Wednesday | April 22, 2026 |

ಯುವರಾಜಸ್ವಾಮಿ ಮನೆಯಲ್ಲಿದ್ದವು ನಿರಾಣಿ ಹೆಸರಿನ ಲೆಟರ್‌ಹೆಡ್‌ಗಳು; ಕಲ್ಪವೃಕ್ಷದ ಗುಟ್ಟೇನು?

ಬೆಂಗಳೂರು: ಬಿ ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ನಡೆದಿದ್ದ ಗದ್ದುಗೆ ಜಿದ್ದಿನಲ್ಲಿ ಸೆಣೆಸಿದ್ದ ಮುರುಗೇಶ್‌ ಆರ್‌ ನಿರಾಣಿ ಅವರೊಂದಿಗೆ ಯುವರಾಜಸ್ವಾಮಿ ಸಂಪರ್ಕವಿತ್ತು ಎಂಬ ಆರೋಪಗಳನ್ನು ಪುಷ್ಠೀಕರಿಸುವ ಅಂಶಗಳು ಇದೀಗ ಮುನ್ನೆಲೆಗೆ ಬಂದಿವೆ.

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ ಎಸ್‌ ಇಂದ್ರಕಲಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವರಾಜಸ್ವಾಮಿ ಮತ್ತು ಆತನ ಪತ್ನಿ ಪ್ರೇಮಾ ಅವರ ಬಳಿ ಇದ್ದ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದ ಸಿಸಿಬಿ ಪೊಲೀಸರು ಮುರುಗೇಶ್‌ ನಿರಾಣಿ ಅವರ ಹೆಸರಿನಲ್ಲಿದ್ದ ಲೆಟರ್‌ ಹೆಡ್‌ಗಳೂ ವಶಪಡಿಸಿಕೊಂಡಿದ್ದ ದಾಖಲಾತಿಗಳಲ್ಲಿ ಇದ್ದವು ಎಂದು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಿರುವುದು ತಿಳಿದು ಬಂದಿದೆ. ದೋಷಾರೋಪಣೆ ಪಟ್ಟಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕಲ್ಪವೃಕ್ಷ ಎಂದು ಇಂಗ್ಲೀಷ್‌ ಭಾಷೆಯಲ್ಲಿ ಬರೆದಿದ್ದ ಸ್ಪೈರಲ್‌ ಬೈಂಡಿಂಗ್‌ ಪುಸ್ತಕ ಮತ್ತು ಇದರ ಮುಖಪುಟದಲ್ಲಿ ಮುರುಗೇಶ್‌ ಆರ್‌ ನಿರಾಣಿ ಅವರ ಹೆಸರು ಮತ್ತು ಭಾವಚಿತ್ರವೂ ಇದೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ಒದಗಿಸಿದ್ದಾರೆ.

ಅದೇ ರೀತಿ ಮುರುಗೇಶ್‌ ಆರ್‌ ನಿರಾಣಿ ಹೆಸರಿನ ಲೆಟರ್‌ ಹೆಡ್‌ ಇರುವ 11 ಪತ್ರಗಳಲ್ಲಿ ಸಹಿ ಹಾಗೂ ಇಂಗ್ಲೀಷ್‌ ಭಾಷೆಯಲ್ಲಿ ಟೈಪಿಂಗ್‌ ಮತ್ತು ಬರವಣಿಗೆಗಳಿವೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಮಾಹಿತಿ ಒದಗಿಸಿರುವ ಪೊಲೀಸರು ಬರವಣಿಗೆಯಲ್ಲೇನಿತ್ತು , ಲೆಟರ್‌ ಹೆಡ್‌ಗಳಲ್ಲಿ ಯಾರ ಹೆಸರಿದ್ದವು ಎಂಬ ವಿವರಗಳನ್ನು ನಮೂದಿಸಿಲ್ಲ.

ವಂಚಕ ಯುವರಾಜಸ್ವಾಮಿ ಬಂಧನವಾದ ನಂತರ ಮುರುಗೇಶ್‌ ನಿರಾಣಿ ಅವರ ಹೆಸರೂ ತಳಕು ಹಾಕಿಕೊಂಡಿತ್ತು. ನಿರಾಣಿ ಅವರು ನಟಿ ರಾಧಿಕಾ ಕುಮಾರಸ್ವಾಮಿ ಅವರೊಂದಿಗಿದ್ದ ಭಾವಚಿತ್ರಗಳು ಹರಿದಾಡಿದ್ದವು. ರಾಧಿಕಾ ಕುಮಾರಸ್ವಾಮಿ ಅವರನ್ನು ನಿರಾಣಿ ಅವರಿಗೆ ಭೇಟಿ ಮಾಡಿಸಿದ್ದೇ ಯುವರಾಜಸ್ವಾಮಿ ಎಂಬ ಮಾತು ಕೇಳಿ ಬಂದಿತ್ತು. ಆ ಸಂದರ್ಭದಲ್ಲಿ ನಿರಾಣಿ ಅವರು ಈ ಮಾತನ್ನು ಅಲ್ಲಗಳೆದಿದ್ದರು.

ಯುವರಾಜ್‌ಸ್ವಾಮಿ ಅವರ ಮನೆಯಲ್ಲಿ ವಶಪಡಿಸಿಕೊಂಡಿದ್ದ ದಾಖಲಾತಿಗಳಲ್ಲಿ ನಿರಾಣಿ ಅವರ ಹೆಸರು ಇರುವ ಮತ್ತು ಸಹಿ ಇರುವ ಲೆಟರ್‌ಹೆಡ್‌ಗಳು ಇದ್ದವು ಎಂದು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ.

ರಾಜ್ಯಪಾಲರ ಹುದ್ದೆ, ರಾಜ್ಯಸಭೆ ಸದಸ್ಯತ್ವ, ಬಿಎಂಟಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ರಾಜಕೀಯ ಸ್ಥಾನಮಾನ, ಸರಕಾರಿ ಹುದ್ದೆಗಳು, ಕಾಲೇಜುಗಳಲ್ಲಿ ಸೀಟ್‌ಗಳನ್ನು ಕೊಡಿಸುವುದಾಗಿ ನಂಬಿಸಿ ಹಲವರಿಂದ ಕೊಟ್ಯಂತರ ರೂ. ಹಣ ಪಡೆದ ಆರೋಪ ಯುವರಾಜಸ್ವಾಮಿ ಮೇಲಿದೆ.

Hot this week

ಕೆಎಸ್‌ಆರ್‍‌ಪಿ, ಐಆರ್‍‌ಬಿ ಘಟಕಗಳಲ್ಲಿ ಆರ್ಡರ್ಲಿ ಜೀವಂತ!; ಕಮಾಂಡೆಂಟ್‌ಗಳಿಂದ ಹಣ ವಸೂಲಿ, ರಾಜಭವನ ಮೆಟ್ಟಿಲೇರಿದ ದೂರು

ಬೆಂಗಳೂರು; ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಎಲ್ಲಾ ಘಟಕಗಳು ಮತ್ತು ಇಮಡಿಯಾ...

4,102.27 ಕೋಟಿ ರು ಮೊತ್ತಕ್ಕೆ ಬಳಕೆ ಪ್ರಮಾಣ ಪತ್ರ ವಿವರಗಳಿಲ್ಲ, ಕ್ರೆಡಿಟ್‌ ರೇಟಿಂಗ್‌ ಕುಸಿತವಾದರೂ ಎಚ್ಚರವಿಲ್ಲ, ಅಡವಿರಿಸಿದ್ದ ಸ್ವತ್ತುಗಳನ್ನೂ ಹಿಂಪಡೆದಿಲ್ಲ

ಬೆಂಗಳೂರು;  ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ  ಬೃಹತ್ ಬೆಂಗಳೂರು ಮಹಾನಗರಪಾಲಿಕೆಗೆ ವಿವಿಧ...

ಮುಕ್ತ ವಿವಿ ಕುಲಪತಿಗೆ ವಿಶೇಷ ವಿನಾಯಿತಿಯ ನಿರಂಕುಶ ಅಧಿಕಾರ?; ಸರ್ಕಾರದ ಕೆಂಗಣ್ಣಿಗೆ ಮತ್ತೆ ಗುರಿಯಾದ ರಾಜ್ಯಪಾಲ!

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ ಶರಣಪ್ಪ ವಿ...

Topics

ಮುಕ್ತ ವಿವಿ ಕುಲಪತಿಗೆ ವಿಶೇಷ ವಿನಾಯಿತಿಯ ನಿರಂಕುಶ ಅಧಿಕಾರ?; ಸರ್ಕಾರದ ಕೆಂಗಣ್ಣಿಗೆ ಮತ್ತೆ ಗುರಿಯಾದ ರಾಜ್ಯಪಾಲ!

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ ಶರಣಪ್ಪ ವಿ...

300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌ ಬ್ಯಾಲೆನ್ಸ್‌; ಲೆಕ್ಕ ಪರಿಶೋಧಕರಿಗೇ ದಾಖಲೆ ನೀಡದ ಜಿಬಿಎ, ಇಷ್ಟೊಂದು ಅಶಿಸ್ತೇ?

ಬೆಂಗಳೂರು; ವಿವಿಧ ಬ್ಯಾಂಕ್‌ಗಳಲ್ಲಿ  300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌...

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ...

ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ...

Related Articles

Popular Categories

error: Content is protected !!