Sunday | May 3, 2026 |

ಮರಣ ಪ್ರಮಾಣ ದರ; ಕಳೆದ ವರ್ಷಕ್ಕಿಂತ 4 ಪಟ್ಟು ಹೆಚ್ಚು, ಕೆಟ್ಟ ಪರಿಸ್ಥಿತಿ!

ಬೆಂಗಳೂರು; ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ ನೀಡುವಲ್ಲಿ ಹಿನ್ನಡೆಯಿಂದಾಗಿಯೇ ಬೆಂಗಳೂರು ಮಹಾನಗರದಲ್ಲಿ ಕಂಡು ಬಂದಿರುವ ಸೋಂಕು ಮರಣ ಪ್ರಮಾಣವು ದೆಹಲಿ ಸೇರಿದಂತೆ ದೇಶದ ಒಟ್ಟು 6 ಮಹಾನಗರಗಳಕ್ಕಿಂತಲೂ ಹೆಚ್ಚಿದೆ. ಅಲ್ಲದೆ ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸದ ಕಾರಣ ಸೋಂಕು ಮರಣ ಪ್ರಮಾಣ ದರ ಹೇಗೆ ಹೆಚ್ಚಲಿದೆ ಎಂಬುದಕ್ಕೆ ಬೆಂಗಳೂರು ಮಹಾನಗರವು ಸಾಕ್ಷಿಯಾಗಿದೆ.

2020ರಲ್ಲಿ ಕಾಣಿಸಿಕೊಂಡ ಕೋವಿಡ್‌ ಮೊದಲ ಅಲೆ ಮತ್ತು 2021ರಲ್ಲಿನ 2ನೇ ಅಲೆಗೆ ಹೋಲಿಸಿದರೆ ಸೋಂಕು ಮರಣ ಪ್ರಮಾಣವು ಶೇಕಡವಾರು ಪ್ರಮಾಣದಲ್ಲಿ ಹೆಚ್ಚಳವಾಗಿದೆ. 2020ರಲ್ಲಿ 10 ಸಾವಿರ ಜನಸಂಖ್ಯೆಗೆ 0.03ರಷ್ಟು ಸೋಂಕು ಮರಣ ಪ್ರಮಾಣವಿದ್ದರೆ 2021ರಲ್ಲಿ ಒಂದು ಸಾವಿರ ಜನಸಂಖ್ಯೆಗೆ 1.1ರಷ್ಟಿದೆ. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 4 ಪಟ್ಟು ಹೆಚ್ಚಾಗಿದೆ.

ಸೂಕ್ತ ಕಾಲದಲ್ಲಿ ಪರೀಕ್ಷೆ ನಡೆಸದ ಕಾರಣ ಬೆಂಗಳೂರು ನಗರದಲ್ಲಿ ಸಾವಿನ ದರವು ಏರುಗತಿಯಲ್ಲಿದೆ. ಪ್ರಾಥಮಿಕ ಹಂತದಲ್ಲೇ ಸೋಂಕು ಪತ್ತೆಹಚ್ಚಿ ಚಿಕಿತ್ಸೆ ಕೊಡಿಸುವುದು ಸಾಧ್ಯವಾಗಿದೆ. ಹೆಚ್ಚಿನವರಿಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ಸಿಗುತ್ತಿದೆ. ಸೋಂಕು ಪತ್ತೆ ಪ್ರಮಾಣ ಗಣನೀಯವಾಗಿ ಇಳಿಕೆಯಾದರೂ ಕೋವಿಡ್‌ ಸೋಂಕಿತರ ಸಾವಿನ ದರ ಇಳಿಕೆಯಾಗದಿರುವುದು ನಿಜಕ್ಕೂ ಅಚ್ಚರಿಯ ಸಂಗತಿ.

ಬಿಬಿಎಂಪಿ ಅಂಕಿ–ಅಂಶಗಳ ಪ್ರಕಾರ 2021ರ ಏಪ್ರಿಲ್‌ ಆರಂಭದಲ್ಲಿ ಕೋವಿಡ್‌ ಸೋಂಕಿತರ ಸಾವಿನ ದರ ಶೇ 0.37ರಷ್ಟಿತ್ತು. ಕೋವಿಡ್‌ ಪೀಡಿತರ ಸಾವಿನ ದರ ಏಪ್ರಿಲ್ ಅಂತ್ಯಕ್ಕೆ ಶೇ 0.56ಕ್ಕೇರಿತ್ತ. ನಗರದಲ್ಲಿ ಜೂನ್‌ 7 ಅಂತ್ಯಕ್ಕೆ ಬೆಂಗಳೂರು ನಗರದಲ್ಲಿ ಕೋವಿಡ್‌ನಿಂದಾಗಿ ಒಟ್ಟು 15,074 ಮರಣಗಳು ಸಂಭವಿಸಿವೆ. ಈ ಪೈಕಿ ಮೇ ತಿಂಗಳಿನಲ್ಲಿ ಮೃತಪಟ್ಟವರ ಸಂಖ್ಯೆ 6,978ಕ್ಕೂ ಹೆಚ್ಚಿದೆ.

ಹಾಗೆಯೇ ಇದೇ ಅವಧಿಯಲ್ಲಿ ಒಟ್ಟು 2,653 ಮಂದಿ ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದಾರೆ. ಮೇ 28ರಂದು 192 ಮಂದಿ ಸಾವನ್ನಪ್ಪಿದ್ದರೆ ಜೂನ್‌ 3ರಂದು 347 ಮಂದಿ ಸಾವನ್ನಪ್ಪಿದ್ದರು. ಜೂನ್‌ 7ರಂದು 199 ಮಂದಿ ಮರಣ ಹೊಂದಿದ್ದರು. ಇದೇ 10 ದಿನದಲ್ಲಿ 1,37,332 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಮೇ 28ರಂದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಂದರೆ 31,237 ಮಂದಿ ಬಿಡುಗಡೆಗೊಂಡಿದ್ದರೆ ಜೂನ್‌ 7ರಂದು 11,488 ಮಂದಿ ಬಿಡುಗಡೆಗೊಂಡಿದ್ದಾರೆ.

ಅದೇ ರೀತಿ ಕಳೆದ 10 ದಿನದಲ್ಲಿ (ಮೇ 28ರಿಂದ ಜೂನ್‌ 7) ಬೆಂಗಳೂರಿನಲ್ಲಿ 8,55,215 ಮಂದಿಗೆ ಲಸಿಕೆ ಹಾಕಲಾಗಿದೆ. ಮೇ 28ರಂದು 92,111 ಮಂದಿಗೆ ಲಸಿಕೆ ಹಾಕಿದ್ದರೆ ಜೂನ್‌ 7ರಂದು ಕೇವಲ 40,826 ಮಂದಿಗೆ ಲಸಿಕೆ ಹಾಕಲಾಗಿದೆ.

ಚೆನ್ನೈ ಮತ್ತು ಕೋಲ್ಕತ್ತಾ ನಗರದಲ್ಲಿಯೂ ಸೋಂಕು ಮರಣ ಪ್ರಮಾಣದ ದರದಲ್ಲಿ ಇಳಿಕೆಯಾಗುತ್ತಿಲ್ಲ. ಆ ಎರಡೂ ನಗರಗಳೂ ಮರಣ ಪ್ರಮಾಣ ದರವನ್ನು ಇಳಿಕೆ ಮಾಡಲು ಹರಸಾಹಸ ಪಡುತ್ತಿವೆ.

ದೆಹಲಿ ನಗರದಲ್ಲಿ ಸೋಂಕು ಮರಣ ಪ್ರಮಾಣವು 563ರಿಂದ 1,304ಕ್ಕೆ ಏರಿದೆ. ಇದರ ಪ್ರಮಾಣ 2.5ರಷ್ಟು ಹೆಚ್ಚಳವಾಗಿದೆ ಎಂಬುದು ಸಾಂಕ್ರಾಮಿಕ ರೊಗ ತಜ್ಞರ ಅಧ್ಯಯನದಿಂದ ಗೊತ್ತಾಗಿದೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...
Please Scan to make Your Contribution

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!