದು ಐವರ್ಮೆಕ್ಟಿನ್ ಉತ್ಪಾದಕ ಮೆರ್ಕ್ ಸಂಸ್ಥೆ ಕೂಡ ಹೇಳಿದ್ದನ್ನು ಸ್ಮರಿಸಬಹುದು.

ಮೇ 25 ,2020ರಂದು ಸರ್ಕಾರಕ್ಕೆ ಪತ್ರ ಬರೆದಿದ್ದೆ. ಐವರ್‌ಮೆಕ್ಟಿನ್‌ ಮಾತ್ರವಲ್ಲ ಕೋವಿಡ್‌ ಚಿಕಿತ್ಸೆಗೆ ಅಗತ್ಯವಿಲ್ಲದ ಔಷಧಗಳನ್ನು ಖರೀದಿ ಮಾಡುತ್ತಲೇ ಇದೆ. ಈ ಹಿಂದಿನಿಂದಲೂ ಖರ್ಚು ಮಾಡುತ್ತಲೇ ಬಂದಿದೆ. ಕೊರೊನಾ ತಡೆಗಟ್ಟಲು ಅಗತ್ಯವಿಲ್ಲದ ಚಿಕಿತ್ಸಾ ಕ್ರಮವನ್ನು ಹಿಂಪಡೆಯಬೇಕು ಎಂದು ಪತ್ರದಲ್ಲಿ ವಿವರಿಸಿದ್ದೆ. ಐವರ್‌ಮೆಕ್ಟಿನ್‌ ಬಳಸಬಾರದು ಎಂದು ಸೌಮ್ಯ ಸ್ವಾಮಿನಾಥನ್‌ ಮಾತ್ರವಲ್ಲದೆ ಈ ಔಷಧ ತಯಾರಕ ಕಂಪನಿಯೂ ಕೂಡ ಪ್ರಾಮಾಣಿಕವಾಗಿ ಹೇಳಿದೆ. ಹಾಗಿದ್ದರೂ ಕೂಡ ಚಿಕಿತ್ಸಾ ಕ್ರಮದಲ್ಲಿ ಐವರ್‌ಮೆಕ್ಟಿನ್‌ನನ್ನು ಮುಂದುವರೆಸುವುದು ಮತ್ತು ಖರೀದಿ ಮಾಡುತ್ತಿರುವುದನ್ನೂ ಒಂದು ಹಗರಣವೆಂದು ಕರೆಯಬೇಕಾಗುತ್ತೆ. ಜನರಿಗೆ ಅಗತ್ಯವಿಲ್ಲದೇ ಇಲ್ಲದಿದ್ದರೂ ಔಷಧ ಖರೀದಿ ಮಾಡುವುದು ಸರಿಯಲ್ಲ. ಇದು ಮೋಸವಲ್ಲದೇ ಮತ್ತೇನು?

ಡಾ ಶ್ರೀನಿವಾಸ್‌ ಕಕ್ಕಿಲ್ಲಾಯ, ವೈದ್ಯರು ಹಾಗೂ ಚಿಂತಕರು

ಪಾರಾಸಿಟಿಕ್ ಸೋಂಕುಗಳನ್ನು ನಿವಾರಿಸುವುದಕ್ಕಾಗಿ ಅನುಸರಿಸಲಾಗುತ್ತಿದ್ದ ಚಿಕಿತ್ಸಾ ವಿಧಾನದಲ್ಲಿ ಬಾಯಿಯಿಂದ ತೆಗೆದುಕೊಳ್ಳುವ ಐವರ್ಮೆಕ್ಟಿನ್ ಔಷಧಿಯನ್ನು ಕೋವಿಡ್-19 ರೋಗಿಗಳಿಗೂ ನೀಡುವುದಕ್ಕೆ ಭಾರತ ಸರ್ಕಾರ ಪ್ರಕಟಿಸಿರುವ ಕೋವಿಡ್-19 ನಿರ್ವಹಣೆ ನಿಯಮಗಳಲ್ಲಿ ಸಲಹೆ ನೀಡಲಾಗಿತ್ತು. ಆದರೆ ಇದರ ವಿರುದ್ಧ ಡಬ್ಲ್ಯುಹೆಚ್ಒ ಸಾರ್ವತ್ರಿಕ ಬಳಕೆಯ ವಿರುದ್ಧ ಎಚ್ಚರಿಸಿದೆ. ಪ್ರಾರಂಭಿಕ ಹಂತದ ಸೋಂಕು ಲಕ್ಷಣಗಳಿರುವವರಿಗೆ ಐವರ್ಮೆಕ್ಟಿನ್ ಔಷಧ ಬಳಕೆ ಮಾಡಲು ಹೇಳಲಾಗಿತ್ತಾದರೂ ಆದರೆ ಕೋವಿಡ್-19 ಗೆ ಈ ಔಷಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂಬುದಕ್ಕೆ ಯಾವುದೇ ಸ್ಪಷ್ಟ ಪುರಾವೆಗಳು ಇಲ್ಲ ಎಂದು ಹೇಳಲಾಗುತ್ತಿದೆ.

ಹೊಸ ರೋಗಗಳಿಗೆ ಔಷಧಗಳನ್ನು ನೀಡುವಾಗ ಸುರಕ್ಷತೆ ಹಾಗೂ ಪರಿಣಾಮಕಾರಿತ್ವ ಬಹಳ ಮುಖ್ಯವಾಗುತ್ತದೆ. ಕ್ಲಿನಿಕಲ್ ಟ್ರಯಲ್ ಗಳನ್ನು ಹೊರತುಪಡಿಸಿ ಕೋವಿಡ್-19 ಗೆ ಐವರ್ಮೆಕ್ಟಿನ್ ನೀಡುವುದರ ವಿರುದ್ಧ ಡಬ್ಲ್ಯುಹೆಚ್ಒ ಶಿಫಾರಸು ಮಾಡುತ್ತದೆ ಎಂದು ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಹೇಳಿದ್ದರು.

ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಐವರ್ಮೆಕ್ಟಿನ್ ಬಳಕೆಯ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆಯು ಮಾರ್ಚ್​ನಲ್ಲಿಯೂ ಇದೇ ರೀತಿಯ ಎಚ್ಚರಿಕೆ ನೀಡಿತ್ತು.ಯುಎಸ್ ಫುಡ್ ಆ್ಯಂಡ್​ ಡ್ರಗ್ ಅಡ್ಮಿನಿಸ್ಟ್ರೇಷನ್ (ಎಫ್​ಡಿಎ) ಕಳೆದ ವರ್ಷ ಏಪ್ರಿಲ್​ನಲ್ಲಿ, ಕೋವಿಡ್​ ರೋಗಿಗಳಿಗೆ ಚಿಕಿತ್ಸೆ ನೀಡಲು ಐವರ್ಮೆಕ್ಟಿನ್ ಬಳಕೆಯ ವಿರುದ್ಧ ಎಚ್ಚರಿಕೆಯ ಸಂದೇಶ ರವಾನಿಸಿತ್ತು. ಅಲ್ಲದೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕಳೆದ ವರ್ಷ ಕೊರೊನಾಗಾಗಿ ತನ್ನ ಅಧಿಕೃತ ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಪ್ರೋಟೋಕಾಲ್‌ನಲ್ಲಿ ಐವರ್ಮೆಕ್ಟಿನ್ ಬಳಕೆಯನ್ನು ನಿಷೇಧಿಸಿದೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...
Please Scan to make Your Contribution

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!