ಬಜೆಟ್‌; ಸಿ ಎಂ ಜತೆ ಸಂವಾದಕ್ಕೂ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು ಪಾವತಿ

ಬೆಂಗಳೂರು; 2021-22ನೇ ಸಾಲಿನ ಆಯವ್ಯಯ ವಿಶ್ಲೇಷಣೆ ಕುರಿತು ಮುಖ್ಯಮಂತ್ರಿಯಾಗಿದ್ದ ಬಿ ಎಸ್‌ ಯಡಿಯೂರಪ್ಪ ಅವರೊಂದಿಗೆ ಸಂವಾದ ನಡೆಸಿದ್ದ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು.ಗಳನ್ನು ಪಾವತಿಸಿರುವುದು ಇದೀಗ ಬಹಿರಂಗವಾಗಿದೆ. ಬಜೆಟ್‌ ಮಂಡಿಸಿದ ನಂತರ ಸುದ್ದಿವಾಹಿನಿಗಳು ಮುಖ್ಯಮಂತ್ರಿಯೊಂದಿಗೆ ಸಂವಾದ ನಡೆಸುವುದು ವಾಡಿಕೆ. ಆದರೆ ಈ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರವು 38.97 ಲಕ್ಷ ರು. ವೆಚ್ಚ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಅಲ್ಲದೆ 2020-21ರನೇ ಸಾಲಿನ ಆಯವ್ಯಯ ಮಂಡಿಸಿದಾಗಲೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಅನುಷ್ಠಾನಗೊಳಿಸಿರುವ ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿಯೊಂದಿಗೆ 30 ನಿಮಿಷದ ವಿಶೇಷ ಸಂವಾದ … Continue reading ಬಜೆಟ್‌; ಸಿ ಎಂ ಜತೆ ಸಂವಾದಕ್ಕೂ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು ಪಾವತಿ