Sunday | April 12, 2026 |

ವಿಧಾನಸೌಧ ತಳಮಹಡಿ ನೆಲ ಕುಸಿತ; ವರದಿ ಬೆನ್ನಲ್ಲೇ ವರಾಂಡ ದುರಸ್ತಿಗೆ ಇಂಜಿನಿಯರ್‌ ದೌಡು

ಬೆಂಗಳೂರು; ವಿಧಾನಸೌಧದ ತಳಮಹಡಿಯಲ್ಲಿನ ವರಾಂಡ ಕುಸಿದಿರುವ ಸಂಗತಿಯನ್ನು ‘ದಿ ಫೈಲ್‌’ ಹೊರಗೆಡವುತ್ತಿದ್ದಂತೆ ಎಚ್ಚೆತ್ತು ದೌಡಾಯಿಸಿದ ಪಿಡಬ್ಲ್ಯೂಡಿ ಇಂಜಿನಿಯರ್‌ಗಳು ಕುಸಿದು ಬಿದ್ದ ಸ್ಥಳದ ದುರಸ್ತಿಗೊಳಿಸಲು ಮುಂದಾಗಿದ್ದಾರೆ. ಇದು ‘ದಿ ಫೈಲ್‌’ ವರದಿ ಪರಿಣಾಮ.

ಕುಸಿದ ಬಿದ್ದ ಸ್ಥಳವನ್ನು ದುರಸ್ತಿಗೆ ಕ್ರಮ ಕೈಗೊಂಡಿದ್ದಾರಾದರೂ ಪಿಡಬ್ಲ್ಯೂಡಿ ಇಂಜಿನಿಯರ್‌ ಕಳಪೆ ಕಾಮಗಾರಿ ನಿರ್ವಹಿಸಿದ್ದೇ ನೆಲ ಕುಸಿಯಲು ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

ವಿಧಾನಸೌಧದ ತಳಮಹಡಿಯಲ್ಲಿರುವ ಉಪಾಹಾರ ಮಂದಿರದ ವರಾಂಡ ನಿರ್ಮಾಣ ಸಂದರ್ಭದಲ್ಲಿ ಮಣ್ಣನ್ನು ಸಡಿಲವಾಗಿ ಭರ್ತಿ ಮಾಡಿದ್ದರಿಂದ ನೆಲ ಕುಸಿಯಲು ಮತ್ತೊಂದು ಕಾರಣ ಎನ್ನಲಾಗಿದೆ.

ವಿಧಾನಸೌಧ ಕೆಂಗಲ್ ದ್ವಾರದ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದು ಆತಂಕ ಸೃಷ್ಟಿಯಾಗಿದ್ದರ ಬೆನ್ನಲ್ಲೇ ಇದೀಗ ವಿಧಾಸೌಧದ ತಳಮಹಡಿಯಲ್ಲಿನ ವರಾಂಡವೂ ಕುಸಿದಿದೆ ಎಂಬ ಸಂಗತಿಯು ಆತಂಕಕ್ಕೆ ಕಾರಣವಾಗಿತ್ತು.

ವಿಧಾನಸೌಧದ ನೆಲ ಮಹಡಿಯಲ್ಲಿಯೇ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಕಾರ್ಯನಿರ್ವಹಿಸುತ್ತಿದ್ದರೂ ಕಚೇರಿಯ ಕಣ್ಣಳತೆಯಲ್ಲಿರುವ ತಳಮಹಡಿಯ ಕ್ಯಾಂಟೀನ್‌ನ ವರಾಂಡದಲ್ಲಿ ನೆಲ ಕುಸಿದಿದ್ದರೂ ಗಮನ ಹರಿಸಿರಲಿಲ್ಲ.

ವರಾಂಡದಲ್ಲಿ ನೆಲ ಕುಸಿಯುತ್ತಿರುವುದನ್ನು ಕ್ಯಾಂಟೀನ್‌ ಗುತ್ತಿಗೆದಾರರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಗಮನಕ್ಕೆ ತರುವವರೆಗೂ ಲೋಕೋಪಯೋಗಿ ಇಲಾಖೆಯ ಎಇಇ ಗಮನಕ್ಕೆ ಬರದಿರುವುದು ಅಚ್ಚರಿ ಮೂಡಿಸಿತ್ತು.

ಈ ಸಂಬಂಧ ಕ್ಯಾಂಟೀನ್‌ ಗುತ್ತಿಗೆದಾರರು ಡಿಪಿಎಆರ್‌ನ ಸರ್ಕಾರದ ಕಾರ್ಯದರ್ಶಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ವಿಧಾನಸೌಧದ ತಳಮಹಡಿಯಲ್ಲಿರುವ ಉಪಾಹಾರ ಮಂದಿರದ ವರಾಂಡ ಕುಸಿಯುತ್ತಿದ್ದು ಓಡಾಡಲು ತೊಂದರೆಯಾಗಿದೆ, ತಕ್ಷಣವೇ ದುರಸ್ತಿಪಡಿಸಲು ಕ್ರಮ ಕೈಗೊಳ್ಳಬೇಕು,’ ಎಂದು ಗುತ್ತಿಗೆದಾರರು ದೂರಿನಲ್ಲಿ ತಿಳಿಸಿದ್ದರು.

ವಿಧಾನಸೌಧ ತಳಮಹಡಿಯಲ್ಲೂ ನೆಲ ಕುಸಿತ; ಕಣ್ಣಳತೆಯಲ್ಲಿ ಕುಸಿದಿದ್ದರೂ ಗಮನಿಸದ ಪಿಡಬ್ಲ್ಯೂಡಿ

ಈ ಸಂಬಂಧ ಕ್ರಮ ಕೈಗೊಂಡಿರುವ ಡಿಪಿಎಆರ್‌ನ ಸರ್ಕಾರದ ಕಾರ್ಯದರ್ಶಿ ಅವರು ತಳಮಹಡಿಯಲ್ಲಿರುವ ಉಪಹಾರ ಮಂದಿರವನ್ನು ದುರಸ್ತಿ ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಪಿಡಬ್ಲ್ಯೂಡಿ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ 2021ರ ಸೆ.17ರಂದು ಪತ್ರ ಬರೆದಿದ್ದರು.

ವಿಧಾನಸೌಧದ ತಳಮಹಡಿಯಲ್ಲಿರುವ ಕ್ಯಾಂಟೀನ್‌ಗೆ ದಿನವೊಂದಕ್ಕೆ ಕನಿಷ್ಠ 500ಕ್ಕೂ ಹೆಚ್ಚು ಮಂದಿ ಉಪಾಹಾರ, ಭೋಜನ ಮತ್ತು ಚಹಾ ಸೇವಿಸಲು ಬರುತ್ತಾರೆ. ಅಧಿಕಾರಿ ನೌಕರರಲ್ಲದೆ ರಾಜ್ಯದ ವಿವಿಧೆಡೆಯಿಂದಲೂ ದಿನನಿತ್ಯ ನೂರಾರು ಸಂಖ್ಯೆಯಲ್ಲಿ ಕ್ಯಾಂಟೀನ್‌ಗೆ ಬರುತ್ತಿದ್ದರೂ ಅಲ್ಲಿನ ನೆಲವೇ ಕುಸಿಯಲಾರಂಭಿಸಿರುವುದು ಆತಂಕವನ್ನು ಹೆಚ್ಚು ಮಾಡಿತ್ತು.

ವಿಧಾನಸೌಧ ಕೆಂಗಲ್ ಗೇಟ್‌ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದಿದ್ದರಿಂದ ಸ್ಥಳದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು. ಅಧಿವೇಶನ ನಡೆಯುತ್ತಿದ್ದರಿಂದ ವಿಧಾನಸೌಧ ಸುತ್ತಮುತ್ತ ಬಿಗಿ ಭದ್ರತೆಯಿದ್ದರೂ ನೂರಾರು ಮಂದಿ, ವಿಧಾನಸೌಧ ಅಕ್ಕ–ಪಕ್ಕದಲ್ಲಿ ಓಡಾಡುತ್ತಿದ್ದಾರೆ. ಕೆಂಗಲ್ ಗೇಟ್‌ ಎದುರೇ ಗುರುವಾರ ಸಂಜೆ ಡಾಂಬರು ಕಿತ್ತು ರಸ್ತೆ ಕುಸಿದಿತ್ತು. ರಸ್ತೆಯ ಕೆಳಭಾಗದಲ್ಲಿ ಗುಹೆ ಆಕಾರದ ಜಾಗ ಕಂಡಿದ್ದನ್ನು ಸ್ಮರಿಸಬಹುದು.

Hot this week

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

Topics

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

Related Articles

Popular Categories

error: Content is protected !!