Friday | May 1, 2026 |

ರೆಡ್ಡೀಸ್‌ ಲ್ಯಾಬ್‌ ಉದ್ಧಟತನ!; ಮಾರುಕಟ್ಟೆಗೆ 25,117 ರೆಮ್‌ಡಿಸಿವಿರ್‌ ವಯಲ್‌, ಸರ್ಕಾರಕ್ಕೆ ಒಂದೂ ಇಲ್ಲ

ಬೆಂಗಳೂರು; ಡಿ2ಜಿ ತಯಾರಿಸುತ್ತಿರುವ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಕಂಪನಿ ಸೇರಿ ಮೂರು ಕಂಪನಿಗಳು ಏಪ್ರಿಲ್‌ 21ರಿಂದ ಮೇ 16ರವರೆಗೂ ಒಂದೇ ಒಂದು ರೆಮ್‌ಡಿಸಿವಿರ್‌ ವಯಲ್‌ನ್ನೂ ಸರ್ಕಾರಕ್ಕೆ ಪೂರೈಕೆ ಮಾಡಿಲ್ಲ. ರೆಮ್‌ಡಿಸಿವಿರ್‌ ಹಂಚಿಕೆ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರವು ನೀಡಿದ್ದ ಗುರಿಯನ್ನು ತಲುಪಬೇಕಿದ್ದ ಈ ಮೂರು ಕಂಪನಿಗಳು ರಾಜ್ಯ ಸರ್ಕಾರಕ್ಕೆ ಒಂದೇ ಒಂದು ವಯಲ್‌ ನೀಡದೇ ಸರ್ಕಾರದ ಸೂಚನೆಯನ್ನೂ ಗಾಳಿಗೆ ತೂರಿವೆ.

ಕೇಂದ್ರ ಸರ್ಕಾರವು ಮೇ 17ರಿಂದ ಮೇ 23ರವರೆಗೆ ವಿವಿಧ ರಾಜ್ಯಗಳ ಬಳಕೆಗಾಗಿ ಹಂಚಿಕೆ ಮಾಡಿರುವ 23 ಲಕ್ಷ ವಯಲ್ಸ್‌ನಲ್ಲಿ ರಾಜ್ಯಕ್ಕೆ 10 ಲಕ್ಷ ವಯಲ್‌ ಲಭ್ಯವಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಸೇರಿದಂತೆ ಮೂರು ಕಂಪನಿಗಳು ಈವರೆವಿಗೂ ಒಂದೇ ಒಂದು ವಯಲ್‌ ಬಿಡುಗಡೆ ಮಾಡದಿರುವುದು ಮುನ್ನೆಲೆಗೆ ಬಂದಿದೆ.

2021ರ ಏಪ್ರಿಲ್‌ 21ರಿಂದ ಮೇ 16ವರೆಗೆ ರಾಜ್ಯ ಸರ್ಕಾರಕ್ಕೆ 1,83,625 ವಯಲ್‌ಗಳು ಬಿಡುಗಡೆಯಾಗಿವೆ. ಇದೇ ಅವಧಿಯಲ್ಲಿ ಮುಕ್ತ ಮಾರುಕಟ್ಟೆಗೆ 3,31,927 ವಯಲ್‌ ಸೇರಿದಂತೆ ಒಟ್ಟು 5,15,552 ವಯಲ್‌ಗಳು ಸರಬರಾಜು ಆಗಿವೆ.

ಡಾ ರೆಡ್ಡೀಸ್‌ ಲ್ಯಾಬೋರೇಟರಿಗೆ ಒಟ್ಟು 43,700 ವಯಲ್‌ಗಳ ಹಂಚಿಕೆಗೆ ಗುರಿ ನಿಗದಿಪಡಿಸಲಾಗಿತ್ತು. ಆದರೆ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಮೇ 16ರ ಅಂತ್ಯಕ್ಕೆ ಮುಕ್ತ ಮಾರುಕಟ್ಟೆಗೆ 25,117 ವಯಲ್‌ಗಳನ್ನು ಬಿಡುಗಡೆ ಮಾಡಿದೆಯೇ ವಿನಃ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ವಯಲ್‌ ಸರಬರಾಜು ಮಾಡದಿರುವುದು ಔಷಧ ನಿಯಂತ್ರಕರ ಕಚೇರಿ ದಾಖಲೆಗಳಿಂದ ತಿಳಿದು ಬಂದಿದೆ.

ಅದೇ ರೀತಿ ಹಿಟಾರಿಯೋ, ಸಿಪ್ಲಾ ಮತ್ತು ಕ್ಯಾಡಿಲಾ ಕಂಪನಿಯೂ ಸಹ ರಾಜ್ಯ ಸರ್ಕಾರಕ್ಕೆಒಂದೇ ಒಂದು ವಯಲ್‌ ಬಿಡುಗಡೆ ಮಾಡಿಲ್ಲ. ಆದರೆ ಹಿಟಾರಿಯೋ ಕಂಪನಿಯು 1,43,250 ಮತ್ತು ಕ್ಯಾಡಿಲಾ ಕಂಪನಿಯು 400, ಸಿಪ್ಲಾ ಕಂಪನಿಯು 53,860 ವಯಲ್‌ಗಳನ್ನು ಮುಕ್ತ ಮಾರುಕಟ್ಟೆಗೆ ಪೂರೈಕೆ ಮಾಡಿರುವುದು ದಾಖಲೆಯಿಂದ ಗೊತ್ತಾಗಿದೆ.

ಏಪ್ರಿಲ್‌ 21ರಿಂದ ಮೇ 9ರವರೆಗೆ ಒಟ್ಟು 7 ಕಂಪನಿಗಳು ಒಟ್ಟು 3,01,300 ವಯಲ್‌ಗಳನ್ನು ಸರಬರಾಜು ಮಾಡಬೇಕಿತ್ತು. ಹಿಟಾರಿಯೋ ಕಂಪನಿಯು 83,000, ಮೈಲಾನ್‌ 1,27,300, ಸಿಪ್ಲಾ 30,000, ಸಿನ್‌ಜಿನ್‌ 27,000, ಜ್ಯುಬಿಲಿಯೆಂಟ್‌ 32,000, ಡಾ ರೆಡ್ಡೀಸ್‌ 2,000 ವಯಲ್‌ಗಳನ್ನು ಹಂಚಿಕೆ ಮಾಡಲು ಗುರಿ ನಿಗದಿಪಡಿಸಲಾಗಿತ್ತು.

ನಿಗದಿತ ಗುರಿ ಪ್ರಕಾರ ರೆಮ್‌ಡಿಸಿವಿರ್‌ಗಳನ್ನು ಪೂರೈಕೆ ಮಾಡದ ಕಾರಣಕ್ಕೆ ನೋಟೀಸ್‌ ನೀಡಿದ ನಂತರವೂ ಡಾ ರೆಡ್ಡೀಸ್‌, ಹಿಟಾರಿಯೋ ಕಂಪನಿ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ವಯಲ್‌ ಬಿಡುಗಡೆ ಮಾಡದೇ ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದು ಲಾಭಕೋರತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!