Thursday | March 19, 2026 |

ಕೋವಿಡ್‌ 2ನೇ ಅಲೆ ಹೊಡೆತ; 60,000 ಕೋಟಿ ನಷ್ಟ, ಶೇ.14.73ಕ್ಕೇರಿದ ನಿರುದ್ಯೋಗದ ಮಟ್ಟ

Support THE-FILE

spot_img

ಬೆಂಗಳೂರು; ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಮೇ ತಿಂಗಳ ಆರಂಭದಲ್ಲಿಇಯೇ ಸುಮಾರು 60,000 ಕೋಟಿ ರು. (8 ಬಿಲಿಯನ್‌) ನಷ್ಟವಾಗಿದೆ. ಅಲ್ಲದೆ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಶೇ.3.75ನಷ್ಟು ನಷ್ಟವಾಗಿದೆ. ಮೇ 23ರ ಅಂತ್ಯಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ಮಟ್ಟವು ಶೇ.14.73ರಷ್ಟಿದೆ.

ಮೇ ತಿಂಗಳಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್‌ ತಂದೊಡ್ಡಿರುವ ಆರ್ಥಿಕ ಪರಿಣಾಮಗಳ ಕುರಿತು ಸೆಂಟರ್‌ ಫಾರ್‌ ಮಾನಿಟಿರಿಂಗ್‌ ಇಂಡಿಯನ್‌ ಎಕಾನಮಿ ಸಮೀಕ್ಷೆ ನಡೆಸಿದೆ. ಇದರ ಪ್ರಕಾರ ನಿರುದ್ಯೋಗ ಮಟ್ಟವು ನಗರ ಭಾರತದಲ್ಲಿ ಶೇ.17ಕ್ಕಿಂತ ಹೆಚ್ಚು ಹಾಗೂ ಗ್ರಾಮೀಣ ಭಾರತದಲ್ಲಿ ಸುಮಾರು ಶೇ.14ರಷ್ಟಿದೆ.

2021ರ ಏಪ್ರಿಲ್‌ನಲ್ಲಿ ನಿರುದ್ಯೋಗ ದರವು ಶೇ.8ಕ್ಕೇರಿತ್ತು. ಮಾರ್ಗಸೂಚಿಗಳ ಪೈಕಿ ಕೆಲವೊಂದನ್ನು ಸಡಿಲಿಸಿದ ಪರಿಣಾಮ ಕಾರ್ಮಿಕರ ಭಾಗವಹಿಸುವಿಕೆಯು ಶೇ.40ರಷ್ಟಿತ್ತು. ಆದರೆ ಮೇ ತಿಂಗಳಲ್ಲಿ ಇದರ ಪ್ರಮಾಣ ಕುಸಿಯಲಾರಂಭಿಸಿತು. ಹೀಗಾಗಿ ಮೇ ತಿಂಗಳಲ್ಲಿ ನಿರುದ್ಯೋಗ ದರ ಇಳಿದಿದೆ. ಮೇ 23ಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ದರವು ಶೇ.14.5ಕ್ಕೇರಿತು. ಏಪ್ರಿಲ್ 2020 ರಲ್ಲಿ ಭಾರತವು ಸಾಂಕ್ರಾಮಿಕ ರೋಗಕ್ಕೆ ತುತ್ತಾದಾಗ ಸುಮಾರು 126 ಮಿಲಿಯನ್ ಉದ್ಯೋಗ ನಷ್ಟವಾಗಿತ್ತು ಎಂಬುದನ್ನು ಸಮೀಕ್ಷೆಯು ಹೊರಗೆಡವಿದೆ.

2020ರಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದ್ದ ಉದ್ಯೋಗ ಮಾರುಕಟ್ಟೆ ಸೆಪ್ಟಂಬರ್‌ನಲ್ಲಿ ಚೇತರಿಕೆ ಕಂಡಿತ್ತಲ್ಲದೇ ಡಿಸೆಂಬರ್ ಹೊತ್ತಿಗೆ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿತ್ತು. ಆದರೆ ಎರಡನೇ ಅಲೆ ಆರಂಭವಾದ ಜನವರಿಯಲ್ಲಿ ಕುಸಿಯಲಾರಂಭಿಸಿತು. ಮಾರ್ಚ್‌ವರೆಗೂ ಇದೇ ಸ್ಥಿತಿಯಲ್ಲಿತ್ತು ಎಂದು ಸಮೀಕ್ಷೆ ತಿಳಿಸಿದೆ.

ಸಂಬಳ ಪಡೆಯುವ ಉದ್ಯೋಗಗಳಲ್ಲಿ ಕುಸಿತ ಸ್ಥಿರವಾಗಿದೆ. ಕೋವಿಡ್‌ ಸಾಂಕ್ರಾಮಿಕ ಹರಡುವಿಕೆ ಮೊದಲು ದೇಶದಲ್ಲಿ 403.5 ಮಿಲಿಯನ್‌ ಉದ್ಯೋಗಗಳಿದ್ದವು. ಡಿಸೆಂಬರ್‌ 2020 ಮತ್ತು ಜನವರಿ 2021ರಲ್ಲಿ 400 ಮಿಲಿಯನ್‌ಗಿಳಿದಿತ್ತು. ಕೋವಿಡ್‌ 2ನೇ ಅಲೆ ಹೊಡೆತಕ್ಕೆ ಉದ್ಯೋಗ ಮಾರುಕಟ್ಟೆ ಸಿಲುಕಿದ ಪರಿಣಾಮ ಉದ್ಯೋಗಗಳ ಸಂಖ್ಯೆಯನ್ನು 3.5 ಮಿಲಿಯನ್‌ಗಿಳಿಸಲಾಗಿದೆ. ಇದೇ ಹೊತ್ತಿನಲ್ಲಿ ಸಂಬಳ ಪಡೆಯುವ ಉದ್ಯೋಗಿಗಳ ಪ್ರಮಾಣವೂ ಕುಸಿಯಲಾರಂಭಿಸಿವೆ.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!