Sunday | March 22, 2026 |

ತಾರತಮ್ಯಕ್ಕೆ ‘ಮುನಿ’ದ ಶಾಸಕರು; 8,105 ಕೋಟಿ ಬಿಲ್‌ನಲ್ಲಿ ಒಡಕು ತಂದಿಟ್ಟ ಅಧಿಕಾರಶಾಹಿ

Support THE-FILE

spot_img

ಬೆಂಗಳೂರು; ನವ ನಗರೋತ್ಥಾನ ಯೋಜನೆಯಡಿಯಲ್ಲಿ ಕಳೆದ 3 ವರ್ಷದ ಹಿಂದೆಯೇ ಅನುಮೋದನೆಯಾಗಿರುವ 8,015 ಕೋಟಿ ಮೊತ್ತದ ಬೃಹತ್‌ ಕಾಮಗಾರಿಗಳ ಸಂಬಂಧ ಗುತ್ತಿಗೆದಾರರಿಗೆ ಸರ್ಕಾರವು ಅನುದಾನ ಬಿಡುಗಡೆ ಮಾಡುತ್ತಿದ್ದರೂ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಬಿಲ್‌ಗಳನ್ನು ಸಕಾರಣಗಳಿಲ್ಲದೆಯೇ ತಡೆಹಿಡಿಯುತ್ತಿದೆ. ಅಲ್ಲದೆ ಬೆಂಗಳೂರು ನಗರ ಜಿಲ್ಲೆಯ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿಯೂ ತಾರತಮ್ಯ ಎಸಗುತ್ತಿರುವುದು ಇದೀಗ ಬಹಿರಂಗವಾಗಿದೆ.

ಬೆಂಗಳೂರು ನಗರ ಶಾಸಕರಲ್ಲಿಯೇ ಒಡಕು ಸೃಷ್ಟಿ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಬಿಬಿಎಂಪಿಯ ಕೆಲ ಅಧಿಕಾರಿಗಳ ವಿರುದ್ಧ ಸಿಟ್ಟಿಗೆದ್ದಿರುವ ನಗರ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 2021ರ ಮೇ 24ರಂದು ಬರೆದಿರುವ ದೂರಿನ ಪತ್ರ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಈ ಪತ್ರವನ್ನಾಧರಿಸಿ ಅನುದಾನ ಬಿಡುಗಡೆಯಲ್ಲಿ ತಾರತಮ್ಯವಾದಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌ ಅವರಿಗೆ ಸೂಚಿಸಿ ಪತ್ರವನ್ನು ಬರೆದಿದ್ದಾರೆ.

ಅದರಂತೆ  ಹಣ ಬಿಡುಗಡೆ ಮಾಡುವಲ್ಲಿ ವಿಳಂಬ ಮತ್ತು ತಾರತಮ್ಯ ಎಸಗಿರುವ ಆರೋಪಕ್ಕೆ ಗುರಿಯಾಗಿರುವ ಬಿಬಿಎಂಪಿಯನ್ನು ರಾಕೇಶ್‌ಸಿಂಗ್‌ ಕೂಡ ತರಾಟೆಗೆ ತೆಗೆದುಕೊಂಡಿದ್ದಾರೆ. ನವನಗರೋತ್ಥಾನ ಯೋಜನೆಯಡಿಯಲ್ಲಿ ಮುಖ್ಯ ರಸ್ತೆ ಅಭಿವೃದ್ಧಿ, ವಾರ್ಡ್‌ ರಸ್ತೆ ಅಭಿವೃದ್ಧಿ, ಫ್ಲೈ ಓವರ್‌ಗಳಂತಹ ಬೃಹತ್‌ ಮೂಲಸೌಕರ್ಯ ಕಾಮಗಾರಿಗಳ ಸಂಬಂಧ ಬಿಲ್‌ಗಳನ್ನು ಕಡಿಮೆ ಅವಧಿಯಲ್ಲಿ ಸಲ್ಲಿಸುತ್ತಿರುವುದು  ತಿಳಿದು ಬಂದಿದೆ.

‘ರಾಜ್ಯ ಸರ್ಕಾರದಿಂದ ಬಿಬಿಎಂಪಿಗೆ ತ್ರೈಮಾಸಿಕಕ್ಕೊಮ್ಮೆ ನಿಯಮಿತವಾಗಿ ಅನುದಾನ ಬಿಡುಗಡೆ ಆಗುತ್ತಿದೆ. ಯಾವುದೇ ಕಾಮಗಾರಿಯ ಅನುಷ್ಠಾನದಲ್ಲಿ ಅಡೆತಡೆಯಾಗದಂತೆ ಅನುದಾನವನ್ನು ಬಿಲ್‌ ಪಾವತಿಗೆ ಬಟವಾಡೆ ಮಾಡುವ ಜವಾಬ್ದಾರಿ ಬಿಬಿಎಂಪಿಗಿದೆ. ಎಲ್ಲ ಕಾಮಗಾರಿಗಳೂ ನವ ನಗರೋತ್ಥಾನ ಯೋಜನೆಯ ಅಡಿಯಲ್ಲಿಯೇ ಅನುಮೋದನೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾಮಗಾರಿಗಳಿಗೂ ಅನುದಾನ ಲಭ್ಯವಿರದೇ ಇರುವುದಕ್ಕೆ ಸಕಾರಣಗಳಲ್ಲ. ಸರ್ಕಾರ ಕೂಡ ಸಕಾಲದಲ್ಲಿ ಅನುದಾನ ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮತ್ತು ಅನುದಾನವನ್ನು ಯೋಜನೆಗಳಲ್ಲದೆ ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಅನುಮೋದಿತ ಯೋಜನೆಗಳಿಗೆ ಬಿಲ್‌ ಪಾವತಿ ಮಾಡದೇ ಇರುವಂತಿಲ್ಲ,’ ಎಂದು ರಾಕೇಶ್‌ಸಿಂಗ್‌ ಅವರು ಬಿಬಿಎಂಪಿಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಬೆಂಗಳೂರಿನ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ ಈಗಾಗಲೇ ಅನುದಾದ ಬಿಡುಗಡೆಯಾಗಿದೆ. ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಬಿಲ್‌ನ್ನು ಪಾವತಿಸುವಾಗ ಬಿಬಿಎಂಪಿಯು ವಿಳಂಬ ಮಾಡುತ್ತಿದೆಯಲ್ಲದೇ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಶಾಸಕ ಮುನಿರತ್ನ ಅವರು ಅಲವತ್ತುಕೊಂಡಿರುವುದು ಅವರು ಬರೆದಿರುವ ಪತ್ರದಿಂದ ಗೊತ್ತಾಗಿದೆ.

2018-19ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿ ಒದಗಿಸಿರುವ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿಯಲ್ಲಿ 8,015 ಕೋಟಿ ರು.ಗಳ ಕ್ರಿಯಾ ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದೆ. ಕ್ರಿಯಾಯೋಜನೆಯ ಅನುಬಂಧ 2ರಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ 4,107 ಕೋಟಿ ಮೀಸಲಿರಿಸಿರುವುದು ತಿಳಿದು ಬಂದಿದೆ.

ಸದರಿ ರಸ್ತೆಗಳ ಅಭಿವೃದ್ಧಿ ಕ್ರಿಯಾ ಯೋಜನೆಯಲ್ಲಿ ಅನುಮೋದನೆಯಾಗುವ ಕಾಮಗಾರಿಗಳಲ್ಲಿ ಆರ್ಟೀಯರಿಯಲ್‌, ಸಬ್‌ ಆರ್ಟೀಯರಿಲ್‌ ಹಾಗೂ ವಾರ್ಡ್‌ ಮಟ್ಟದ ರಸ್ತೆಗಳು ಒಳಗೊಂಡಿದೆ. ಹಾಲಿ ಈಗಾಗಲೇ ಮೇಲ್ಕಂಡ ಅನುದಾನದಲ್ಲಿ ಬೆಂಗಳೂರು ನಗರದಾದ್ಯಂತ ಹಲವಾರು ಕಾಮಗಾರಿಗಳು ಪೂರ್ಣಗೊಂಡಿದೆ. ಬಿಲ್‌ ಪಾವತಿಗಾಗಿ ಸಲ್ಲಿಸಲಾಗಿರುತ್ತದೆ. ಬಿಬಿಎಂಪಿಯಲ್ಲಿ ರಸ್ತೆ, ಮೂಲಭೂತ ಸೌಕರ್ಯ ವಿಭಾಗದಿಂದ ನಿರ್ವಹಿಸಿರುವ ಆರ್ಟೀರಿಯಲ್‌, ಸಬ್‌ ಆರ್ಟೀರಿಯಲ್‌ ಕಾಮಗಾರಿಗಳಿಗೆ ಅದ್ಯತೆ ಆಧಾರದ ಮೇರೆಗೆ ಬಿಲ್‌ ಪಾವತಿ ಸಲ್ಲಿಸಿದ ಕೂಡಲೇ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಗೊತ್ತಾಗಿದೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!