Monday | April 20, 2026 |

ವಿಧಾನಸೌಧ ತಳಮಹಡಿಯಲ್ಲೂ ನೆಲ ಕುಸಿತ; ಕಣ್ಣಳತೆಯಲ್ಲಿ ಕುಸಿದಿದ್ದರೂ ಗಮನಿಸದ ಪಿಡಬ್ಲ್ಯೂಡಿ

ಬೆಂಗಳೂರು; ವಿಧಾನಸೌಧ ಕೆಂಗಲ್ ದ್ವಾರದ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದು ಆತಂಕ ಸೃಷ್ಟಿಯಾಗಿದ್ದರ ಬೆನ್ನಲ್ಲೇ ಇದೀಗ ವಿಧಾಸೌಧದ ತಳಮಹಡಿಯಲ್ಲಿನ ವರಾಂಡವೂ ಕುಸಿದಿದೆ ಎಂಬ ಆತಂಕಕಾರಿ ಸಂಗತಿ ಹೊರಬಿದ್ದಿದೆ.

ವಿಧಾನಸೌಧದ ನೆಲ ಮಹಡಿಯಲ್ಲಿಯೇ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಕಾರ್ಯನಿರ್ವಹಿಸುತ್ತಿದ್ದರೂ ಕಚೇರಿಯ ಕಣ್ಣಳತೆಯಲ್ಲಿರುವ ತಳಮಹಡಿಯ ಕ್ಯಾಂಟೀನ್‌ನ ವರಾಂಡದಲ್ಲಿ ನೆಲ ಕುಸಿದಿದ್ದರೂ ಗಮನ ಹರಿಸದಿರುವುದು ಇಂಜಿನಿಯರ್‌ ಅವರ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ವರಾಂಡದಲ್ಲಿ ನೆಲ ಕುಸಿಯುತ್ತಿರುವುದನ್ನು ಕ್ಯಾಂಟೀನ್‌ ಗುತ್ತಿಗೆದಾರರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಗಮನಕ್ಕೆ ತರುವವರೆಗೂ ಲೋಕೋಪಯೋಗಿ ಇಲಾಖೆಯ ಎಇಇ ಗಮನಕ್ಕೆ ಬರದಿರುವುದು ಅಚ್ಚರಿ ಮೂಡಿಸಿದೆ.

ಈ ಸಂಬಂಧ ಕ್ಯಾಂಟೀನ್‌ ಗುತ್ತಿಗೆದಾರರು ಡಿಪಿಎಆರ್‌ನ ಸರ್ಕಾರದ ಕಾರ್ಯದರ್ಶಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ವಿಧಾನಸೌಧದ ತಳಮಹಡಿಯಲ್ಲಿರುವ ಉಪಾಹಾರ ಮಂದಿರದ ವರಾಂಡ ಕುಸಿಯುತ್ತಿದ್ದು ಓಡಾಡಲು ತೊಂದರೆಯಾಗಿದೆ, ತಕ್ಷಣವೇ ದುರಸ್ತಿಪಡಿಸಲು ಕ್ರಮ ಕೈಗೊಳ್ಳಬೇಕು,’ ಎಂದು ಗುತ್ತಿಗೆದಾರರು ದೂರಿನಲ್ಲಿ ತಿಳಿಸಿದ್ದರು.

ಈ ಸಂಬಂಧ ಕ್ರಮ ಕೈಗೊಂಡಿರುವ ಡಿಪಿಎಆರ್‌ನ ಸರ್ಕಾರದ ಕಾರ್ಯದರ್ಶಿ ಅವರು ತಳಮಹಡಿಯಲ್ಲಿರುವ ಉಪಹಾರ ಮಂದಿರವನ್ನು ದುರಸ್ತಿ ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಪಿಡಬ್ಲ್ಯೂಡಿ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ 2021ರ ಸೆ.17ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ವಿಧಾನಸೌಧದ ತಳಮಹಡಿಯಲ್ಲಿರುವ ಕ್ಯಾಂಟೀನ್‌ಗೆ ದಿನವೊಂದಕ್ಕೆ ಕನಿಷ್ಠ 500ಕ್ಕೂ ಹೆಚ್ಚು ಮಂದಿ ಉಪಾಹಾರ, ಭೋಜನ ಮತ್ತು ಚಹಾ ಸೇವಿಸಲು ಬರುತ್ತಾರೆ. ಅಧಿಕಾರಿ ನೌಕರರಲ್ಲದೆ ರಾಜ್ಯದ ವಿವಿಧೆಡೆಯಿಂದಲೂ ದಿನನಿತ್ಯ ನೂರಾರು ಸಂಖ್ಯೆಯಲ್ಲಿ ಕ್ಯಾಂಟೀನ್‌ಗೆ ಬರುತ್ತಿದ್ದರೂ ಅಲ್ಲಿನ ನೆಲವೇ ಕುಸಿಯಲಾರಂಭಿಸಿರುವುದು ಆತಂಕವನ್ನು ಹೆಚ್ಚು ಮಾಡಿದೆ.

ವಿಧಾನಸೌಧ ಕೆಂಗಲ್ ಗೇಟ್‌ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದಿದ್ದರಿಂದ ಸ್ಥಳದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು. ಅಧಿವೇಶನ ನಡೆಯುತ್ತಿದ್ದರಿಂದ ವಿಧಾನಸೌಧ ಸುತ್ತಮುತ್ತ ಬಿಗಿ ಭದ್ರತೆಯಿದ್ದರೂ ನೂರಾರು ಮಂದಿ, ವಿಧಾನಸೌಧ ಅಕ್ಕ–ಪಕ್ಕದಲ್ಲಿ ಓಡಾಡುತ್ತಿದ್ದಾರೆ. ಕೆಂಗಲ್ ಗೇಟ್‌ ಎದುರೇ ಗುರುವಾರ ಸಂಜೆ ಡಾಂಬರು ಕಿತ್ತು ರಸ್ತೆ ಕುಸಿದಿತ್ತು. ರಸ್ತೆಯ ಕೆಳಭಾಗದಲ್ಲಿ ಗುಹೆ ಆಕಾರದ ಜಾಗ ಕಂಡಿದ್ದನ್ನು ಸ್ಮರಿಸಬಹುದು.

ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಈ ಸಂಗತಿ ಬೆಳಕಿಗೆ ಬಂದಿದ್ದರೂ ಪಿಡಬ್ಲ್ಯೂಡಿ ಸಚಿವ ಸಿ ಸಿ ಪಾಟೀಲ್‌ ಅವರು ಈ ಎರಡೂ ಪ್ರಕರಣಗಳ ಕುರಿತು ಈವರೆಗೂ ಪ್ರತಿಕ್ರಿಯಿಸಿಲ್ಲ.

Hot this week

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ...

ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ...

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತದಿಂದ ತನಿಖೆ, ಹೊರಬಿದ್ದ ಆದೇಶ

ಬೆಂಗಳೂರು; ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಿಂದಿನ ಕಾಂಗ್ರೆಸ್‌...

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

Topics

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ...

ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ...

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತದಿಂದ ತನಿಖೆ, ಹೊರಬಿದ್ದ ಆದೇಶ

ಬೆಂಗಳೂರು; ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಿಂದಿನ ಕಾಂಗ್ರೆಸ್‌...

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

Related Articles

Popular Categories

error: Content is protected !!