Tuesday | July 21, 2026 |

ಪಿಡಬ್ಲ್ಯೂಡಿ; ಕಪ್ಪುಪಟ್ಟಿಗೆ ಸೇರಬೇಕಿದ್ದ ಗುಜರಾತ್ ಕಂಪನಿಗೆ 10,000 ಕೋಟಿ ಮೊತ್ತದ ಗುತ್ತಿಗೆ?

ಬೆಂಗಳೂರು; ನಿಗದಿತ ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಆರೋಪಕ್ಕೆ ಗುರಿಯಾಗಿರುವ ಗುಜರಾತ್‌ ಮೂಲದ ಸದ್ಬಾವ್‌ ಕಂಪನಿಗೆ ಲೋಕೋಪಯೋಗಿ, ನೀರಾವರಿ, ನಗರಾಭಿವೃದ್ಧಿ, ಬಾಹ್ಯ ಸಂಸ್ಥೆಯ ನೆರವಿನ ಯೋಜನೆಗಳನ್ನೂ ಒಳಗೊಂಡಂತೆ ರಾಜ್ಯ ಬಿಜೆಪಿ ಸರ್ಕಾರವು ಅಂದಾಜು 10,000 ಕೋಟಿ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ನೀಡಿರುವುದು ಇದೀಗ ಬಹಿರಂಗವಾಗಿದೆ.

ನಿರ್ದಿಷ್ಟ ಯೋಜನೆಯನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸದೇ ಇದ್ದರೆ ಅಂತಹ ಕಂಪನಿಯನ್ನು ಅನರ್ಹಗೊಳಿಸಬೇಕಲ್ಲದೆ ಕಪ್ಪು ಪಟ್ಟಿಗೆ ಸೇರಿಸಬೇಕಿತ್ತು. ಕಂಪನಿ ವ್ಯವಹಾರಗಳ ಜತೆ ಗುರುತಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿರುವ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಸಂಬಂಧಿಕರೊಬ್ಬರು ಮತ್ತು ಯೋಜನಾ ನಿರ್ದೇಶಕ ಸುರೇಶ್‌ ಬಾಬು ಎಂಬುವರು ಕಂಪನಿಯ ಹಿತ ಕಾಯ್ದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಪಾವಗಡ-ತುಮಕೂರು ಹೆದ್ದಾರಿ ಯೋಜನೆಯನ್ನು ಕೈಗೆತ್ತಿಕೊಂಡಿದ್ದ ಸದ್ಬಾವ್‌ ಕಂಪನಿಯು ಅವಧಿ ಮೀರಿದ್ದರೂ ಕಾಮಗಾರಿ ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಈ ಕಂಪನಿಗೆ ದಂಡವನ್ನೂ ವಿಧಿಸಲಾಗಿತ್ತು ಎಂದು ಹೇಳಲಾಗಿದೆ. ಆದರೂ ಸಾವಿರಾರು ಕೋಟಿ ಮೊತ್ತದ ಯೋಜನೆಗಳನ್ನು ಈ ಕಂಪನಿಗೆ ನೀಡಿರುವುದು ಅಚ್ಚರಿ ಮೂಡಿಸಿದೆ.

ಗದಗ್‌ ಹೊನ್ನಾಳಿ ಯೋಜನೆ ದೊರೆತಿದ್ಹೇಗೆ?

ಗದಗ್‌ ಮತ್ತು ಹೊನ್ನಾಳಿ ಯೋಜನೆ ಸಂಬಂಧ ಕರೆದಿದ್ದ ಟೆಂಡರ್‌ನಲ್ಲಿ ಸದ್ಭಾವ್‌ ಕಂಪನಿ ಎಲ್‌-1 ಆಗಿರಲಿಲ್ಲ ಎಂದು ಗೊತ್ತಾಗಿದೆ. ಟೆಂಡರ್‌ನಲ್ಲಿ ಬಿಡ್‌ ಮಾಡಿದ್ದ ಕೆ ಎನ್‌ ಹೈವೇಸ್‌ ಕಂಪನಿಯು ಗದಗ್‌ ಹೊನ್ನಾಳಿ ಮತ್ತು ಮೈಸೂರು ಯೋಜನೆಯಲ್ಲಿ ಎಲ್‌-1 ಆಗಿತ್ತು. ಸದ್ಬಾವ್‌ ಕಂಪನಿಯು ಗದಗ್‌ ಹೊನ್ನಾಳಿ ಯೋಜನೆಯಲ್ಲಿ ಎಲ್‌-2 ಆಗಿತ್ತು ಎಂದು ತಿಳಿದು ಬಂದಿದೆ.

ಆದರೂ ಸದ್ಭಾವ್‌ ಕಂಪನಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆಶಿಪ್‌ನ ಯೋಜನಾ ನಿರ್ದೇಶಕ ಸುರೇಶ್‌ಬಾಬು ಎಂಬುವರು ಕೆ ಎನ್‌ ಹೈವೇಸ್‌ ಕಂಪನಿ ಜತೆ ಸಂಧಾನ ನಡೆಸಿ ಎಲ್‌ 2 ಸ್ಥಾನದಲ್ಲಿದ್ದ ಸದ್ಭಾವ್‌ ಕಂಪನಿಗೆ ಟೆಂಡರ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ಇಲಾಖಾ  ಮೂಲಗಳು ‘ದಿ ಫೈಲ್‌’ಗೆ ತಿಳಿಸಿವೆ.

ಮೈಸೂರು ಯೋಜನೆಯನ್ನು ಕೈಗೆತ್ತಿಕೊಂಡಿದ್ದ ಕೆ ಎನ್‌ ಹೈವೇಸ್‌ ಕಂಪನಿಯು 28 ಕಿ ಮೀ ಅಭಿವೃದ್ಧಿಪಡಿಸಬೇಕಿದ್ದರೂ 36 ಕಿ ಮೀ ಅಭಿವೃದ್ಧಿಪಡಿಸುವ ಮೂಲಕ ನಿಗದಿತ ಗುರಿಗಿಂತಲೂ ಹೆಚ್ಚಿನ ಪ್ರಗತಿ ಸಾಧಿಸಿತ್ತು ಎಂದು ಹೇಳಲಾಗಿದೆ. ಆದರೆ ಗದಗ್‌ ಹೊನ್ನಾಳಿ ಯೋಜನೆ ಕೈಗೆತ್ತಿಕೊಂಡಿರುವ ಸದ್ಭಾವ್‌ ಕಂಪನಿಯು ನಿಗದಿತ ಕಾಲಾವಧಿ ಪೂರ್ಣಗೊಂಡರೂ ನಿರೀಕ್ಷಿತ ಗುರಿ ತಲುಪಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಬೇರೊಂದು ಹೆದ್ದಾರಿ ಯೋಜನೆ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಕಾರಣಕ್ಕೆ ಅತಿ ಹೆಚ್ಚಿನ ಪ್ರಮಾಣದಲ್ಲಿ ದಂಡವನ್ನೂ ವಿಧಿಸಲಾಗಿದೆ ಎಂದು ಗೊತ್ತಾಗಿದೆ. ಆದರೂ ಇದೇ ಕಂಪನಿಗೆ ಸಾವಿರಾರು ಕೋಟಿ ಮೊತ್ತದ ಯೋಜನೆಗಳ ಗುತ್ತಿಗೆ ನೀಡುತ್ತಿರುವುದು ಅಚ್ಚರಿ ಮೂಡಿಸಿದೆ.

Hot this week

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...
Please Scan to make Your Contribution

Topics

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!