Tuesday | May 12, 2026 |

ಠೇವಣಿದಾರರಿಗೆ ವಂಚನೆ; ಕಣ್ವ ಸೊಸೈಟಿ ವಹಿವಾಟಿನ ದಾಖಲಾತಿಗಳೇ ಲಭ್ಯವಿಲ್ಲ!

ಬೆಂಗಳೂರು; ಸಾರ್ವಜನಿಕರ ಕೋಟ್ಯಾಂತರ ರುಪಾಯಿ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಲಿಮಿಟೆಡ್‌ನ ಅವ್ಯವಹಾರದ ಸ್ಪಷ್ಟ ಚಿತ್ರಣ ಇನ್ನೂ ದೊರೆತಿಲ್ಲ! ಹೀಗಾಗಿ ಠೇವಣಿದಾರರ ಹಿತರಕ್ಷಣೆ ಸದ್ಯಕ್ಕೆ ದೂರದ ಮಾತಾಗಿದೆ.

ಕಂಪನಿಯ ವ್ಯವಹಾರಗಳ ಕುರಿತು ಲೆಕ್ಕ ಪರಿಶೋಧನೆ ನಡೆದಿದ್ದರೂ ಸ್ಪಷ್ಟ ದಾಖಲಾತಿಗಳು ದೊರೆಯುತ್ತಿಲ್ಲ. ಕಂಪನಿಗೆ ಸಂಬಂಧಿಸಿದಂತೆ ಕಂಪ್ಯೂಟರ್‌ನಲ್ಲಿರುವ ದಾಖಲೆ ಹೊರತುಪಡಿಸಿ ಯಾವುದೇ ಲೆಡ್ಜರ್‌ಗಳು ಮತ್ತು ದಾಖಲಾತಿಗಳೇ ಲಭ್ಯವಿಲ್ಲ ಎಂಬ ಹೊಸ ಅಂಶ ಇದೀಗ ಬಹಿರಂಗಗೊಂಡಿದೆ.

ಕಣ್ವ ಸೌಹಾರ್ದ ಕೋ ಆಪರೇಟೀವ್‌ ಕ್ರೆಡಿಟ್‌ ಲಿಮಿಟೆಡ್‌ ಕಂಪನಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಮತ್ತು ಅವ್ಯವಹಾರಗಳ ಬಗ್ಗೆ ಸ್ಪಷ್ಟ ಚಿತ್ರಣ ಪಡೆಯುವ ಸಂಬಂಧ ವಿಧಿ ವಿಜ್ಞಾನ ಲೆಕ್ಕಪರಿಶೋಧನೆ (ಫೋರೆನ್ಸಿಕ್‌ ಆಡಿಟ್‌) ನಡೆಸಬೇಕು ಎಂದು ಕಂಪನಿಯ ಸಕ್ಷಮ ಪ್ರಾಧಿಕಾರಿ 2021ರ ಜೂನ್‌ 25ರಂದು ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ದೂಷಿತ ಕಂಪನಿಗೆ ಸಂಬಂಧಿಸಿದಂತೆ ಲೆಕ್ಕಪರಿಶೋಧನೆ ವಿಚಾರದಲ್ಲಿ ವಿಸ್ತೃತವಾದ ಚರ್ಚೆ ನಡೆದಿರುತ್ತದೆ. ಅದರಂತೆ ಸಭೆಯಲ್ಲಿ ಹಾಜರಿದ್ದ ತನಿಖಾಧಿಕಾರಿಗಳು ದೂಷಿತ ಸಂಸ್ಥೆಗೆ ಸಂಬಂಧಿಸಿದಂತೆ ಕೇವಲ ಕಂಪ್ಯೂಟರ್‌ನಲ್ಲಿ ಲಭ್ಯವಿರುವ ದಾಖಲೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಲೆಡ್ಜರ್‌ಗಳು ಮತ್ತು ದಾಖಲಾತಿಗಳು ಲಭ್ಯವಿರುವುದಿಲ್ಲವೆಂದು ತಗಿಳಿಸಿ ಫೋರೆನ್ಸಿಕ್‌ ಆಡಿಟ್‌ನಿಂದ ಮಾತ್ರ ಅವ್ಯವಹಾರದ ಸ್ಪಷ್ಟ ಚಿತ್ರಣ ದೊರೆಯಬಹುದು,’ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವುದು ಪತ್ರದಿಂದ ತಿಳಿದು ಬಂದಿದೆ.

ಈ ವಿಚಾರದಲ್ಲಿ ಸಕ್ಷಮ ಪ್ರಾಧಿಕಾರವು ಕೆಪಿಐಡಿ ಕಾಯ್ದೆ 2004ರ ಅನ್ವಯ ಠೇವಣಿದಾರರ ಹಿತರಕ್ಷಣೆಗಾಗಿ ತುರ್ತಾಗಿ ಕಾರ್ಯನಿರ್ವಹಿಸಬೇಕು. ಕಣ್ವ ಸೌಹಾರ್ದ ಕೋ ಆಪರೇಟಿವ್‌ ಕ್ರೆಡಿಟ್‌ ಲಿಮಿಟೆಡ್‌ ದೂಷಿತ ಕಂಪನಿಗೆ ಫೋರೆನ್ಸಿಕ್‌ ಆಡಿಟ್‌ ಕಾರ್ಯ ತುರ್ತಾಗಿ ನಡೆಸಬೇಕು ಎಂದು ಎಂದು ಪತ್ರದಲ್ಲಿ ಸಕ್ಷಮ ಪ್ರಾಧಿಕಾರಿ ಕೋರಿದ್ದಾರೆ.

“ಸೊಸೈಟಿ ಸದಸ್ಯರು ಮತ್ತು ಸಾರ್ವಜನಿಕರಿಂದ 2019ರ ಮಾರ್ಚ್‌ ವೇಳೆಗೆ ಸುಮಾರು 642.31 ಕೋಟಿ ರೂ.ಗಳನ್ನು ಠೇವಣಿ ರೂಪದಲ್ಲಿ ಸಂಗ್ರಹಿಸಿದೆ ಮತ್ತು ಹಲವು ಕಂಪನಿಗಳು ಮತ್ತು ಸಂಸ್ಥೆಗಳಿಗೆ 416 ಕೋಟಿ ರೂ. ಸಾಲ ನೀಡಿದೆ. ಆದರೆ ಆ ಸಾಲ ವಸೂಲಿಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಹಾಗಾಗಿ ಇಡೀ ವಹಿವಾಟಿನ ಬಗ್ಗೆ ಫೊರೆನ್ಸಿಕ್‌ ಆಡಿಟ್‌ ನಡೆಸಬೇಕು,’’ ಎಂದು ಅರ್ಜಿದಾರರು ಕೋರಿದ್ದನ್ನು ಸ್ಮರಿಸಬಹುದು.

ಸಾರ್ವಜನಿಕರ ಕೋಟ್ಯಾಂತರ ರುಪಾಯಿ ವಂಚಿಸಿರುವ ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಲಿಮಿಟೆಡ್’ನ ರೂ.255.17 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್.ನಂಜುಡಯ್ಯ ಮತ್ತವರ ಕುಟುಂಬಸ್ಥರಿಗೆ ಸೇರಿದ ಕೃಷಿ, ಕೃಷಿಯೇತರ ಭೂಮಿ, ಕಟ್ಟಡಗಳು, ರೆಸಾರ್ಟ್’ಗಳು, ಬ್ಯಾಂಕ್ ಖಾತೆಯಲ್ಲಿದ್ದ ಹಣ, ಸಂಸ್ಥೆಯ ಇತರ ನಿರ್ದೇಶಕರ ಹೆಸರಲ್ಲಿರುವ ಆಸ್ತಿ ಸೇರಿ ರೂ.255.17 ಕೋಟಿ ಮೌಲ್ಯದ ಆಸ್ತಿ-ಪಾಸ್ತಿ ಜಪ್ತಿ ಮಾಡಲಾಗಿದೆ.

ನಂಜುಂಡಯ್ಯ ಕುಟುಂಬಸ್ಥರ ಹೆಸರಿಲ್ಲಿಯೇ 160 ಚರ ಮತ್ತು ಸ್ಥಿರಾಸ್ತಿ ಇದ್ದು, ಇದನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ರಿಟರ್ನ್ ನೀಡುವಷ್ಟು ವಹಿವಾಟು ಅಥವಾ ಹಣದ ಹರಿವು ಇಲ್ಲದೇ ಇದ್ದರೂ ಹೂಡಿಕೆ ಮೇಲೆ ಹೆಚ್ಚಿನ ಬಡ್ಡಿ ಕೊಡುವುದಾಗಿ ಹೇಳಿ ರೂ.650 ಕೋಟಿಯನ್ನು ಕಣ್ವ ಸಂಗ್ರಹಿಸಿದೆ. ಆದರೆ, ಮೆಚ್ಯುರಿಟಿ ಬಳಿಕ ಠೇವಣಿ ಹಣ, ಬಡ್ಡಿ ಮರಳಿಸಿಲ್ಲ. ಸಾರ್ವಜನಿಕರು ಹೂಡಿಕೆ ಮಾಡಿದ ಹಣವನ್ನು ಸಾಲದ ರೂಪದಲ್ಲಿ ಬೇರೆಯವರಿಗೆ ವರ್ಗಾಯಿಸಿದ್ದಾರೆ.

ಮರುಪಾವತಿಗಳು ಮತ್ತು ಲಭ್ಯವಿರುವ ಸಂಪನ್ಮೂಲ ಸಾಮರ್ಥ್ಯ ಮೀರಿ ವಹಿವಾಟು ನಡೆಸಲಾಗಿದೆ. ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ವಹಿವಾಟು ನಡೆಸಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಇಡಿ ತಿಳಿಸಿತ್ತು.

ಶ್ರೀ ಕಣ್ವ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅವ್ಯವಹಾರ ಪ್ರಕರಣದಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಿಸಲು ಯಾವುದೇ ಕ್ರಮ ಕೈಗೊಳ್ಳದ ಸರಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್‌, ಸ್ವತಂತ್ರ ತನಿಖೆಗೆ ಆದೇಶಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!