Thursday | July 16, 2026 |

ರ್‍ಯಾಪಿಡ್ ಆ್ಯಂಟಿಜನ್ ಕಿಟ್‌ ಖರೀದಿ ಅಕ್ರಮ; 9.50 ಕೋಟಿ ಹೊರೆಗೆ ಕಾರಣವಾಯಿತೇ ಇಲಾಖೆ?

ಬೆಂಗಳೂರು; ಕೋವಿಡ್‌-19 ಪರೀಕ್ಷೆಗೆ ಅಗತ್ಯವಾಗಬಹುದಾದ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳನ್ನು ದುಬಾರಿ ದರದಲ್ಲಿ ಖರೀದಿಗೆ ಮುಂದಾಗಿದೆ. ಕಿಟ್‌ ಖರೀದಿ ಸಂಬಂಧ ಜೂನ್‌ ತಿಂಗಳಲ್ಲಿ ಆಹ್ವಾನಿಸಿದ್ದ ದರ ಪಟ್ಟಿಯಲ್ಲಿ ಭಾಗವಹಿಸಿದ್ದ ಕೆಲ ಕಂಪನಿಗಳು 49.00 ರು. ದರ ನಮೂದಿಸಿದ್ದರೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೇ ಕಿಟ್‌ವೊಂದಕ್ಕೆ 60 ರು. ನಿಗದಿಪಡಿಸಿ ಅಕ್ರಮಕ್ಕೆ ದಾರಿಮಾಡಿಕೊಟ್ಟಿದೆ.

 

ಕಂಪನಿಗಳು ನಮೂದಿಸಿದ್ದ ದರಕ್ಕಿಂತಲೂ ದುಪ್ಪಟ್ಟು ದರ ನಿಗದಿಪಡಿಸಿರುವ ಸರ್ಕಾರವು ಇದೊಂದೇ ಉಪಕರಣ ಖರೀದಿಯಲ್ಲಿ ಅಂದಾಜು 9.50 ಕೋಟಿ ರು. ಹೆಚ್ಚುವರಿ ಹೊರೆಗೆ ಕಾರಣವಾಗಿದೆ. ಕೆಟಿಪಿಪಿ ಕಾಯ್ದೆ ಕಲಂ 4(ಎ) ಅಡಿಯಲ್ಲಿ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಖರೀದಿಸಲು 2021ರ ಜುಲೈ 2ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪ್ರಕರಣ ವಿವರ

ಮುಂಬರುವ ದಿನಗಳಲ್ಲಿ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುವ ಸಂಭವ ಇದೆ ಎಂದು ಅಂದಾಜಿಸಿರುವ ಇಲಾಖೆಯು ತ್ವರಿತಗತಿಯಲ್ಲಿ ಪರೀಕ್ಷೆ ಮಾಡಿ ಸೋಂಕನ್ನು ಪತ್ತೆ ಮಾಡುವ ಸಲುವಾಗಿ 40 ಲಕ್ಷ ಕಿಟ್‌ಗಳನ್ನು ಖರೀದಿಸಲು ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಜೂನ್‌ 16ರಂದು ದರಪಟ್ಟಿ ಆಹ್ವಾನಿಸಿತ್ತು. ಈ ದರಪಟ್ಟಿಯಲ್ಲಿ ಭಾಗವಹಿಸಿದ್ದ ಕೆಲ ಕಂಪನಿಗಳು 40 ರು.ನಿಂದ 49 ರು.ವರೆಗೆ ದರ ನಮೂದಿಸಿದ್ದವು ಎಂದು ತಿಳಿದು ಬಂದಿದೆ.

ದರ ಪಟ್ಟಿ ಆಹ್ವಾನಿಸಿ ತಿಂಗಳು ಕಳೆದರೂ ಇನ್ನೂ ಅಂತಿಮಗೊಂಡಿಲ್ಲ ಎಂದು ನಿಗಮದ ಮೂಲಗಳು ತಿಳಿಸಿವೆ. ಈ ಮಧ್ಯೆ ಕಿಟ್‌ಗಳ ಸಂಖ್ಯೆಯನ್ನು 10 ಲಕ್ಷಕ್ಕೆ ಹೆಚ್ಚಿಸಿ ಮುಂದಿನ 90 ದಿನಗಳಿಗೆ ತಲಾ ಕಿಟ್‌ಗೆ 60.00 ರು.ನಂತೆ ಒಟ್ಟು 50 ಲಕ್ಷ ಕಿಟ್‌ಗಳನ್ನು 30.00 ಕೋಟಿ ರು. ವೆಚ್ಚದಲ್ಲಿ ಸಂಗ್ರಹಿಸಲು 2021ರ ಜುಲೈ 2ರಂದು ಆದೇಶ ಹೊರಡಿಸಿದೆ. ‘ಪರಿಕರವನ್ನು ಸಗಟು ಮಾರುಕಟ್ಟೆ ದರಕ್ಕಿಂತ ಕಡಿಮೆ/ಸಮಾನ ದರದಲ್ಲಿ ಇರುವುದನ್ನು ಖಚಿತಪಡಿಸಿಕೊಂಡು ಪಾರದರ್ಶಕವಾಗಿ ಸಂಗ್ರಹಿಸಬೇಕು,’ ಎಂದು ಆದೇಶದಲ್ಲಿ ಸೂಚಿಸಿರುವ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಕಿಟ್‌ವೊಂದಕ್ಕೆ 10 ರು. ಹೆಚ್ಚಳ ಮಾಡಿರುವುದು ಅಕ್ರಮ ನಡೆದಿದೆ ಎಂಬುದಕ್ಕೆ ನಿದರ್ಶನ ಒದಗಿಸಿದಂತಾಗಿದೆ.

2021ರ ಜೂನ್‌ 16ರಂದು ಕರೆದಿದ್ದ ದರಪಟ್ಟಿಯಲ್ಲಿ ಭಾಗವಹಿಸಿದ್ದ ಕಂಪನಿಗಳು ನಮೂದಿಸಿದ್ದ 49 ರು.ನಂತೆಯೇ 40 ಲಕ್ಷ ಕಿಟ್‌ಗಳನ್ನು ಖರೀದಿಸಿದ್ದರೆ 19.60 ಕೋಟಿ ರು. ವೆಚ್ಚವಾಗುತ್ತಿತ್ತು. ಆದರೆ ಈ ದರ ಪಟ್ಟಿಯನ್ನು ತಿಂಗಳು ಕಳೆದರೂ ಅಂತಿಮಗೊಳಿಸಿಲ್ಲ. ಬದಲಿಗೆ ಕಿಟ್‌ಗಳ ಸಂಖ್ಯೆಯನ್ನು 10 ಲಕ್ಷ ಸಂಖ್ಯೆಗೆ ಹೆಚ್ಚಳ ಮಾಡಲಾಗಿದೆ.

2021ರ ಜುಲೈ 2ರಂದು ಹೊರಡಿಸಿರುವ ಆದೇಶದಲ್ಲಿ ನಮೂದಿಸಿರುವ 60 ರು.ದರದ ಪ್ರಕಾರ 50 ಲಕ್ಷ ಕಿಟ್‌ಗಳ ಖರೀದಿಗೆ 30.00 ಕೋಟಿ ರು. ವೆಚ್ಚವಾಗಲಿದೆ. ಮೊದಲ ದರಪಟ್ಟಿಯಲ್ಲಿ ಕಂಪನಿಗಳು ನಮೂದಿಸಿದ್ದ 49 ರು.ನಂತೆಯೇ 50 ಲಕ್ಷ ಕಿಟ್‌ ಖರೀದಿಸಿದ್ದರೆ 24.50 ಕೋಟಿ ರು. ವೆಚ್ಚವಾಗುತ್ತಿತ್ತು. ಆದರೆ ಇಲಾಖೆಯು ನಿಗದಿಪಡಿಸಿರುವ 60 ರು.ನಂತೆ ಖರೀದಿಸಲು ಆದೇಶಿಸಿರುವ ಕಾರಣ 9.50 ಕೋಟಿ ರು. ಹೆಚ್ಚುವರಿ ದರ ಪಾವತಿಸಿದಂತಾಗುತ್ತದೆ.

ದರ ಹೆಚ್ಚಳಗೊಳಿಸಿ ಖರೀದಿಸಿರುವ ಪ್ರಕರಣ ಇದೇ ಮೊದಲೇನಲ್ಲ. ದರಪಟ್ಟಿ ಆಹ್ವಾನಿಸಿ ಅಂತಿಮಗೊಳಿಸದೆಯೇ ವಿಳಂಬ ಧೋರಣೆ ಅನುಸರಿಸಿ ಕಳೆದ ಮೇ ತಿಂಗಳಿನಲ್ಲೂ 14.75 ಕೋಟಿ ರು. ಹೆಚ್ಚುವರಿ ಹೊರೆಗೆ ಕಾರಣವಾಗಿತ್ತು.

14.75 ಕೋಟಿ ಹೆಚ್ಚುವರಿ ಹೊರೆ ಪ್ರಕರಣ

ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳ ಖರೀದಿ ಪ್ರಕ್ರಿಯೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ಅಧಿಕಾರಿಗಳು ಎಸಗಿರುವ ವಿಳಂಬ ದ್ರೋಹದಿಂದಾಗಿ ಬೊಕ್ಕಸಕ್ಕೆ 14.75 ಕೋಟಿ ರು. ಹೆಚ್ಚುವರಿ ಹೊರೆಯಾಗಿದೆ. ಈ ಹೊರೆಯನ್ನು ತಪ್ಪಿಸಲು ಎಲ್ಲಾ ರೀತಿಯ ಅವಕಾಶಗಳಿದ್ದರೂ ನಿಗಮದ ಅಧಿಕಾರಿಗಳ ಕಮಿಷನ್‌ ವ್ಯವಹಾರವೇ ಮೇಲುಗೈಯಾಗಿದ್ದರಿಂದ ಬೊಕ್ಕಸಕ್ಕೆ 14.75 ಕೋಟಿ ನಷ್ಟ ಭರಿಸಬೇಕಾಗಿದೆ.

ದರಪಟ್ಟಿಯಲ್ಲಿ ಭಾಗವಹಿಸಿದ್ದ ಕಂಪನಿಗಳು ಮಾಡಿದ್ದ ದರ ಹೆಚ್ಚಳವನ್ನು ತಪ್ಪಿಸಿ ಉತ್ತರ ಪ್ರದೇಶ ಸರ್ಕಾರ ಖರೀದಿಸಿದ್ದ ದರದಂತೆಯೇ ದರ ಸಂಧಾನ ಮಾಡಲು ಅಧಿಕಾರಿಗಳು ಮುಂದಾಗಿದ್ದರಾದರೂ ಕಡೆಯಲ್ಲಿ 2ನೇ ದರಪಟ್ಟಿಯನ್ನು ಅಂತಿಮಗೊಳಿಸಿ ಕಂಪನಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು.

ಉತ್ತರ ಪ್ರದೇಶ ಸರ್ಕಾರ ಖರೀದಿಸಿರುವ ದರದಲ್ಲಿಯೇ ಕಿಟ್‌ಗಳನ್ನು ಖರೀದಿಸಿದ್ದರೇ 20.70 ಕೋಟಿ ರು.ವೆಚ್ಚವಾಗುತ್ತಿತ್ತು. ಆದರೀಗ 83.77 ರು. ದರ ಪ್ರಕಾರ ಖರೀದಿಸಿರುವುದರಿಂದ 14.75 ಕೋಟಿಯಷ್ಟು ಹೆಚ್ಚುವರಿ ಹೊರೆ ಬಿದ್ದಿದೆ. ಇದಕ್ಕೆ ಮುಖ್ಯ ಪರಿವೀಕ್ಷಕ ಡಾ ಚಂದ್ರಮೋಹನ್‌ ಸೇರಿದಂತೆ ಹಲವು ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ.

ವಿಶೇಷವೆಂದರೆ ಮೊದಲ ಬಾರಿ ಆಹ್ವಾನಿಸಿದ್ದ ದರಪಟ್ಟಿಯಲ್ಲಿ ಭಾಗವಹಿಸಿದ್ದ ಇದೇ ಟ್ರಿವಿಟ್ರಾನ್‌ ಕಂಪನಿಯು ಕಿಟ್‌ವೊಂದಕ್ಕೆ 34.60 ರು. ನಮೂದಿಸಿ ಟ್ರಿವಿಟ್ರಾನ್‌ ಎಲ್‌ 2 ಆಗಿತ್ತು. ಎರಡನೇ ಬಾರ ಆಹ್ವಾನಿಸಿದ್ದ ದರಪಟ್ಟಿಯಲ್ಲಿಯೂ ಭಾಗವಹಿಸಿದ್ದ ಇದೇ ಕಂಪನಿಯು ಕಿಟ್‌ವೊಂದಕ್ಕೆ 83.77 ರು.ಗಳನ್ನು ನಮೂದಿಸಿ ಎಲ್‌ 2 ಅಗಿತ್ತು. ಮೊದಲ ದರಪಟ್ಟಿಯಲ್ಲಿ ಟ್ರಿವಿಟ್ರಾನ್‌ ಕಂಪನಿ ನಮೂದಿಸಿದ್ದ ದರದ ಪ್ರಕಾರ 10.38 ಕೋಟಿ ರು. ವೆಚ್ಚದಲ್ಲಿ ಕಿಟ್‌ಗಳನ್ನು ಖರೀದಿಸಬಹುದಾಗಿತ್ತು. ಆದರೆ ನಿಗಮದ ಅಧಿಕಾರಿಗಳ ವಿಳಂಬ ದ್ರೋಹದಿಂದಾಗಿ ಇದೇ ಕಂಪನಿ ಮಾಡಿದ್ದ ದರ ಹೆಚ್ಚಳವನ್ನು ಒಪ್ಪಿಕೊಂಡಿರುವ ಪರಿಣಾಮ 25.13 ಕೋಟಿ ರು.ವೆಚ್ಚ ಮಾಡಿದಂತಾಗಿದೆ. ಒಟ್ಟು 14.75 ಕೋಟಿಯಷ್ಟು ಹೆಚ್ಚುವರಿ ಹೊರೆ ಬಿದ್ದಂತಾಗಿದೆ.

ವಿಳಂಬ ದ್ರೋಹ-ಕಮಿಷನ್‌ ವ್ಯವಹಾರ ಹೀಗೆ ನಡೆದಿತ್ತು

30 ಲಕ್ಷ ಪರೀಕ್ಷೆ ನಡೆಸಲು ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಖರೀದಿಗಾಗಿ 2021ರ ಏಪ್ರಿಲ್‌ 6ರಂದು ಮೊದಲು ದರ ಪಟ್ಟಿ ಆಹ್ವಾನಿಸಿತ್ತು. ಆ ಸಂದರ್ಭದಲ್ಲಿ ಒಟ್ಟು 4 ಕಂಪನಿಗಳು ಭಾಗವಹಿಸಿದ್ದವು. ಸುದರ್ಶನ್‌ ಫಾರ್ಮಾ ತಲಾ ಟೆಸ್ಟ್‌ಗೆ 33.85 ರು. ನಮೂದಿಸಿತ್ತು. ಹಾಗೆಯೇ ಟ್ರಿವಿಟ್ರಾನ್‌ ಹೆಲ್ತ್‌ ಕೇರ್‌ ಪ್ರೈವೈಟ್‌ ಲಿಮಿಟೆಡ್‌ 34.60 ರು., ಓಸ್ಕರ್‌ 35.60 ರು., ಪಿ ಭೋಗಿಲಾಲ್‌ ಪ್ರೈವೈಟ್‌ ಲಿಮಿಟೆಡ್‌ 35.80 ರು ನಮೂದಿಸಿತ್ತು. ಇದರಲ್ಲಿ 33.85 ರು. ನಮೂದಿಸಿದ್ದ ಸುದರ್ಶನ್‌ ಫಾರ್ಮಾ ಕಂಪನಿಯು ಎಲ್‌-1 ಕಂಪನಿಯಾಗಿತ್ತು. ಎಲ್‌ 1 ಆಗಿ ಹೊರಹೊಮ್ಮಿದ್ದ ಕಂಪನಿಗೆ ಖರೀದಿ ಆದೇಶ ನೀಡಿದ್ದರೆ 10.15 ಕೋಟಿ ರು.ನಲ್ಲಿ 30 ಲಕ್ಷ ಟೆಸ್ಟ್‌ಗಳನ್ನು ನಡೆಸಬಹುದಿತ್ತು. ಆದರೆ ವೈದ್ಯಕೀಯ ಸರಬರಾಜು ನಿಗಮದ ಅಧಿಕಾರಿಗಳು ಈ ದರಪಟ್ಟಿಯನ್ನು ಅಂತಿಮಗೊಳಿಸಿರಲಿಲ್ಲ.

ಬದಲಿಗೆ 19 ದಿನಗಳ ಅಂತರದಲ್ಲೇ 2021ರ ಏಪ್ರಿಲ್‌ 25 ರಂದು 2ನೇ ಬಾರಿ ದರಪಟ್ಟಿ ಆಹ್ವಾನಿಸಲಾಗಿತ್ತು. ಎರಡನೇ ಬಾರಿ ಕರೆದಿದ್ದ ದರಪಟ್ಟಿಯಲ್ಲಿಯೂ 4 ಕಂಪನಿಗಳು ಭಾಗವಹಿಸಿದ್ದವು. ಆದರೆ ಈ ಹೊತ್ತಿಗೆ ಕಂಪನಿಗಳು ದುಪ್ಪಟ್ಟು ದರವನ್ನು ನಮೂದಿಸಿದ್ದವು. ಪಿ ಭೋಗಿಲಾಲ್‌ ಪ್ರೈವೈಟ್‌ ಲಿಮಿಟೆಡ್‌ ಟೆಸ್ಟ್‌ವೊಂದಕ್ಕೆ 81.64 ರು. ನಮೂದಿಸಿದ್ದರೆ ಟ್ರಿವಿಟ್ರಾನ್‌ ಹೆಲ್ತ್‌ ಕೇರ್‌ ಪ್ರೈವೈಟ್‌ ಲಿಮಿಟೆಡ್‌ 83.77 ರು., ಮೆರಿಲ್‌ ಕಂಪನಿಯು 89.06 ರು., ಸಿಪ್ಲಾ ಕಂಪನಿಯು 134.4 ರು. ನಮೂದಿಸಿತ್ತು. ಈ ಪೈಕಿ ಭೋಗಿಲಾಲ್‌ ಪ್ರೈವೈಟ್‌ ಲಿಮಿಟೆಡ್‌ ಕಂಪನಿಯು 81.64 ರು. ನಮೂದಿಸಿ ಎಲ್‌ 1 ಆಗಿ ಹೊರಹೊಮ್ಮಿತ್ತು.

ವಿಶೇಷವೆಂದರೆ ಮೊದಲ ಬಾರಿ ಕರೆದಿದ್ದ ದರಪಟ್ಟಿಯಲ್ಲಿ 35.84 ರು ನಮೂದಿಸಿದ್ದ ಭೋಗಿಲಾಲ್‌ ಕಂಪನಿಯು ಎಲ್‌- 4 ಆಗಿದ್ದರೆ 34.60 ರು. ನಮೂದಿಸಿದ್ದ ಟ್ರಿವಿಟ್ರಾನ್‌ ಕಂಪನಿಯು ಎಲ್‌ 2 ಆಗಿತ್ತು. 2ನೇ ಬಾರಿ ಕರೆದಿದ್ದ ದರಪಟ್ಟಿಯಲ್ಲಿಯೂ ಈ ಎರಡೂ ಕಂಪನಿಗಳು ಭಾಗವಹಿಸಿದ್ದವು. ಮೊದಲ ದರಪಟ್ಟಿಯಲ್ಲಿ ಎಲ್‌ 4 ಆಗಿದ್ದ ಭೋಗಿಲಾಲ್‌ ಕಂಪನಿಯು 2ನೇ ದರಪಟ್ಟಿಯಲ್ಲಿ 81.64 ರು. ನಮೂದಿಸಿ ಎಲ್‌ 1 ಆಗಿತ್ತು. ಟ್ರಿವಿಟ್ರಾನ್‌ ಕಂಪನಿಯು 83.77 ರು. ನಮೂದಿಸಿ ಎಲ್‌ 2 ಆಗಿತ್ತು.

ಮೊದಲ ಬಾರಿ ಕರೆದಿದ್ದ ದರಪಟ್ಟಿಯಲ್ಲಿ ಎಲ್‌ 1 ಆಗಿದ್ದ ಕಂಪನಿಯನ್ನು ಅಂತಿಮಗೊಳಿಸಿ ಖರೀದಿ ಆದೇಶ ನೀಡಿದಿದ್ದರೆ 30 ಲಕ್ಷ ಟೆಸ್ಟ್‌ಗಳಿಗೆ 10.15 ಕೋಟಿ ರು.ವೆಚ್ಚವಾಗುತ್ತಿತ್ತು. ಅದರೆ ಅಧಿಕಾರಿಗಳು ಈ ಸಂಬಂಧ ಯಾವುದೇ ನಿರ್ಧಾರವನ್ನು ಕೈಗೊಳ್ಳಲಿಲ್ಲ. ಬದಲಿಗೆ 2ನೇ ಬಾರಿಗೆ ದರಪಟ್ಟಿಯನ್ನು ಆಹ್ವಾನಿಸಿತು. 2ನೇ ದರಪಟ್ಟಿಯಲ್ಲಿ ನಮೂದಾಗಿದ್ದ ಕಡಿಮೆ ದರ 81.64 ರು. ಪ್ರಕಾರ 30 ಲಕ್ಷ ಟೆಸ್ಟ್‌ಗಳಿಗೆ 24.49 ಕೋಟಿ ರು.ಆಗಲಿದೆ. ಮೊದಲ ಮತ್ತು ಎರಡನೇ ದರಪಟ್ಟಿಯಲ್ಲಿ ನಮೂದಿಸಿರುವ ಕಡಿಮೆ ದರದ ಪ್ರಕಾರ 14.33 ಕೋಟಿ ವ್ಯತ್ಯಾಸ ಕಂಡು ಬಂದಿತ್ತು.

ಈ ಮಧ್ಯೆ ಅಧಿಕಾರಿಗಳು 2021ರ ಮೇ 4ರಂದು ಮತ್ತೊಂದು ಸಭೆ ನಡೆಸಿದ್ದರು. ಈ ಸಭೆಯಲ್ಲಿಯೂ ಎರಡನೇ ದರಪಟ್ಟಿಯನ್ನು ಅಂತಿಮಗೊಳಿಸಲಿಲ್ಲ. ಬದಲಿಗೆ ಉತ್ತರ ಪ್ರದೇಶದಲ್ಲಿರುವ ದರದೊಂದಿಗೆ ಹೋಲಿಕೆ ಮಾಡಿದರು. ಉತ್ತರ ಪ್ರದೇಶದಲ್ಲಿ ಒಂದು ಟೆಸ್ಟ್‌ಗೆ 69.00 ರು. ನಿಗದಿಪಡಿಸಿರುವುದನ್ನು ಸಭೆಯಲ್ಲಿ ಚರ್ಚಿಸಿದ್ದಾರೆ. ಒಂದು ವೇಳೆ 69 ರು.ಗೆ ಕಂಪನಿಯನ್ನು ಒಪ್ಪಿಸಿದ್ದಲ್ಲಿ 30 ಲಕ್ಷ ಟೆಸ್ಟ್‌ಗಳಿಗೆ 20.70 ಕೋಟಿ ರು.ಗಳಾಗಲಿತ್ತು.

ಮೊದಲ ದರಪಟ್ಟಿಯಲ್ಲಿ ನಮೂದಿಸಿದ್ದ (33.85 ರು.) ದರದೊಂದಿಗೆ ಉತ್ತರಪ್ರದೇಶದ ದರ ಹೋಲಿಸಿದರೆ 30 ಲಕ್ಷ ಟೆಸ್ಟ್‌ಗಳಿಗೆ ಕಿಟ್‌ಗಳ ಖರೀದಿ ಮೊತ್ತದಲ್ಲಿ 10.54 ಕೋಟಿ ರು. ವ್ಯತ್ಯಾಸವಿರವುದು ಕಂಡು ಬಂದಿದೆ. ಅದೇ ರೀತಿ 2ನೇ ಬಾರಿ ದರಪಟ್ಟಿಯಲ್ಲಿ ನಮೂದಿಸಿದ್ದ ದರ (81.64 ರು.) ಪ್ರಕಾರ 3.79 ಕೋಟಿ ವ್ಯತ್ಯಾಸವಿತ್ತು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!