Tuesday | July 21, 2026 |

ಅಮಿತ್‌ ಶಾ ಉದ್ಘಾಟಿಸಿದ ಕಾರ್ಯಕ್ರಮಗಳಿಗೆ 89. 46 ಲಕ್ಷ ರು. ಜಾಹೀರಾತು ವೆಚ್ಚ

ಬೆಂಗಳೂರು; ಪೊಲೀಸ್‌ ಗೃಹ 2025 ಯೋಜನೆಗೆ ಚಾಲನೆ, ಬಹುಮಹಡಿ ಪೊಲೀಸ್‌ ವಸತಿ ಗೃಹಗಳ ಉದ್ಘಾಟನೆ, ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್‌ಎಎಫ್‌) ಆಡಳಿತ ಕಚೇರಿ ಸ್ಥಾಪನೆಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಒಟ್ಟು 89.46 ಲಕ್ಷ ರು.ಗಳನ್ನು ಜಾಹೀರಾತಿಗೆ ಖರ್ಚು ಮಾಡಿದೆ.

ಇದೇ ಸೆಪ್ಟಂಬರ್‌ ತಿಂಗಳಲ್ಲಿ ದಾವಣಗೆರೆಯಲ್ಲಿರುವ ಪೊಲೀಸ್‌ ಪಬ್ಲಿಕ್‌ ಸ್ಕೂಲ್‌ ಉದ್ಘಾಟನೆ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳ ಉದ್ಘಾಟನೆಗೆ ಅಮಿತ್‌ ಶಾ ಅವರು ಭೇಟಿ ನೀಡುತ್ತಿರುವ ಬೆನ್ನಲ್ಲೇ 2021ರ ಜನವರಿ 18ರಂದು ಆಗಮಿಸಿದ್ದ ಸಂದರ್ಭದಲ್ಲಿ ಜಾಹೀರಾತಿಗೆ ಖರ್ಚು ಮಾಡಿದ್ದ ವೆಚ್ಚದ ವಿವರವು ಮುನ್ನೆಲೆಗೆ ಬಂದಿದೆ.

2021ರ ಜನವರಿ 18ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅಮಿತ್‌ ಶಾ ಅವರು ಪೊಲೀಸರ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕುರಿತು  ಪತ್ರಿಕಾ ಜಾಹೀರಾತನ್ನು ನೇರವಾಗಿ ಏಜೆನ್ಸಿಗಳಿಗೆ ಬಿಡುಗಡೆ ಮಾಡಿತ್ತು ಎಂದು ತಿಳಿದು ಬಂದಿದೆ. ಬಹುವರ್ಣದಲ್ಲಿ ಒಳಪುಟಗಳಲ್ಲಿ ಪ್ರಕಟವಾಗುವ ಜಾಹೀರಾತುಗಳಿಗೆ ಶೇ.25ರಷ್ಟು ಹೆಚ್ಚುವರಿ ದರ ಅನ್ವಯವಾಗಿತ್ತು.

ಜಾಹೀರಾತು ಸಂಸ್ಥೆಗಳಿಗೆ ಪಾವತಿಸಿರುವ ಮೊತ್ತದ ವಿವರ

ಎಂ ಸಿ ಎ ಬೆಂಗಳೂರು – 19, 66, 277 ರು.

ಆಡ್ವಿಟ್‌ ಇಂಡಿಯಾ ಬೆಂಗಳೂರು- 13, 06, 286 ರು.

ಬ್ರಾಂಜ್‌ ಕಮ್ಯುನಿಕೇಷನ್‌ ಬೆಂಗಳೂರು 9, 63, 850 ರು.

ಶ್ರೇಷ್ಠ ಕಮ್ಯುನಿಕೇಷನ್‌ ಬೆಂಗಳೂರು- 6, 50, 890 ರು.

ಯಕ್ಷಿ ಕಮ್ಯುನಿಕೇಷನ್‌ ಬೆಂಗಳೂರು – 5, 50, 805 ರು.

ಝೇಂಕಾರ್‌ ಅಡ್ವರ್ಟೈಸಿಂಗ್‌ ಬೆಂಗಳೂರು – 1, 64, 850 ರು.

ಝೇಂಕಾರ್‌ ಅಡ್ವರ್ಟೈಸಿಂಗ್‌ ಬೆಂಗಳೂರು – 1, 64, 850 ರು.

ಫೋರ್‌ ವಿಂಡ್ಸ್‌ ಮಾಸ್‌ ಕಮ್ಯುನಿಕೇಷನ್ಸ್‌ – 5, 34, 114 ರು.

ಆವಂತಿ ಅಡ್ವರ್ಟೈಸಿಂಗ್‌ ಬೆಂಗಳೂರು – 5, 98, 182 ರು.

ಸ್ಪಾನ್‌ ಕಮ್ಯುನಿಕೇಷನ್‌ ಬೆಂಗಳೂರು – 5, 34, 773 ರು.

ಆಕಾರ್‌ ಅಡ್ವರ್ಟೈಸಿಂಗ್‌ ಬೆಂಗಳೂರು – 13, 07, 773 ರು.

ರಾಜ್ಯ ಬಿಜೆಪಿ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬಕ್ಕೆ ಪತ್ರಿಕೆಗಳ ಪ್ರಾಯೋಜಿತ ಪುರವಣಿಗಳಿಗೆ 44.85 ಲಕ್ಷ ರು.ಗಳನ್ನು ವೆಚ್ಚ ಮಾಡಿದ್ದನ್ನು ಸ್ಮರಿಸಬಹುದು.

ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ, ಆಟೋ ಚಾಲಕರು, ತರಕಾರಿ, ಹೂ ಬೆಳೆಗಾರರು, ನೇಕಾರರು, ಸವಿತಾ ಸಮಾಜ, ವಲಸೆ ಕಟ್ಟಡ ಕಾರ್ಮಿಕರು ಸೇರಿದಂತೆ ಇನ್ನಿತರರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡದ ಸರ್ಕಾರ ಅಮಿತ್‌ ಶಾ ಕಾರ್ಯಕ್ರಮಗಳ ಜಾಹೀರಾತಿಗೆ 89 ಲಕ್ಷ ರು. ಖರ್ಚು ಮಾಡಿರುವುದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

Hot this week

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...
Please Scan to make Your Contribution

Topics

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!