Saturday | March 21, 2026 |

ಉದ್ಧಟತನ; ಅಕ್ರಮ ನಡೆದಿಲ್ಲವೆಂದು ವಾಸ್ತವಾಂಶಗಳ ಮರೆಮಾಚಿದರೇ ಪರಿಷತ್‌ ಕಾರ್ಯದರ್ಶಿ?

Support THE-FILE

spot_img

ಬೆಂಗಳೂರು; ಪರಿಷತ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಲವು ಅಕ್ರಮಗಳಿಗೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಬರೆದಿದ್ದ ಪತ್ರ ಮತ್ತು ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದ ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ಉದ್ಧಟತನದ ವರ್ತನೆ ತೋರಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ವಾಸ್ತವಾಂಶಗಳನ್ನು ಮರೆಮಾಚಿ ಯಾವ ಅಕ್ರಮವೂ ನಡೆದಿಲ್ಲ ಎಂದು ಬಿಂಬಿಸುವಂತಹ ವರದಿ ನೀಡಿ ಕೈತೊಳೆದುಕೊಂಡಿದ್ದಾರೆ!

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟವಾಗಿ ಬಸವರಾಜ ಹೊರಟ್ಟಿ ಅವರು 2021ರ ಆಗಸ್ಟ್‌ 10ರಂದು ಬರೆದಿದ್ದ ಪತ್ರಕ್ಕೆ ಮಹಾಲಕ್ಷ್ಮಿ ಅವರು 2021ರ ಆಗಸ್ಟ್‌ 13ರಂದು ಉತ್ತರಿಸಿದ್ದಾರೆ. ಆದರೆ ಈ ಉತ್ತರವೂ ಅಸಮರ್ಪಕವಾಗಿದೆ ಎಂದು ಗೊತ್ತಾಗಿದೆ.

ಹೊರಟ್ಟಿ ಅವರು ಕೇಳಿರುವ ಪ್ರತಿ ಪ್ರಶ್ನೆಗೂ ಹಾರಿಕೆ ಉತ್ತರ ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಮಹಾಲಕ್ಷ್ಮಿ ಅವರು ‘ಎಲ್ಲಾ ಕಡತಗಳು ಮತ್ತು ದಾಖಲೆಗಳು ತಮ್ಮ ಬಳಿಯೇ ಇವೆ’ ಎಂದು ಉತ್ತರಿಸಿ ನುಣುಚಿಕೊಂಡಿದ್ದಾರೆ. ಅವ್ಯವಹಾರ, ಅಕ್ರಮ ಸೇರಿದಂತೆ ಇನ್ನಿತರೆ ಪ್ರಕರಣಗಳ ಸಂಬಂಧ ಪ್ರತಿ ಕಡತಗಳೂ ಆಡಳಿತ ಮುಖ್ಯಸ್ಥರಾದ ಕಾರ್ಯದರ್ಶಿಗಳ ಬಳಿಯೇ ಇರುತ್ತವೆ. ಆದರೂ ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ತಮ್ಮ ಬಳಿ ಯಾವ ಕಡತಗಳೂ ಇಲ್ಲ, ಎಲ್ಲವೂ ತಮ್ಮ ಬಳಿಯೇ ಇವೆ. ಅವುಗಳನ್ನು ಪರಾಮರ್ಶಿಸಬಹುದು ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ.

ಹಲವು ಪ್ರಕರಣಗಳ ಕುರಿತು ಸಭಾಪತಿ ಹೊರಟ್ಟಿ ಅವರು ವರದಿ ಕೇಳಿದ್ದರೇ ಕೇವಲ ದಾಖಲೆಗಳನ್ನು ಸಲ್ಲಿಸಿರುವ ಕಾರ್ಯದರ್ಶಿ ನಡೆ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ’48 ಲಕ್ಷ ರು. ನಷ್ಟ ಮತ್ತು ಸ್ವಜನ ಪಕ್ಷಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ಕಡತವನ್ನು ಸಲ್ಲಿಸಲಾಗಿರುತ್ತದೆ. ಹಾಗೂ ತಾವು 2021ರ ಜುಲೈ 22ರ ಟಿಪ್ಪಣಿಯನ್ನು 2021ರ ಜುಲೈ 23ರಂದು ಸ್ವೀಕೃತವಾಗಿದ್ದನ್ನು ಆ ದಿನವೇ ಈ-ಮೈಲ್‌ ಮೂಲಕ ತಮಗೆ ಮಾಹಿತಿಯನ್ನು ನೀಡಿರುತ್ತೇನೆ. ಹಾಗೂ 2021ರ ಜುಲೈ 24ರಂದು ನಾಲ್ಕನೇ ಶನಿವಾರ ಶಾಸಕರ ಭವನದ ಕಚೇರಿಗೆ ಬಂದು ಖುದ್ದಾಗಿ ದಾಖಲೆಗಳನ್ನು ಸಲ್ಲಿಸಿರುತ್ತೇನೆ. ನಾನು ಸಲ್ಲಿಸಿರುವ ದಾಖಲೆಗಳು ಕಡತದಲ್ಲಿ ಲಭ್ಯವಿದ್ದು ತಾವು ಪರಾಮರ್ಶಿಸಬಹುದಾಗಿದೆ,’ ಎಂದು ಉತ್ತರಿಸಿರುವುದು ಕಾರ್ಯದರ್ಶಿಯ ಪತ್ರದಿಂದ ತಿಳಿದು ಬಂದಿದೆ.

ಹಳಿ ತಪ್ಪಿದ ಆಡಳಿತ; ಸಭಾಪತಿ ಆದೇಶಗಳ ಪಾಲಿಸದೇ ಅಗೌರವ ತೋರಿದ ಕಾರ್ಯದರ್ಶಿ

ಆರ್ಥಿಕ ನೀತಿ ಸಂಹಿತೆ ಉಲ್ಲಂಘನೆ ಕುರಿತಂತೆ ಉತ್ತರ ನೀಡಿರುವ ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ‘ಸಭಾಪತಿ ಅವರ ಅನುಮೋದನೆಯೊಂದಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಿಯೋನಿಕ್ಸ್‌ ಸಂಸ್ಥೆಯಿಂದ ನೇಮಕ ಮಾಡಿಕೊಳ್ಳಲಾಗಿತ್ತು. ತಮ್ಮ ಅನುಮೋದನೆ ಪಡೆದು ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಈ ಸಂಬಂಧದ ಕಡತವು (ಕಡತ ಸಂಖ್ಯೆ; ಕವಿಪ/1/12/ಅಇಮಾ/2020) ತಮ್ಮ ಕಚೇರಿಯಲ್ಲಿದೆ. ಇದನ್ನು ಹಿಂದಿರುಗಿಸಿದ್ದಲ್ಲಿ ಸಂಪೂರ್ಣ ಮಾಹಿತಿ ನೀಡುತ್ತೇನೆ,’ ಎಂದು ಉತ್ತರಿಸಿದ್ದಾರೆ.

ಪರಿಷತ್‌ನ ನೌಕರರು ಎರಡು ಸರ್ಕಾರಿ ಸ್ವಾಮ್ಯದ ವಸತಿ ಗೃಹಗಳನ್ನು ಪಡೆದಿರುವುದಕ್ಕೆ ಸಂಬಂಧಿಸಿದಂತೆ ಅನುಪಾಲನ ವರದಿ ನೀಡದಿರುವುದಕ್ಕೆ ಉತ್ತರಿಸಿರುವ ‘ವಿಳಂಬಕ್ಕೆ ಸೂಕ್ತ ವಿವರಣೆಯೊಂದಿಗೆ ಕೂಡಲೇ ಕಡತವನ್ನು ಸಲ್ಲಿಸಲು ಆಧೀನ ಕಾರ್ಯದರ್ಶಿಗೆ ಸೂಚಿಸಿರುತ್ತೇನೆ,’ ಎಂದು ಉತ್ತರಿಸಿರುವುದು ಪತ್ರದಿಂದ ಗೊತ್ತಾಗಿದೆ.

ಚರ್ಚಾ ಸಂಪಾದಕರ ಹುದ್ದೆಯಿಂದ ಮುಖ್ಯ ಚರ್ಚಾ ಸಂಪಾದಕರ ಹುದ್ದೆಗೆ ಪದನ್ನೋತಿ ನೀಡುವ ಸಂಬಂಧ ಕಡತವನ್ನು ಪರಿಶೀಲಿಸಿ ವರದಿ ಸಲ್ಲಿಸಲು 3 ದಿನಗಳ ಕಾಲಾವಕಾಶ ನೀಡಲು ಕೋರಿರುವುದು ತಿಳಿದು ಬಂದಿದೆ.

ಧರ್ಮೇಗೌಡರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸದನ ಸಮಿತಿಯು ನೀಡಿರುವ ಮಧ್ಯಂತರ ವರದಿಯು ಸದನಕ್ಕೆ ಸೀಮಿತವಾಗಿರುತ್ತದೆ. ಆದರೂ ಕಡತವನ್ನು ಪುನಃ ಸಲ್ಲಿಸಲಾಗುತ್ತದೆ ಎಂದು ಉತ್ತರಿಸಿದ್ದಾರೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!