Tuesday | September 15, 2026 |

‘ದಿ ಫೈಲ್‌’ ಪರಿಣಾಮ; ಎಚ್‌ಡಿಕೆ ತರಾಟೆ, ಆಂಪೋಟೇರಿಸಿಯನ್ ಖರೀದಿಗೆ ಮುಂದಾದ ಸರ್ಕಾರ

ಬೆಂಗಳೂರು; ಕಪ್ಪು ಶಿಲೀಂಧ್ರ ಚಿಕಿತ್ಸೆ ನೀಡುವ ಆಂಫೋಟೆರಿಸಿನ್-ಬಿ ಔಷಧ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಎಸಗಿದ್ದ ತಾರತಮ್ಯ ಮತ್ತು ನೆರೆಯ ರಾಜ್ಯ ತೆಲಂಗಾಣ ಸರ್ಕಾರ ಖಾಸಗಿ ಕಂಪನಿಗಳಿಗೆ ಪತ್ರ ಬರೆದು ವಹಿಸಿದ್ದ ಮುಂಜಾಗ್ರತೆಯನ್ನು ‘ದಿ ಫೈಲ್‌’ ಬಹಿರಂಗಗೊಳಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಆಂಪೋಟೇರಿಸಿಯನ್‌ ಬಿ ಖರೀದಿಗೆ ದರಪಟ್ಟಿ ಆಹ್ವಾನಿಸಿದೆ. ಇದು ‘ದಿ ಫೈಲ್‌’ ವರದಿ ಪರಿಣಾಮ.

ರಾಜ್ಯದಲ್ಲಿ ಬ್ಲಾಕ್‌ ಫಂಗಸ್‌ ಸೋಂಕು ವೇಗವಾಗಿ ಹರಡುತ್ತಿದ್ದರೂ ಕೇಂದ್ರ ಸರ್ಕಾರವು ಚುಚ್ಚುಮದ್ದು ಹಂಚಿಕೆಯಲ್ಲಿ ತಾರತಮ್ಯ ಎಸಗಿತ್ತು. 20,000 ವಯಲ್‌ ಚುಚ್ಚುಮದ್ದು ಬೇಡಿಕೆ ಇರಿಸಿದ್ದ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರವು ಕೇವಲ 1,050 ವಯಲ್‌ ಹಂಚಿಕೆ ಮಾಡಿತ್ತಲ್ಲದೆ ಗುಜರಾತ್‌ಗೆ 15,000 ವಯಲ್‌ ಹಂಚಿಕೆ ಮಾಡಿತ್ತು. ಈ ಕುರಿತು ‘ದಿ ಫೈಲ್‌’ 2021ರ ಮೇ 20ರಂದು ವರದಿ ಪ್ರಕಟಿಸಿತ್ತು.

ಬ್ಲಾಕ್ ಫಂಗಸ್ ; ಗುಜರಾತ್‌ಗೆ ಆಂಪೋಟೆರಿಸಿನ್‌ ಬಿ 15,000, ರಾಜ್ಯಕ್ಕೆ ಕೇವಲ 1,050 ವಯಲ್‌

ಈ ಮಧ್ಯೆ ತೆಲಂಗಾಣ ಸರ್ಕಾರವು ಚುಚ್ಚುಮದ್ದು ಸಂಗ್ರಹಿಸಲು ಮುಂಜಾಗ್ರತೆ ವಹಿಸಿತ್ತು. ಕೇಂದ್ರ ಸರ್ಕಾರವು ಹಂಚಿಕೆ ಮಾಡಿದ್ದರೂ ಸೋಂಕಿತರ ಚಿಕಿತ್ಸೆಗೆ ತೊಂದರೆಯಾಗದಂತೆ ಮೈಲಾನ್‌ ಸೇರಿದಂತೆ ಹಲವು ಔಷಧ ಕಂಪನಿಗಳಿಗೆ ಪತ್ರ ಬರೆದು ನೇರವಾಗಿ ಚುಚ್ಚುಮದ್ದು ಸರಬರಾಜು ಮಾಡಲು ಪತ್ರ ಬರೆದು ಸೂಚಿಸಿತ್ತು. ಈ ಕುರಿತು ‘ದಿ ಫೈಲ್‌’ 2021ರ ಮೇ 21ರಂದು ವರದಿ ಪ್ರಕಟಿಸಿತ್ತು.

ಆಂಪೋಟೆರಿಸಿನ್‌ ಬಿ ನೇರ ಸರಬರಾಜಿಗೆ ಕಂಪನಿಗಳಿಗೆ ತೆಲಂಗಾಣ ಪತ್ರ, ಕರ್ನಾಟಕ ಕಾಲಹರಣ

ಆಂಪೋಟೆರಿಸಿಯನ್‌ ಬಿ ಚುಚ್ಚುಮದ್ದು ಹಂಚಿಕೆಯಲ್ಲಿ ತಾರತಮ್ಯ ಮತ್ತು ಔಷಧಕ್ಕಾಗಿ ಖಾಸಗಿ ಕಂಪನಿಗಳಿಂದ ಖರೀದಿ ಪ್ರಕ್ರಿಯೆ ನಡೆಸದ ವಿಚಾರದ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಸಂಬಂಧ ಟ್ವೀಟ್‌ ಮಾಡಿದ್ದ ಅವರು ರಾಜ್ಯ ಸರ್ಕಾರಕ್ಕೆ ಈ ಮಾರಕ ರೋಗದ ವಿಚಾರದಲ್ಲಿ ಆಲಸ್ಯ ಯಾಕೆ ಎಂದು ಪ್ರಶ್ನಿಸಿದ್ದರು.

ಅಲ್ಲದೆ, ರಾಜ್ಯ ಸರ್ಕಾರ ‘ರಾಕ್ಷಸ ಅಲಸ್ಯ’ದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ ಎಂಫೋಟೆರಿಸಿನ್-ಬಿ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ. ಮತ್ತು, ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ. ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಏಕಿಲ್ಲ ಕಾಳಜಿ ಎಂದು ಪ್ರಶ್ನಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದರು.

ಈ ಬೆಳವಣಿಗೆ ನಡುವೆಯೇ ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ ಸರ್ಕಾರವು ವೈದ್ಯಕೀಯ ಸರಬರಾಜು ನಿಗಮದ ಮೂಲಕ ಆಂಪೋಟೇರಿಸಿಯನ್‌ ಬಿ ಚುಚ್ಚುಮದ್ದು ಖರೀದಿಗೆ 2021ರ ಮೇ 22ರಂದು ದರಪಟ್ಟಿ ಆಹ್ವಾನಿಸಿದೆ. ಇದರ ಜತೆಯಲ್ಲಿಯೇ ಪರ್ಯಾಯ ಔಷಧ ಮತ್ತು ಚುಚ್ಚುಮದ್ದು ಖರೀದಿಸಲು ಔಷಧ ಕಂಪನಿಗಳಿಂದ ದರ ಪಟ್ಟಿ ಆಹ್ವಾನಿಸಿದೆ.

 

ಅಲ್ಲದೆ ಕೇಂದ್ರದ ಧೋರಣೆ ವಿರುದ್ಧ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕಪ್ಪು ಶಿಲೀಂಧ್ರ ರೋಗಿಗಳ ಸಂಖ್ಯೆ ಧರಿಸಿ 1,270 ವಯಲ್‌ಗಳನ್ನು ರಾಜ್ಯಕ್ಕೆ ಹಂಚಿಕೆ ಮಾಡಿದೆ. ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ ಇಡೀ ದೇಶದಲ್ಲಿ ಸದ್ಯ ಒಟ್ಟು 8,848 ಪ್ರಕರಣಗಳಿವೆ. ರಾಜ್ಯದಲ್ಲಿ 500 ಪ್ರಕರಣಗಳ ಆಧಾರದಲ್ಲಿ 1,270 ವಯಲ್ಸ್‌ ಹಂಚಿಕೆ ಮಾಡಲಾಗಿದೆ.

Hot this week

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಅದಾನಿ ಎಸಿಸಿ ಸಮೂಹಕ್ಕೆ ವಿಧಿಸಿದ್ದ 482.69 ಕೋಟಿ ರು ದಂಡದ ಬೇಡಿಕೆ ರದ್ದು; ರಾಜ್ಯದ ಅರ್ಜಿಯೂ ವಜಾ, ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ವಿಫಲವಾಯಿತೇ ರಾಜ್ಯ?

ಬೆಂಗಳೂರು; ಕಲಬುರಗಿ ಜಿಲ್ಲೆಯ ಇಂಗಳಗಿ ಮತ್ತು ರಾವೂರ್ ಗ್ರಾಮಗಳಲ್ಲಿ ಗಣಿಗಾರಿಕೆ ನಡೆಸುತ್ತಿದ್ದ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...
Please Scan to make Your Contribution

Topics

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ...

ಬಹು ದೊಡ್ಡ ಬರಗಾಲ; ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 310 ಕೋಟಿಯಷ್ಟೇ ಲಭ್ಯ

ಬೆಂಗಳೂರು; ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡಿರುವ ಬಹುದೊಡ್ಡ ಬರಕ್ಕೆ ತುತ್ತಾಗಿರುವ...

Related Articles

Popular Categories

error: Content is protected !!