Thursday | May 7, 2026 |

ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

ಬೆಂಗಳೂರು; ಕರ್ನಾಟಕದ ಮದರಸಗಳಲ್ಲಿ ಇಸ್ಲಾಂ ಧರ್ಮ, ಕುರಾನಿನಲ್ಲಿ ಮತ್ತು ಪೈಗಂಬರ್‌ ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ.

‘ಓಲೈಕೆ ರಾಜಕಾರಣದಿಂದಾಗಿ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ ಮತ್ತಷ್ಟು ಪಾಕಿಸ್ತಾನಗಳು ಸೃಷ್ಟಿಯಾಗುವ ಸಂಭವವವಿದೆ.,’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಕಲ್ಬುರ್ಗಿಯಲ್ಲಿ ನೀಡಿದ್ದ ಹೇಳಿಕೆ ಬೆನ್ನಲ್ಲೇ ಮದರಸಗಳಲ್ಲಿ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ ಎಂದು ಹಿಂದಿನ ಹಜ್‌ ಮತ್ತು ವಕ್ಫ್‌ ಸಚಿವರಾಗಿದ್ದ ಆನಂದ್‌ ಸಿಂಗ್‌ ಸದನಕ್ಕೆ ನೀಡಿದ್ದ ಲಿಖಿತ ಉತ್ತರ ಮುನ್ನೆಲೆಗೆ ಬಂದಿದೆ.

ಮದರಸಗಳಲ್ಲಿನ ಧಾರ್ಮಿಕ ಶಿಕ್ಷಣದಲ್ಲಿ ಯಾವ ಯಾವ ವಿಷಯಗಳ ಕುರಿತು ಬೋಧನೆ ಮಾಡಲಾಗುತ್ತದೆ, ಮದರಸ ಶಿಕ್ಷಣಕ್ಕೆ ಸರ್ಕಾರ ಯಾವ ಯಾವ ರೀತಿಯ ಸೌಲಭ್ಯವನ್ನು ನೀಡುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಅನಂದ್‌ ಸಿಂಗ್‌ ಅವರು 2021ರ ಜನವರಿ 29ರಂದು ಉತ್ತರಿಸಿದ್ದರು.

ಲಿಖಿತ ಉತ್ತರದಲ್ಲೇನಿದೆ?

‘ಮದರಸಗಳಲ್ಲಿ ಇಸ್ಲಾಂ ಧರ್ಮದಂತೆ ದಿನನಿತ್ಯ ಹಾಗೂ ವಿವಿಧ ಹಬ್ಬಗಳಲ್ಲಿ ಸಲ್ಲಿಸುವ ಪ್ರಾರ್ಥನೆ ಮತ್ತು ಇಡೀ ಜೀವನದಲ್ಲಿ ದೇವರು ಕುರಾನಿನಲ್ಲಿ ಮತ್ತು ಪೈಗಂಬರ್‌ ಅವರು ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧನೆ ನೀಡಲಾಗುತ್ತಿದೆ,’ ಎಂದು ವಕ್ಫ್‌ ಸಚಿವರಾಗಿದ್ದ ಆನಂದ್‌ ಸಿಂಗ್‌ ಅವರು ಉತ್ತರಿಸಿದ್ದರು.

ಇದಲ್ಲದೆ ರಾಜ್ಯದ ಕನ್ನಡ ಭಾಷೆ, ಕಂಪ್ಯೂಟರ್‌ ಶಿಕ್ಷಣವನ್ನು ಸಹ ನೀಡುವುದಲ್ಲದೆ ಶಿಕ್ಷಣಾರ್ಥಿಗಳನ್ನು ಸಾರ್ವಜನಿಕ ಶಿಕ್ಷಣದಲ್ಲೂ ಭಾಗವಹಿಸುವಂತೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಉತ್ತರಿಸಿದ್ದ ಆನಂದ್‌ ಸಿಂಗ್‌, ಮದರಸಾದ ಆಧುನೀಕರಣಕ್ಕಾಗಿ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ ಎಂದು ಮಾಹಿತಿ ಒದಗಿಸಿರುವುದು ಉತ್ತರದಿಂದ ತಿಳಿದು ಬಂದಿದೆ.

ಧಾರ್ಮಿಕ ಶಿಕ್ಷಣವನ್ನು ಉನ್ನತ ಶಿಕ್ಷಣ ಹಾಗೂ ಸರ್ಕಾರದ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಗಳಲ್ಲೂ ಪರಿಗಣಿಸಿ ಅಳವಡಿಸಿಕೊಳ್ಳುವಂತೆ ಸಮಾಜದ ಒಂದು ವರ್ಗ ಒತ್ತಡ ತಂದರೆ ಸರ್ಕಾರದ ನಿಲುವೇನು ಎಂದು ರವಿಕುಮಾರ್‌ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಆನಂದ್‌ಸಿಂಗ್‌ ‘ಇಂತಹ ಯಾವುದೇ ಬೇಡಿಕೆಗಳು ಸರ್ಕಾರದ ಮುಂದೆ ಇರುವುದಿಲ್ಲ,’ ಎಂದು ಹೇಳಿದ್ದರು. ಹಾಗೆಯೇ ಮದರಸಗಳಲ್ಲಿನ ಧಾರ್ಮಿಕ ಶಿಕ್ಷಣವನ್ನು ಎಸ್‌ಎಸ್‌ಎಲ್‌ಸಿಗೆ ತತ್ಸಮಾನ ಎಂದು ಪರಿಗಣಿಸುವ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎಂದೂ ಉತ್ತರಿಸಿದ್ದರು.

Hot this week

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!