Thursday | September 17, 2026 |

ಪಿಂಚಣಿ, ನಿವೃತ್ತಿ ಸೌಲಭ್ಯದ ಮೇಲೆ ಕಣ್ಣು;1.28 ಲಕ್ಷ ಕೋಟಿ ಅನುತ್ಪಾದಕ ವೆಚ್ಚ ಕಡಿತ!

ಬೆಂಗಳೂರು; ಒಕ್ಕೂಟ ಸರ್ಕಾರವು ಬಾಕಿ ಉಳಿಸಿಕೊಂಡಿರುವ ಜಿಎಸ್‌ಟಿ ಮೊತ್ತದ ಬಿಡುಗಡೆಗೆ ಒತ್ತಡ ಹೇರಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಹೊರಗುತ್ತಿಗೆ, ದಿನಗೂಲಿ ನೌಕರರ ವೇತನ ಸೇರಿದಂತೆ ಒಟ್ಟು 6 ವಿಭಾಗಗಳಲ್ಲಿನ 1.28 ಲಕ್ಷ ಕೋಟಿ ರು. ಮೊತ್ತದ ಅನುತ್ಪಾದಕ ವೆಚ್ಚವನ್ನು ಕಡಿತಗೊಳಿಸಲು ಮುಂದಾಗಿದೆ.

ಇದಕ್ಕೆ ಪೂರಕವಾಗಿ ಒಂದೇ ಉದ್ದೇಶವಿರುವ ರಾಜ್ಯ ಸರ್ಕಾರದ ಯೋಜನೆಗಳನ್ನು ಕೇಂದ್ರ ಸರ್ಕಾರದ ಯೋಜನೆಗಳೊಂದಿಗೆ ಸಮೀಕರಣ ಮಾಡಿ ಸಿಬ್ಬಂದಿ ಸಂಖ್ಯೆ ಕಡಿತಗೊಳಿಸಿ ನಿರ್ವಹಣೆ ವೆಚ್ಚಗಳನ್ನು ಕಡಿಮೆಗೊಳಿಸಲು ಉದ್ದೇಶಿಸಿದೆ. ಇದರಲ್ಲಿ ಪಿಂಚಣಿ, ನಿವೃತ್ತಿ ನಂತರದ ಸೌಲಭ್ಯಗಳೂ ಸೇರಿವೆ. ಸಂಪನ್ಮೂಲ ಕ್ರೋಢೀಕರಣದಲ್ಲಿ ಹಿಂದೆ ಬಿದ್ದಿರುವ ರಾಜ್ಯ ಬಿಜೆಪಿ ಸರ್ಕಾರವು ಅನುತ್ಪಾದಕ ವೆಚ್ಚಗಳ ಕಡಿಮೆಗೊಳಿಸುವ ನೆಪದಲ್ಲಿ ಪಿಂಚಣಿ ಮತ್ತು ನಿವೃತ್ತಿ ನಂತರದ ಸೌಲಭ್ಯಗಳಿಗೂ ಕತ್ತರಿ ಹಾಕಲು ಹೊರಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿರವಿಕುಮಾರ್‌ ಅವರು ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ 2021ರ ಸೆಪ್ಟಂಬರ್‌ 2ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ರಾಜ್ಯದ ಒಟ್ಠಾರೆ ಆಯವ್ಯಯ 2,46,206,92 ಕೋಟಿ ರು.ಗಳ ಪೈಕಿ 1,17,287,80 ಕೋಟಿ ರು. ಉತ್ಪಾದಕತೆ ಆಯವ್ಯಯ ಮತ್ತು 1,28,919.13 ಕೋಟಿ ರು. ಅನುತ್ಪಾದಕ ವೆಚ್ಚ ಎಂದು ಸರ್ಕಾರವು ಲೆಕ್ಕ ಹಾಕಿದೆ. ಉತ್ಪಾದಕತೆಯು ಶೇ. 48ರಷ್ಟಿದ್ದರೆ ಅನುತ್ಪಾದಕ ವೆಚ್ಚವು ಶೇ.52ರಷ್ಟಿದೆ ಎಂಬುದು ಮುಖ್ಯ ಕಾರ್ಯದರ್ಶಿಗಳು ಬರೆದಿರುವ ಪತ್ರದಿಂದ ತಿಳಿದು ಬಂದಿದೆ.

‘ಕನಿಷ್ಠ ಶೇ.5ರಷ್ಟು ಅನುತ್ಪಾದಕ ವೆಚ್ಚಗಳನ್ನು ಕಡಿಮೆಗೊಳಿಸಲು ಕ್ರಮ ಜರುಗಿಸಬೇಕು. ಒಂದೇ ಉದ್ದೇಶವಿರುವ ರಾಜ್ಯ ಸರ್ಕಾರದ ಯೋಜನೆಗಳನ್ನು ಕೇಂದ್ರ ಸರ್ಕಾರದ ಯೋಜನೆಗಳೊಂದಿಗೆ ಸಮೀಕರಣವನ್ನು ಮಾಡಿದರೆ ನಿರ್ವಹಣೆ ವೆಚ್ಚಗಳನ್ನು ಹಾಗೂ ಸಿಬ್ಬಂದಿಗಳ ಸಂಖ್ಯೆಯನ್ನು ಆದಷ್ಟು ಮಟ್ಟಿಗೆ ಕಡಿಮೆಗೊಳಿಸಬಹುದಾಗಿದೆ,’ ಎಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಸೂಚಿಸಿದ್ದಾರೆ.

ಹೊರಗುತ್ತಿಗೆ, ದಿನಗೂಲಿ ವೇತನ 5157783.58 ಲಕ್ಷ ರು., (ಶೇ.20.95) ಪಿಂಚಣಿ ಮತ್ತು ನಿವೃತ್ತಿ ಭತ್ಯೆ 2421183.74 ಲಕ್ಷ ರು.(ಶೇ.9.83) ಆಡಳಿತಾತ್ಮಕ ವೆಚ್ಚ 229568.65 ಲಕ್ಷ (ಶೇ.0.93), ನಿರ್ವಹಣಾ ವೆಚ್ಚ 404877.12 ಲಕ್ಷ (ಶೇ.1.64), ಸಾಲ ಸೇವೆ 4959949.00 ಲಕ್ಷ (ಶೇ. 20.15), ಆಂತರಿಕ ಖಾತೆಗಳ ವರ್ಗಾವಣೆ 28149.48 ಲಕ್ಷ (ಶೇ.-1.14) ರು.ಅನುತ್ಪಾದಕ ವೆಚ್ಚವೆಂದು ಸರ್ಕಾರವು ಗುರುತಿಸಿರುವುದು ಮುಖ್ಯ ಕಾರ್ಯದರ್ಶಿಗಳ ಪತ್ರದಿಂದ ಗೊತ್ತಾಗಿದೆ.

ಅನುತ್ಪಾದಕ ವೆಚ್ಚಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸಮಾನಾಂತರ ಉದ್ದೇಶವಿರುವ ರಾಜ್ಯ ವಲಯ ಯೋಜನೆಗಳನ್ನು ಕೇಂದ್ರದ ಪುರಸ್ಕೃತ ಯೋಜನೆಗಳಿಗೆ ಸಮೀಕರಿಸಿದಲ್ಲಿ ರಾಜ್ಯದ ಬೊಕ್ಕಸಕ್ಕೆ ಉಳಿತಾಯವಾಗಲಿದೆ ಎಂದು ಪತ್ರದಲ್ಲಿ ಸೂಚಿಸಲಾಗಿದೆ.

ಅದೇ ರೀತಿ ವಿದ್ಯಾರ್ಥಿವೇತನ ಇನ್ನಿತರೆ ಸೌಲಭ್ಯ 91732.65 ಲಕ್ಷ (ಶೇ.20.95), ಸಬ್ಸಿಡಿ (1571377.22 ಲಕ್ಷ (ಶೆ.6.38), ಇನ್ನಿತರೆ ಯೋಜನಾ ವೆಚ್ಚ 10065670.00 ಲಕ್ಷ ರು. (ಶೇ.40.88) ಸೇರಿದಂತೆ ಒಟ್ಟು 1, 17, 287.80 ಕೋಟಿ ರು. ಉತ್ಪಾದಕ ವೆಚ್ಚವೆಂದು ಸರ್ಕಾರ ಹೇಳಿದೆ.

Hot this week

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...
Please Scan to make Your Contribution

Topics

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...

Related Articles

Popular Categories

error: Content is protected !!