Sunday | April 12, 2026 |

ರಾಜ್ಯಪಾಲರಾಗಲು ಬಯಸಿದ್ದ ಇಂದ್ರಕಲಾರಿಗೆ ರಾಕ್‌ಲೈನ್‌ ವೆಂಕಟೇಶ್‌ರಿಂದಲೂ 50 ಲಕ್ಷ ನೆರವು

ಬೆಂಗಳೂರು; ರಾಜ್ಯಪಾಲ ಹುದ್ದೆಯ ಆಮಿಷಕ್ಕೊಳಗಾಗಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದ ಬಿ ಎಸ್‌ ಇಂದ್ರಕಲಾ ಅವರಿಗೆ ಖ್ಯಾತ ಸಿನಿಮಾ ನಿರ್ಮಾಪಕ ಹಾಗೂ ನಟ ರಾಕ್‌ಲೈನ್‌ ವೆಂಕಟೇಶ್‌ ಕೂಡ ಒಟ್ಟು 50 ಲಕ್ಷ ರು.ಗಳನ್ನು ನೀಡಿದ್ದರು ಎಂಬುದು ಇದೀಗ ಬಹಿರಂಗವಾಗಿದೆ.

ಗಣ್ಯರು ಮತ್ತು ಪ್ರಭಾವಿಗಳಿಗೆ ಕೋಟ್ಯಂತರ ರು ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿ ಜೈಲಿನಲ್ಲಿರುವ ಯುವರಾಜಸ್ವಾಮಿ ಅವರ ವಿರುದ್ಧದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ರಾಕ್‌ಲೈನ್‌ ವೆಂಕಟೇಶ್‌ ಅವರಿಂದಲೂ ಸಾಕ್ಷ್ಯ ಹೇಳಿಕೆ ಪಡೆದಿರುವುದು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ದೋಷಾರೋಪಣೆ ಪಟ್ಟಿಯಿಂದ ತಿಳಿದು ಬಂದಿದೆ. ದೋಷಾರೋಪಣೆ ಪಟ್ಟಿಯ ದೃಢೀಕೃತ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಯುವರಾಜ್‌ರವರಿಗೆ ಅತೀ ತುರ್ತಾಗಿ 25,00,000 ಲಕ್ಷ ರು. ಹಣ ಕೊಡಬೇಕಾಗಿರುವುದರಿಂದ 25,00,000 ರು.ಗಳನ್ನು ಕೇಳಿದ ಮೇರೆಗೆ ಉದ್ದೇಶದಿಂದ ಮೇಡಂರವರಿಗೆ ನೀಡಿರುತ್ತೇನೆ,’ ಎಂದು ರಾಕ್‌ಲೈನ್‌ ವೆಂಕಟೇಶ್‌ ಅವರು ಸಾಕ್ಷ್ಯ ಹೇಳಿಕೆ ನೀಡಿರುವುದು ದೋಷಾರೋಪಣೆ ಪಟ್ಟಿಯಿಂದ ತಿಳಿದು ಬಂದಿದೆ.

25 ಲಕ್ಷ ರು.ಗಳನ್ನು ನಗದು ನೀಡುವ ಮುನ್ನ ಜನತಾ ಸೇವಾ ಕೋ ಆಪರೇಟೀವ್‌ ಬ್ಯಾಂಕ್‌ನ ಮಹಾಲಕ್ಷ್ಮಿಪುರಂನಲ್ಲಿನ ಶಾಖೆಯಲ್ಲಿ ರಾಕ್‌ಲೈನ್‌ ಎಂಟರ್‌ಟೈನ್‌ಮೆಂಟ್ ಹೆಸರಿನಲ್ಲಿ ಹೊಂದಿದ್ದ ಖಾತೆ (004110100000357) ಮೂಲಕ 2018ರ ಆಗಸ್ಟ್‌ 21ರಂದು ಐಸಿಐಸಿಐ ಬ್ಯಾಂಕ್‌ನಲ್ಲಿದ್ದ (369501500327) ಖಾತೆಗೆ 25 ಲಕ್ಷ ರು.ಗಳನ್ನು ಆರ್‌ಟಿಜಿಎಸ್‌ ಮೂಲಕ ಹಣ ವರ್ಗಾವಣೆ ಮಾಡಿದ್ದರು ಎಂಬ ಸಂಗತಿ ಗೊತ್ತಾಗಿದೆ.

ರಾಕ್‌ಲೈನ್‌ ವೆಂಕಟೇಶ್‌ ಅವರ ಸೋದರಿ ಪರಿಮಳ ಅವರು ಇಂದ್ರಕಲಾ ಅವರ ಸ್ನೇಹಿತೆ. ಇವರ ಮೂಲಕ ರಾಕ್‌ಲೈನ್‌ ವೆಂಕಟೇಶ್‌ ಅವರು ಹೊಂದಿದ್ದ ಜನತಾ ಸೇವಾ ಕೋ ಆಪರೇಟೀವ್‌ ಬ್ಯಾಂಕ್‌ನಲ್ಲಿದ್ದ ರಾಕ್‌ಲೈನ್‌ ಎಂಟರ್‌ಟೈನ್‌ಮೆಂಟ್‌ ಹೆಸರಿನಲ್ಲಿದ್ದ ಖಾತೆಯಿಂದ 25 ಲಕ್ಷ ರು.ಗಳನ್ನು ಆರೋಪಿ ಯುವರಾಜ್‌ ಹೆಸರಿನಲ್ಲಿದ್ದ ಖಾತೆಗೆ ಇಂದ್ರಕಲಾ ಅವರು ಹಣವನ್ನು ವರ್ಗಾವಣೆ ಮಾಡಿಸಿದ್ದರು ಎಂಬುದು ತಿಳಿದು ಬಂದಿದೆ.

ನಿವೃತ್ತ ಎಸ್‌ ಪಿ ಪಾಪಯ್ಯ ಎಂಬುವರ ಮೂಲಕ 2018ರಲ್ಲಿ ನಿವೃತ್ತ ನ್ಯಾಯಮೂರ್ತಿ ಇಂದ್ರಕಲಾ ಅವರನ್ನು ಪರಿಚಯಿಸಿಕೊಂಡಿದ್ದ ಯುವರಾಜಸ್ವಾಮಿ ‘ನೀವು ಕೇಂದ್ರ ಸರ್ಕಾರದ ಮಟ್ಟದಲ್ಲಿ ಉನ್ನತ ಹುದ್ದೆ ಪಡೆಯುತ್ತೀರಾ,’ ಎಂದು ಭವಿಷ್ಯ ಹೇಳಿದ್ದ. ಆ ಮೂಲಕ ಅವರಲ್ಲಿ ಆಸೆ ಹುಟ್ಟಿಸಿದ್ದ ಯುವರಾಜಸ್ವಾಮಿ ಪಾರ್ಟಿ ಫಂಡ್‌ಗಾಗಿ ಹಣ ನೀಡಬೇಕು ಎಂದು ತಿಳಿಸಿ ಅವರಿಂದ ಹಂತ ಹಂತವಾಗಿ 3,77,50,002 ರು.ಗಳನ್ನು ಬ್ಯಾಂಕ್‌ನ ವಿವಿಧ ಖಾತೆಗಳ ಮೂಲಕ ಪಡೆದುಕೊಂಡಿದ್ದ.

ಈ ಪೈಕಿ ಇಂದ್ರಕಲಾ ಅವರ ಸ್ನೇಹಿತರಾದ ಸುನೀತಾ ಅವರ ಖಾತೆಯಿಂದ 25,00,00 ರು.ಗಳನ್ನು ಪರಿಮಳ ಎಂಬುವರ ಖಾತೆಯಿಂದ 25,00,000 ರು.ಗಳನ್ನು ಯುವರಾಜಸ್ವಾಮಿ ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದ ಎಂಬ ಮಾಹಿತಿ ದೋಷಾರೋಪಣೆ ಪಟ್ಟಿಯಲ್ಲಿದೆ.

ಅಲ್ಲದೆ ಇಂದ್ರಕಲಾ ಅವರ ಸ್ನೇಹಿತರು, ಹಿತೈಷಿಗಳು ಮತ್ತು ಸಹದ್ಯೋಗಿಗಳಿಂದ 4,50,00,000 ರು.ಗಳನ್ನು ನಗದು ರೂಪದಲ್ಲಿ ಪಡೆದಿದ್ದನಲ್ಲದೆ ಅವರ ಸ್ನೇಹಿತರಾಗಿದ್ದ ನಾಗರಬಾವಿಯ ವಿನಯ್‌ ಎಂಬುವರಿಂದಲೂ 30,00,000 ರು.ಗಳನ್ನು ಪಡೆದಿದ್ದ ಎಂಬುದು ದೋಷಾರೋಪಣೆ ಪಟ್ಟಿಯಿಂದ ತಿಳಿದು ಬಂದಿದೆ.

Hot this week

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

Topics

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

Related Articles

Popular Categories

error: Content is protected !!