Friday | March 6, 2026 |

1 ಕೋಟಿ ಲಸಿಕೆ; ಕರ್ನಾಟಕಕ್ಕೆ 1.97 ಲಕ್ಷ, ಗುಜರಾತ್‌ಗೆ 6.89 ಲಕ್ಷ ಡೋಸ್‌ ಹಂಚಿಕೆ

Support THE-FILE

spot_img

ಬೆಂಗಳೂರು; ಲಸಿಕಾಕರಣ ಅಭಿಯಾನದ ಮೂರನೇ ಹಂತವನ್ನು ಮುಂದುವರೆಸಿರುವ ಕೇಂದ್ರ ಸರ್ಕಾರವು 18-44 ವಯಸ್ಸಿನವರಿಗೆ 1 ಕೋಟಿ ಲಸಿಕೆ ಡೋಸ್‌ಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಈ ಪೈಕಿ ಕರ್ನಾಟಕಕ್ಕೆ 1.97 ಲಕ್ಷ ದೊರೆತಿದ್ದರೆ ಗುಜರಾತ್‌ಗೆ 6.89 ಲಕ್ಷ ಡೋಸ್‌ಗಳು ಲಭಿಸಿವೆ.

ಈ ಕುರಿತು ಕೇಂದ್ರ ಸರ್ಕಾರ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಈವರೆವಿಗೆ ಉಚಿತವಾಗಿ ಮತ್ತು ರಾಜ್ಯ ಸರಕಾರಗಳಿಂದ ನೇರ ಖರೀದಿ ಮೂಲಕ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 21.80 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು (21,80,51,890) ಒದಗಿಸಿದೆ. 21.80 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ಒದಗಿಸಿದೆ ಎಂದು ಹೇಳಿದೆ.

ಈವರೆವಿಗೆ ಒಟ್ಟು ಶೇ. 66ರಷ್ಟು ಡೋಸ್‌ಗಳನ್ನು 10 ರಾಜ್ಯಗಳಿಗೆ ಒದಗಿಸಲಾಗಿದೆ. ಈ ಪೈಕಿ ಕರ್ನಾಟಕಕ್ಕೆ ಶೇ.6.17ರಷ್ಟು ಪ್ರಮಾಣದಲ್ಲಿ ಒಟ್ಟು 1,20,88,649 ಡೋಸ್‌ ನೀಡಿದ್ದರೆ ಗುಜರಾತ್‌ಗೆ ಶೇ. 7.91 ಪ್ರಮಾಣದಲ್ಲಿ ಒಟ್ಟು 1,55,15,181 ಡೋಸ್‌ ನೀಡಲಾಗಿದೆ. ಉತ್ತರ ಪ್ರದೇಶಕ್ಕೆ ಶೇ. 8.29ರಷ್ಟು ಅಂದರೆ ಒಟ್ಟು 1,62,55,150 ಡೋಸ್‌ ಒದಗಿಸಿದೆ. ಪಶ್ಚಿಮ ಬಂಗಾಳಕ್ಕೆ 1,31,43,523 (ಶೇ.6.70), ರಾಜಸ್ಥಾನಕ್ಕೆ 1,60,33,767 (ಶೇ. 8.18), ಮಹಾರಾಷ್ಟ್ರಕ್ಕೆ ಶೇ.10.59ರಷ್ಟು ಪ್ರಮಾಣದಲ್ಲಿ ಒಟ್ಟಾರೆ 2,07,60,193,  ಡೋಸ್‌ ನೀಡಿರುವುದು ಕೇಂದ್ರ ಸರ್ಕಾರ ಬಹಿರಂಗಗೊಳಿಸಿರುವ ಮಾಹಿತಿಯಿಂದ ತಿಳಿದು ಬಂದಿದೆ.

ಮೇ 23 2021ರವರೆಗಿನ ಸರಾಸರಿ ಲೆಕ್ಕಾಚಾರದ ಆಧಾರದ ಮೇಲೆ ವ್ಯರ್ಥವಾದ ಡೋಸ್‌ಗಳೂ ಸೇರಿದಂತೆ ಒಟ್ಟು 20,00,08,875 ಡೋಸ್‌ಗಳನ್ನು ಬಳಕೆ ಮಾಡಲಾಗಿದೆ (ಇಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿರುವ ದತ್ತಾಂಶದ ಪ್ರಕಾರ) ಎಂದು ಕೇಂದ್ರ ಸರ್ಕಾರ ಹಂಚಿಕೊಂಡಿರುವ ಮಾಹಿತಿಯಿಂದ ತಿಳಿದು ಬಂದಿದೆ.

ರಾಜ್ಯಗಳಿಗೆ ಹಂಚಿಕೆಯಾದ ಡೋಸ್‌ಗಳೆಷ್ಟು? (18-44 ವಯೋಮಿತಿ)

ಅಂಡಮಾನ್ & ನಿಕೋಬಾರ್ ದ್ವೀಪಗಳು 4,082, ಆಂಧ್ರಪ್ರದೇಶ 8,891, ಅರುಣಾಚಲ ಪ್ರದೇಶ 17,777, ಅಸ್ಸಾಂ 4,33,615, ಬಿಹಾರ 12,27,279, ಚಂಡೀಗಢ 18,613, ಛತ್ತೀಸ್ಗಗಢ 7,01,945 ದಾದರ್ & ನಗರ್ ಹವೇಲಿ 18,269 , ದಾಮನ್ & ದಿಯು 19,802, ದೆಹಲಿ 9,15,275, ಗೋವಾ 30,983 ಗುಜರಾತ್ 6,89,234 , ಹರಿಯಾಣ 7,20,681 , ಹಿಮಾಚಲ ಪ್ರದೇಶ 40,272, ಜಮ್ಮು & ಕಾಶ್ಮೀರ 37,562, ಜಾರ್ಖಂಡ್, 3,69,847 , ಕರ್ನಾಟಕ 1,97,693 , ಕೇರಳ 30,555, ಲಡಾಖ್, 3,845, ಲಕ್ಷ ದ್ವೀ 1,770, ಮಧ್ಯ ಪ್ರದೇಶ 7,72,873 , ಮಹಾರಾಷ್ಟ್ರ 7,06,853, ಮಣೀಪುರ್ 9,110, ಮೇಘಾಲಯ 23,142, ಮಿಜೋರಾಂ 10,676, ನಾಗಾಲ್ಯಾಂಡ್ 7,376, ಒಡಿಶಾ 3,06,167 ಪುದುಚೆರಿ 5,411, ಪಂಜಾಬ್ 3,70,413, ರಾಜಸ್ಥಾನ್ 13,17,060, ಸಿಕ್ಕಿಂ 6,712, ತಮಿಳು ನಾಡು 53,216, ತೆಲಂಗಾಣ 654, ತ್ರಿಪುರ 53,957, ಉತ್ತರ ಪ್ರದೇಶ 10,70,642, ಉತ್ತರಾಖಂಡ 2,20,249 ಪಶ್ಚಿಮ ಬಂಗಾಳ 1,98,734 ಸೇರಿದಂತೆ ಒಟ್ಟು 1,06,21,235 ಡೋಸ್‌ ಲಸಿಕೆ ಒದಗಿಸಿರುವುದು ಗೊತ್ತಾಗಿದೆ.

ಕರ್ನಾಟಕದ ಜನಸಂಖ್ಯೆ ಆರು ಕೋಟಿ ಎಂಭತ್ನಾಲ್ಕು ಲಕ್ಷ. ಗುಜರಾತ್ ಜನಸಂಖ್ಯೆ ಆರು ಕೋಟಿ ನಲವತ್ತೆಂಟು ಲಕ್ಷ. ಈಗ ನೋಡಿ, ಹದಿನೆಂಟು ವಯೋಮಿತಿ ದಾಟಿದವರಿಗೆ ಒಕ್ಕೂಟ ಸರ್ಕಾರ ಹಂಚಿಕೆ ಮಾಡಿರುವ ಲಸಿಕೆಯ ಪ್ರಮಾಣ ಗಮನಿಸಿ. ಗುಜರಾತ್ ಗೆ ಸರಿಸುಮಾರು ಏಳು ಲಕ್ಷ, ಕರ್ನಾಟಕಕ್ಕೆ ಎರಡು ಲಕ್ಷ! ಇದೆಂಥ ನಾಚಿಕೆಗೆಟ್ಟ ರಾಜಕಾರಣ? ಇದನ್ನು ಪ್ರಶ್ನಿಸಬೇಕಾದ ರಾಜ್ಯ ‌ಸರ್ಕಾರ, ಮಂತ್ರಿಗಳು, ಸಂಸದರು, ಶಾಸಕರ ಬಾಯಿಗೆ ಬೀಗ ಬಿದ್ದಿದೆಯೇ?

ದಿನೇಶ್‌ಕುಮಾರ್‌, ಮುಖ್ಯಸ್ಥರು

ಕರವೇ ಸಾಮಾಜಿಕ ಜಾಲತಾಣ

 

ಅದೇ ರೀತಿ ಮೇ 24ರ ಬೆಳಿಗ್ಗೆ 7 ಗಂಟೆಯವರೆಗೆ ಒಟ್ಟು 19,60,51,962 ಲಸಿಕೆ ಡೋಸುಗಳನ್ನು 28,16,725 ಸೆಷನ್‌ಗಳ ಮೂಲಕ ನೀಡಲಾಗಿದೆ. ಇದು 1ನೇ ಡೋಸ್ ತೆಗೆದುಕೊಂಡ 97,60,444 ಆರೋಗ್ಯ ಕಾರ್ಯಕರ್ತರು (ಎಚ್‌ಸಿಡಬ್ಲ್ಯೂ) ಮತ್ತು 2ನೇ ಡೋಸ್ ತೆಗೆದುಕೊಂಡ 67,06,890 ಆರೋಗ್ಯ ಕಾರ್ಯಕರ್ತರು, 1,49,91,357 ಮುಂಚೂಣಿಯಲ್ಲಿರುವ ಕಾರ್ಯಕರ್ತರು (ಎಫ್.ಎಲ್.ಡಬ್ಲ್ಯೂ) (1ನೇ ಡೋಸ್), 83,33,774 ಮುಂಚೂಣಿಯಲ್ಲಿರುವ ಕಾರ್ಯಕರ್ತರು (2 ನೇ ಡೋಸ್), 18 – 44 ವರ್ಷದೊಳಗಿನ 1,06,21,235 ಫಲಾನುಭವಿಗಳು(1 ನೇ ಡೋಸ್), 45 ರಿಂದ 60 ವರ್ಷ ವಯಸ್ಸಿನ 44 ವಯೋಮಾನದ 6,09,11,756 (1ನೇ ಡೋಸ್) ಮತ್ತು 98,18,384 (2 ನೇ ಡೋಸ್) ಫಲಾನುಭವಿಗಳು. 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ 5,66,45,457 1ನೇ ಡೋಸ್ ಫಲಾನುಭವಿಗಳು ಮತ್ತು 1,82,62,665 2ನೇ ಡೋಸ್ ಫಲಾನುಭವಿಗಳನ್ನು ಒಳಗೊಂಡಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಸಿಕೆ ನೀಡಲು ಇನ್ನೂ 1.80 ಕೋಟಿಗಿಂತಲೂ ಅಧಿಕ (1,80,43,015) ಡೋಸ್‌ಗಳು ಲಭ್ಯವಿವೆ ಎಂದು ತಿಳಿಸಿರುವ ಕೇಂದ್ರ ಸರ್ಕಾರವು ಇನ್ನೂ 48 ಲಕ್ಷ (40,00,650) ಲಸಿಕೆ ಡೋಸ್‌ಗಳು ಸಾಗಣೆ ಹಂತದಲ್ಲಿದ್ದು ಮುಂದಿನ 3 ದಿನಗಳಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಲಿವೆ ಎಂದು ಮಾಹಿತಿ ಒದಗಿಸಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img
error: Content is protected !!