Wednesday | April 1, 2026 |

ಪಿಂಚಣಿ, ನಿವೃತ್ತಿ ಸೌಲಭ್ಯದ ಮೇಲೆ ಕಣ್ಣು;1.28 ಲಕ್ಷ ಕೋಟಿ ಅನುತ್ಪಾದಕ ವೆಚ್ಚ ಕಡಿತ!

Support THE-FILE

spot_img

ಬೆಂಗಳೂರು; ಒಕ್ಕೂಟ ಸರ್ಕಾರವು ಬಾಕಿ ಉಳಿಸಿಕೊಂಡಿರುವ ಜಿಎಸ್‌ಟಿ ಮೊತ್ತದ ಬಿಡುಗಡೆಗೆ ಒತ್ತಡ ಹೇರಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಹೊರಗುತ್ತಿಗೆ, ದಿನಗೂಲಿ ನೌಕರರ ವೇತನ ಸೇರಿದಂತೆ ಒಟ್ಟು 6 ವಿಭಾಗಗಳಲ್ಲಿನ 1.28 ಲಕ್ಷ ಕೋಟಿ ರು. ಮೊತ್ತದ ಅನುತ್ಪಾದಕ ವೆಚ್ಚವನ್ನು ಕಡಿತಗೊಳಿಸಲು ಮುಂದಾಗಿದೆ.

ಇದಕ್ಕೆ ಪೂರಕವಾಗಿ ಒಂದೇ ಉದ್ದೇಶವಿರುವ ರಾಜ್ಯ ಸರ್ಕಾರದ ಯೋಜನೆಗಳನ್ನು ಕೇಂದ್ರ ಸರ್ಕಾರದ ಯೋಜನೆಗಳೊಂದಿಗೆ ಸಮೀಕರಣ ಮಾಡಿ ಸಿಬ್ಬಂದಿ ಸಂಖ್ಯೆ ಕಡಿತಗೊಳಿಸಿ ನಿರ್ವಹಣೆ ವೆಚ್ಚಗಳನ್ನು ಕಡಿಮೆಗೊಳಿಸಲು ಉದ್ದೇಶಿಸಿದೆ. ಇದರಲ್ಲಿ ಪಿಂಚಣಿ, ನಿವೃತ್ತಿ ನಂತರದ ಸೌಲಭ್ಯಗಳೂ ಸೇರಿವೆ. ಸಂಪನ್ಮೂಲ ಕ್ರೋಢೀಕರಣದಲ್ಲಿ ಹಿಂದೆ ಬಿದ್ದಿರುವ ರಾಜ್ಯ ಬಿಜೆಪಿ ಸರ್ಕಾರವು ಅನುತ್ಪಾದಕ ವೆಚ್ಚಗಳ ಕಡಿಮೆಗೊಳಿಸುವ ನೆಪದಲ್ಲಿ ಪಿಂಚಣಿ ಮತ್ತು ನಿವೃತ್ತಿ ನಂತರದ ಸೌಲಭ್ಯಗಳಿಗೂ ಕತ್ತರಿ ಹಾಕಲು ಹೊರಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿರವಿಕುಮಾರ್‌ ಅವರು ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ 2021ರ ಸೆಪ್ಟಂಬರ್‌ 2ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ರಾಜ್ಯದ ಒಟ್ಠಾರೆ ಆಯವ್ಯಯ 2,46,206,92 ಕೋಟಿ ರು.ಗಳ ಪೈಕಿ 1,17,287,80 ಕೋಟಿ ರು. ಉತ್ಪಾದಕತೆ ಆಯವ್ಯಯ ಮತ್ತು 1,28,919.13 ಕೋಟಿ ರು. ಅನುತ್ಪಾದಕ ವೆಚ್ಚ ಎಂದು ಸರ್ಕಾರವು ಲೆಕ್ಕ ಹಾಕಿದೆ. ಉತ್ಪಾದಕತೆಯು ಶೇ. 48ರಷ್ಟಿದ್ದರೆ ಅನುತ್ಪಾದಕ ವೆಚ್ಚವು ಶೇ.52ರಷ್ಟಿದೆ ಎಂಬುದು ಮುಖ್ಯ ಕಾರ್ಯದರ್ಶಿಗಳು ಬರೆದಿರುವ ಪತ್ರದಿಂದ ತಿಳಿದು ಬಂದಿದೆ.

‘ಕನಿಷ್ಠ ಶೇ.5ರಷ್ಟು ಅನುತ್ಪಾದಕ ವೆಚ್ಚಗಳನ್ನು ಕಡಿಮೆಗೊಳಿಸಲು ಕ್ರಮ ಜರುಗಿಸಬೇಕು. ಒಂದೇ ಉದ್ದೇಶವಿರುವ ರಾಜ್ಯ ಸರ್ಕಾರದ ಯೋಜನೆಗಳನ್ನು ಕೇಂದ್ರ ಸರ್ಕಾರದ ಯೋಜನೆಗಳೊಂದಿಗೆ ಸಮೀಕರಣವನ್ನು ಮಾಡಿದರೆ ನಿರ್ವಹಣೆ ವೆಚ್ಚಗಳನ್ನು ಹಾಗೂ ಸಿಬ್ಬಂದಿಗಳ ಸಂಖ್ಯೆಯನ್ನು ಆದಷ್ಟು ಮಟ್ಟಿಗೆ ಕಡಿಮೆಗೊಳಿಸಬಹುದಾಗಿದೆ,’ ಎಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಸೂಚಿಸಿದ್ದಾರೆ.

ಹೊರಗುತ್ತಿಗೆ, ದಿನಗೂಲಿ ವೇತನ 5157783.58 ಲಕ್ಷ ರು., (ಶೇ.20.95) ಪಿಂಚಣಿ ಮತ್ತು ನಿವೃತ್ತಿ ಭತ್ಯೆ 2421183.74 ಲಕ್ಷ ರು.(ಶೇ.9.83) ಆಡಳಿತಾತ್ಮಕ ವೆಚ್ಚ 229568.65 ಲಕ್ಷ (ಶೇ.0.93), ನಿರ್ವಹಣಾ ವೆಚ್ಚ 404877.12 ಲಕ್ಷ (ಶೇ.1.64), ಸಾಲ ಸೇವೆ 4959949.00 ಲಕ್ಷ (ಶೇ. 20.15), ಆಂತರಿಕ ಖಾತೆಗಳ ವರ್ಗಾವಣೆ 28149.48 ಲಕ್ಷ (ಶೇ.-1.14) ರು.ಅನುತ್ಪಾದಕ ವೆಚ್ಚವೆಂದು ಸರ್ಕಾರವು ಗುರುತಿಸಿರುವುದು ಮುಖ್ಯ ಕಾರ್ಯದರ್ಶಿಗಳ ಪತ್ರದಿಂದ ಗೊತ್ತಾಗಿದೆ.

ಅನುತ್ಪಾದಕ ವೆಚ್ಚಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸಮಾನಾಂತರ ಉದ್ದೇಶವಿರುವ ರಾಜ್ಯ ವಲಯ ಯೋಜನೆಗಳನ್ನು ಕೇಂದ್ರದ ಪುರಸ್ಕೃತ ಯೋಜನೆಗಳಿಗೆ ಸಮೀಕರಿಸಿದಲ್ಲಿ ರಾಜ್ಯದ ಬೊಕ್ಕಸಕ್ಕೆ ಉಳಿತಾಯವಾಗಲಿದೆ ಎಂದು ಪತ್ರದಲ್ಲಿ ಸೂಚಿಸಲಾಗಿದೆ.

ಅದೇ ರೀತಿ ವಿದ್ಯಾರ್ಥಿವೇತನ ಇನ್ನಿತರೆ ಸೌಲಭ್ಯ 91732.65 ಲಕ್ಷ (ಶೇ.20.95), ಸಬ್ಸಿಡಿ (1571377.22 ಲಕ್ಷ (ಶೆ.6.38), ಇನ್ನಿತರೆ ಯೋಜನಾ ವೆಚ್ಚ 10065670.00 ಲಕ್ಷ ರು. (ಶೇ.40.88) ಸೇರಿದಂತೆ ಒಟ್ಟು 1, 17, 287.80 ಕೋಟಿ ರು. ಉತ್ಪಾದಕ ವೆಚ್ಚವೆಂದು ಸರ್ಕಾರ ಹೇಳಿದೆ.

Hot this week

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ; ವರ್ಷವಾದರೂ ಇಲಾಖೆಗಳಿಂದ ಬಾರದ ಮಾಹಿತಿ, ಅಧಿಸೂಚನೆಗೂ ಕಿಮ್ಮತ್ತಿಲ್ಲ, ನೆನಪೋಲೆಯ ಕಾಲಹರಣ

ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174...

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

Topics

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174...

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

Related Articles

Popular Categories

error: Content is protected !!