Wednesday | March 25, 2026 |

ಪ್ರಮೋದ್‌ ಮಧ್ವರಾಜ್‌ ಖಾತೆಯಿಂದ ಯುವರಾಜಸ್ವಾಮಿ ಖಾತೆಗೆ 90 ಲಕ್ಷ ರು. ಸಂದಾಯ

Support THE-FILE

spot_img

ಬೆಂಗಳೂರು; ಗಣ್ಯಾತಿಗಣ್ಯರಿಗೆ ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿ ಜೈಲಿನಲ್ಲಿರುವ ಯುವರಾಜಸ್ವಾಮಿ ಹೊಂದಿರುವ ಬ್ಯಾಂಕ್‌ ಖಾತೆಗೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ  ಖಾತೆಯಿಂದ ಒಟ್ಟು 90 ಲಕ್ಷ ರು. ಸಂದಾಯವಾಗಿರುವುದು ತಿಳಿದು ಬಂದಿದೆ.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್‌ ಗಾರ್ಡನ್‌ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ ಲಗತ್ತಿಸಿರುವ ಬ್ಯಾಂಕ್‌ ಖಾತೆಯ ವಹಿವಾಟಿನ ದಾಖಲೆಯಲ್ಲಿ ಹಣ ಸಂದಾಯವಾಗಿರುವುದು ನಮೂದಾಗಿದೆ. ದೋಷಾರೋಪಣೆ ಪಟ್ಟಿಯ ದೃಢೀಕೃತ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಮಾಜಿ ಸಚಿವ ಬಿ ಶ್ರೀರಾಮುಲು ಅವರು ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗೆ ಯುವರಾಜಸ್ವಾಮಿಯು 18 ಲಕ್ಷ ರು. ಸಂದಾಯ ಮಾಡಿರುವ ವಿಚಾರ ಬಹಿರಂಗವಾದ ಬೆನ್ನಲ್ಲೇ ಪ್ರಮೋದ್‌ ಮಧ್ವರಾಜ್‌ ಅವರ ಖಾತೆಯಿಂದ 90 ಲಕ್ಷ ರು. ಸಂದಾಯವಾಗಿರುವ ಬ್ಯಾಂಕ್‌ ವಹಿವಾಟಿನ ದಾಖಲೆಗಳು ಮುನ್ನೆಲೆಗೆ ಬಂದಿವೆ.

2020ರ ಜನವರಿ 10, 13, 17 ಮತ್ತು 2020ರ ಫೆಬ್ರುವರಿ 24ರಂದು ಪ್ರಮೋದ್‌ ಮಧ್ವರಾಜ್‌ ಅವರ ಖಾತೆಯಿಂದ (ಖಾತೆ ಸಂಖ್ಯೆ; SYNBH20010144813, SYNBH20010155024, SYNBH200131192232, SYNBH20017250240, SYNBH20055752271) ಯುವರಾಜಸ್ವಾಮಿಯು ಕರ್ನಾಟಕ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗೆ (ಖಾತೆ ಸಂಖ್ಯೆ; 5502000100052301) ಒಟ್ಟು 90 ಲಕ್ಷ ರು., ಆರ್‌ಟಿಜಿಎಸ್‌ ಮೂಲಕ ಸಂದಾಯವಾಗಿರುವುದು ಬ್ಯಾಂಕ್‌ ಖಾತೆಯ ವಹಿವಾಟಿನಿಂದ ಗೊತ್ತಾಗಿದೆ.

2020ರ ಜನವರಿ 10ರಂದು SYNBH20010144813 ಖಾತೆಯಿಂದ 25 ಲಕ್ಷ ಮತ್ತು SYNBH20010155024 ಖಾತೆಯಿಂದ 10 ಲಕ್ಷ ರು. ವರ್ಗಾವಣೆಯಾಗಿದೆ.

 

2020ರ ಜನವರಿ 13ರಂದು SYNBH200131192232 ಖಾತೆಯಿಂದ 25 ಲಕ್ಷ, 2020ರ ಜನವರಿ 17ರಂದು SYNBH20017250240 ಖಾತೆಯಿಂದ 20 ಲಕ್ಷ ರು. ವರ್ಗಾವಣೆಯಾಗಿದೆ.

2020ರ ಫೆಬ್ರುವರಿ 24ರಂದು SYNBH20055752271 ಖಾತೆಯಿಂದ 10 ಲಕ್ಷ ರು. ಯುವರಾಜಸ್ವಾಮಿ ಖಾತೆಗೆ ಸಂದಾಯವಾಗಿರುವುದು ಬ್ಯಾಂಕ್‌ ಖಾತೆಯ ವಹಿವಾಟಿನಿಂದ ತಿಳಿದು ಬಂದಿದೆ.

ಪ್ರಮೋದ್‌ ಮಧ್ವರಾಜ್‌ ಅವರನ್ನು ‘ದಿ ಫೈಲ್‌’ ಸಂಪರ್ಕಿಸಲಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಳಿದಾಗ  ಈ ವಿಷಯ ಸಬ್‌ ಜುಡಿಸ್‌ ಆಗಿರುತ್ತದೆ ಎಂದು ಪ್ರಮೋದ್‌ ಮಧ್ವರಾಜ್ ಅವರು ತಿಳಿಸಿರುತ್ತಾರೆ. ಫೈಲ್‌ ಪರವಾಗಿ ಯಾವ ವಿಷಯದ ಬಗ್ಗೆ ಕೇಳುತ್ತಿದ್ದೀರಿ ಎಂದು ನನಗೆ ಗೊತ್ತಿದೆ, ವಿಷಯ ಸಬ್‌ ಜುಡಿಸ್‌ ಎಂದಷ್ಟೇ ಪ್ರತಿಕ್ರಿಯಿಸಿದರು.

36 ಸೆಕೆಂಡಿನ ಸಂಭಾಷಣೆಯಲ್ಲೇನಿದೆ?
(ಆಗಸ್ಟ್‌ 2, 2021ರ ರಾತ್ರಿ 10.20ಕ್ಕೆ)

ದಿ ಫೈಲ್‌; ನಾನ್‌ ಮಹಂತೇಶ್‌ ಅಂತ್ಹೇಳಿ ದಿ ಫೈಲ್‌ ವೆಬ್‌ಸೈಟಿಂದ ಮಾತಾಡ್ತಿರೋದು

ಪ್ರಮೋದ್‌ ಮಧ್ವರಾಜ್‌; ಎಲ್ಲಿಂದ?

ದಿ ಫೈಲ್‌; ದಿ ಫೈಲ್‌ ವೆಬ್‌ಸೈಟಿಂದ

ಪ್ರಮೋದ್‌ ಮಧ್ವರಾಜ್‌; ಹೂಂ

ದಿ ಫೈಲ್‌; ಒಂದು ಸ್ಟೋರಿಗೆ ಒಪಿನಿಯನ್‌ ಬೇಕಾಗಿತ್ತು, ಅದಕ್ಕೆ ನಿಮ್ಮನ್ನೇ ಕೇಳ್ಕೊಂಡು ಬರೆಯೋಣ ಅಂತ ಕಾಲ್‌ ಮಾಡಿದ್ದು ನಿಮಗೆ…

ಪ್ರಮೋದ್‌ ಮಧ್ವರಾಜ್‌; ಅದು ಸಬ್‌ ಜುಡಿಸ್‌ ಇದೆ, ಐ ಡೋಂಟ್‌ ವಾಟ್‌ ಟು ಕಮೆಂಟ್‌

ದಿ ಫೈಲ್‌; ಯಾವ ವಿಚಾರ ಹೇಳಿ ಸಾರ್‌

ಪ್ರಮೋದ್‌ ಮಧ್ವರಾಜ್‌; ಫೈಲ್‌ನವರು ಏನ್‌ ಮಾಡ್ತೀರಿ ಅಂತ ಗೊತ್ತಿದೆ. ಅದ್ರ ಬಗ್ಗೆ ಹೇಳ್ತೀದಿನಿ

ದಿ ಫೈಲ್‌; ನಿಮಗೆ ವಿಷಯಾನೇ ಹೇಳಿಲ್ಲ ಸಾರ್‌ ನಿಮಗೀಗ…

ಪ್ರಮೋದ್‌ ಮಧ್ವರಾಜ್‌; ನನಗೆ ಗೊತ್ತಿದೆ…ನೀವ್‌ ಏನ್ ಕೇಳ್ತೀರಿ ಅಂತ ಅದಕ್ಕೆ ಐ ಡೋಂಟ್‌ ವಾಂಟ್‌ ಟು ಕಮೆಂಟ್‌

ದಿ ಫೈಲ್‌; ಯುವರಾಜಸ್ವಾಮಿ ಅವರಿಗೆ..

ಪ್ರಮೋದ್‌ ಮಧ್ವರಾಜ್‌; ಈ ಡೋಂಟ್‌ ವಾಂಟ್‌ ಟು ಕಮೆಂಟ್‌……. ಥ್ಯಾಂಕ್ಯು ಯು

ಇನ್ನು, ಬಿ ಶ್ರೀರಾಮುಲು ಅವರ ಖಾತೆಗೆ ಯುವರಾಜಸ್ವಾಮಿ ಖಾತೆಯಿಂದ ಒಟ್ಟು 13 ಲಕ್ಷ ರು. ಸಂದಾಯವಾಗಿದ್ದನ್ನು ಸ್ಮರಿಸಬಹುದು. ಯುವರಾಜಸ್ವಾಮಿಯು ಕರ್ನಾಟಕ ಬ್ಯಾಂಕ್‌ನಲ್ಲಿ ಹೊಂದಿದ್ದ ಖಾತೆಯಿಂದ (ಖಾತೆ ಸಂಖ್ಯೆ; 5502000100052301) ಬಿ ಶ್ರೀರಾಮುಲು ಖಾತೆಗೆ (ಖಾತೆ ಸಂಖ್ಯೆ; KARBH19210399488) 2019ರ ಜುಲೈ 29ರಂದು 5 ಲಕ್ಷ ಹಾಗೂ 2019ರ ಆಗಸ್ಟ್‌ 1ರಂದು 13 ಲಕ್ಷ ರು. (ಖಾತೆ ಸಂಖ್ಯೆ ;KARBH19213654613) ಆರ್‌ಟಿಜಿಎಸ್‌ ಮೂಲಕ ಹಣ ವರ್ಗಾವಣೆ ಆಗಿರುವುದು ದೋಷಾರೋಪಣೆ ಪಟ್ಟಿಯಲ್ಲಿ ಲಗತ್ತಿಸಿರುವ ಬ್ಯಾಂಕ್‌ನ ವಹಿವಾಟಿನ ದಾಖಲೆಯಿಂದ ತಿಳಿದು ಬಂದಿತ್ತು.

Hot this week

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Topics

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

Related Articles

Popular Categories

error: Content is protected !!