Wednesday | May 13, 2026 |

ಆಂಪೋಟೆರಿಸಿನ್‌ ಬಿ ನೇರ ಸರಬರಾಜಿಗೆ ಕಂಪನಿಗಳಿಗೆ ತೆಲಂಗಾಣ ಪತ್ರ, ಕರ್ನಾಟಕ ಕಾಲಹರಣ

ಬೆಂಗಳೂರು; ಬ್ಲಾಕ್‌ ಫಂಗಸ್‌ ಸೋಂಕು ವಾರದಲ್ಲಿ 400 ಮಂದಿಗೆ ಹರಡುತ್ತಿದ್ದು, ಇದು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರವು ಆಂಪೋಟೆರಿಸಿನ್ ಬಿ ಔಷಧ ಖರೀದಿಗೆ ದರಪಟ್ಟಿ ಕರೆಯುವುದರಲ್ಲೇ ಕಾಲಹರಣ ಮಾಡುತ್ತಿದೆ. ಅತ್ತ ನೆರೆಯ ತೆಲಂಗಾಣ ಸರ್ಕಾರವು ಆಂಪೋಟೆರಿಸಿನ್‌ ಬಿ ಔಷಧ ಸ್ಟಾಕಿಸ್ಟ್‌ಗಳಿಗೆ ನೇರವಾಗಿ ಸರಬರಾಜು ಮಾಡಲು ಔಷಧ ಕಂಪನಿಗಳಿಗೆ ಸೂಚಿಸಿ ಪತ್ರ ಬರೆದಿದೆ.

ಕಪ್ಪು ಶಿಲೀಂಧ್ರ ಸೋಂಕಿತರು ಸಾವನ್ನಪ್ಪುತ್ತಿರುವವರ ಕುರಿತು ಮಾಹಿತಿ ಇಲ್ಲ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಇಂತಹ ಹೇಳಿಕೆಗಳನ್ನು ನೀಡಿ ಕೈತೊಳೆದುಕೊಳ್ಳುತ್ತಿದ್ದರೆ ಅತ್ತ ತೆಲಂಗಾಣ ಸರ್ಕಾರವು ಔಷಧ ಸರಬರಾಜು ಸಂಬಂಧ ಕ್ಷಿಪ್ರಗತಿಯಲ್ಲಿ ಕ್ರಮಕೈಗೊಂಡಿದೆ.

ಆಂಪೋಟೆರಿಸಿಯನ್‌ ಬಿ ಔಷಧ ತಯಾರಿಕೆ ಕಂಪನಿಗಳಿಗೆ 2021ರ ಮೇ 17ರಂದು ಪತ್ರ ಬರೆದಿರುವ ತೆಲಂಗಾಣ ಔಷಧ ನಿಯಂತ್ರಣ ಆಡಳಿತ ಮಂಡಳಿಯು ಆಸ್ಪತ್ರೆಗಳಲ್ಲಿ ದಾಖಲಾಗಿರುವ ಬ್ಲಾಕ್‌ ಫಂಗಸ್‌ ಸೋಂಕಿತ ರೋಗಿಗಳಿಗೆ ತಜ್ಞರ ಶಿಫಾರಸ್ಸಿನಂತೆ ಚುಚ್ಚುಮದ್ದು ನೀಡಬೇಕು. ಹೀಗಾಗಿ ಸ್ಟಾಕಿಸ್ಟ್‌ಗಳು ಒಂದೇ ಒಂದು ವಯಲ್‌ನ್ನೂ ತಜ್ಞರ ಸಮಿತಿಯ ಶಿಫಾರಸ್ಸಿಲ್ಲದೇ ಆಸ್ಪತ್ರೆಗಳಿಗೆ ನೇರವಾಗಿ ನೀಡಬಾರದು ಎಂದು ಸೂಚಿಸಿದೆ. ಈ ಪತ್ರದ ಪ್ರತಿ ‘ದಿ ಫೈಲ್‌’ ಗೆ ಲಭ್ಯವಾಗಿದೆ.

ಸೆಲಾನ್‌ ಲ್ಯಾಬ್‌, ಭಾರತ್‌ ಸಿರಮ್ಸ್‌ ಅಂಡ್‌ ವ್ಯಾಕ್ಸಿನ್‌ ಲಿಮಿಟೆಡ್, ಮೈಲಾನ್‌, ಸಿಪ್ಲಾ, ಹಿಟಾರಿಯೋ, ಸನ್‌ ಫಾರ್ಮಾ, ಕ್ಯಾಡಿಲಾ, ನಿಯೋನ್‌ ಲ್ಯಾಬ್‌, ಯುನೈಟೆಡ್‌ ಬಯೋಟೆಕ್‌, ವ್ಹೊಕಾರ್ಟ್‌, ಜಾಲಿ ಹೆಲ್ತ್‌ ಕೇರ್‌, ಲೈಫ್ ಕೇರ್‌ ಇನ್ನೋವೇಷನ್, ಆಂಗ್ಲೋ ಫ್ರೆಂಚ್‌ ಡ್ರಗ್ಸ್‌ ಇಂಡಸ್ಟ್ರೀಸ್‌, ಪೆನೆಷಿಯಾ ಬಯೋ ಟೆಕ್‌ ಕಂಪನಿಗಳ ಮುಖ್ಯಸ್ಥರಿಗೆ ಪತ್ರವನ್ನು ಬರೆದಿದೆ.

ತೆಲಂಗಾಣದಂತೆ ಕರ್ನಾಟಕ ಸರ್ಕಾರವೂ ಆಂಪೋಟೆರಿಸಿಯನ್‌ ಬಿ ತಯಾರಿಸುವ ಕಂಪನಿಗಳಿಗೆ ಪತ್ರ ಬರೆಯಲು ಅವಕಾಶಗಳಿದ್ದರೂ ದರಪಟ್ಟಿ ಆಹ್ವಾನಿಸುವುದರಲ್ಲಿಯೇ ಕಾಲಹರಣ ಮಾಡುವ ಮೂಲಕ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಔಷಧಗಳ ದಾಸ್ತಾನು ಮಾಡಿಕೊಳ್ಳುವುದರತ್ತ ಕ್ರಮ ವಹಿಸದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಭಾರತ್‌ ಸಿರಮ್ಸ್‌ ಮತ್ತು ಮೈಲಾನ್‌ ಫಾರ್ಮಾ ಕಂಪನಿಗಳು ತಯಾರಿಸಿರುವ ಆಂಪೋಟೆರಿಸಿನ್ ಬಿ ಔಷಧವನ್ನು ಮೇ 31ರವರೆಗೆ ಒಟ್ಟು 44,250 ವಯಲ್ ಹಂಚಿಕೆ ಮಾಡಿದೆಯಾದರೂ ಕರ್ನಾಟಕದ ಬೇಡಿಕೆಗೆ ತಕ್ಕಂತೆ ಈ ಔಷಧವನ್ನು ಹಂಚಿಕೆ ಮಾಡಿಲ್ಲ. ಆಂಪೋಟೆರಿಸಿನ್ ಬಿ ಔಷಧಕ್ಕೆ ರಾಜ್ಯ ಸರ್ಕಾರವು 20,000 ವಯಲ್‌ಗೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಕೇವಲ 1,050 ಮಾತ್ರ ಹಂಚಿಕೆ ಮಾಡಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಮಹಾರಾಷ್ಟ್ರ ಮತ್ತ ಗುಜರಾತ್‌ಗೆ ಹೆಚ್ಚು ಹಂಚಿಕೆ ಮಾಡಿದೆ. ಮಹಾರಾಷ್ಟ್ರಕ್ಕೆ 16,500 ಮತ್ತು ಗುಜರಾತ್‌ಗೆ 15,000 ಹಂಚಿಕೆ ಮಾಡಿದೆ. ರಾಜ್ಯದಲ್ಲಿಯೂ ಬ್ಲಾಕ್‌ ಫಂಗಸ್‌ ಹರಡುವಿಕೆ ಪ್ರಮಾಣವೂ ಹೆಚ್ಚಾಗುವ ಮೂಲಕ ಆತಂಕ ಮೂಡಿದ್ದರೂ ಕೇಂದ್ರ ಸರ್ಕಾರವು ಮೇ 31ರವರೆಗೆ ಕೇವಲ 1,050 ವಯಲ್‌ಗಳನ್ನಷ್ಟೇ ಹಂಚಿಕೆ ಮಾಡಿದೆ.

ಭಾರತ್‌ ಸಿರಮ್ಸ್‌ ಕಂಪನಿಯ 600 ಮತ್ತು ಮೈಲಾನ್‌ ಫಾರ್ಮಾ ಕಂಪನಿಯ 450 ವಯಲ್‌ಗಳನ್ನು ರಾಜ್ಯಕ್ಕೆ ಹಂಚಿಕೆ ಮಾಡಿದೆ. ಮಹಾರಾಷ್ಟ್ರಕ್ಕೆ ಭಾರತ್‌ ಸಿರಮ್ಸ್‌ 14,000 ಮತ್ತು ಮೈಲಾನ್‌ ಫಾರ್ಮಾದ 2,500 ಸೇರಿ ಒಟ್ಟು 16,500, ಗುಜರಾತ್‌ಗೆ ಭಾರತ್ ಸಿರಮ್ಸ್‌ನ 5,500 ಮತ್ತು ಮೈಲಾನ್‌ ಫಾರ್ಮಾದ 9,500 ಸೇರಿ ಒಟ್ಟು 15,000 ವಯಲ್‌ಗಳನ್ನು ಹಂಚಿಕೆ ಮಾಡಿದೆ.

ತಜ್ಞ ವೈದ್ಯರ ಪ್ರಕಾರ ಒಬ್ಬ ರೋಗಿಗೆ 15ರಿಂದ 20 ವಯಲ್‌ ಬೇಕು. ಭಾರತ್‌ ಸಿರಮ್ಸ್‌ ಬಿಡುಗಡೆ ಮಾಡಿರುವ ಈ ಔಷಧಕ್ಕೆ ಮಾರುಕಟ್ಟೆಯಲ್ಲಿ ಒಂದು ವಯಲ್‌ಗೆ 4,744 ರು.ಗಳಿವೆ. ಮೈಲಾನ್‌ ಕಂಪನಿ ದರ ಒಂದು ವಯಲ್‌ಗೆ 7,814 ರು. ಇದೆ. ಸಿರಮ್ಸ್‌ ಕಂಪನಿ ದರ ಪ್ರಕಾರ ಒಬ್ಬ ರೋಗಿ 20 ವಯಲ್‌ ಬೇಕೇಂದರೆ 94,880 ರು. , ಮೈಲಾನ್‌ ಕಂಪನಿ ದರ ಪ್ರಕಾರ ಒಬ್ಬ ರೋಗಿ 20 ವಯಲ್‌ಗೆ 1,56,280 ರು. ತೆತ್ತಬೇಕು. ಒಬ್ಬ ರೋಗಿಗೆ ದಿನಕ್ಕೆ ಮೂರು ವಯಲ್‌ ಎಂದು ಲೆಕ್ಕ ಹಾಕಿದರೂ ಭಾರತ್‌ ಸಿರಮ್ಸ್‌ನ ದರದ ಪ್ರಕಾರ 14,232, ಮೈಲಾನ್‌ ಕಂಪನಿ ದರದ ಪ್ರಕಾರ 23,442 ರು. ಬೇಕಾಗಲಿದೆ.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!