Friday | June 12, 2026 |

ರೆಡ್ಡೀಸ್‌ ಲ್ಯಾಬ್‌ ಉದ್ಧಟತನ!; ಮಾರುಕಟ್ಟೆಗೆ 25,117 ರೆಮ್‌ಡಿಸಿವಿರ್‌ ವಯಲ್‌, ಸರ್ಕಾರಕ್ಕೆ ಒಂದೂ ಇಲ್ಲ

ಬೆಂಗಳೂರು; ಡಿ2ಜಿ ತಯಾರಿಸುತ್ತಿರುವ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಕಂಪನಿ ಸೇರಿ ಮೂರು ಕಂಪನಿಗಳು ಏಪ್ರಿಲ್‌ 21ರಿಂದ ಮೇ 16ರವರೆಗೂ ಒಂದೇ ಒಂದು ರೆಮ್‌ಡಿಸಿವಿರ್‌ ವಯಲ್‌ನ್ನೂ ಸರ್ಕಾರಕ್ಕೆ ಪೂರೈಕೆ ಮಾಡಿಲ್ಲ. ರೆಮ್‌ಡಿಸಿವಿರ್‌ ಹಂಚಿಕೆ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರವು ನೀಡಿದ್ದ ಗುರಿಯನ್ನು ತಲುಪಬೇಕಿದ್ದ ಈ ಮೂರು ಕಂಪನಿಗಳು ರಾಜ್ಯ ಸರ್ಕಾರಕ್ಕೆ ಒಂದೇ ಒಂದು ವಯಲ್‌ ನೀಡದೇ ಸರ್ಕಾರದ ಸೂಚನೆಯನ್ನೂ ಗಾಳಿಗೆ ತೂರಿವೆ.

ಕೇಂದ್ರ ಸರ್ಕಾರವು ಮೇ 17ರಿಂದ ಮೇ 23ರವರೆಗೆ ವಿವಿಧ ರಾಜ್ಯಗಳ ಬಳಕೆಗಾಗಿ ಹಂಚಿಕೆ ಮಾಡಿರುವ 23 ಲಕ್ಷ ವಯಲ್ಸ್‌ನಲ್ಲಿ ರಾಜ್ಯಕ್ಕೆ 10 ಲಕ್ಷ ವಯಲ್‌ ಲಭ್ಯವಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಸೇರಿದಂತೆ ಮೂರು ಕಂಪನಿಗಳು ಈವರೆವಿಗೂ ಒಂದೇ ಒಂದು ವಯಲ್‌ ಬಿಡುಗಡೆ ಮಾಡದಿರುವುದು ಮುನ್ನೆಲೆಗೆ ಬಂದಿದೆ.

2021ರ ಏಪ್ರಿಲ್‌ 21ರಿಂದ ಮೇ 16ವರೆಗೆ ರಾಜ್ಯ ಸರ್ಕಾರಕ್ಕೆ 1,83,625 ವಯಲ್‌ಗಳು ಬಿಡುಗಡೆಯಾಗಿವೆ. ಇದೇ ಅವಧಿಯಲ್ಲಿ ಮುಕ್ತ ಮಾರುಕಟ್ಟೆಗೆ 3,31,927 ವಯಲ್‌ ಸೇರಿದಂತೆ ಒಟ್ಟು 5,15,552 ವಯಲ್‌ಗಳು ಸರಬರಾಜು ಆಗಿವೆ.

ಡಾ ರೆಡ್ಡೀಸ್‌ ಲ್ಯಾಬೋರೇಟರಿಗೆ ಒಟ್ಟು 43,700 ವಯಲ್‌ಗಳ ಹಂಚಿಕೆಗೆ ಗುರಿ ನಿಗದಿಪಡಿಸಲಾಗಿತ್ತು. ಆದರೆ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಮೇ 16ರ ಅಂತ್ಯಕ್ಕೆ ಮುಕ್ತ ಮಾರುಕಟ್ಟೆಗೆ 25,117 ವಯಲ್‌ಗಳನ್ನು ಬಿಡುಗಡೆ ಮಾಡಿದೆಯೇ ವಿನಃ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ವಯಲ್‌ ಸರಬರಾಜು ಮಾಡದಿರುವುದು ಔಷಧ ನಿಯಂತ್ರಕರ ಕಚೇರಿ ದಾಖಲೆಗಳಿಂದ ತಿಳಿದು ಬಂದಿದೆ.

ಅದೇ ರೀತಿ ಹಿಟಾರಿಯೋ, ಸಿಪ್ಲಾ ಮತ್ತು ಕ್ಯಾಡಿಲಾ ಕಂಪನಿಯೂ ಸಹ ರಾಜ್ಯ ಸರ್ಕಾರಕ್ಕೆಒಂದೇ ಒಂದು ವಯಲ್‌ ಬಿಡುಗಡೆ ಮಾಡಿಲ್ಲ. ಆದರೆ ಹಿಟಾರಿಯೋ ಕಂಪನಿಯು 1,43,250 ಮತ್ತು ಕ್ಯಾಡಿಲಾ ಕಂಪನಿಯು 400, ಸಿಪ್ಲಾ ಕಂಪನಿಯು 53,860 ವಯಲ್‌ಗಳನ್ನು ಮುಕ್ತ ಮಾರುಕಟ್ಟೆಗೆ ಪೂರೈಕೆ ಮಾಡಿರುವುದು ದಾಖಲೆಯಿಂದ ಗೊತ್ತಾಗಿದೆ.

ಏಪ್ರಿಲ್‌ 21ರಿಂದ ಮೇ 9ರವರೆಗೆ ಒಟ್ಟು 7 ಕಂಪನಿಗಳು ಒಟ್ಟು 3,01,300 ವಯಲ್‌ಗಳನ್ನು ಸರಬರಾಜು ಮಾಡಬೇಕಿತ್ತು. ಹಿಟಾರಿಯೋ ಕಂಪನಿಯು 83,000, ಮೈಲಾನ್‌ 1,27,300, ಸಿಪ್ಲಾ 30,000, ಸಿನ್‌ಜಿನ್‌ 27,000, ಜ್ಯುಬಿಲಿಯೆಂಟ್‌ 32,000, ಡಾ ರೆಡ್ಡೀಸ್‌ 2,000 ವಯಲ್‌ಗಳನ್ನು ಹಂಚಿಕೆ ಮಾಡಲು ಗುರಿ ನಿಗದಿಪಡಿಸಲಾಗಿತ್ತು.

ನಿಗದಿತ ಗುರಿ ಪ್ರಕಾರ ರೆಮ್‌ಡಿಸಿವಿರ್‌ಗಳನ್ನು ಪೂರೈಕೆ ಮಾಡದ ಕಾರಣಕ್ಕೆ ನೋಟೀಸ್‌ ನೀಡಿದ ನಂತರವೂ ಡಾ ರೆಡ್ಡೀಸ್‌, ಹಿಟಾರಿಯೋ ಕಂಪನಿ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ವಯಲ್‌ ಬಿಡುಗಡೆ ಮಾಡದೇ ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದು ಲಾಭಕೋರತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

Hot this week

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...
Please Scan to make Your Contribution

Topics

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

Related Articles

Popular Categories

error: Content is protected !!