Wednesday | June 10, 2026 |

ಪಿಡಬ್ಲ್ಯೂಡಿ; ಕಪ್ಪುಪಟ್ಟಿಗೆ ಸೇರಬೇಕಿದ್ದ ಗುಜರಾತ್ ಕಂಪನಿಗೆ 10,000 ಕೋಟಿ ಮೊತ್ತದ ಗುತ್ತಿಗೆ?

ಬೆಂಗಳೂರು; ನಿಗದಿತ ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಆರೋಪಕ್ಕೆ ಗುರಿಯಾಗಿರುವ ಗುಜರಾತ್‌ ಮೂಲದ ಸದ್ಬಾವ್‌ ಕಂಪನಿಗೆ ಲೋಕೋಪಯೋಗಿ, ನೀರಾವರಿ, ನಗರಾಭಿವೃದ್ಧಿ, ಬಾಹ್ಯ ಸಂಸ್ಥೆಯ ನೆರವಿನ ಯೋಜನೆಗಳನ್ನೂ ಒಳಗೊಂಡಂತೆ ರಾಜ್ಯ ಬಿಜೆಪಿ ಸರ್ಕಾರವು ಅಂದಾಜು 10,000 ಕೋಟಿ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ನೀಡಿರುವುದು ಇದೀಗ ಬಹಿರಂಗವಾಗಿದೆ.

ನಿರ್ದಿಷ್ಟ ಯೋಜನೆಯನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸದೇ ಇದ್ದರೆ ಅಂತಹ ಕಂಪನಿಯನ್ನು ಅನರ್ಹಗೊಳಿಸಬೇಕಲ್ಲದೆ ಕಪ್ಪು ಪಟ್ಟಿಗೆ ಸೇರಿಸಬೇಕಿತ್ತು. ಕಂಪನಿ ವ್ಯವಹಾರಗಳ ಜತೆ ಗುರುತಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿರುವ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಸಂಬಂಧಿಕರೊಬ್ಬರು ಮತ್ತು ಯೋಜನಾ ನಿರ್ದೇಶಕ ಸುರೇಶ್‌ ಬಾಬು ಎಂಬುವರು ಕಂಪನಿಯ ಹಿತ ಕಾಯ್ದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಪಾವಗಡ-ತುಮಕೂರು ಹೆದ್ದಾರಿ ಯೋಜನೆಯನ್ನು ಕೈಗೆತ್ತಿಕೊಂಡಿದ್ದ ಸದ್ಬಾವ್‌ ಕಂಪನಿಯು ಅವಧಿ ಮೀರಿದ್ದರೂ ಕಾಮಗಾರಿ ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಈ ಕಂಪನಿಗೆ ದಂಡವನ್ನೂ ವಿಧಿಸಲಾಗಿತ್ತು ಎಂದು ಹೇಳಲಾಗಿದೆ. ಆದರೂ ಸಾವಿರಾರು ಕೋಟಿ ಮೊತ್ತದ ಯೋಜನೆಗಳನ್ನು ಈ ಕಂಪನಿಗೆ ನೀಡಿರುವುದು ಅಚ್ಚರಿ ಮೂಡಿಸಿದೆ.

ಗದಗ್‌ ಹೊನ್ನಾಳಿ ಯೋಜನೆ ದೊರೆತಿದ್ಹೇಗೆ?

ಗದಗ್‌ ಮತ್ತು ಹೊನ್ನಾಳಿ ಯೋಜನೆ ಸಂಬಂಧ ಕರೆದಿದ್ದ ಟೆಂಡರ್‌ನಲ್ಲಿ ಸದ್ಭಾವ್‌ ಕಂಪನಿ ಎಲ್‌-1 ಆಗಿರಲಿಲ್ಲ ಎಂದು ಗೊತ್ತಾಗಿದೆ. ಟೆಂಡರ್‌ನಲ್ಲಿ ಬಿಡ್‌ ಮಾಡಿದ್ದ ಕೆ ಎನ್‌ ಹೈವೇಸ್‌ ಕಂಪನಿಯು ಗದಗ್‌ ಹೊನ್ನಾಳಿ ಮತ್ತು ಮೈಸೂರು ಯೋಜನೆಯಲ್ಲಿ ಎಲ್‌-1 ಆಗಿತ್ತು. ಸದ್ಬಾವ್‌ ಕಂಪನಿಯು ಗದಗ್‌ ಹೊನ್ನಾಳಿ ಯೋಜನೆಯಲ್ಲಿ ಎಲ್‌-2 ಆಗಿತ್ತು ಎಂದು ತಿಳಿದು ಬಂದಿದೆ.

ಆದರೂ ಸದ್ಭಾವ್‌ ಕಂಪನಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆಶಿಪ್‌ನ ಯೋಜನಾ ನಿರ್ದೇಶಕ ಸುರೇಶ್‌ಬಾಬು ಎಂಬುವರು ಕೆ ಎನ್‌ ಹೈವೇಸ್‌ ಕಂಪನಿ ಜತೆ ಸಂಧಾನ ನಡೆಸಿ ಎಲ್‌ 2 ಸ್ಥಾನದಲ್ಲಿದ್ದ ಸದ್ಭಾವ್‌ ಕಂಪನಿಗೆ ಟೆಂಡರ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ಇಲಾಖಾ  ಮೂಲಗಳು ‘ದಿ ಫೈಲ್‌’ಗೆ ತಿಳಿಸಿವೆ.

ಮೈಸೂರು ಯೋಜನೆಯನ್ನು ಕೈಗೆತ್ತಿಕೊಂಡಿದ್ದ ಕೆ ಎನ್‌ ಹೈವೇಸ್‌ ಕಂಪನಿಯು 28 ಕಿ ಮೀ ಅಭಿವೃದ್ಧಿಪಡಿಸಬೇಕಿದ್ದರೂ 36 ಕಿ ಮೀ ಅಭಿವೃದ್ಧಿಪಡಿಸುವ ಮೂಲಕ ನಿಗದಿತ ಗುರಿಗಿಂತಲೂ ಹೆಚ್ಚಿನ ಪ್ರಗತಿ ಸಾಧಿಸಿತ್ತು ಎಂದು ಹೇಳಲಾಗಿದೆ. ಆದರೆ ಗದಗ್‌ ಹೊನ್ನಾಳಿ ಯೋಜನೆ ಕೈಗೆತ್ತಿಕೊಂಡಿರುವ ಸದ್ಭಾವ್‌ ಕಂಪನಿಯು ನಿಗದಿತ ಕಾಲಾವಧಿ ಪೂರ್ಣಗೊಂಡರೂ ನಿರೀಕ್ಷಿತ ಗುರಿ ತಲುಪಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಬೇರೊಂದು ಹೆದ್ದಾರಿ ಯೋಜನೆ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಕಾರಣಕ್ಕೆ ಅತಿ ಹೆಚ್ಚಿನ ಪ್ರಮಾಣದಲ್ಲಿ ದಂಡವನ್ನೂ ವಿಧಿಸಲಾಗಿದೆ ಎಂದು ಗೊತ್ತಾಗಿದೆ. ಆದರೂ ಇದೇ ಕಂಪನಿಗೆ ಸಾವಿರಾರು ಕೋಟಿ ಮೊತ್ತದ ಯೋಜನೆಗಳ ಗುತ್ತಿಗೆ ನೀಡುತ್ತಿರುವುದು ಅಚ್ಚರಿ ಮೂಡಿಸಿದೆ.

Hot this week

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...
Please Scan to make Your Contribution

Topics

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

Related Articles

Popular Categories

error: Content is protected !!