Tuesday | March 24, 2026 |

ಬಾಬರಿ ಮಸೀದಿ ಚಿತ್ರ; ಪಿಎಫ್‌ಐ ಕಾರ್ಯಕರ್ತರ ವಿರುದ್ಧ ಚಾರ್ಜ್‌ಶೀಟ್‌ಗೆ ಪೂರ್ವಾನುಮತಿ

Support THE-FILE

spot_img

ಬೆಂಗಳೂರು; 6 ಡಿಸೆಂಬರ್‌ 1992 ಮಸ್ಜಿದ್‌ ಧ್ವಂಸಗೊಳಿಸಲಾಯಿತು, 9 ನವೆಂಬರ್‌ 2019 ನ್ಯಾಯ ನಿರಾಕರಿಸಲಾಯಿತು, ನೆನಪು ಮೊದಲ ಪ್ರತಿರೋಧ ಎಂದು ಮಸೀದಿ ಗೋಡೆ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಬರೆದು ಕೋಮು ಭಾವನೆ ಕೆರಳಿಸಿ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವ ಅಪರಾಧ ಕೃತ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಪಿಎಫ್‌ಐ ಸಂಘಟನೆಯ ನೌಷಾದ್‌ ಸೇರಿದಂತೆ ಒಟ್ಟು 8 ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲು ರಾಜ್ಯ ಬಿಜೆಪಿ ಸರ್ಕಾರ ಪೂರ್ವಾನುಮತಿ ನೀಡಿದೆ.

ಕರ್ನಾಟಕ ಮುಕ್ತ ಸ್ಥಳಗಳು (ವಿರೂಪಗೊಳಿಸುವಿಕೆ ತಡೆ) ಕಾಯಿದೆ 1951 ಮತ್ತು 1981 ಕಾಯ್ದೆಯ ಕಲಂ 3 ರ ಅನ್ವಯ ಆರೋಪಿಗಳ ವಿರುದ್ಧ ಐಪಿಸಿ ಕಲಂ 153(ಎ) 120(ಬಿ), 505 (2), 295(ಎ) ಅಡಿಯಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲು 2021ರ ಸೆಪ್ಟಂಬರ್‌ 7ರಂದು ಪೂರ್ವಾನುಮತಿ ನೀಡಿ ಆದೇಶಿಸಿದೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲು ಪೊಲೀಸ್‌ ಮಹಾನಿರ್ದೇಶಕರು ಪೂರ್ವಾನುಮತಿ ಕೋರಿ 2021ರ ಏಪ್ರಿಲ್‌ 7ರಂದು ಗೃಹ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನಾಧರಿಸಿ ಗೃಹ ಇಲಾಖೆಯು ಪೂರ್ವಾನುಮತಿ ನೀಡಿ ಆದೇಶಿಸಿದೆ. ಅಮಾಯಕರನ್ನು ರೌಡಿ ಪಟ್ಟಿಯಿಂದ ತೆಗೆಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆ ಬೆನ್ನಲ್ಲೇ ಪಿಎಫ್‌ಐ ಕಾರ್ಯಕರ್ತರ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲು ಪೂರ್ವಾನುಮತಿ ನೀಡಿರುವ ಆದೇಶ ಮುನ್ನೆಲೆಗೆ ಬಂದಿದೆ.

ಈ ಪ್ರಕರಣದಲ್ಲಿ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಎನ್ನಲಾಗಿರುವ ಮಂಗಳೂರು ನಗರದ ಶಾಂತಿನಗರದ ನೌಷಾದ್‌ ಮೊದಲ ಆರೋಪಿಯನ್ನಾಗಿಸಲಾಗಿತ್ತು. ಉಳಿದಂತೆ ಮೂಡುಶೆಡ್ಡೆ ಗ್ರಾಮದ ಮೊಹಮ್ಮದ್‌ ಇಕ್ಬಾಲ್‌, ಎದರುಪದವು ರಜಾಕ್, ಸೈಫುಲ್ಲಾ, ರಫೀಕ್‌, ಮೊಹಮ್ಮದ್‌ ಹನೀಫ್‌, ಮುಸ್ತಾಫ, ಅಬ್ದುಲ್‌ ರಫೀಕ್‌ ಸೇರಿ ಒಟ್ಟು 8 ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲು ಪೂರ್ವಾನುಮತಿ ನೀಡಿರುವುದು ಆದೇಶದಿಂದ ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ

ಮಂಗಳೂರು ನಗರದ ಮೂಡುಶೆಡ್ಡೆಯ ಮಸೀದಿ ಗೋಡೆ, ಕಾವೂರ ಜಂಕ್ಷನ್‌ ಬಳಿ ಇರುವ ಭಂಡಾರಿ ಬಿಲ್ಡಿಂಗ್‌ ಗೋಡೆ, ಶಾಂತಿನಗರ ಬಸ್‌ ಸ್ಟ್ಯಾಂಡ್‌ ಗೋಡೆ ಪಿಲ್ಲರ್‌, ಕೊಳೂರು ಫ್ಲೈಓವರ್‌ ಪಿಲ್ಲರ್‌ ಮತ್ತು ಸಾರ್ವಜನಿಕ ಸ್ಥಳದ ಗೋಡೆ ಮೆಲೆ ಅಯೋಧ್ಯೆ ಬಾಬರಿ ಮಸೀದಿ ವಿಚಾರದಲ್ಲಿ ಸಾರ್ವಜನಿಕರಿಗೆ ಭಯ ಉಂಟಾಗುವ ರೀತಿಯಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ಆದೇಶವನ್ನು ಪ್ರಶ್ನಿಸಿದ್ದರು ಎಂಬ ಆರೋಪಕ್ಕೆ ಆರೋಪಿಗಳು ಗುರಿಯಾಗಿದ್ದರು.

‘ಮಸೀದಿ ಗೋಡೆ ಸೇರಿದಂತೆ ಇನ್ನಿತರೆ ಸ್ಥಳಗಳ ಮೇಲೆ ಮೂರು ಗುಂಬಜ್‌ (ಗೋಪುರ)ಗಳನ್ನು ಹೊಂದಿರುವ ಬಾಬರಿ ಮಸೀದಿ ಚಿತ್ರವಿದ್ದು, ನಾವು ಮರೆಯದಿರೋಣ 6 ಡಿಸೆಂಬರ್‌ 1992 ಮಸ್ಜಿದ್‌ ಧ್ವಂಸಗೊಳಿಸಲಾಯಿತು, 9 ನವೆಂಬರ್‌ 2019 ನ್ಯಾಯ ನಿರಾಕರಿಸಲಾಯಿತು, ನೆನಪು ಮೊದಲ ಪ್ರತಿರೋಧ ಎಂದು ಬರೆಯಲಾಗಿತ್ತು. ಈ ಪೋಸ್ಟರ್‌ನ ಕೊನೆಯಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಎಂದು ಬರೆಯಲಾಗಿತ್ತು,’ ಎಂದು ಪ್ರಸ್ತಾವನೆಯಲ್ಲಿ ಹೇಳಲಾಗಿದೆ.

ಅದೇ ರೀತಿ LEST WE FORGET, 6 DECEMBER 1992 Masjid was Demolished , 9 November2019 Justice is Denied, MEMORY IS THE FIRST DEFENCE ಎಂದು ಪ್ರಿಂಟ್‌ ಮಾಡಿತ್ತು. ಇದು ಬೇರೆ ಬೇರೆ ಧರ್ಮಗಳ ನಡುವೆ ಕೋಮು ಭಾವನೆಗಳನ್ನು ಕೆರಳಿಸುವ ರೀತಿಯಲ್ಲಿ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವ ಅಪರಾಧ ಕೃತ್ಯ ನಡೆಸುವ ಉದ್ದೇಶವಿತ್ತು. ಹಿಂದೂ ಧರ್ಮದ ಧಾರ್ಮಿಕ ನಂಬಿಕೆಗೆ ಅವಮಾನ ಮಾಡುವ ಸಂಚು ರೂಪಿಸಲಾಗಿತ್ತು.

ಇದರ ಭಾಗವಾಗಿ 2019ರ ಡಿಸೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಅಯೋಧ್ಯೆ ಬಾಬರಿ ಮಸೀದಿ ವಿಚಾರದಲ್ಲಿ ನೀಡಿದ್ದ ತೀರ್ಪಿನ ಆದೇಶವನ್ನು ಪ್ರಶ್ನಿಸುವ ಬಗ್ಗೆ ಸಾರ್ವಜನಿಕರಿಗೆ ಭಯ ಉಂಟಾಗುವ ರೀತಿಯಲ್ಲಿ ಇದನ್ನು ಪ್ರಿಂಟ್‌ ಮಾಡಿಸಿ ಅಂಟಿಸಿರುವ ಆರೋಪಗಳಿಗೆ ತನಿಖೆಯಿಂದ ಹಾಗೂ ಸಾಕ್ಷ್ಯಾಧಾರಗಳು ಸಂಗ್ರಹವಾಗಿವೆ ಎಂದು ಪ್ರಸ್ತಾವನೆಯಲ್ಲಿ ವಿವರಿಸಲಾಗಿತ್ತು.

ಅಲ್ಲದೆ ಬಾಬರಿ ಮಸೀದಿ ವಿಷಯಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ ನೀಡಿದ್ದ ತೀರ್ಪನ್ನು ವಿರೋಧಿಸಿ ಹಿಂದೂ ಧರ್ಮೀಯರನ್ನು ಕೆರಳಿಸುವಂತೆ ವಿವಾದಾಸ್ಪದ ಹೇಳಿಕೆಗಳನ್ನು ಕರಪತ್ರಗಳ ಮೇಲೆ ಮುದ್ರಿಸಲಾಗಿತ್ತು. ಇದು ಸಾರ್ವಜನಿಕರ ಗಮನಕ್ಕೆ ಬರುವಂತೆ ಸಾರ್ವಜನಿಕ ಸ್ಥಳವಾದ ಮಸೀದಿ ಕಾಂಪೌಂಡ್‌ ಗೋಡೆ ಹೊರಭಾಗಕ್ಕೆ ಅಂಟಿಸಿ ಧರ್ಮ ಧರ್ಮಗಳ ನಡುವೆ ಸಂಘರ್ಷಕ್ಕೆಡೆ ಮಾಡುವಂತೆ ಕೃತ್ಯವೆಸಗಿರುವ ಆರೋಪವು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಪ್ರಸ್ತಾವನೆಯಲ್ಲಿ ಹೇಳಿರುವುದು ನಡವಳಿಯಿಂದ ತಿಳಿದು ಬಂದಿದೆ.

Hot this week

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

Topics

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Related Articles

Popular Categories

error: Content is protected !!