Sunday | July 19, 2026 |

ವಿಧಾನಸೌಧ ತಳಮಹಡಿ ನೆಲ ಕುಸಿತ; ವರದಿ ಬೆನ್ನಲ್ಲೇ ವರಾಂಡ ದುರಸ್ತಿಗೆ ಇಂಜಿನಿಯರ್‌ ದೌಡು

ಬೆಂಗಳೂರು; ವಿಧಾನಸೌಧದ ತಳಮಹಡಿಯಲ್ಲಿನ ವರಾಂಡ ಕುಸಿದಿರುವ ಸಂಗತಿಯನ್ನು ‘ದಿ ಫೈಲ್‌’ ಹೊರಗೆಡವುತ್ತಿದ್ದಂತೆ ಎಚ್ಚೆತ್ತು ದೌಡಾಯಿಸಿದ ಪಿಡಬ್ಲ್ಯೂಡಿ ಇಂಜಿನಿಯರ್‌ಗಳು ಕುಸಿದು ಬಿದ್ದ ಸ್ಥಳದ ದುರಸ್ತಿಗೊಳಿಸಲು ಮುಂದಾಗಿದ್ದಾರೆ. ಇದು ‘ದಿ ಫೈಲ್‌’ ವರದಿ ಪರಿಣಾಮ.

ಕುಸಿದ ಬಿದ್ದ ಸ್ಥಳವನ್ನು ದುರಸ್ತಿಗೆ ಕ್ರಮ ಕೈಗೊಂಡಿದ್ದಾರಾದರೂ ಪಿಡಬ್ಲ್ಯೂಡಿ ಇಂಜಿನಿಯರ್‌ ಕಳಪೆ ಕಾಮಗಾರಿ ನಿರ್ವಹಿಸಿದ್ದೇ ನೆಲ ಕುಸಿಯಲು ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

ವಿಧಾನಸೌಧದ ತಳಮಹಡಿಯಲ್ಲಿರುವ ಉಪಾಹಾರ ಮಂದಿರದ ವರಾಂಡ ನಿರ್ಮಾಣ ಸಂದರ್ಭದಲ್ಲಿ ಮಣ್ಣನ್ನು ಸಡಿಲವಾಗಿ ಭರ್ತಿ ಮಾಡಿದ್ದರಿಂದ ನೆಲ ಕುಸಿಯಲು ಮತ್ತೊಂದು ಕಾರಣ ಎನ್ನಲಾಗಿದೆ.

ವಿಧಾನಸೌಧ ಕೆಂಗಲ್ ದ್ವಾರದ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದು ಆತಂಕ ಸೃಷ್ಟಿಯಾಗಿದ್ದರ ಬೆನ್ನಲ್ಲೇ ಇದೀಗ ವಿಧಾಸೌಧದ ತಳಮಹಡಿಯಲ್ಲಿನ ವರಾಂಡವೂ ಕುಸಿದಿದೆ ಎಂಬ ಸಂಗತಿಯು ಆತಂಕಕ್ಕೆ ಕಾರಣವಾಗಿತ್ತು.

ವಿಧಾನಸೌಧದ ನೆಲ ಮಹಡಿಯಲ್ಲಿಯೇ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಕಾರ್ಯನಿರ್ವಹಿಸುತ್ತಿದ್ದರೂ ಕಚೇರಿಯ ಕಣ್ಣಳತೆಯಲ್ಲಿರುವ ತಳಮಹಡಿಯ ಕ್ಯಾಂಟೀನ್‌ನ ವರಾಂಡದಲ್ಲಿ ನೆಲ ಕುಸಿದಿದ್ದರೂ ಗಮನ ಹರಿಸಿರಲಿಲ್ಲ.

ವರಾಂಡದಲ್ಲಿ ನೆಲ ಕುಸಿಯುತ್ತಿರುವುದನ್ನು ಕ್ಯಾಂಟೀನ್‌ ಗುತ್ತಿಗೆದಾರರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಗಮನಕ್ಕೆ ತರುವವರೆಗೂ ಲೋಕೋಪಯೋಗಿ ಇಲಾಖೆಯ ಎಇಇ ಗಮನಕ್ಕೆ ಬರದಿರುವುದು ಅಚ್ಚರಿ ಮೂಡಿಸಿತ್ತು.

ಈ ಸಂಬಂಧ ಕ್ಯಾಂಟೀನ್‌ ಗುತ್ತಿಗೆದಾರರು ಡಿಪಿಎಆರ್‌ನ ಸರ್ಕಾರದ ಕಾರ್ಯದರ್ಶಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ವಿಧಾನಸೌಧದ ತಳಮಹಡಿಯಲ್ಲಿರುವ ಉಪಾಹಾರ ಮಂದಿರದ ವರಾಂಡ ಕುಸಿಯುತ್ತಿದ್ದು ಓಡಾಡಲು ತೊಂದರೆಯಾಗಿದೆ, ತಕ್ಷಣವೇ ದುರಸ್ತಿಪಡಿಸಲು ಕ್ರಮ ಕೈಗೊಳ್ಳಬೇಕು,’ ಎಂದು ಗುತ್ತಿಗೆದಾರರು ದೂರಿನಲ್ಲಿ ತಿಳಿಸಿದ್ದರು.

ವಿಧಾನಸೌಧ ತಳಮಹಡಿಯಲ್ಲೂ ನೆಲ ಕುಸಿತ; ಕಣ್ಣಳತೆಯಲ್ಲಿ ಕುಸಿದಿದ್ದರೂ ಗಮನಿಸದ ಪಿಡಬ್ಲ್ಯೂಡಿ

ಈ ಸಂಬಂಧ ಕ್ರಮ ಕೈಗೊಂಡಿರುವ ಡಿಪಿಎಆರ್‌ನ ಸರ್ಕಾರದ ಕಾರ್ಯದರ್ಶಿ ಅವರು ತಳಮಹಡಿಯಲ್ಲಿರುವ ಉಪಹಾರ ಮಂದಿರವನ್ನು ದುರಸ್ತಿ ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಪಿಡಬ್ಲ್ಯೂಡಿ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ 2021ರ ಸೆ.17ರಂದು ಪತ್ರ ಬರೆದಿದ್ದರು.

ವಿಧಾನಸೌಧದ ತಳಮಹಡಿಯಲ್ಲಿರುವ ಕ್ಯಾಂಟೀನ್‌ಗೆ ದಿನವೊಂದಕ್ಕೆ ಕನಿಷ್ಠ 500ಕ್ಕೂ ಹೆಚ್ಚು ಮಂದಿ ಉಪಾಹಾರ, ಭೋಜನ ಮತ್ತು ಚಹಾ ಸೇವಿಸಲು ಬರುತ್ತಾರೆ. ಅಧಿಕಾರಿ ನೌಕರರಲ್ಲದೆ ರಾಜ್ಯದ ವಿವಿಧೆಡೆಯಿಂದಲೂ ದಿನನಿತ್ಯ ನೂರಾರು ಸಂಖ್ಯೆಯಲ್ಲಿ ಕ್ಯಾಂಟೀನ್‌ಗೆ ಬರುತ್ತಿದ್ದರೂ ಅಲ್ಲಿನ ನೆಲವೇ ಕುಸಿಯಲಾರಂಭಿಸಿರುವುದು ಆತಂಕವನ್ನು ಹೆಚ್ಚು ಮಾಡಿತ್ತು.

ವಿಧಾನಸೌಧ ಕೆಂಗಲ್ ಗೇಟ್‌ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದಿದ್ದರಿಂದ ಸ್ಥಳದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು. ಅಧಿವೇಶನ ನಡೆಯುತ್ತಿದ್ದರಿಂದ ವಿಧಾನಸೌಧ ಸುತ್ತಮುತ್ತ ಬಿಗಿ ಭದ್ರತೆಯಿದ್ದರೂ ನೂರಾರು ಮಂದಿ, ವಿಧಾನಸೌಧ ಅಕ್ಕ–ಪಕ್ಕದಲ್ಲಿ ಓಡಾಡುತ್ತಿದ್ದಾರೆ. ಕೆಂಗಲ್ ಗೇಟ್‌ ಎದುರೇ ಗುರುವಾರ ಸಂಜೆ ಡಾಂಬರು ಕಿತ್ತು ರಸ್ತೆ ಕುಸಿದಿತ್ತು. ರಸ್ತೆಯ ಕೆಳಭಾಗದಲ್ಲಿ ಗುಹೆ ಆಕಾರದ ಜಾಗ ಕಂಡಿದ್ದನ್ನು ಸ್ಮರಿಸಬಹುದು.

Hot this week

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...
Please Scan to make Your Contribution

Topics

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

Related Articles

Popular Categories

error: Content is protected !!