Sunday | May 3, 2026 |

ಕೋವಿಡ್‌ 2ನೇ ಅಲೆ ಹೊಡೆತ; 60,000 ಕೋಟಿ ನಷ್ಟ, ಶೇ.14.73ಕ್ಕೇರಿದ ನಿರುದ್ಯೋಗದ ಮಟ್ಟ

ಬೆಂಗಳೂರು; ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಮೇ ತಿಂಗಳ ಆರಂಭದಲ್ಲಿಇಯೇ ಸುಮಾರು 60,000 ಕೋಟಿ ರು. (8 ಬಿಲಿಯನ್‌) ನಷ್ಟವಾಗಿದೆ. ಅಲ್ಲದೆ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಶೇ.3.75ನಷ್ಟು ನಷ್ಟವಾಗಿದೆ. ಮೇ 23ರ ಅಂತ್ಯಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ಮಟ್ಟವು ಶೇ.14.73ರಷ್ಟಿದೆ.

ಮೇ ತಿಂಗಳಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್‌ ತಂದೊಡ್ಡಿರುವ ಆರ್ಥಿಕ ಪರಿಣಾಮಗಳ ಕುರಿತು ಸೆಂಟರ್‌ ಫಾರ್‌ ಮಾನಿಟಿರಿಂಗ್‌ ಇಂಡಿಯನ್‌ ಎಕಾನಮಿ ಸಮೀಕ್ಷೆ ನಡೆಸಿದೆ. ಇದರ ಪ್ರಕಾರ ನಿರುದ್ಯೋಗ ಮಟ್ಟವು ನಗರ ಭಾರತದಲ್ಲಿ ಶೇ.17ಕ್ಕಿಂತ ಹೆಚ್ಚು ಹಾಗೂ ಗ್ರಾಮೀಣ ಭಾರತದಲ್ಲಿ ಸುಮಾರು ಶೇ.14ರಷ್ಟಿದೆ.

2021ರ ಏಪ್ರಿಲ್‌ನಲ್ಲಿ ನಿರುದ್ಯೋಗ ದರವು ಶೇ.8ಕ್ಕೇರಿತ್ತು. ಮಾರ್ಗಸೂಚಿಗಳ ಪೈಕಿ ಕೆಲವೊಂದನ್ನು ಸಡಿಲಿಸಿದ ಪರಿಣಾಮ ಕಾರ್ಮಿಕರ ಭಾಗವಹಿಸುವಿಕೆಯು ಶೇ.40ರಷ್ಟಿತ್ತು. ಆದರೆ ಮೇ ತಿಂಗಳಲ್ಲಿ ಇದರ ಪ್ರಮಾಣ ಕುಸಿಯಲಾರಂಭಿಸಿತು. ಹೀಗಾಗಿ ಮೇ ತಿಂಗಳಲ್ಲಿ ನಿರುದ್ಯೋಗ ದರ ಇಳಿದಿದೆ. ಮೇ 23ಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ದರವು ಶೇ.14.5ಕ್ಕೇರಿತು. ಏಪ್ರಿಲ್ 2020 ರಲ್ಲಿ ಭಾರತವು ಸಾಂಕ್ರಾಮಿಕ ರೋಗಕ್ಕೆ ತುತ್ತಾದಾಗ ಸುಮಾರು 126 ಮಿಲಿಯನ್ ಉದ್ಯೋಗ ನಷ್ಟವಾಗಿತ್ತು ಎಂಬುದನ್ನು ಸಮೀಕ್ಷೆಯು ಹೊರಗೆಡವಿದೆ.

2020ರಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದ್ದ ಉದ್ಯೋಗ ಮಾರುಕಟ್ಟೆ ಸೆಪ್ಟಂಬರ್‌ನಲ್ಲಿ ಚೇತರಿಕೆ ಕಂಡಿತ್ತಲ್ಲದೇ ಡಿಸೆಂಬರ್ ಹೊತ್ತಿಗೆ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿತ್ತು. ಆದರೆ ಎರಡನೇ ಅಲೆ ಆರಂಭವಾದ ಜನವರಿಯಲ್ಲಿ ಕುಸಿಯಲಾರಂಭಿಸಿತು. ಮಾರ್ಚ್‌ವರೆಗೂ ಇದೇ ಸ್ಥಿತಿಯಲ್ಲಿತ್ತು ಎಂದು ಸಮೀಕ್ಷೆ ತಿಳಿಸಿದೆ.

ಸಂಬಳ ಪಡೆಯುವ ಉದ್ಯೋಗಗಳಲ್ಲಿ ಕುಸಿತ ಸ್ಥಿರವಾಗಿದೆ. ಕೋವಿಡ್‌ ಸಾಂಕ್ರಾಮಿಕ ಹರಡುವಿಕೆ ಮೊದಲು ದೇಶದಲ್ಲಿ 403.5 ಮಿಲಿಯನ್‌ ಉದ್ಯೋಗಗಳಿದ್ದವು. ಡಿಸೆಂಬರ್‌ 2020 ಮತ್ತು ಜನವರಿ 2021ರಲ್ಲಿ 400 ಮಿಲಿಯನ್‌ಗಿಳಿದಿತ್ತು. ಕೋವಿಡ್‌ 2ನೇ ಅಲೆ ಹೊಡೆತಕ್ಕೆ ಉದ್ಯೋಗ ಮಾರುಕಟ್ಟೆ ಸಿಲುಕಿದ ಪರಿಣಾಮ ಉದ್ಯೋಗಗಳ ಸಂಖ್ಯೆಯನ್ನು 3.5 ಮಿಲಿಯನ್‌ಗಿಳಿಸಲಾಗಿದೆ. ಇದೇ ಹೊತ್ತಿನಲ್ಲಿ ಸಂಬಳ ಪಡೆಯುವ ಉದ್ಯೋಗಿಗಳ ಪ್ರಮಾಣವೂ ಕುಸಿಯಲಾರಂಭಿಸಿವೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...
Please Scan to make Your Contribution

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!