Wednesday | May 6, 2026 |

ಬೆಡ್‌, ಉಪಕರಣಗಳ ಖರೀದಿ; ಲೆಕ್ಕಪತ್ರ ಪರಿಶೀಲನೆಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ ಮತ್ತು ಆಸ್ಪತ್ರೆ ಬೆಡ್‌ಗಳ ಮತ್ತಿತರೆ ಉಪಕರಣಗಳ ಖರೀದಿ ಕುರಿತಂತೆ ಲೆಕ್ಕಪತ್ರ ಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮುಂದಾಗಿದೆ.

ಈಗಾಗಲೇ ಎಲ್ಲಾ ಸಮಿತಿಗಳ ಸಭೆಗಳನ್ನು ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಿ ಹೊರಡಿಸಿರುವ ಆದೇಶ ಮತ್ತು ಹೊರಡಿಸಿರುವ ಲಘು ಪ್ರಕಟಣೆಯನ್ನು ಹಿಂಪಡೆಯಬೇಕು ಎಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷ ರಾಮಲಿಂಗಾರೆಡ್ಡಿ ಅವರು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ 2021ರ ಮೇ 6 ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ಗಳು, ಆಸ್ಪತ್ರೆ ಬೆಡ್‌ಗಳು ಮತ್ತಿತರೆ ಉಪಕರಣಗಳ ಖರೀದಿಗಳ ಕುರಿತಂತೆ ಚರ್ಚೆ, ಲೆಕ್ಕಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಅನಿವಾರ್ಯತೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗಿದೆ,’ ಎಂದು ಪತ್ರದಲ್ಲಿ ರಾಮಲಿಂಗಾರೆಡ್ಡಿ ಅವರು ಪ್ರಸ್ತಾಪಿಸಿದ್ದಾರೆ.

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳು ನಿಯಮ 264ರ ಅನ್ವಯ ಸಮಿತಿಯು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅಡ್ಡಿಯಾಗಿದೆ. ಹೀಗಾಗಿ ಈಗಾಗಲೇ ಹೊರಡಿಸಿರುವ ಲಘು ಪ್ರಕಟಣೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದೂ ಪತ್ರದಲ್ಲಿ ಸ್ಪೀಕರ್‌ಗೆ ಮನವಿ ಮಾಡಿದ್ದಾರೆ.

ಲೆಕ್ಕಪತ್ರಗಳ ಪರಿಶೀಲನೆ ಮತ್ತು ಸ್ಥಳಪರಿಶೀಲನೆ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ಸಮಿತಿಯ ಅಧ್ಯಕ್ಷ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಕೋವಿಡ್‌ ಮೊದಲ ಅಲೆಯ ಸಂದರ್ಭದಲ್ಲೂ ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್‌, ಪಲ್ಸ್‌ ಆಕ್ಸಿಮೀಟರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಕ್ರಮ ನಡೆದಿತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು.

ಈ ಕುರಿತು ಪಿಎಸಿ ಹಿಂದಿನ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು ಸ್ಥಳ ಪರಿಶೀಲನೆ ಮತ್ತು ಲೆಕ್ಕಪತ್ರ ಪರಿಶೀಲನೆ ಮತ್ತು ತನಿಖೆಗೆ ಮುಂದಾಗಿದ್ದರು. ಆದರೆ ವಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇದಕ್ಕೆ ಸಹಕರಿಸಿರಲಿಲ್ಲ. ಸ್ಥಳಪರಿಶೀಲನೆ ನಡೆಸಲು ಅನುಮತಿಯನ್ನೂ ನೀಡಿರಲಿಲ್ಲ.

ಕೋವಿಡ್‌ ಮೊದಲ ಅಲೆಯ ಸಂದರ್ಭದಲ್ಲಿಯೂ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿತ್ತು ಎಂದು ಕರ್ನಾಟಕ ರಾಷ್ಟ್ರಸಮಿತಿ ನೀಡಿದ್ದ ದಾಖಲೆಗಳ ಸಮೇತ ದೂರಿನಲ್ಲಿ ಬಲವಾಗಿ ಆರೋಪಿಸಿತ್ತು. ಕೋವಿಡ್‌ ಭ್ರಷ್ಟಾಚಾರ ಕುರಿತಂತೆ ಸಮಿತಿಯು ಹಲವು ಸಭೆಗಳನ್ನು ನಡೆಸಿತ್ತು.

ಈ ಸಂಬಂಧ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಹಿಂದಿನ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು ಕೆಲವೆಡೆ ಸ್ಥಳ ಪರಿಶೀಲನೆ ನಡೆಸಿದ್ದರು. ಅಲ್ಲದೆ ದಾಖಲೆಗಳನ್ನಾಧರಿಸಿ ಮಧ್ಯಂತರ ವರದಿಯನ್ನೂ ಸಿದ್ಧಪಡಿಸಿದ್ದರು. ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಲು ಸ್ಪೀಕರ್‌ ಕಾಗೇರಿ ಅವರು ಅನುಮತಿ ನೀಡಿರಲಿಲ್ಲ. ಈ ವಿಚಾರವಾಗಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಕಾಗೇರಿ ಅವರ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದ್ದನ್ನು ಸ್ಮರಿಸಬಹುದು.

ಇದರ ಮಧ್ಯೆ ಸಿಎಜಿಗೆ ಪತ್ರ ಬರೆದಿದ್ದ ಎಚ್‌ ಕೆ ಪಾಟೀಲ್‌ ಅವರು ಕೋವಿಡ್‌ ನಿಯಂತ್ರಣ ಸಂಬಂಧ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸಲು ಸೂಚಿಸಿದ್ದರು. ಆದರೆ ಈ ಸೂಚನೆಯನ್ನು ಸಿಎಜಿ ಪಾಲಿಸಿರಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಹಿಂದಿನ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಸಿಎಜಿಯಿಂದ ಲೆಕ್ಕ ಪರಿಶೀಲನೆ ನಡೆಸಲು ಅನುಮತಿ ನೀಡಿರಲಿಲ್ಲ.

Hot this week

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!