Wednesday | April 8, 2026 |

ಪಿಡಬ್ಲ್ಯೂಡಿ; ಕಪ್ಪುಪಟ್ಟಿಗೆ ಸೇರಬೇಕಿದ್ದ ಗುಜರಾತ್ ಕಂಪನಿಗೆ 10,000 ಕೋಟಿ ಮೊತ್ತದ ಗುತ್ತಿಗೆ?

ಬೆಂಗಳೂರು; ನಿಗದಿತ ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಆರೋಪಕ್ಕೆ ಗುರಿಯಾಗಿರುವ ಗುಜರಾತ್‌ ಮೂಲದ ಸದ್ಬಾವ್‌ ಕಂಪನಿಗೆ ಲೋಕೋಪಯೋಗಿ, ನೀರಾವರಿ, ನಗರಾಭಿವೃದ್ಧಿ, ಬಾಹ್ಯ ಸಂಸ್ಥೆಯ ನೆರವಿನ ಯೋಜನೆಗಳನ್ನೂ ಒಳಗೊಂಡಂತೆ ರಾಜ್ಯ ಬಿಜೆಪಿ ಸರ್ಕಾರವು ಅಂದಾಜು 10,000 ಕೋಟಿ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ನೀಡಿರುವುದು ಇದೀಗ ಬಹಿರಂಗವಾಗಿದೆ.

ನಿರ್ದಿಷ್ಟ ಯೋಜನೆಯನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸದೇ ಇದ್ದರೆ ಅಂತಹ ಕಂಪನಿಯನ್ನು ಅನರ್ಹಗೊಳಿಸಬೇಕಲ್ಲದೆ ಕಪ್ಪು ಪಟ್ಟಿಗೆ ಸೇರಿಸಬೇಕಿತ್ತು. ಕಂಪನಿ ವ್ಯವಹಾರಗಳ ಜತೆ ಗುರುತಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿರುವ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಸಂಬಂಧಿಕರೊಬ್ಬರು ಮತ್ತು ಯೋಜನಾ ನಿರ್ದೇಶಕ ಸುರೇಶ್‌ ಬಾಬು ಎಂಬುವರು ಕಂಪನಿಯ ಹಿತ ಕಾಯ್ದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಪಾವಗಡ-ತುಮಕೂರು ಹೆದ್ದಾರಿ ಯೋಜನೆಯನ್ನು ಕೈಗೆತ್ತಿಕೊಂಡಿದ್ದ ಸದ್ಬಾವ್‌ ಕಂಪನಿಯು ಅವಧಿ ಮೀರಿದ್ದರೂ ಕಾಮಗಾರಿ ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಈ ಕಂಪನಿಗೆ ದಂಡವನ್ನೂ ವಿಧಿಸಲಾಗಿತ್ತು ಎಂದು ಹೇಳಲಾಗಿದೆ. ಆದರೂ ಸಾವಿರಾರು ಕೋಟಿ ಮೊತ್ತದ ಯೋಜನೆಗಳನ್ನು ಈ ಕಂಪನಿಗೆ ನೀಡಿರುವುದು ಅಚ್ಚರಿ ಮೂಡಿಸಿದೆ.

ಗದಗ್‌ ಹೊನ್ನಾಳಿ ಯೋಜನೆ ದೊರೆತಿದ್ಹೇಗೆ?

ಗದಗ್‌ ಮತ್ತು ಹೊನ್ನಾಳಿ ಯೋಜನೆ ಸಂಬಂಧ ಕರೆದಿದ್ದ ಟೆಂಡರ್‌ನಲ್ಲಿ ಸದ್ಭಾವ್‌ ಕಂಪನಿ ಎಲ್‌-1 ಆಗಿರಲಿಲ್ಲ ಎಂದು ಗೊತ್ತಾಗಿದೆ. ಟೆಂಡರ್‌ನಲ್ಲಿ ಬಿಡ್‌ ಮಾಡಿದ್ದ ಕೆ ಎನ್‌ ಹೈವೇಸ್‌ ಕಂಪನಿಯು ಗದಗ್‌ ಹೊನ್ನಾಳಿ ಮತ್ತು ಮೈಸೂರು ಯೋಜನೆಯಲ್ಲಿ ಎಲ್‌-1 ಆಗಿತ್ತು. ಸದ್ಬಾವ್‌ ಕಂಪನಿಯು ಗದಗ್‌ ಹೊನ್ನಾಳಿ ಯೋಜನೆಯಲ್ಲಿ ಎಲ್‌-2 ಆಗಿತ್ತು ಎಂದು ತಿಳಿದು ಬಂದಿದೆ.

ಆದರೂ ಸದ್ಭಾವ್‌ ಕಂಪನಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆಶಿಪ್‌ನ ಯೋಜನಾ ನಿರ್ದೇಶಕ ಸುರೇಶ್‌ಬಾಬು ಎಂಬುವರು ಕೆ ಎನ್‌ ಹೈವೇಸ್‌ ಕಂಪನಿ ಜತೆ ಸಂಧಾನ ನಡೆಸಿ ಎಲ್‌ 2 ಸ್ಥಾನದಲ್ಲಿದ್ದ ಸದ್ಭಾವ್‌ ಕಂಪನಿಗೆ ಟೆಂಡರ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ಇಲಾಖಾ  ಮೂಲಗಳು ‘ದಿ ಫೈಲ್‌’ಗೆ ತಿಳಿಸಿವೆ.

ಮೈಸೂರು ಯೋಜನೆಯನ್ನು ಕೈಗೆತ್ತಿಕೊಂಡಿದ್ದ ಕೆ ಎನ್‌ ಹೈವೇಸ್‌ ಕಂಪನಿಯು 28 ಕಿ ಮೀ ಅಭಿವೃದ್ಧಿಪಡಿಸಬೇಕಿದ್ದರೂ 36 ಕಿ ಮೀ ಅಭಿವೃದ್ಧಿಪಡಿಸುವ ಮೂಲಕ ನಿಗದಿತ ಗುರಿಗಿಂತಲೂ ಹೆಚ್ಚಿನ ಪ್ರಗತಿ ಸಾಧಿಸಿತ್ತು ಎಂದು ಹೇಳಲಾಗಿದೆ. ಆದರೆ ಗದಗ್‌ ಹೊನ್ನಾಳಿ ಯೋಜನೆ ಕೈಗೆತ್ತಿಕೊಂಡಿರುವ ಸದ್ಭಾವ್‌ ಕಂಪನಿಯು ನಿಗದಿತ ಕಾಲಾವಧಿ ಪೂರ್ಣಗೊಂಡರೂ ನಿರೀಕ್ಷಿತ ಗುರಿ ತಲುಪಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಬೇರೊಂದು ಹೆದ್ದಾರಿ ಯೋಜನೆ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಕಾರಣಕ್ಕೆ ಅತಿ ಹೆಚ್ಚಿನ ಪ್ರಮಾಣದಲ್ಲಿ ದಂಡವನ್ನೂ ವಿಧಿಸಲಾಗಿದೆ ಎಂದು ಗೊತ್ತಾಗಿದೆ. ಆದರೂ ಇದೇ ಕಂಪನಿಗೆ ಸಾವಿರಾರು ಕೋಟಿ ಮೊತ್ತದ ಯೋಜನೆಗಳ ಗುತ್ತಿಗೆ ನೀಡುತ್ತಿರುವುದು ಅಚ್ಚರಿ ಮೂಡಿಸಿದೆ.

Hot this week

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

ಬಿಆರ್‍‌ಜಿಎಫ್‌ ಅನುದಾನದಲ್ಲಿ ಅಕ್ರಮ; ಲೋಕಾ ಶಿಫಾರಸ್ಸು ತಿರಸ್ಕೃತ, ಹಿರಿಯ ಐಎಎಸ್ ಅಧಿಕಾರಿ ವಿರುದ್ಧದ ಪ್ರಕರಣ ಮುಕ್ತಾಯ!

ಬೆಂಗಳೂರು; ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ನೀಡಿದ್ದ ಅನುದಾನ ಮತ್ತು...

96.73 ಕೋಟಿ ರು ರಿಯಾಯಿತಿ ಕೋರಿದ ದಾಲ್ಮಿಯಾ ಸಿಮೆಂಟ್ಸ್‌; ನಿಯಮ ಪಾಲನೆಯೋ, ಉಲ್ಲಂಘನೆಯೋ?

ಬೆಂಗಳೂರು; ಗಣಿಗಾರಿಕೆ ಉದ್ಯಮದಲ್ಲಿ  ಆಂಧ್ರ ಪ್ರದೇಶ, ರಾಜಸ್ತಾನ ಸರ್ಕಾರವು ನೀಡಿರುವ ರಿಯಾಯಿತಿಯನ್ನು...

ಬ್ಯಾಕ್‌ ಟು ಬ್ಯಾಕ್ ಸಾಲ,12 ಪ್ರತಿಶತದಷ್ಟು ಹೆಚ್ಚಳ, ಅಸಲನ್ನೂ ಮೀರಿಸಲಿದೆಯೆ ಬಡ್ಡಿ ಮರುಪಾವತಿ?

ಬೆಂಗಳೂರು; 2024-25ನೇ ಸಾಲಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಡೆದಿರುವ ಸಾರ್ವಜನಿಕ ಸಾಲವು...

Topics

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

ಬಿಆರ್‍‌ಜಿಎಫ್‌ ಅನುದಾನದಲ್ಲಿ ಅಕ್ರಮ; ಲೋಕಾ ಶಿಫಾರಸ್ಸು ತಿರಸ್ಕೃತ, ಹಿರಿಯ ಐಎಎಸ್ ಅಧಿಕಾರಿ ವಿರುದ್ಧದ ಪ್ರಕರಣ ಮುಕ್ತಾಯ!

ಬೆಂಗಳೂರು; ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ನೀಡಿದ್ದ ಅನುದಾನ ಮತ್ತು...

96.73 ಕೋಟಿ ರು ರಿಯಾಯಿತಿ ಕೋರಿದ ದಾಲ್ಮಿಯಾ ಸಿಮೆಂಟ್ಸ್‌; ನಿಯಮ ಪಾಲನೆಯೋ, ಉಲ್ಲಂಘನೆಯೋ?

ಬೆಂಗಳೂರು; ಗಣಿಗಾರಿಕೆ ಉದ್ಯಮದಲ್ಲಿ  ಆಂಧ್ರ ಪ್ರದೇಶ, ರಾಜಸ್ತಾನ ಸರ್ಕಾರವು ನೀಡಿರುವ ರಿಯಾಯಿತಿಯನ್ನು...

ಬ್ಯಾಕ್‌ ಟು ಬ್ಯಾಕ್ ಸಾಲ,12 ಪ್ರತಿಶತದಷ್ಟು ಹೆಚ್ಚಳ, ಅಸಲನ್ನೂ ಮೀರಿಸಲಿದೆಯೆ ಬಡ್ಡಿ ಮರುಪಾವತಿ?

ಬೆಂಗಳೂರು; 2024-25ನೇ ಸಾಲಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಡೆದಿರುವ ಸಾರ್ವಜನಿಕ ಸಾಲವು...

1.16 ಕೋಟಿ ನಿಷ್ಕ್ರೀಯ ಖಾತೆಗಳಲ್ಲಿದೆ 3,403 ಕೋಟಿ; ಪರಿಣಾಮ ಬೀರದ ಆರ್‍‌ಬಿಐ ಮೇಲ್ವಿಚಾರಣೆ

ಬೆಂಗಳೂರು; ಸರ್ಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರೆ ಖಾಸಗಿ ಬ್ಯಾಂಕ್‌ಗಳಲ್ಲಿ...

ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೆ ನಿಯಮಬಾಹಿರವಾಗಿ ಲೆಟರ್ ಆಫ್‌...

Related Articles

Popular Categories

error: Content is protected !!