Thursday | July 9, 2026 |

ಕೋವಿಡ್‌ 2ನೇ ಅಲೆ ಹೊಡೆತ; 60,000 ಕೋಟಿ ನಷ್ಟ, ಶೇ.14.73ಕ್ಕೇರಿದ ನಿರುದ್ಯೋಗದ ಮಟ್ಟ

ಬೆಂಗಳೂರು; ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಮೇ ತಿಂಗಳ ಆರಂಭದಲ್ಲಿಇಯೇ ಸುಮಾರು 60,000 ಕೋಟಿ ರು. (8 ಬಿಲಿಯನ್‌) ನಷ್ಟವಾಗಿದೆ. ಅಲ್ಲದೆ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಶೇ.3.75ನಷ್ಟು ನಷ್ಟವಾಗಿದೆ. ಮೇ 23ರ ಅಂತ್ಯಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ಮಟ್ಟವು ಶೇ.14.73ರಷ್ಟಿದೆ.

ಮೇ ತಿಂಗಳಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್‌ ತಂದೊಡ್ಡಿರುವ ಆರ್ಥಿಕ ಪರಿಣಾಮಗಳ ಕುರಿತು ಸೆಂಟರ್‌ ಫಾರ್‌ ಮಾನಿಟಿರಿಂಗ್‌ ಇಂಡಿಯನ್‌ ಎಕಾನಮಿ ಸಮೀಕ್ಷೆ ನಡೆಸಿದೆ. ಇದರ ಪ್ರಕಾರ ನಿರುದ್ಯೋಗ ಮಟ್ಟವು ನಗರ ಭಾರತದಲ್ಲಿ ಶೇ.17ಕ್ಕಿಂತ ಹೆಚ್ಚು ಹಾಗೂ ಗ್ರಾಮೀಣ ಭಾರತದಲ್ಲಿ ಸುಮಾರು ಶೇ.14ರಷ್ಟಿದೆ.

2021ರ ಏಪ್ರಿಲ್‌ನಲ್ಲಿ ನಿರುದ್ಯೋಗ ದರವು ಶೇ.8ಕ್ಕೇರಿತ್ತು. ಮಾರ್ಗಸೂಚಿಗಳ ಪೈಕಿ ಕೆಲವೊಂದನ್ನು ಸಡಿಲಿಸಿದ ಪರಿಣಾಮ ಕಾರ್ಮಿಕರ ಭಾಗವಹಿಸುವಿಕೆಯು ಶೇ.40ರಷ್ಟಿತ್ತು. ಆದರೆ ಮೇ ತಿಂಗಳಲ್ಲಿ ಇದರ ಪ್ರಮಾಣ ಕುಸಿಯಲಾರಂಭಿಸಿತು. ಹೀಗಾಗಿ ಮೇ ತಿಂಗಳಲ್ಲಿ ನಿರುದ್ಯೋಗ ದರ ಇಳಿದಿದೆ. ಮೇ 23ಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ದರವು ಶೇ.14.5ಕ್ಕೇರಿತು. ಏಪ್ರಿಲ್ 2020 ರಲ್ಲಿ ಭಾರತವು ಸಾಂಕ್ರಾಮಿಕ ರೋಗಕ್ಕೆ ತುತ್ತಾದಾಗ ಸುಮಾರು 126 ಮಿಲಿಯನ್ ಉದ್ಯೋಗ ನಷ್ಟವಾಗಿತ್ತು ಎಂಬುದನ್ನು ಸಮೀಕ್ಷೆಯು ಹೊರಗೆಡವಿದೆ.

2020ರಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದ್ದ ಉದ್ಯೋಗ ಮಾರುಕಟ್ಟೆ ಸೆಪ್ಟಂಬರ್‌ನಲ್ಲಿ ಚೇತರಿಕೆ ಕಂಡಿತ್ತಲ್ಲದೇ ಡಿಸೆಂಬರ್ ಹೊತ್ತಿಗೆ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿತ್ತು. ಆದರೆ ಎರಡನೇ ಅಲೆ ಆರಂಭವಾದ ಜನವರಿಯಲ್ಲಿ ಕುಸಿಯಲಾರಂಭಿಸಿತು. ಮಾರ್ಚ್‌ವರೆಗೂ ಇದೇ ಸ್ಥಿತಿಯಲ್ಲಿತ್ತು ಎಂದು ಸಮೀಕ್ಷೆ ತಿಳಿಸಿದೆ.

ಸಂಬಳ ಪಡೆಯುವ ಉದ್ಯೋಗಗಳಲ್ಲಿ ಕುಸಿತ ಸ್ಥಿರವಾಗಿದೆ. ಕೋವಿಡ್‌ ಸಾಂಕ್ರಾಮಿಕ ಹರಡುವಿಕೆ ಮೊದಲು ದೇಶದಲ್ಲಿ 403.5 ಮಿಲಿಯನ್‌ ಉದ್ಯೋಗಗಳಿದ್ದವು. ಡಿಸೆಂಬರ್‌ 2020 ಮತ್ತು ಜನವರಿ 2021ರಲ್ಲಿ 400 ಮಿಲಿಯನ್‌ಗಿಳಿದಿತ್ತು. ಕೋವಿಡ್‌ 2ನೇ ಅಲೆ ಹೊಡೆತಕ್ಕೆ ಉದ್ಯೋಗ ಮಾರುಕಟ್ಟೆ ಸಿಲುಕಿದ ಪರಿಣಾಮ ಉದ್ಯೋಗಗಳ ಸಂಖ್ಯೆಯನ್ನು 3.5 ಮಿಲಿಯನ್‌ಗಿಳಿಸಲಾಗಿದೆ. ಇದೇ ಹೊತ್ತಿನಲ್ಲಿ ಸಂಬಳ ಪಡೆಯುವ ಉದ್ಯೋಗಿಗಳ ಪ್ರಮಾಣವೂ ಕುಸಿಯಲಾರಂಭಿಸಿವೆ.

Hot this week

ಸುರಂಗ ಮಾರ್ಗ; ಅದಾನಿ ಎಂಟರ್ ಪ್ರೈಸೆಸ್‌ಗೆ ಬಿಟ್ಟಿ ರಿಯಲ್‌ ಎಸ್ಟೇಟ್‌ ಆದಾಯ ಭಾಗ್ಯ ಕರುಣಿಸಲಿದೆಯೇ ಸರ್ಕಾರ?

ಬೆಂಗಳೂರು; ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಉದ್ದೇಶಿತ  ಸುರಂಗ ಮಾರ್ಗ ನಿರ್ಮಾಣದ ಹೆಸರಿನಲ್ಲಿ...

ಈಶಾ ಎಜುಕೇಷನ್, ಈಶಾ ಯೋಗ ಸೆಂಟರ್‍‌ಗೆ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆ, ದ್ರೋಹ ಆರೋಪ; ದಿ ಫೈಲ್ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಸರ್ಕಾರ

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...
Please Scan to make Your Contribution

Topics

ಸುರಂಗ ಮಾರ್ಗ; ಅದಾನಿ ಎಂಟರ್ ಪ್ರೈಸೆಸ್‌ಗೆ ಬಿಟ್ಟಿ ರಿಯಲ್‌ ಎಸ್ಟೇಟ್‌ ಆದಾಯ ಭಾಗ್ಯ ಕರುಣಿಸಲಿದೆಯೇ ಸರ್ಕಾರ?

ಬೆಂಗಳೂರು; ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಉದ್ದೇಶಿತ  ಸುರಂಗ ಮಾರ್ಗ ನಿರ್ಮಾಣದ ಹೆಸರಿನಲ್ಲಿ...

ಈಶಾ ಎಜುಕೇಷನ್, ಈಶಾ ಯೋಗ ಸೆಂಟರ್‍‌ಗೆ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆ, ದ್ರೋಹ ಆರೋಪ; ದಿ ಫೈಲ್ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಸರ್ಕಾರ

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ; ಅಭಿವೃದ್ಧಿ ಹೊಂದಿದ ಜಮೀನುಗಳ ಸರ್ವೇ ನಂಬರ್‍‌ ವಿವರಣೆ ನೀಡದ ಅಧಿಕಾರಿವರ್ಗ

ಬೆಂಗಳೂರು; ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗುತ್ತಿಹೊಳೆ ಗ್ರಾಮದಲ್ಲಿ ವೀರಭದ್ರೇಶ್ವರ ಏತ...

Related Articles

Popular Categories

error: Content is protected !!