Saturday | March 7, 2026 |

ಹೊರಟ್ಟಿ ವರದಿಗೆ 3 ವರ್ಷ, ಶಿಕ್ಷಕರಿಗಿಲ್ಲ ಹರ್ಷ; ನಿಲುವು ತಳೆಯುವಲ್ಲಿ ಸರ್ಕಾರ ವಿಫಲ

Support THE-FILE

spot_img

ಬೆಂಗಳೂರು; ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಅನುದಾನರಹಿತ ಸೇವೆ ಪರಿಗಣಿಸಿ ವೇತನ ಬಡ್ತಿ ಮತ್ತು ಪಿಂಚಣಿ ಸೇವಾ ಸೌಲಭ್ಯ (ಕಾಲ್ಪನಿಕ ವೇತನ)ನೀಡುವ ಸಂಬಂಧ ವಿಧಾನಪರಿಷತ್‌ನ ಹಾಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿದ್ದ ಸದನ ಸಮಿತಿ ವರದಿ ಸಲ್ಲಿಕೆಯಾಗಿ 3 ವರ್ಷಗಳಾದರೂ ಈವರೆಗೂ ರಾಜ್ಯ ಸರ್ಕಾರವು ನಿರ್ದಿಷ್ಟ ನಿಲುವು ತಳೆಯುವಲ್ಲಿ ವಿಫಲವಾಗಿದೆ.

ಪದವೀಧರ ಕ್ಷೇತ್ರದ ಸದಸ್ಯ ಡಾ ಚಂದ್ರಶೇಖರ್ ಬಿ ಪಾಟೀಲ್‌ ಅವರ ಪ್ರಶ್ನೆಗೆ ಉತ್ತರಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಅವರು 2021ರ ಸೆ.13ರಂದು ನೀಡಿರುವ ಉತ್ತರವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನಿರಾಶೆಯಲ್ಲಿ ಮುಳುಗಿಸಿದೆ. ಕಾಲ್ಪನಿಕ ವೇತನ ಮಂಜೂರಾತಿ ಕುರಿತ ಬಸವರಾಜ ಹೊರಟ್ಟಿ ವರದಿ ಕುರಿತು ಸ್ಪಷ್ಟ ನಿಲುವು ಪ್ರಕಟಿಸದ ಕಾರಣ ವರದಿ ಜಾರಿಗೆ ಬಜೆಟ್‌ನಲ್ಲಿ ಅಗತ್ಯ ಅನುದಾನವೂ ನಿಗದಿಯಾಗಿಲ್ಲ.

ಸಮಿತಿಯ ವರದಿ ಮತ್ತು ಇಲಾಖೆಗಳಲ್ಲಿನ ವಾಸ್ತವ ಅಂಕಿ ಅಂಶಗಳನ್ನು ಪರಿಶೀಲಿಸಲಾಗಿ ಹಾಲಿ ನೀಡಲಾಗುತ್ತಿರುವ ವೇತನಕ್ಕೆ ಅನುದಾನ ರಹಿತ ಅವಧಿಯನ್ನು ಪರಿಗಣನೆಗೆ ತೆಗೆದುಕೊಂಡು ವೇತನವನ್ನು ಪರಿಷ್ಕರಿಸಿದಲ್ಲಿ ಹೆಚ್ಚುವರಿಯಾಗಿ ವಾರ್ಷಿಕವಾಗಿ 359.87 ಕೋಟಿ ರು. ಅನುದಾನ ಬೇಕಾಗಲಿದೆ. ಆದರೆ ಅವರಿಗೆ ಹಿಂಬಾಕಿ ಮತ್ತು ಪಿಂಚಣಿಗಾಗಿ ತಗುಲುವ ಅಂದಾಜು ವೆಚ್ಚವು ಪ್ರಸ್ತಾಪಿತ 359.87 ಕೋಟಿ ರು.ನಲ್ಲಿ ಒಳಗೊಂಡಿಲ್ಲ ಎಂದು ಸರ್ಕಾರವು ತಿಳಿಸಿದೆ.

ಅಲ್ಲದೆ 359.87 ಕೋಟಿ ರು. ಒಂದು ವರ್ಷಕ್ಕೆ ಬೇಕಾದ ಹೆಚ್ಚುವರಿ ಮೊತ್ತವಾಗುತ್ತದೆ. ಈ ಅನುಕೂಲ ಪಡೆಯುವ ಸಿಬ್ಬಂದಿ ಪೂರ್ಣ ಸೇವಾವಧಿಯಲ್ಲಿ ಪಡೆಯುವ ಮೊತ್ತದ ಒಟ್ಟು ಮೊತ್ತದ ಲೆಕ್ಕಾಚಾರ ಇಲಾಖೆಗಳಲ್ಲಿ ಇನ್ನೂ ಆಗಿಲ್ಲ. ಹಾಗೆಯೇ ನಿವೃತ್ತಿ , ಸೌಲಭ್ಯಗಳ ಒಟ್ಟಾರೆ ಆರ್ಥಿಕ ಹೊರೆ ಸಹ ಲೆಕ್ಕ ಹಾಕಿರುವುದಿಲ್ಲ. ಈ ಎರಡೂ ಮೊತ್ತಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಅನುದಾನರಹಿತ ಸೇವಾವಧಿ ಸಂಬಂಧ ನೀಡಬೇಕಾದ ವೇತನ ಬಾಕಿ ಮೊತ್ತ 3083.54 ಕೋಟಿ ಎಂದು ಅಂದಾಜಿಸಲಾಗಿದೆ. ಹೀಗಾಗಿ ‘ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೆ ತರುವಲ್ಲಿ ನಿರ್ದಿಷ್ಟ ನಿಲುವನ್ನು ತಳೆಯಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ,’ ಎಂದು ಬಿ ಸಿ ನಾಗೇಶ್‌ ಅವರು ಉತ್ತರದಲ್ಲಿ ತಿಳಿಸಿದ್ದಾರೆ.

ಹೊರಟ್ಟಿ ವರದಿ ಶಿಫಾರಸ್ಸುಗಳೇನು?

ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುದಾನಿತ ಸಿಬ್ಬಂದಿಯವರಿಗೆ ಕಾಲ್ಪನಿಕ ವೇತನ ನಿಗದಿ ಮಾಡಿ ವೇತನವನ್ನು ಪುನರ್‌ ನಿಗದಿಪಡಿಸಿ ವೇತನ ಸೌಲಭ್ಯವನ್ನು ಹಾಗೂ ಪಿಂಚಣಿ, ಗ್ರಾಚ್ಯುಟಿ ಸೌಲಭ್ಯ ನೀಡುವುದು. ಅನುದಾನಿತ ರಹಿತ ಅವಧಿಯನ್ನು ಪರಿಗಣಿಸಿ ಪದನ್ನೋತಿ ಕಾಲಮಿತಿ ಹಾಗೂ ಪ್ಲೇಸ್‌ಮೆಂಟ್‌ ಸೌಲಭ್ಯ ನೀಡುವುದು. ಕಾಲ್ಪನಿ ವೇತನ ನಿಗದಿಪಡಿಸಿದ ನಂತರ ಯಾವುದೇ ನೌಕರರು ಹಿಂದಿನ ಯಾವುದೇ ಬಾಕಿಯನ್ನು ಕೇಳುವಂತಿಲ್ಲ.

ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವೆ ಹೂಡಿರುವವರು ತಮ್ಮ ಪ್ರಕರಣಗಳನ್ನು ವಾಪಸ್‌ ಪಡೆದಲ್ಲಿ ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ ಎಂಬ ಅಂಶವನ್ನು ಇಲಾಖೆಯ ಆದೇಶದಲ್ಲಿ ಸ್ಪಷ್ಟಪಡಿಸುವುದು. ಈಗಾಗಲೇ ಈ ಸೌಲಭ್ಯವನ್ನು ಪಡೆಯುತ್ತಿರುವವರಿಗೆ ಯಥಾವತ್ತಾಗಿ ಮುಂದುವರೆಸುವುದು ಹಾಗೂ ಈಗಾಗಲೇ ಆರ್ಥಿಕ ಸೌಲಭ್ಯಗಳನ್ನು ಪಡೆದು ನಿವೃತ್ತಿ ಆಗಿರುವ ಮತ್ತು ಆಗಲಿರುವ ನೌಕರರಿಗೆ ಯಾವುದೇ ರೀತಿಯಿ ಆರ್ಥಿಕ ಕಡಿತವನ್ನು ಮಾಡಬಾರದು.

ನಿವೃತ್ತಿ ವೇತನ ನಿಗದಿಪಡಿಸುವಾಗ ಅನುದಾನ ರಹಿತ ಅವಧಿಯನ್ನು ಕಡಿತಗೊಳಿಸಿ ಪುನರ್‌ ನಿಗದಿಪಡಿಸಬಾರದು. ನಿವೃತ್ತರಾಗುತ್ತಿರುವವರಿಗೆ ನಿವೃತ್ತಿ ಉಪಧನವನ್ನು ಕಡಿತಗೊಳಸದಂತೆ ಸರ್ಕಾರಿ ಆದೇಶ ಹೊರಡಿಸುವುದು.

ವರದಿಯಲ್ಲಿ ಮಾಡಿರುವ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು 395ಕೋಟಿ ರು. ಅವಶ್ಯಕತೆ ಇದೆ ಎಂದು ವಿಧಾನಪರಿಷತ್‌ನ ವಿಶೇಷ ಸದನ ಸಮಿತಿ 2018ರಂದು ಶಿಫಾರಸ್ಸು ಮಾಡಿತ್ತು. ವಾಸ್ತವ ಅಂಶಗಳನ್ನು ಪರಾಮರ್ಶಿಸಿ ವರದಿ ನೀಡಲಾಗಿದ್ದು 395 ಕೋಟಿ ರು. ಅನುದಾನದ ಅವಶ್ಯಕತೆ ಇದೆ. ಇದರಿಂದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 25 ಸಾವಿರ ಸಿಬ್ಬಂದಿಗೆ ಅನುಕೂಲವಾಗಲಿದೆ ಎಂದು ಹೊರಟ್ಟಿ ಅವರು ಹೇಳಿದ್ದರು.

ಕಾಲ್ಪನಿಕ ವೇತನ ಮಂಜೂರಾತಿ ಕುರಿತ ಬಸವರಾಜ ಹೊರಟ್ಟಿ ವರದಿ ಜಾರಿಗೆ ಬಜೆಟ್‌ನಲ್ಲಿ ಅಗತ್ಯ ಅನುದಾನ ನಿಗದಿ ಮಾಡುವಂತೆ ರಾಜ್ಯದ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ಒಕ್ಕೂಟ ಸರ್ಕಾರಕ್ಕೆ ಆಗ್ರಹಿಸಿದ್ದನ್ನು ಸ್ಮರಿಸಬಹುದು.

Hot this week

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

Topics

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Related Articles

Popular Categories

spot_imgspot_img
error: Content is protected !!