Wednesday | March 11, 2026 |

ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

Support THE-FILE

spot_img

ಬೆಂಗಳೂರು; ಕರ್ನಾಟಕದ ಮದರಸಗಳಲ್ಲಿ ಇಸ್ಲಾಂ ಧರ್ಮ, ಕುರಾನಿನಲ್ಲಿ ಮತ್ತು ಪೈಗಂಬರ್‌ ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ.

‘ಓಲೈಕೆ ರಾಜಕಾರಣದಿಂದಾಗಿ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ ಮತ್ತಷ್ಟು ಪಾಕಿಸ್ತಾನಗಳು ಸೃಷ್ಟಿಯಾಗುವ ಸಂಭವವವಿದೆ.,’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಕಲ್ಬುರ್ಗಿಯಲ್ಲಿ ನೀಡಿದ್ದ ಹೇಳಿಕೆ ಬೆನ್ನಲ್ಲೇ ಮದರಸಗಳಲ್ಲಿ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ ಎಂದು ಹಿಂದಿನ ಹಜ್‌ ಮತ್ತು ವಕ್ಫ್‌ ಸಚಿವರಾಗಿದ್ದ ಆನಂದ್‌ ಸಿಂಗ್‌ ಸದನಕ್ಕೆ ನೀಡಿದ್ದ ಲಿಖಿತ ಉತ್ತರ ಮುನ್ನೆಲೆಗೆ ಬಂದಿದೆ.

ಮದರಸಗಳಲ್ಲಿನ ಧಾರ್ಮಿಕ ಶಿಕ್ಷಣದಲ್ಲಿ ಯಾವ ಯಾವ ವಿಷಯಗಳ ಕುರಿತು ಬೋಧನೆ ಮಾಡಲಾಗುತ್ತದೆ, ಮದರಸ ಶಿಕ್ಷಣಕ್ಕೆ ಸರ್ಕಾರ ಯಾವ ಯಾವ ರೀತಿಯ ಸೌಲಭ್ಯವನ್ನು ನೀಡುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಅನಂದ್‌ ಸಿಂಗ್‌ ಅವರು 2021ರ ಜನವರಿ 29ರಂದು ಉತ್ತರಿಸಿದ್ದರು.

ಲಿಖಿತ ಉತ್ತರದಲ್ಲೇನಿದೆ?

‘ಮದರಸಗಳಲ್ಲಿ ಇಸ್ಲಾಂ ಧರ್ಮದಂತೆ ದಿನನಿತ್ಯ ಹಾಗೂ ವಿವಿಧ ಹಬ್ಬಗಳಲ್ಲಿ ಸಲ್ಲಿಸುವ ಪ್ರಾರ್ಥನೆ ಮತ್ತು ಇಡೀ ಜೀವನದಲ್ಲಿ ದೇವರು ಕುರಾನಿನಲ್ಲಿ ಮತ್ತು ಪೈಗಂಬರ್‌ ಅವರು ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧನೆ ನೀಡಲಾಗುತ್ತಿದೆ,’ ಎಂದು ವಕ್ಫ್‌ ಸಚಿವರಾಗಿದ್ದ ಆನಂದ್‌ ಸಿಂಗ್‌ ಅವರು ಉತ್ತರಿಸಿದ್ದರು.

ಇದಲ್ಲದೆ ರಾಜ್ಯದ ಕನ್ನಡ ಭಾಷೆ, ಕಂಪ್ಯೂಟರ್‌ ಶಿಕ್ಷಣವನ್ನು ಸಹ ನೀಡುವುದಲ್ಲದೆ ಶಿಕ್ಷಣಾರ್ಥಿಗಳನ್ನು ಸಾರ್ವಜನಿಕ ಶಿಕ್ಷಣದಲ್ಲೂ ಭಾಗವಹಿಸುವಂತೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಉತ್ತರಿಸಿದ್ದ ಆನಂದ್‌ ಸಿಂಗ್‌, ಮದರಸಾದ ಆಧುನೀಕರಣಕ್ಕಾಗಿ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ ಎಂದು ಮಾಹಿತಿ ಒದಗಿಸಿರುವುದು ಉತ್ತರದಿಂದ ತಿಳಿದು ಬಂದಿದೆ.

ಧಾರ್ಮಿಕ ಶಿಕ್ಷಣವನ್ನು ಉನ್ನತ ಶಿಕ್ಷಣ ಹಾಗೂ ಸರ್ಕಾರದ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಗಳಲ್ಲೂ ಪರಿಗಣಿಸಿ ಅಳವಡಿಸಿಕೊಳ್ಳುವಂತೆ ಸಮಾಜದ ಒಂದು ವರ್ಗ ಒತ್ತಡ ತಂದರೆ ಸರ್ಕಾರದ ನಿಲುವೇನು ಎಂದು ರವಿಕುಮಾರ್‌ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಆನಂದ್‌ಸಿಂಗ್‌ ‘ಇಂತಹ ಯಾವುದೇ ಬೇಡಿಕೆಗಳು ಸರ್ಕಾರದ ಮುಂದೆ ಇರುವುದಿಲ್ಲ,’ ಎಂದು ಹೇಳಿದ್ದರು. ಹಾಗೆಯೇ ಮದರಸಗಳಲ್ಲಿನ ಧಾರ್ಮಿಕ ಶಿಕ್ಷಣವನ್ನು ಎಸ್‌ಎಸ್‌ಎಲ್‌ಸಿಗೆ ತತ್ಸಮಾನ ಎಂದು ಪರಿಗಣಿಸುವ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎಂದೂ ಉತ್ತರಿಸಿದ್ದರು.

Hot this week

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

Topics

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Related Articles

Popular Categories

error: Content is protected !!